Homeಕರ್ನಾಟಕಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ಮೃತನ ತಾಯಿ ನಜೀಮ ಶೇಖ್ ಮೃತ ದೇಹವನ್ನು ಗುರುತಿಸಿದ ನಂತರ ಹುಡುಗಿಯ ತಂದೆ ಸೇರಿ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆಯ ಯುವಕರ ಮೇಲೆ ಕೊಲೆ ದೂರು ದಾಖಲಿಸಿದ್ದಾರೆ.

- Advertisement -
- Advertisement -

ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಗಳಿಗೆ ಸೇರಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಟೋಬರ್ ಸೆಪ್ಟಂಬರ್ 29 ರಂದು ಮುಸ್ಲಿಂ ಯುವಕನ ಛಿದ್ರವಾದ ಶವ ಪತ್ತೆಯಾಗಿತ್ತು. ಸೆಪ್ಟಂಬರ್ 28 ರಂದು ಕೊಲೆ ನಡೆದಿರುವ ಸಂಭವವಿದ್ದು, ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನ ಕೊಲೆಗೈಯಲಾಗಿದೆ ಎಂದು ಶಂಕಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಅರ್ಬಾಜ್ ಅಫ್ತಾಬ್ ಮುಲ್ಲಾ (24) ಸೆಪ್ಟಂಬರ್ 28 ರಿಂದ ಕಾಣೆಯಾಗಿದ್ದನು ಎಂದು ಅವನ ಪೋಷಕರು ದೂರಿದ್ದರು. ಆತನ ತಾಯಿ ನಜೀಮ ಶೇಖ್ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎನ್ನುವ ಸಂಘಟನೆಯ ಯುವಕರು ನನ್ನ ಮಗನಿಗೆ ಬೆದರಿಕೆ ಹಾಕಿದ್ದರು. ಹುಡುಗಿಯೊಂದಿಗೆ ಸೇರಿ ಹಣ ವಸೂಲಿ ಮಾಡಿದ್ದರು ಎಂದು ದೂರಿದ್ದರು.

ಅಲ್ಲದೇ ಪೊಲೀಸರು ಮೃತ ದೇಹ ವಶಪಡಿಸಿಕೊಂಡ ನಂತರ ಅಲ್ಲಿದ್ದ ಆಂಬುಲೆನ್ಸ್ ಮೇಲೆ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎಂದು ಬರೆದಿತ್ತು ಎಂದು ಮೂಲಗಲನ್ನು ಉಲ್ಲೇಖಿಸಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

ಅರ್ಬಾಜ್ ಮುಲ್ಲಾ ಅನ್ಯ ಸಮುದಾಯದ ಯುವತಿಯನ್ನು ಪ್ರೀತಿಸುತ್ತಿದ್ದನು. ಇದಕ್ಕೆ ಹುಡುಗಿಯ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಕೆಲ ಬಲಪಂಥೀಯ ಸಂಘಟನೆಯ ಸದಸ್ಯರು ಲವ್ ಜಿಹಾದ್ ಎಂದು ಅರ್ಬಾಜ್‌ನೊಂದಿಗೆ ಜಗಳ ಮಾಡಿದ್ದರು. ಸೆಪ್ಟೆಂಬರ್ 28ರಂದು ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಅರ್ಬಾಜ್ ನನ್ನು ಖಾನಾಪುರ ಹೊರವಲಯದ ರೈಲ್ವೆ ಹಳಿ ಮೇಲೆ ಬರ್ಬರವಾಗಿ ಕೊಲೆಗೈಯಲಾಗಿದೆ ಎಂದು ಆತನ ಕುಟುಂಬಸ್ಥರು ದೂರಿದ್ದಾರೆ.

ಆದರೆ ಪೊಲೀಸರು ಹುಡುಗಿಯ ತಂದೆ ಸೇರಿದಂತೆ ಇದುವರೆಗೂ 8 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆದರೆ ಆರೋಪಿಗಳು ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ ಮತ್ತು ಮೃತದೇಹದ ಮರಣೋತ್ತರ ವರದಿಯನ್ನು ಬಹಿರಂಗಗೊಳಿಸಿಲ್ಲ ಎನ್ನಲಾಗಿದೆ.

ಮೃತನ ತಾಯಿ ನಜೀಮ ಶೇಖ್ ಮೃತ ದೇಹವನ್ನು ಗುರುತಿಸಿದ ನಂತರ ಹುಡುಗಿಯ ತಂದೆ ಸೇರಿ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆಯ ಯುವಕರ ಮೇಲೆ ಕೊಲೆ ದೂರು ದಾಖಲಿಸಿದ್ದಾರೆ.

