Homeಕರ್ನಾಟಕಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ಮೃತನ ತಾಯಿ ನಜೀಮ ಶೇಖ್ ಮೃತ ದೇಹವನ್ನು ಗುರುತಿಸಿದ ನಂತರ ಹುಡುಗಿಯ ತಂದೆ ಸೇರಿ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆಯ ಯುವಕರ ಮೇಲೆ ಕೊಲೆ ದೂರು ದಾಖಲಿಸಿದ್ದಾರೆ.

- Advertisement -
- Advertisement -

ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಗಳಿಗೆ ಸೇರಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಟೋಬರ್ ಸೆಪ್ಟಂಬರ್ 29 ರಂದು ಮುಸ್ಲಿಂ ಯುವಕನ ಛಿದ್ರವಾದ ಶವ ಪತ್ತೆಯಾಗಿತ್ತು. ಸೆಪ್ಟಂಬರ್ 28 ರಂದು ಕೊಲೆ ನಡೆದಿರುವ ಸಂಭವವಿದ್ದು, ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನ ಕೊಲೆಗೈಯಲಾಗಿದೆ ಎಂದು ಶಂಕಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಅರ್ಬಾಜ್ ಅಫ್ತಾಬ್ ಮುಲ್ಲಾ (24) ಸೆಪ್ಟಂಬರ್ 28 ರಿಂದ ಕಾಣೆಯಾಗಿದ್ದನು ಎಂದು ಅವನ ಪೋಷಕರು ದೂರಿದ್ದರು. ಆತನ ತಾಯಿ ನಜೀಮ ಶೇಖ್ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎನ್ನುವ ಸಂಘಟನೆಯ ಯುವಕರು ನನ್ನ ಮಗನಿಗೆ ಬೆದರಿಕೆ ಹಾಕಿದ್ದರು. ಹುಡುಗಿಯೊಂದಿಗೆ ಸೇರಿ ಹಣ ವಸೂಲಿ ಮಾಡಿದ್ದರು ಎಂದು ದೂರಿದ್ದರು.

ಅಲ್ಲದೇ ಪೊಲೀಸರು ಮೃತ ದೇಹ ವಶಪಡಿಸಿಕೊಂಡ ನಂತರ ಅಲ್ಲಿದ್ದ ಆಂಬುಲೆನ್ಸ್ ಮೇಲೆ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎಂದು ಬರೆದಿತ್ತು ಎಂದು ಮೂಲಗಲನ್ನು ಉಲ್ಲೇಖಿಸಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

ಅರ್ಬಾಜ್ ಮುಲ್ಲಾ ಅನ್ಯ ಸಮುದಾಯದ ಯುವತಿಯನ್ನು ಪ್ರೀತಿಸುತ್ತಿದ್ದನು. ಇದಕ್ಕೆ ಹುಡುಗಿಯ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಕೆಲ ಬಲಪಂಥೀಯ ಸಂಘಟನೆಯ ಸದಸ್ಯರು ಲವ್ ಜಿಹಾದ್ ಎಂದು ಅರ್ಬಾಜ್‌ನೊಂದಿಗೆ ಜಗಳ ಮಾಡಿದ್ದರು. ಸೆಪ್ಟೆಂಬರ್ 28ರಂದು ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಅರ್ಬಾಜ್ ನನ್ನು ಖಾನಾಪುರ ಹೊರವಲಯದ ರೈಲ್ವೆ ಹಳಿ ಮೇಲೆ ಬರ್ಬರವಾಗಿ ಕೊಲೆಗೈಯಲಾಗಿದೆ ಎಂದು ಆತನ ಕುಟುಂಬಸ್ಥರು ದೂರಿದ್ದಾರೆ.

ಆದರೆ ಪೊಲೀಸರು ಹುಡುಗಿಯ ತಂದೆ ಸೇರಿದಂತೆ ಇದುವರೆಗೂ 8 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆದರೆ ಆರೋಪಿಗಳು ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ ಮತ್ತು ಮೃತದೇಹದ ಮರಣೋತ್ತರ ವರದಿಯನ್ನು ಬಹಿರಂಗಗೊಳಿಸಿಲ್ಲ ಎನ್ನಲಾಗಿದೆ.

ಮೃತನ ತಾಯಿ ನಜೀಮ ಶೇಖ್ ಮೃತ ದೇಹವನ್ನು ಗುರುತಿಸಿದ ನಂತರ ಹುಡುಗಿಯ ತಂದೆ ಸೇರಿ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆಯ ಯುವಕರ ಮೇಲೆ ಕೊಲೆ ದೂರು ದಾಖಲಿಸಿದ್ದಾರೆ.

