Homeಮುಖಪುಟಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನನ್ನು ಕೊಲೆಗೈಯಲಾಗಿದೆ ಮತ್ತು ಹುಡುಗಿಯ ಕುಟುಂಬಸ್ಥರು ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಅರ್ಬಾಜ್ ಮುಲ್ಲಾ ಎಂಬ ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆಯ ಮುಖ್ಯಸ್ಥ ಪುಂಡಲಿಕ್ ಮಹಾರಾಜ್ ಮುಟ್ಗೇಕರ್ ಸೇರಿದಂತೆ ಒಟ್ಟು 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಅರ್ಬಾಜ್ ಪ್ರೀತಿಸುತ್ತಿದ್ದ ಹುಡುಗಿಯ ಕುಟುಂಬಸ್ಥರು ಸೇರಿದ್ದಾರೆ.

ಸೆಪ್ಟಂಬರ್ 29 ರಂದು ಅರ್ಬಾಜ್ ಮುಲ್ಲಾ ಎಂಬ ಯುವಕನ ಛಿದ್ರವಾದ ಶವ ಪತ್ತೆಯಾಗಿತ್ತು. ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಅವರನ್ನು ಕೊಲೆಗೈಯಲಾಗಿದೆ ಮತ್ತು ಹುಡುಗಿಯ ಕುಟುಂಬಸ್ಥರು ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ಆರೋಪವನ್ನು ಕೊಲೆ ನಡೆದ ದಿನದಿಂದಲೇ ಅರ್ಬಾಜ್ ತಾಯಿ ನಜೀಮ ಶೇಖ್ ಮಾಡಿದ್ದರು.

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಅರ್ಬಾಜ್ ಅಫ್ತಾಬ್ ಮುಲ್ಲಾ (24) ಸೆಪ್ಟಂಬರ್ 28 ರಿಂದ ಕಾಣೆಯಾಗಿದ್ದನು ಎಂದು ಅವರ ಪೋಷಕರು ದೂರಿದ್ದರು. ಅವರ ತಾಯಿ ನಜೀಮ ಶೇಖ್ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎನ್ನುವ ಸಂಘಟನೆಯ ಯುವಕರು ನನ್ನ ಮಗನಿಗೆ ಬೆದರಿಕೆ ಹಾಕಿದ್ದರು. ಹುಡುಗಿಯೊಂದಿಗೆ ಸೇರಿ ಹಣ ವಸೂಲಿ ಮಾಡಿದ್ದರು ಎಂದು ದೂರಿದ್ದರು.

2018ರಲ್ಲಿ ಶ್ರೀರಾಮ ಸೇನೆಯಿಂದ ಹೊರಬಂದು ಶ್ರೀರಾಮಸೇನೆ ಹಿಂದೂಸ್ತಾನ್ ಎಂಬ ಸಂಘಟನೆ ಕಟ್ಟಿಕೊಂಡಿದ್ದ ಪುಂಡಲಿಕ್ ಮಹಾರಾಜ್ ಮುಟ್ಗೇಕರ್ ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿದೆ. ಹುಡುಗಿಯ ಪೋಷಕರಾದ ಶುಶೀಲ ಈರಪ್ಪ (42) ಮತ್ತು ಈರಪ್ಪ ಬಸವಣ್ಣಿ ಕುಂಬಾರ (54) ಅರ್ಬಾಜ್‌ನನ್ನು ಕೊಲೆಗೈಯಲು ಗುತ್ತಿಗೆ ಕೊಲೆಗಾರರನ್ನು ನೇಮಿಸಿಕೊಂಡಿದ್ದಾರೆ ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಥಬುದ್ಧಿನ್ ಅಲ್ಲಾಬಕ್ಷ್ (36), ಮಾರುತಿ ಪ್ರಹ್ಲಾದ್ (30), ಮಂಜುನಾಥ್ ತುಕಾರಾಂ (25), ಗಣಪತಿ ಜ್ಞಾನೇಶ್ವರ (27), ಪ್ರಶಾಂತ್ ಕಲ್ಲಪ್ಪ (28) ಮತ್ತು ಪ್ರವೀಣ್ ಶಂಕರ್ (28)  ಮತ್ತು ಶ್ರೀಧರ್ ಮಹದೇವದೋಣಿ (30) ಇತರ ಬಂಧಿತರಾಗಿದ್ದಾರೆ.

