Homeಮುಖಪುಟಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನನ್ನು ಕೊಲೆಗೈಯಲಾಗಿದೆ ಮತ್ತು ಹುಡುಗಿಯ ಕುಟುಂಬಸ್ಥರು ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಅರ್ಬಾಜ್ ಮುಲ್ಲಾ ಎಂಬ ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆಯ ಮುಖ್ಯಸ್ಥ ಪುಂಡಲಿಕ್ ಮಹಾರಾಜ್ ಮುಟ್ಗೇಕರ್ ಸೇರಿದಂತೆ ಒಟ್ಟು 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಅರ್ಬಾಜ್ ಪ್ರೀತಿಸುತ್ತಿದ್ದ ಹುಡುಗಿಯ ಕುಟುಂಬಸ್ಥರು ಸೇರಿದ್ದಾರೆ.

ಸೆಪ್ಟಂಬರ್ 29 ರಂದು ಅರ್ಬಾಜ್ ಮುಲ್ಲಾ ಎಂಬ ಯುವಕನ ಛಿದ್ರವಾದ ಶವ ಪತ್ತೆಯಾಗಿತ್ತು. ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಅವರನ್ನು ಕೊಲೆಗೈಯಲಾಗಿದೆ ಮತ್ತು ಹುಡುಗಿಯ ಕುಟುಂಬಸ್ಥರು ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ಆರೋಪವನ್ನು ಕೊಲೆ ನಡೆದ ದಿನದಿಂದಲೇ ಅರ್ಬಾಜ್ ತಾಯಿ ನಜೀಮ ಶೇಖ್ ಮಾಡಿದ್ದರು.

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಅರ್ಬಾಜ್ ಅಫ್ತಾಬ್ ಮುಲ್ಲಾ (24) ಸೆಪ್ಟಂಬರ್ 28 ರಿಂದ ಕಾಣೆಯಾಗಿದ್ದನು ಎಂದು ಅವರ ಪೋಷಕರು ದೂರಿದ್ದರು. ಅವರ ತಾಯಿ ನಜೀಮ ಶೇಖ್ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎನ್ನುವ ಸಂಘಟನೆಯ ಯುವಕರು ನನ್ನ ಮಗನಿಗೆ ಬೆದರಿಕೆ ಹಾಕಿದ್ದರು. ಹುಡುಗಿಯೊಂದಿಗೆ ಸೇರಿ ಹಣ ವಸೂಲಿ ಮಾಡಿದ್ದರು ಎಂದು ದೂರಿದ್ದರು.

2018ರಲ್ಲಿ ಶ್ರೀರಾಮ ಸೇನೆಯಿಂದ ಹೊರಬಂದು ಶ್ರೀರಾಮಸೇನೆ ಹಿಂದೂಸ್ತಾನ್ ಎಂಬ ಸಂಘಟನೆ ಕಟ್ಟಿಕೊಂಡಿದ್ದ ಪುಂಡಲಿಕ್ ಮಹಾರಾಜ್ ಮುಟ್ಗೇಕರ್ ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿದೆ. ಹುಡುಗಿಯ ಪೋಷಕರಾದ ಶುಶೀಲ ಈರಪ್ಪ (42) ಮತ್ತು ಈರಪ್ಪ ಬಸವಣ್ಣಿ ಕುಂಬಾರ (54) ಅರ್ಬಾಜ್‌ನನ್ನು ಕೊಲೆಗೈಯಲು ಗುತ್ತಿಗೆ ಕೊಲೆಗಾರರನ್ನು ನೇಮಿಸಿಕೊಂಡಿದ್ದಾರೆ ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಥಬುದ್ಧಿನ್ ಅಲ್ಲಾಬಕ್ಷ್ (36), ಮಾರುತಿ ಪ್ರಹ್ಲಾದ್ (30), ಮಂಜುನಾಥ್ ತುಕಾರಾಂ (25), ಗಣಪತಿ ಜ್ಞಾನೇಶ್ವರ (27), ಪ್ರಶಾಂತ್ ಕಲ್ಲಪ್ಪ (28) ಮತ್ತು ಪ್ರವೀಣ್ ಶಂಕರ್ (28)  ಮತ್ತು ಶ್ರೀಧರ್ ಮಹದೇವದೋಣಿ (30) ಇತರ ಬಂಧಿತರಾಗಿದ್ದಾರೆ.

