Homeದಲಿತ್ ಫೈಲ್ಸ್ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಇಬ್ಬರು ಯುವಕರು ಕೊಲೆಯಾಗಿ 10 ದಿನ ಕಳೆದಿದೆ. ಉನ್ನತ ಮಟ್ಟದ ಅಧಿಕಾರಿಗಳು, ರಾಜಕಾರಣಿಗಳು ಪೆದ್ದನಹಳ್ಳಿಗೆ ಭೇಟಿ ನೀಡಿದ್ದಾರೆ. ಆದರೆ ಜಿಲ್ಲೆಯ ಸಚಿವರಿಗೆ ಘಟನೆ ಕುರಿತು ಮಾಹಿತಿ ಇಲ್ಲವಂತೆ!

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರು ಭೀಕರವಾಗಿ ಕೊಲೆಯಾಗಿ ಹತ್ತು ದಿನಗಳೇ ಕಳೆದವು. ಗಿರೀಶ್‌ ಎಂಬ ಹೆಸರಿನ ಇಬ್ಬರು ಯುವಕರು ಏ.21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಹತ್ಯೆಯಾದರು. ಈ ಘಟನೆಗೆ ರಾಜ್ಯದ ವಿವಿಧ ದಲಿತ ಸಂಘಟನೆಗಳು, ಹೋರಾಟಗಾರರು, ಅನೇಕ ರಾಜಕೀಯ ಮುಖಂಡರು ಪ್ರತಿಕ್ರಿಯಿಸಿ, ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ. ಆದರೆ ಇಷ್ಟೆಲ್ಲ ಬೆಳವಣಿಗೆಗಳಾದರೂ ಜಿಲ್ಲೆಯ ತಿಪಟೂರು ಕ್ಷೇತ್ರದ ಶಾಸಕ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪೆದ್ದನಹಳ್ಳಿಯ ಘಟನೆಯ ಕುರಿತು ಮಾಹಿತಿ ಇಲ್ಲವಂತೆ!

ಶಾಲಾ ಪಠ್ಯದಲ್ಲಿ ಕೋಮುರಾಜಕಾರಣ, ಹಿಜಾಬ್‌ ಹೆಸರಲ್ಲಿ ಗೊಂದಲ ಸೃಷ್ಟಿಗೆ ಥಟ್‌ ಅಂತ ಸ್ಪಂದಿಸುವ ಸಚಿವರು ದಲಿತ ಯುವಕರ ಹತ್ಯೆ ವಿಚಾರದಲ್ಲಿ ಬಹಳ ಉಢಾಪೆಯಾಗಿ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಇಬ್ಬರು ಯುವಕರ ಕೊಲೆಯಾಗುತ್ತದೆ. ಅಂದು ಗ್ರಾಮದಲ್ಲಿ ಕೊಲ್ಲಾಪುರದಮ್ಮನ ಜಾತ್ರೆಯನ್ನು ತಿಗಳ ಸಮುದಾಯದವರು ಹಮ್ಮಿಕೊಂಡಿರುತ್ತಾರೆ. ಅಂದು ಪೆದ್ದನಹಳ್ಳಿಯ ಮಾದಿಗ ಕುಟುಂಬದ ಗಿರೀಶ್ ಮನೆಗೆ ಗುಬ್ಬಿ ತಾಲ್ಲೂಕು ಹಾಗಲವಾಡಿ ಹೋಬಳಿಯ ಮಂಚಲದೊರೆ ನಿವಾಸಿ, ನಾಯಕ ಸಮುದಾಯದ ಗಿರೀಶ್ ಬಂದಿರುತ್ತಾರೆ. ಅಂದು ರಾತ್ರಿ ಲಿಂಗಾಯತ ಸಮುದಾಯದ ನಂದೀಶ್ ಎಂಬಾತ ಪೆದ್ದನಹಳ್ಳಿಯ ಗಿರೀಶ್‌ ಅವರನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾನೆ. ಮಂಚಲದೊರೆಯಿಂದ ಬಂದಿದ್ದ ಗಿರೀಶ್‌ ಕೂಡ ಗೆಳೆಯನನ್ನು ಹಿಂಬಾಲಿಸುತ್ತಾನೆ. ಆದರೆ ಬೆಳಿಗ್ಗೆ ನೋಡಿದರೆ ನೆಲ್ಲಿಗೆರೆ- ಸಿರಾ ರಸ್ತೆಯ ಪಕ್ಕದಲ್ಲಿನ ಹೊಂಡದ ಬಳಿ ಇಬ್ಬರು ಗಿರೀಶರೂ ಶವವಾಗಿ ಪತ್ತೆಯಾಗುತ್ತಾರೆ.