ದಿ ಟೆಲಿಗ್ರಾಫ್‌ನೊಂದಿಗೆ ಮಾತನಾಡಿರುವ ಉರ್ದು ಶಾಲೆಯ ಶಿಕ್ಷಕಿಯಾಗಿರುವ ನಜೀಮ ಶೇಖ್ “ನನ್ನ ಮಗ ಅರ್ಬಾಜ್, ಕುಂಬಾರ್ ಎಂಬುವವರ ಮಗಳನ್ನು ಪ್ರೀತಿಸುತ್ತಿರುವುದು ತಿಳಿದುಬಂದಿತ್ತು. ಆಗ ನಾನು ಅದನ್ನು ತಪ್ಪಿಸಲು ನಮ್ಮ ಮನೆಯಿಂದ ಖಾನಪುರದಿಂದ ಬೆಳಗಾವಿಗೆ ಬದಲಿಸಿದ್ದೆ. ಇದೆಲ್ಲ ಸರಿ ಬರುವುದಿಲ್ಲವೆಂದು ಬುದ್ದಿವಾದ ಹೇಳಿದ್ದೆ. ಆದರೆ ಒಂದು ದಿನ ಕುಂಬಾರ್‌ನೊಂದಿಗೆ ಶ್ರೀರಾಮ ಸೇನೆಯ ಪುಂಡಲಿಕ್ ಮಹಾರಾಜ್, ಬಿರ್ಜೆ ಎಂಬುವವರ ಬಂದು ನಮಗೆ ಧಮಕಿ ಹಾಕಿದರು. ಕೊಲೆ ಬೆದರಿಕೆ ಹಾಕಿದರು. ನನ್ನ ಮಗನ ಫೋನ್ ಕಿತ್ತುಕೊಂಡು ಎಲ್ಲಾ ನಂಬರ್ ಗಳನ್ನು ಡಿಲೀಟ್ ಮಾಡಿದ್ದರು” ಎಂದಿದ್ದಾರೆ.

ಆಗ ನನ್ನ ಮಗ ಆ ಹುಡುಗಿಯನ್ನು ಮರೆತಿದ್ದ. ಆದರೆ ಸೆಪ್ಟಂಬರ್ 26 ರಂದು ಪುಂಡಲಿಕ್ ಮಹಾರಾಜ್ ಬಂದು ನಮ್ಮಲ್ಲಿ ಮತ್ತೆ ಜಗಳ ಮಾಡಿದೆ. ಈಗಾಗಲೇ ನನ್ನ ಮೇಲೆ 40 ಪ್ರಕರಣಗಳಿವೆ. ಇನ್ನೊಂದು ಆದರೆ ದೊಡ್ಡದೇನಲ್ಲ ಎಂದು ಬೆದರಿಸಿದ್ದ. ಅದೇ ಸಮಯಕ್ಕೆ ಆ ಹುಡುಗಿ ಫೋನ್ ಮಾಡಿ 7,000 ಹಣದ ಬೇಡಿಕೆ ಇಟ್ಟಿದ್ದಳು. ನಾವದನ್ನು ಪಾವತಿಸಿದೆವು. ನಂತರ ಮತ್ತೆ 90,000 ಬೇಡಿಕೆ ಇಟ್ಟಿದ್ದಳು. ಆಗ ನನ್ನ ಮಗ ತನ್ನ ಕಾರನ್ನು 70,000 ರೂಗೆ ಮಾರಿದ್ದ. ಆ ಹಣ ಎಲ್ಲಿಗೆ ಹೋಯಿತು ಎಂದು ತಿಳಿದಿಲ್ಲ, ನನ್ನ ಮಗನನ್ನೂ ಕಳೆದುಕೊಂಡೆ ಎಂದು ಅವರು ಕಣ್ಣೀರು ಹಾಕಿದ್ದಾರೆ.

ನಜೀಮ ಎರಡು ವರ್ಷದ ಹಿಂದೆ ತನ್ನ ಗಂಡನನ್ನು ಕಳೆದುಕೊಂಡಿದ್ದರು. ಈಗ ಮಗನನ್ನು ಕಳೆದುಕೊಂಡಿದ್ದಾರೆ. ಮಗಳು ಬ್ರಿಟನ್‌ನಲ್ಲಿರುವುದರಿಂದ ಸದ್ಯಕ್ಕೆ ಒಂಟಿಯಾಗಿದ್ದಾಳೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.


ಇದನ್ನೂ ಓದಿ: ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಂ ಯುವಕನ ಬರ್ಬರ ಕೊಲೆ: ಬಲಪಂಥೀಯ ಸಂಘಟನೆಗಳ ಮೇಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...