Homeಕರ್ನಾಟಕಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ಮೃತನ ತಾಯಿ ನಜೀಮ ಶೇಖ್ ಮೃತ ದೇಹವನ್ನು ಗುರುತಿಸಿದ ನಂತರ ಹುಡುಗಿಯ ತಂದೆ ಸೇರಿ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆಯ ಯುವಕರ ಮೇಲೆ ಕೊಲೆ ದೂರು ದಾಖಲಿಸಿದ್ದಾರೆ.

- Advertisement -
- Advertisement -

ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಗಳಿಗೆ ಸೇರಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಟೋಬರ್ ಸೆಪ್ಟಂಬರ್ 29 ರಂದು ಮುಸ್ಲಿಂ ಯುವಕನ ಛಿದ್ರವಾದ ಶವ ಪತ್ತೆಯಾಗಿತ್ತು. ಸೆಪ್ಟಂಬರ್ 28 ರಂದು ಕೊಲೆ ನಡೆದಿರುವ ಸಂಭವವಿದ್ದು, ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನ ಕೊಲೆಗೈಯಲಾಗಿದೆ ಎಂದು ಶಂಕಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಅರ್ಬಾಜ್ ಅಫ್ತಾಬ್ ಮುಲ್ಲಾ (24) ಸೆಪ್ಟಂಬರ್ 28 ರಿಂದ ಕಾಣೆಯಾಗಿದ್ದನು ಎಂದು ಅವನ ಪೋಷಕರು ದೂರಿದ್ದರು. ಆತನ ತಾಯಿ ನಜೀಮ ಶೇಖ್ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎನ್ನುವ ಸಂಘಟನೆಯ ಯುವಕರು ನನ್ನ ಮಗನಿಗೆ ಬೆದರಿಕೆ ಹಾಕಿದ್ದರು. ಹುಡುಗಿಯೊಂದಿಗೆ ಸೇರಿ ಹಣ ವಸೂಲಿ ಮಾಡಿದ್ದರು ಎಂದು ದೂರಿದ್ದರು.

ಅಲ್ಲದೇ ಪೊಲೀಸರು ಮೃತ ದೇಹ ವಶಪಡಿಸಿಕೊಂಡ ನಂತರ ಅಲ್ಲಿದ್ದ ಆಂಬುಲೆನ್ಸ್ ಮೇಲೆ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎಂದು ಬರೆದಿತ್ತು ಎಂದು ಮೂಲಗಲನ್ನು ಉಲ್ಲೇಖಿಸಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

ಅರ್ಬಾಜ್ ಮುಲ್ಲಾ ಅನ್ಯ ಸಮುದಾಯದ ಯುವತಿಯನ್ನು ಪ್ರೀತಿಸುತ್ತಿದ್ದನು. ಇದಕ್ಕೆ ಹುಡುಗಿಯ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಕೆಲ ಬಲಪಂಥೀಯ ಸಂಘಟನೆಯ ಸದಸ್ಯರು ಲವ್ ಜಿಹಾದ್ ಎಂದು ಅರ್ಬಾಜ್‌ನೊಂದಿಗೆ ಜಗಳ ಮಾಡಿದ್ದರು. ಸೆಪ್ಟೆಂಬರ್ 28ರಂದು ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಅರ್ಬಾಜ್ ನನ್ನು ಖಾನಾಪುರ ಹೊರವಲಯದ ರೈಲ್ವೆ ಹಳಿ ಮೇಲೆ ಬರ್ಬರವಾಗಿ ಕೊಲೆಗೈಯಲಾಗಿದೆ ಎಂದು ಆತನ ಕುಟುಂಬಸ್ಥರು ದೂರಿದ್ದಾರೆ.

ಆದರೆ ಪೊಲೀಸರು ಹುಡುಗಿಯ ತಂದೆ ಸೇರಿದಂತೆ ಇದುವರೆಗೂ 8 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆದರೆ ಆರೋಪಿಗಳು ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ ಮತ್ತು ಮೃತದೇಹದ ಮರಣೋತ್ತರ ವರದಿಯನ್ನು ಬಹಿರಂಗಗೊಳಿಸಿಲ್ಲ ಎನ್ನಲಾಗಿದೆ.

ಮೃತನ ತಾಯಿ ನಜೀಮ ಶೇಖ್ ಮೃತ ದೇಹವನ್ನು ಗುರುತಿಸಿದ ನಂತರ ಹುಡುಗಿಯ ತಂದೆ ಸೇರಿ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆಯ ಯುವಕರ ಮೇಲೆ ಕೊಲೆ ದೂರು ದಾಖಲಿಸಿದ್ದಾರೆ.