ದಿ ಟೆಲಿಗ್ರಾಫ್‌ನೊಂದಿಗೆ ಮಾತನಾಡಿರುವ ಉರ್ದು ಶಾಲೆಯ ಶಿಕ್ಷಕಿಯಾಗಿರುವ ನಜೀಮ ಶೇಖ್ “ನನ್ನ ಮಗ ಅರ್ಬಾಜ್, ಕುಂಬಾರ್ ಎಂಬುವವರ ಮಗಳನ್ನು ಪ್ರೀತಿಸುತ್ತಿರುವುದು ತಿಳಿದುಬಂದಿತ್ತು. ಆಗ ನಾನು ಅದನ್ನು ತಪ್ಪಿಸಲು ನಮ್ಮ ಮನೆಯಿಂದ ಖಾನಪುರದಿಂದ ಬೆಳಗಾವಿಗೆ ಬದಲಿಸಿದ್ದೆ. ಇದೆಲ್ಲ ಸರಿ ಬರುವುದಿಲ್ಲವೆಂದು ಬುದ್ದಿವಾದ ಹೇಳಿದ್ದೆ. ಆದರೆ ಒಂದು ದಿನ ಕುಂಬಾರ್‌ನೊಂದಿಗೆ ಶ್ರೀರಾಮ ಸೇನೆಯ ಪುಂಡಲಿಕ್ ಮಹಾರಾಜ್, ಬಿರ್ಜೆ ಎಂಬುವವರ ಬಂದು ನಮಗೆ ಧಮಕಿ ಹಾಕಿದರು. ಕೊಲೆ ಬೆದರಿಕೆ ಹಾಕಿದರು. ನನ್ನ ಮಗನ ಫೋನ್ ಕಿತ್ತುಕೊಂಡು ಎಲ್ಲಾ ನಂಬರ್ ಗಳನ್ನು ಡಿಲೀಟ್ ಮಾಡಿದ್ದರು” ಎಂದಿದ್ದಾರೆ.

ಆಗ ನನ್ನ ಮಗ ಆ ಹುಡುಗಿಯನ್ನು ಮರೆತಿದ್ದ. ಆದರೆ ಸೆಪ್ಟಂಬರ್ 26 ರಂದು ಪುಂಡಲಿಕ್ ಮಹಾರಾಜ್ ಬಂದು ನಮ್ಮಲ್ಲಿ ಮತ್ತೆ ಜಗಳ ಮಾಡಿದೆ. ಈಗಾಗಲೇ ನನ್ನ ಮೇಲೆ 40 ಪ್ರಕರಣಗಳಿವೆ. ಇನ್ನೊಂದು ಆದರೆ ದೊಡ್ಡದೇನಲ್ಲ ಎಂದು ಬೆದರಿಸಿದ್ದ. ಅದೇ ಸಮಯಕ್ಕೆ ಆ ಹುಡುಗಿ ಫೋನ್ ಮಾಡಿ 7,000 ಹಣದ ಬೇಡಿಕೆ ಇಟ್ಟಿದ್ದಳು. ನಾವದನ್ನು ಪಾವತಿಸಿದೆವು. ನಂತರ ಮತ್ತೆ 90,000 ಬೇಡಿಕೆ ಇಟ್ಟಿದ್ದಳು. ಆಗ ನನ್ನ ಮಗ ತನ್ನ ಕಾರನ್ನು 70,000 ರೂಗೆ ಮಾರಿದ್ದ. ಆ ಹಣ ಎಲ್ಲಿಗೆ ಹೋಯಿತು ಎಂದು ತಿಳಿದಿಲ್ಲ, ನನ್ನ ಮಗನನ್ನೂ ಕಳೆದುಕೊಂಡೆ ಎಂದು ಅವರು ಕಣ್ಣೀರು ಹಾಕಿದ್ದಾರೆ.

ನಜೀಮ ಎರಡು ವರ್ಷದ ಹಿಂದೆ ತನ್ನ ಗಂಡನನ್ನು ಕಳೆದುಕೊಂಡಿದ್ದರು. ಈಗ ಮಗನನ್ನು ಕಳೆದುಕೊಂಡಿದ್ದಾರೆ. ಮಗಳು ಬ್ರಿಟನ್‌ನಲ್ಲಿರುವುದರಿಂದ ಸದ್ಯಕ್ಕೆ ಒಂಟಿಯಾಗಿದ್ದಾಳೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.


ಇದನ್ನೂ ಓದಿ: ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಂ ಯುವಕನ ಬರ್ಬರ ಕೊಲೆ: ಬಲಪಂಥೀಯ ಸಂಘಟನೆಗಳ ಮೇಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...