Homeಮುಖಪುಟಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನನ್ನು ಕೊಲೆಗೈಯಲಾಗಿದೆ ಮತ್ತು ಹುಡುಗಿಯ ಕುಟುಂಬಸ್ಥರು ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಅರ್ಬಾಜ್ ಮುಲ್ಲಾ ಎಂಬ ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆಯ ಮುಖ್ಯಸ್ಥ ಪುಂಡಲಿಕ್ ಮಹಾರಾಜ್ ಮುಟ್ಗೇಕರ್ ಸೇರಿದಂತೆ ಒಟ್ಟು 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಅರ್ಬಾಜ್ ಪ್ರೀತಿಸುತ್ತಿದ್ದ ಹುಡುಗಿಯ ಕುಟುಂಬಸ್ಥರು ಸೇರಿದ್ದಾರೆ.

ಸೆಪ್ಟಂಬರ್ 29 ರಂದು ಅರ್ಬಾಜ್ ಮುಲ್ಲಾ ಎಂಬ ಯುವಕನ ಛಿದ್ರವಾದ ಶವ ಪತ್ತೆಯಾಗಿತ್ತು. ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಅವರನ್ನು ಕೊಲೆಗೈಯಲಾಗಿದೆ ಮತ್ತು ಹುಡುಗಿಯ ಕುಟುಂಬಸ್ಥರು ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ಆರೋಪವನ್ನು ಕೊಲೆ ನಡೆದ ದಿನದಿಂದಲೇ ಅರ್ಬಾಜ್ ತಾಯಿ ನಜೀಮ ಶೇಖ್ ಮಾಡಿದ್ದರು.

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಅರ್ಬಾಜ್ ಅಫ್ತಾಬ್ ಮುಲ್ಲಾ (24) ಸೆಪ್ಟಂಬರ್ 28 ರಿಂದ ಕಾಣೆಯಾಗಿದ್ದನು ಎಂದು ಅವರ ಪೋಷಕರು ದೂರಿದ್ದರು. ಅವರ ತಾಯಿ ನಜೀಮ ಶೇಖ್ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎನ್ನುವ ಸಂಘಟನೆಯ ಯುವಕರು ನನ್ನ ಮಗನಿಗೆ ಬೆದರಿಕೆ ಹಾಕಿದ್ದರು. ಹುಡುಗಿಯೊಂದಿಗೆ ಸೇರಿ ಹಣ ವಸೂಲಿ ಮಾಡಿದ್ದರು ಎಂದು ದೂರಿದ್ದರು.

2018ರಲ್ಲಿ ಶ್ರೀರಾಮ ಸೇನೆಯಿಂದ ಹೊರಬಂದು ಶ್ರೀರಾಮಸೇನೆ ಹಿಂದೂಸ್ತಾನ್ ಎಂಬ ಸಂಘಟನೆ ಕಟ್ಟಿಕೊಂಡಿದ್ದ ಪುಂಡಲಿಕ್ ಮಹಾರಾಜ್ ಮುಟ್ಗೇಕರ್ ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿದೆ. ಹುಡುಗಿಯ ಪೋಷಕರಾದ ಶುಶೀಲ ಈರಪ್ಪ (42) ಮತ್ತು ಈರಪ್ಪ ಬಸವಣ್ಣಿ ಕುಂಬಾರ (54) ಅರ್ಬಾಜ್‌ನನ್ನು ಕೊಲೆಗೈಯಲು ಗುತ್ತಿಗೆ ಕೊಲೆಗಾರರನ್ನು ನೇಮಿಸಿಕೊಂಡಿದ್ದಾರೆ ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಥಬುದ್ಧಿನ್ ಅಲ್ಲಾಬಕ್ಷ್ (36), ಮಾರುತಿ ಪ್ರಹ್ಲಾದ್ (30), ಮಂಜುನಾಥ್ ತುಕಾರಾಂ (25), ಗಣಪತಿ ಜ್ಞಾನೇಶ್ವರ (27), ಪ್ರಶಾಂತ್ ಕಲ್ಲಪ್ಪ (28) ಮತ್ತು ಪ್ರವೀಣ್ ಶಂಕರ್ (28)  ಮತ್ತು ಶ್ರೀಧರ್ ಮಹದೇವದೋಣಿ (30) ಇತರ ಬಂಧಿತರಾಗಿದ್ದಾರೆ.

