Homeಮುಖಪುಟದಲಿತ ಆರ್‌ಟಿಐ ಕಾರ್ಯಕರ್ತನ ಹತ್ಯೆ ವಿರೋಧಿಸಿ ಪ್ರತಿಭಟನೆ: ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನ

ದಲಿತ ಆರ್‌ಟಿಐ ಕಾರ್ಯಕರ್ತನ ಹತ್ಯೆ ವಿರೋಧಿಸಿ ಪ್ರತಿಭಟನೆ: ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನ

- Advertisement -
- Advertisement -

ದಲಿತ ಆರ್‌ಟಿಐ ಕಾರ್ಯಕರ್ತ ಅಮ್ರಾಬಾಯಿ ಬೋರಿಚಾ ಕೊಲೆ ಪ್ರಕರಣದ ವಿರುದ್ಧ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಊನಾ ಚಳವಳಿ ನಾಯಕ, ಗುಜರಾತ್‌ನ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಮತ್ತು ನೂರಾರು ದಲಿತ ಪ್ರತಿಭಟನಾಕಾರರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ಗುಜರಾತ್‌ನ ಭವನಗರದ ಘೋಘಾ ತಾಲೂಕಿನ ಸನೋದರ್ ನಿವಾಸಿ 50 ವರ್ಷದ ಆರ್‌ಟಿಐ ಕಾರ್ಯಕರ್ತ ಅಮ್ರಾಬಾಯಿ ಬೋರಿಚಾ (50) ಎಂಬುವವರನ್ನು ಸ್ಥಳೀಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಉಪಸ್ಥಿತಿಯಲ್ಲಿಯೇ ಕೊಲೆ ಮಾಡಲಾಗಿದೆ. ತಮಗೆ ಜೀವ ಬೆದರಿಕೆ ಇದೆ ಎಂದು ಹಲವು ಬಾರಿ ಅಮ್ರಾಬಾಯಿ ಬೋರಿಚಾ ದೂರು ದಾಖಲಿಸಿದ್ದರೂ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ.

ಈ ಘಟನೆ ಸಂಬಂಧ ವಿಧಾನಸಭಾ ಅಧಿವೇಶನದಲ್ಲಿಯೂ ಶಾಸಕ ಜಿಗ್ನೇಶ್ ಮೇವಾನಿ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದರು. ಹತ್ಯೆ ವಿಚಾರದ ಬಗ್ಗೆ ಮಾತನಾಡಲು ಅವಕಾಶ ನಿಡುವಂತೆ ಕೇಳಿದ್ದರು. ಆದರೆ, ಅಶಿಸ್ತಿನ ನೆಪವೊಡ್ಡಿ ಅವರನ್ನು ಸದನದಿಂದ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ನಮ್ಮ ಮೇಲೆ ದಾಳಿ ನಡೆಸಿದರೆ ಹೋರಾಟವನ್ನು ನಿಲ್ಲಿಸುತ್ತೇವೆಂದು ಭಾವಿಸಿದ್ದೀರಾ, ಮನುವಾದಿಗಳೇ ?- ಜಿಗ್ನೇಶ್

ಮಂಗಳವಾರ ಸದನದಲ್ಲಿ ಮಾತನಾಡಲು ಅವಕಾಶ ನೀಡದಿದ್ದರೇ, ನೂರಾರು ದಲಿತ ಪ್ರತಿಭಟನಾಕಾರರೊಂದಿಗೆ ಗುಜರಾತ್ ವಿಧಾನಸೌಧದ ಗೇಟ್ ನಂಬರ್ ಒಂದರಲ್ಲಿ ಬೆಳಗ್ಗೆ 11.15ಕ್ಕೆ ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಈ ಬಗ್ಗೆ ಮುಖ್ಯಮಂತ್ರಿ ವಿಜಯ್ ರೂಪಾನಿಯವರಿಗೆ ಟ್ವಿಟರ್‌ನಲ್ಲಿ ಮಾಹಿತಿ ನಿಡಲಾಗಿತ್ತು.

