Homeಕರ್ನಾಟಕಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ಮೃತನ ತಾಯಿ ನಜೀಮ ಶೇಖ್ ಮೃತ ದೇಹವನ್ನು ಗುರುತಿಸಿದ ನಂತರ ಹುಡುಗಿಯ ತಂದೆ ಸೇರಿ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆಯ ಯುವಕರ ಮೇಲೆ ಕೊಲೆ ದೂರು ದಾಖಲಿಸಿದ್ದಾರೆ.

- Advertisement -
- Advertisement -

ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಗಳಿಗೆ ಸೇರಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಟೋಬರ್ ಸೆಪ್ಟಂಬರ್ 29 ರಂದು ಮುಸ್ಲಿಂ ಯುವಕನ ಛಿದ್ರವಾದ ಶವ ಪತ್ತೆಯಾಗಿತ್ತು. ಸೆಪ್ಟಂಬರ್ 28 ರಂದು ಕೊಲೆ ನಡೆದಿರುವ ಸಂಭವವಿದ್ದು, ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನ ಕೊಲೆಗೈಯಲಾಗಿದೆ ಎಂದು ಶಂಕಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಅರ್ಬಾಜ್ ಅಫ್ತಾಬ್ ಮುಲ್ಲಾ (24) ಸೆಪ್ಟಂಬರ್ 28 ರಿಂದ ಕಾಣೆಯಾಗಿದ್ದನು ಎಂದು ಅವನ ಪೋಷಕರು ದೂರಿದ್ದರು. ಆತನ ತಾಯಿ ನಜೀಮ ಶೇಖ್ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎನ್ನುವ ಸಂಘಟನೆಯ ಯುವಕರು ನನ್ನ ಮಗನಿಗೆ ಬೆದರಿಕೆ ಹಾಕಿದ್ದರು. ಹುಡುಗಿಯೊಂದಿಗೆ ಸೇರಿ ಹಣ ವಸೂಲಿ ಮಾಡಿದ್ದರು ಎಂದು ದೂರಿದ್ದರು.

ಅಲ್ಲದೇ ಪೊಲೀಸರು ಮೃತ ದೇಹ ವಶಪಡಿಸಿಕೊಂಡ ನಂತರ ಅಲ್ಲಿದ್ದ ಆಂಬುಲೆನ್ಸ್ ಮೇಲೆ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎಂದು ಬರೆದಿತ್ತು ಎಂದು ಮೂಲಗಲನ್ನು ಉಲ್ಲೇಖಿಸಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

ಅರ್ಬಾಜ್ ಮುಲ್ಲಾ ಅನ್ಯ ಸಮುದಾಯದ ಯುವತಿಯನ್ನು ಪ್ರೀತಿಸುತ್ತಿದ್ದನು. ಇದಕ್ಕೆ ಹುಡುಗಿಯ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಕೆಲ ಬಲಪಂಥೀಯ ಸಂಘಟನೆಯ ಸದಸ್ಯರು ಲವ್ ಜಿಹಾದ್ ಎಂದು ಅರ್ಬಾಜ್‌ನೊಂದಿಗೆ ಜಗಳ ಮಾಡಿದ್ದರು. ಸೆಪ್ಟೆಂಬರ್ 28ರಂದು ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಅರ್ಬಾಜ್ ನನ್ನು ಖಾನಾಪುರ ಹೊರವಲಯದ ರೈಲ್ವೆ ಹಳಿ ಮೇಲೆ ಬರ್ಬರವಾಗಿ ಕೊಲೆಗೈಯಲಾಗಿದೆ ಎಂದು ಆತನ ಕುಟುಂಬಸ್ಥರು ದೂರಿದ್ದಾರೆ.

ಆದರೆ ಪೊಲೀಸರು ಹುಡುಗಿಯ ತಂದೆ ಸೇರಿದಂತೆ ಇದುವರೆಗೂ 8 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆದರೆ ಆರೋಪಿಗಳು ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ ಮತ್ತು ಮೃತದೇಹದ ಮರಣೋತ್ತರ ವರದಿಯನ್ನು ಬಹಿರಂಗಗೊಳಿಸಿಲ್ಲ ಎನ್ನಲಾಗಿದೆ.

ಮೃತನ ತಾಯಿ ನಜೀಮ ಶೇಖ್ ಮೃತ ದೇಹವನ್ನು ಗುರುತಿಸಿದ ನಂತರ ಹುಡುಗಿಯ ತಂದೆ ಸೇರಿ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆಯ ಯುವಕರ ಮೇಲೆ ಕೊಲೆ ದೂರು ದಾಖಲಿಸಿದ್ದಾರೆ.