ದಿ ಟೆಲಿಗ್ರಾಫ್‌ನೊಂದಿಗೆ ಮಾತನಾಡಿರುವ ಉರ್ದು ಶಾಲೆಯ ಶಿಕ್ಷಕಿಯಾಗಿರುವ ನಜೀಮ ಶೇಖ್ “ನನ್ನ ಮಗ ಅರ್ಬಾಜ್, ಕುಂಬಾರ್ ಎಂಬುವವರ ಮಗಳನ್ನು ಪ್ರೀತಿಸುತ್ತಿರುವುದು ತಿಳಿದುಬಂದಿತ್ತು. ಆಗ ನಾನು ಅದನ್ನು ತಪ್ಪಿಸಲು ನಮ್ಮ ಮನೆಯಿಂದ ಖಾನಪುರದಿಂದ ಬೆಳಗಾವಿಗೆ ಬದಲಿಸಿದ್ದೆ. ಇದೆಲ್ಲ ಸರಿ ಬರುವುದಿಲ್ಲವೆಂದು ಬುದ್ದಿವಾದ ಹೇಳಿದ್ದೆ. ಆದರೆ ಒಂದು ದಿನ ಕುಂಬಾರ್‌ನೊಂದಿಗೆ ಶ್ರೀರಾಮ ಸೇನೆಯ ಪುಂಡಲಿಕ್ ಮಹಾರಾಜ್, ಬಿರ್ಜೆ ಎಂಬುವವರ ಬಂದು ನಮಗೆ ಧಮಕಿ ಹಾಕಿದರು. ಕೊಲೆ ಬೆದರಿಕೆ ಹಾಕಿದರು. ನನ್ನ ಮಗನ ಫೋನ್ ಕಿತ್ತುಕೊಂಡು ಎಲ್ಲಾ ನಂಬರ್ ಗಳನ್ನು ಡಿಲೀಟ್ ಮಾಡಿದ್ದರು” ಎಂದಿದ್ದಾರೆ.

ಆಗ ನನ್ನ ಮಗ ಆ ಹುಡುಗಿಯನ್ನು ಮರೆತಿದ್ದ. ಆದರೆ ಸೆಪ್ಟಂಬರ್ 26 ರಂದು ಪುಂಡಲಿಕ್ ಮಹಾರಾಜ್ ಬಂದು ನಮ್ಮಲ್ಲಿ ಮತ್ತೆ ಜಗಳ ಮಾಡಿದ್ದರು. ಈಗಾಗಲೇ ನನ್ನ ಮೇಲೆ 40 ಪ್ರಕರಣಗಳಿವೆ. ಇನ್ನೊಂದು ಆದರೆ ದೊಡ್ಡದೇನಲ್ಲ ಎಂದು ಬೆದರಿಸಿದ್ದ. ಅದೇ ಸಮಯಕ್ಕೆ ಆ ಹುಡುಗಿ ಫೋನ್ ಮಾಡಿ 7,000 ಹಣದ ಬೇಡಿಕೆ ಇಟ್ಟಿದ್ದಳು. ನಾವದನ್ನು ಪಾವತಿಸಿದೆವು. ನಂತರ ಮತ್ತೆ 90,000 ಬೇಡಿಕೆ ಇಟ್ಟಿದ್ದಳು. ಆಗ ನನ್ನ ಮಗ ತನ್ನ ಕಾರನ್ನು 70,000 ರೂಗೆ ಮಾರಿದ್ದ. ಆ ಹಣ ಎಲ್ಲಿಗೆ ಹೋಯಿತು ಎಂದು ತಿಳಿದಿಲ್ಲ, ನನ್ನ ಮಗನನ್ನೂ ಕಳೆದುಕೊಂಡೆ ಎಂದು ಅವರು ಕಣ್ಣೀರು ಹಾಕಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...