ಅಸೆಂಬ್ಲಿಯಲ್ಲಿ ಮಾತನಾಡಲು ಅವಕಾಶ ನೀಡದಿದ್ದರೇ, ಬೀದಿಗಳಲ್ಲಿ ನಿಮ್ಮನ್ನು ನಾನು ಪ್ರಶ್ನಿಸುತ್ತೇನೆ ಎಂದಿದ್ದರು. ಮಾರ್ಚ್ 23 ಭಗತ್ ಸಿಂಗ್ ಅವರ ಹುತಾತ್ಮ ದಿನ. ಇದಕ್ಕಿಂತ  ಉತ್ತಮ ದಿನ ಮತ್ತೊಂದಿಲ್ಲ. ಇಂಕ್ವಿಲಾಬ್ ಜಿಂದಾಬಾದ್! ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಜಿಗ್ನೇಶ್ ಬರೆದುಕೊಂಡಿದ್ದರು.

ಸದ್ಯ ಪ್ರತಿಭಟನೆ ನಡೆಸುತ್ತಿದ್ದ ಜಿಗ್ನೇಶ್ ಮೇವಾನಿ ಮತ್ತು ನೂರಾರು ದಲಿತ ಪ್ರತಿಭಟನಾಕಾರರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ ಎಂದು ಜಿಗ್ನೇಶ್ ಮೇವಾನಿ ಅವರ ಸೋಶೀಯಲ್ ಮೀಡಿಯಾ ತಂಡ ಟ್ವೀಟ್ ಮಾಡಿದೆ.

ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಮಾರ್ಚ್ 2 ರಂದು ಹತ್ಯೆಗೊಳಗಾದ ಆರ್‌ಟಿಐ ಕಾರ್ಯಕರ್ತ, ರೈತ ಅಮ್ರಾಬಾಯಿ ಬೋರಿಚಾ ಅವರಿಗೆ ಸಂತಾಪ ಸೂಚಿಸಲು ಮಾರ್ಚ್ 14ರಂದು ಗುಜರಾತ್ ರಾಜ್ಯದಾದ್ಯಂತದ ಸುಮಾರು 2,500 ಪರಿಶಿಷ್ಟ ಜಾತಿ (ಎಸ್‌ಸಿ) ಪುರುಷರು ಮತ್ತು ಮಹಿಳೆಯರು ಭಾವನಗರ ಜಿಲ್ಲೆಯ ಸನೋದರ್ ಗ್ರಾಮಕ್ಕೆ ಆಗಮಿಸಿದ್ದರು.

Image
PC: Twitter@jigneshmevani80

ಸ್ಪೀಕರ್ ಅನುಮತಿಯಿಲ್ಲದೆ ದಲಿತ ವ್ಯಕ್ತಿಯ ಹತ್ಯೆಯ ವಿಷಯವನ್ನು ಸದನದಲ್ಲಿ ಎತ್ತಿದ ಕಾರಣ ಜಿಗ್ನೇಶ್ ಮೇವಾನಿ ಅವರನ್ನು “ಅಶಿಸ್ತು” ಎಂದು ರಾಜ್ಯ ವಿಧಾನಸಭೆಯಿಂದ ಅಮಾನತುಗೊಳಿಸಲಾಗಿತ್ತು. ಸ್ಪೀಕರ್ ರಾಜೇಂದ್ರ ತ್ರಿವೇದಿ ಅವರ ಆದೇಶದ ಮೇರೆಗೆ ಅವರನ್ನು ಸದನದಿಂದ ಹೊರಹಾಕಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ಪೋಸ್ಟರ್‌ ಹಿಡಿದು ಮೇವಾನಿ, ಮೈಕ್ ಆಫ್ ಆಗಿದ್ದರೂ, ಕೂಗಲು ಪ್ರಾರಂಭಿಸಿದರು ಮತ್ತು ರಾಜ್ಯದ ಬಿಜೆಪಿ ಸರ್ಕಾರ ಇನ್ನೂ ಪಿಎಸ್ಐ ಅನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದರು.


ಇದನ್ನೂ ಓದಿ: ಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...