ದಿ ಟೆಲಿಗ್ರಾಫ್‌ನೊಂದಿಗೆ ಮಾತನಾಡಿರುವ ಉರ್ದು ಶಾಲೆಯ ಶಿಕ್ಷಕಿಯಾಗಿರುವ ನಜೀಮ ಶೇಖ್ “ನನ್ನ ಮಗ ಅರ್ಬಾಜ್, ಕುಂಬಾರ್ ಎಂಬುವವರ ಮಗಳನ್ನು ಪ್ರೀತಿಸುತ್ತಿರುವುದು ತಿಳಿದುಬಂದಿತ್ತು. ಆಗ ನಾನು ಅದನ್ನು ತಪ್ಪಿಸಲು ನಮ್ಮ ಮನೆಯಿಂದ ಖಾನಪುರದಿಂದ ಬೆಳಗಾವಿಗೆ ಬದಲಿಸಿದ್ದೆ. ಇದೆಲ್ಲ ಸರಿ ಬರುವುದಿಲ್ಲವೆಂದು ಬುದ್ದಿವಾದ ಹೇಳಿದ್ದೆ. ಆದರೆ ಒಂದು ದಿನ ಕುಂಬಾರ್‌ನೊಂದಿಗೆ ಶ್ರೀರಾಮ ಸೇನೆಯ ಪುಂಡಲಿಕ್ ಮಹಾರಾಜ್, ಬಿರ್ಜೆ ಎಂಬುವವರ ಬಂದು ನಮಗೆ ಧಮಕಿ ಹಾಕಿದರು. ಕೊಲೆ ಬೆದರಿಕೆ ಹಾಕಿದರು. ನನ್ನ ಮಗನ ಫೋನ್ ಕಿತ್ತುಕೊಂಡು ಎಲ್ಲಾ ನಂಬರ್ ಗಳನ್ನು ಡಿಲೀಟ್ ಮಾಡಿದ್ದರು” ಎಂದಿದ್ದಾರೆ.

ಆಗ ನನ್ನ ಮಗ ಆ ಹುಡುಗಿಯನ್ನು ಮರೆತಿದ್ದ. ಆದರೆ ಸೆಪ್ಟಂಬರ್ 26 ರಂದು ಪುಂಡಲಿಕ್ ಮಹಾರಾಜ್ ಬಂದು ನಮ್ಮಲ್ಲಿ ಮತ್ತೆ ಜಗಳ ಮಾಡಿದೆ. ಈಗಾಗಲೇ ನನ್ನ ಮೇಲೆ 40 ಪ್ರಕರಣಗಳಿವೆ. ಇನ್ನೊಂದು ಆದರೆ ದೊಡ್ಡದೇನಲ್ಲ ಎಂದು ಬೆದರಿಸಿದ್ದ. ಅದೇ ಸಮಯಕ್ಕೆ ಆ ಹುಡುಗಿ ಫೋನ್ ಮಾಡಿ 7,000 ಹಣದ ಬೇಡಿಕೆ ಇಟ್ಟಿದ್ದಳು. ನಾವದನ್ನು ಪಾವತಿಸಿದೆವು. ನಂತರ ಮತ್ತೆ 90,000 ಬೇಡಿಕೆ ಇಟ್ಟಿದ್ದಳು. ಆಗ ನನ್ನ ಮಗ ತನ್ನ ಕಾರನ್ನು 70,000 ರೂಗೆ ಮಾರಿದ್ದ. ಆ ಹಣ ಎಲ್ಲಿಗೆ ಹೋಯಿತು ಎಂದು ತಿಳಿದಿಲ್ಲ, ನನ್ನ ಮಗನನ್ನೂ ಕಳೆದುಕೊಂಡೆ ಎಂದು ಅವರು ಕಣ್ಣೀರು ಹಾಕಿದ್ದಾರೆ.

ನಜೀಮ ಎರಡು ವರ್ಷದ ಹಿಂದೆ ತನ್ನ ಗಂಡನನ್ನು ಕಳೆದುಕೊಂಡಿದ್ದರು. ಈಗ ಮಗನನ್ನು ಕಳೆದುಕೊಂಡಿದ್ದಾರೆ. ಮಗಳು ಬ್ರಿಟನ್‌ನಲ್ಲಿರುವುದರಿಂದ ಸದ್ಯಕ್ಕೆ ಒಂಟಿಯಾಗಿದ್ದಾಳೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.


ಇದನ್ನೂ ಓದಿ: ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಂ ಯುವಕನ ಬರ್ಬರ ಕೊಲೆ: ಬಲಪಂಥೀಯ ಸಂಘಟನೆಗಳ ಮೇಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...