ದಿ ಟೆಲಿಗ್ರಾಫ್‌ನೊಂದಿಗೆ ಮಾತನಾಡಿರುವ ಉರ್ದು ಶಾಲೆಯ ಶಿಕ್ಷಕಿಯಾಗಿರುವ ನಜೀಮ ಶೇಖ್ “ನನ್ನ ಮಗ ಅರ್ಬಾಜ್, ಕುಂಬಾರ್ ಎಂಬುವವರ ಮಗಳನ್ನು ಪ್ರೀತಿಸುತ್ತಿರುವುದು ತಿಳಿದುಬಂದಿತ್ತು. ಆಗ ನಾನು ಅದನ್ನು ತಪ್ಪಿಸಲು ನಮ್ಮ ಮನೆಯಿಂದ ಖಾನಪುರದಿಂದ ಬೆಳಗಾವಿಗೆ ಬದಲಿಸಿದ್ದೆ. ಇದೆಲ್ಲ ಸರಿ ಬರುವುದಿಲ್ಲವೆಂದು ಬುದ್ದಿವಾದ ಹೇಳಿದ್ದೆ. ಆದರೆ ಒಂದು ದಿನ ಕುಂಬಾರ್‌ನೊಂದಿಗೆ ಶ್ರೀರಾಮ ಸೇನೆಯ ಪುಂಡಲಿಕ್ ಮಹಾರಾಜ್, ಬಿರ್ಜೆ ಎಂಬುವವರ ಬಂದು ನಮಗೆ ಧಮಕಿ ಹಾಕಿದರು. ಕೊಲೆ ಬೆದರಿಕೆ ಹಾಕಿದರು. ನನ್ನ ಮಗನ ಫೋನ್ ಕಿತ್ತುಕೊಂಡು ಎಲ್ಲಾ ನಂಬರ್ ಗಳನ್ನು ಡಿಲೀಟ್ ಮಾಡಿದ್ದರು” ಎಂದಿದ್ದಾರೆ.

ಆಗ ನನ್ನ ಮಗ ಆ ಹುಡುಗಿಯನ್ನು ಮರೆತಿದ್ದ. ಆದರೆ ಸೆಪ್ಟಂಬರ್ 26 ರಂದು ಪುಂಡಲಿಕ್ ಮಹಾರಾಜ್ ಬಂದು ನಮ್ಮಲ್ಲಿ ಮತ್ತೆ ಜಗಳ ಮಾಡಿದೆ. ಈಗಾಗಲೇ ನನ್ನ ಮೇಲೆ 40 ಪ್ರಕರಣಗಳಿವೆ. ಇನ್ನೊಂದು ಆದರೆ ದೊಡ್ಡದೇನಲ್ಲ ಎಂದು ಬೆದರಿಸಿದ್ದ. ಅದೇ ಸಮಯಕ್ಕೆ ಆ ಹುಡುಗಿ ಫೋನ್ ಮಾಡಿ 7,000 ಹಣದ ಬೇಡಿಕೆ ಇಟ್ಟಿದ್ದಳು. ನಾವದನ್ನು ಪಾವತಿಸಿದೆವು. ನಂತರ ಮತ್ತೆ 90,000 ಬೇಡಿಕೆ ಇಟ್ಟಿದ್ದಳು. ಆಗ ನನ್ನ ಮಗ ತನ್ನ ಕಾರನ್ನು 70,000 ರೂಗೆ ಮಾರಿದ್ದ. ಆ ಹಣ ಎಲ್ಲಿಗೆ ಹೋಯಿತು ಎಂದು ತಿಳಿದಿಲ್ಲ, ನನ್ನ ಮಗನನ್ನೂ ಕಳೆದುಕೊಂಡೆ ಎಂದು ಅವರು ಕಣ್ಣೀರು ಹಾಕಿದ್ದಾರೆ.

ನಜೀಮ ಎರಡು ವರ್ಷದ ಹಿಂದೆ ತನ್ನ ಗಂಡನನ್ನು ಕಳೆದುಕೊಂಡಿದ್ದರು. ಈಗ ಮಗನನ್ನು ಕಳೆದುಕೊಂಡಿದ್ದಾರೆ. ಮಗಳು ಬ್ರಿಟನ್‌ನಲ್ಲಿರುವುದರಿಂದ ಸದ್ಯಕ್ಕೆ ಒಂಟಿಯಾಗಿದ್ದಾಳೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.


ಇದನ್ನೂ ಓದಿ: ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಂ ಯುವಕನ ಬರ್ಬರ ಕೊಲೆ: ಬಲಪಂಥೀಯ ಸಂಘಟನೆಗಳ ಮೇಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...