ದಿ ಟೆಲಿಗ್ರಾಫ್‌ನೊಂದಿಗೆ ಮಾತನಾಡಿರುವ ಉರ್ದು ಶಾಲೆಯ ಶಿಕ್ಷಕಿಯಾಗಿರುವ ನಜೀಮ ಶೇಖ್ “ನನ್ನ ಮಗ ಅರ್ಬಾಜ್, ಕುಂಬಾರ್ ಎಂಬುವವರ ಮಗಳನ್ನು ಪ್ರೀತಿಸುತ್ತಿರುವುದು ತಿಳಿದುಬಂದಿತ್ತು. ಆಗ ನಾನು ಅದನ್ನು ತಪ್ಪಿಸಲು ನಮ್ಮ ಮನೆಯಿಂದ ಖಾನಪುರದಿಂದ ಬೆಳಗಾವಿಗೆ ಬದಲಿಸಿದ್ದೆ. ಇದೆಲ್ಲ ಸರಿ ಬರುವುದಿಲ್ಲವೆಂದು ಬುದ್ದಿವಾದ ಹೇಳಿದ್ದೆ. ಆದರೆ ಒಂದು ದಿನ ಕುಂಬಾರ್‌ನೊಂದಿಗೆ ಶ್ರೀರಾಮ ಸೇನೆಯ ಪುಂಡಲಿಕ್ ಮಹಾರಾಜ್, ಬಿರ್ಜೆ ಎಂಬುವವರ ಬಂದು ನಮಗೆ ಧಮಕಿ ಹಾಕಿದರು. ಕೊಲೆ ಬೆದರಿಕೆ ಹಾಕಿದರು. ನನ್ನ ಮಗನ ಫೋನ್ ಕಿತ್ತುಕೊಂಡು ಎಲ್ಲಾ ನಂಬರ್ ಗಳನ್ನು ಡಿಲೀಟ್ ಮಾಡಿದ್ದರು” ಎಂದಿದ್ದಾರೆ.

ಆಗ ನನ್ನ ಮಗ ಆ ಹುಡುಗಿಯನ್ನು ಮರೆತಿದ್ದ. ಆದರೆ ಸೆಪ್ಟಂಬರ್ 26 ರಂದು ಪುಂಡಲಿಕ್ ಮಹಾರಾಜ್ ಬಂದು ನಮ್ಮಲ್ಲಿ ಮತ್ತೆ ಜಗಳ ಮಾಡಿದ್ದರು. ಈಗಾಗಲೇ ನನ್ನ ಮೇಲೆ 40 ಪ್ರಕರಣಗಳಿವೆ. ಇನ್ನೊಂದು ಆದರೆ ದೊಡ್ಡದೇನಲ್ಲ ಎಂದು ಬೆದರಿಸಿದ್ದ. ಅದೇ ಸಮಯಕ್ಕೆ ಆ ಹುಡುಗಿ ಫೋನ್ ಮಾಡಿ 7,000 ಹಣದ ಬೇಡಿಕೆ ಇಟ್ಟಿದ್ದಳು. ನಾವದನ್ನು ಪಾವತಿಸಿದೆವು. ನಂತರ ಮತ್ತೆ 90,000 ಬೇಡಿಕೆ ಇಟ್ಟಿದ್ದಳು. ಆಗ ನನ್ನ ಮಗ ತನ್ನ ಕಾರನ್ನು 70,000 ರೂಗೆ ಮಾರಿದ್ದ. ಆ ಹಣ ಎಲ್ಲಿಗೆ ಹೋಯಿತು ಎಂದು ತಿಳಿದಿಲ್ಲ, ನನ್ನ ಮಗನನ್ನೂ ಕಳೆದುಕೊಂಡೆ ಎಂದು ಅವರು ಕಣ್ಣೀರು ಹಾಕಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...