ದಿ ಟೆಲಿಗ್ರಾಫ್‌ನೊಂದಿಗೆ ಮಾತನಾಡಿರುವ ಉರ್ದು ಶಾಲೆಯ ಶಿಕ್ಷಕಿಯಾಗಿರುವ ನಜೀಮ ಶೇಖ್ “ನನ್ನ ಮಗ ಅರ್ಬಾಜ್, ಕುಂಬಾರ್ ಎಂಬುವವರ ಮಗಳನ್ನು ಪ್ರೀತಿಸುತ್ತಿರುವುದು ತಿಳಿದುಬಂದಿತ್ತು. ಆಗ ನಾನು ಅದನ್ನು ತಪ್ಪಿಸಲು ನಮ್ಮ ಮನೆಯಿಂದ ಖಾನಪುರದಿಂದ ಬೆಳಗಾವಿಗೆ ಬದಲಿಸಿದ್ದೆ. ಇದೆಲ್ಲ ಸರಿ ಬರುವುದಿಲ್ಲವೆಂದು ಬುದ್ದಿವಾದ ಹೇಳಿದ್ದೆ. ಆದರೆ ಒಂದು ದಿನ ಕುಂಬಾರ್‌ನೊಂದಿಗೆ ಶ್ರೀರಾಮ ಸೇನೆಯ ಪುಂಡಲಿಕ್ ಮಹಾರಾಜ್, ಬಿರ್ಜೆ ಎಂಬುವವರ ಬಂದು ನಮಗೆ ಧಮಕಿ ಹಾಕಿದರು. ಕೊಲೆ ಬೆದರಿಕೆ ಹಾಕಿದರು. ನನ್ನ ಮಗನ ಫೋನ್ ಕಿತ್ತುಕೊಂಡು ಎಲ್ಲಾ ನಂಬರ್ ಗಳನ್ನು ಡಿಲೀಟ್ ಮಾಡಿದ್ದರು” ಎಂದಿದ್ದಾರೆ.

ಆಗ ನನ್ನ ಮಗ ಆ ಹುಡುಗಿಯನ್ನು ಮರೆತಿದ್ದ. ಆದರೆ ಸೆಪ್ಟಂಬರ್ 26 ರಂದು ಪುಂಡಲಿಕ್ ಮಹಾರಾಜ್ ಬಂದು ನಮ್ಮಲ್ಲಿ ಮತ್ತೆ ಜಗಳ ಮಾಡಿದ್ದರು. ಈಗಾಗಲೇ ನನ್ನ ಮೇಲೆ 40 ಪ್ರಕರಣಗಳಿವೆ. ಇನ್ನೊಂದು ಆದರೆ ದೊಡ್ಡದೇನಲ್ಲ ಎಂದು ಬೆದರಿಸಿದ್ದ. ಅದೇ ಸಮಯಕ್ಕೆ ಆ ಹುಡುಗಿ ಫೋನ್ ಮಾಡಿ 7,000 ಹಣದ ಬೇಡಿಕೆ ಇಟ್ಟಿದ್ದಳು. ನಾವದನ್ನು ಪಾವತಿಸಿದೆವು. ನಂತರ ಮತ್ತೆ 90,000 ಬೇಡಿಕೆ ಇಟ್ಟಿದ್ದಳು. ಆಗ ನನ್ನ ಮಗ ತನ್ನ ಕಾರನ್ನು 70,000 ರೂಗೆ ಮಾರಿದ್ದ. ಆ ಹಣ ಎಲ್ಲಿಗೆ ಹೋಯಿತು ಎಂದು ತಿಳಿದಿಲ್ಲ, ನನ್ನ ಮಗನನ್ನೂ ಕಳೆದುಕೊಂಡೆ ಎಂದು ಅವರು ಕಣ್ಣೀರು ಹಾಕಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...