ಜಾತಿ ದೌರ್ಜನ್ಯ ಪ್ರಕರಣ ದಾಖಲಾಗುತ್ತದೆ. ಪೆದ್ದನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ವಿಚಾರಿಸಿದ್ದಾರೆ. ತನಿಖೆ ಕೂಡ ಬಿರುಸಿನಿಂದ ಸಾಗಿದೆ. ಇಪ್ಪತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳಾದರೂ ಸಚಿವ ನಾಗೇಶ್‌ ಅವರ ಗಮನಕ್ಕೆ ಬಂದಿಲ್ಲ ಎಂದರೆ ನಂಬುವುದು ಹೇಗೆ? ಎಂಬುದು ಸದ್ಯದ ಪ್ರಶ್ನೆ

“ಪೆದ್ದನಹಳ್ಳಿಯಲ್ಲಿ ನಡೆದಿರುವ ದಲಿತ ಯುವಕರ ಕೊಲೆ ಪ್ರಕರಣದ ಘಟನೆ ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ ಸಂಗ್ರಹಿಸಿ ಅಲ್ಲಿಗೆ ಭೇಟಿ ನೀಡುತ್ತೇನೆ” ಎಂದು ಬಿ.ಸಿ.ನಾಗೇಶ್‌ ಹೇಳಿರುವುದಾಗಿ ತುಮಕೂರಿನ ಪ್ರಾದೇಶಿಕ ಪತ್ರಿಕೆ ಪ್ರಜಾಪ್ರಗತಿ ವರದಿ ಮಾಡಿದೆ.

ಶನಿವಾರದಂದು ಪೆದ್ದನಹಳ್ಳಿಗೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ (ವಾಸು), ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಂತ್ವಾನ ಹೇಳಿದ್ದರು.

ಆ ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, “ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಪೆದ್ದನಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟಿಲ್ಲ’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಸಿರಾದಲ್ಲಿ ಪ್ರತಿಕ್ರಿಯೆ ನೀಡಿರುವ ನಾಗೇಶ್‌ ಉಡಾಫೆಯಾಗಿ ಮಾತನಾಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

“ನಾನು ಪ್ರವಾಸದಲ್ಲಿದ್ದೆ. ಅದು ಜಿಲ್ಲಾ ಮಟ್ಟದ ಸುದ್ದಿಯಾಗಿದೆ. ಮಾಹಿತಿ ಪಡೆದು ಭೇಟಿ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, “ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಕೊಡಬೇಕೆಂದು ಈಗಾಗಲೇ ತಿರ್ಮಾನ ಮಾಡಲಾಗಿದೆ. ಅದಕ್ಕೊಂದು ಸಮಿತಿ ರಚನೆ ಮಾಡಲಾಗಿತ್ತು. ಅದನು ಏನೇನು ಇರಬೇಕೆಂದು ತೀರ್ಮಾನಿಸುತ್ತದೆ. ಭಗವದ್ಗೀತೆ ಜೊತೆಗೆ ಬೈಬಲ್, ಕುರಾನ್‌ ಇರಬೇಕೆಂದು ಕೆಲವರು ವಾದ ಮಾಡುತ್ತಾರೆ. ವಾದ ಮಾಡುವ ಗುಂಪು 60 ವರ್ಷದಲ್ಲಿ ನೈತಿಕ ಶಿಕ್ಷಣ ನೀಡುವ ಕೆಲಸ ಮಾಡಿದ್ದಿದ್ದರೆ ನಮಗೆ ಕೆಲಸ ಮಾಡುವಂತಹ ಅವಕಾಶನೇ ಇರ್ತಿರಲಿಲ್ಲ. ಮಾರಲ್ ಸೈನ್ಸ್‌ ಅನ್ನು ಯಾವ ಸರ್ಕಾರ ತೆಗೆದು ಹಾಕಿತ್ತು ಅನ್ನೋದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಎಲ್ಲವೂ ರಾಜಕೀಯ ಪ್ರೇರಿತ ನಿರ್ಧಾರಗಳಾಗಿರುವುದರಿಂದ ಶಿಕ್ಷಣ ಈ ಮಟ್ಟಕ್ಕೆ ಕುಸಿದಿದೆ” ಎಂದಿದ್ದಾರೆ.

ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಧರ್ಮರಾಜಕಾರಣ, ಪಠ್ಯದ ಕೇಸರೀಕರಣದ ಕುರಿತು ಸದಾ ಧ್ಯಾನಿಸುವ ನಾಗೇಶ್ ಅವರಿಗೆ ತಮ್ಮ ಪಕ್ಕದ ಕ್ಷೇತ್ರವಾದ ತುರುವೇಕೆರೆಗೆ ಸೇರಿದ ಗ್ರಾಮವೊಂದರಲ್ಲಿ ನಡೆದಿರುವ ದುಷ್ಕೃತ್ಯವೊಂದು ತಿಳಿಯದೇ ಇರುವುದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ಪ್ರಬಲ ಜಾತಿಗಳಿಗೆ ಸೇರಿದ್ದು, ದಲಿತರ ಮೇಲೆ ಸಚಿವರಿಗೆ ನಿಜವಾದ ಕಾಳಜಿ ಇಲ್ಲ ಎಂಬುದನ್ನು ಅವರು ಮಾತುಗಳು ಸೂಚಿಸುತ್ತಿವೆ ಎಂಬ ಅಭಿಪ್ರಾಯಗಳು ಬಂದಿವೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

ದಲಿತ ಹೋರಾಟಗಾರ ಕೊಟ್ಟ ಶಂಕರ್‌ ಹಾಕಿರುವ ಪೋಸ್ಟ್‌ಗೆ ಅನೇಕರು ಕಮೆಂಟ್ ಮಾಡಿ ನಾಗೇಶ್ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.

“ಕೊಲೆ ಮಾಡಿದೋರು ಯಾರು ಅನ್ನೋದರ ಮೇಲೆ ಅವರಿಗೆ ಮಾಹಿತಿ ಹೋಗುತ್ತೆ. ಬಾಕಿ ಎಲ್ಲ ವಜಾ” ಎಂದು ಟೀನಾ ಶಶಿಕಾಂತ್‌ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯ ಮತ್ತು ದೇಶದಾದ್ಯಂತ ಪೆದ್ದನಹಳ್ಳಿ ಘಟನೆ ಬಗ್ಗೆ ಸುದ್ದಿಯಾಗಿದೆ. ಆದರೆ ಸಚಿವ ನಾಗೇಶ್ ಅವರಿಗೆ ಮಾತ್ರ ಗೊತ್ತಿಲ್ಲ ಅಂದ್ರೆ ಈ ಸಚಿವರು ನಿಷ್ಕ್ರಿಯರಾಗಿದ್ದಾರೆ. ಇವರಿಗೆ ಹಳ್ಳಿಗಳ ಮಕ್ಕಳ ವಿಷಯಗಳು ತಲುಪಲು ಸಾಧ್ಯವೆ ಇಲ್ಲ ಅಂದರೆ ಇವರು ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವೆ? ಎಲ್ಲಿದ್ದೀರಿ ಸಚಿವರೆ? ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ವ್ಯಾಪ್ತಿಯ ಪೆದ್ದನಹಳ್ಳಿಯಲ್ಲಿ ಘಟನೆ ನಡೆದಿದೆ. ನಿಮಗೆ ಮಾಹಿತಿ ಅಗತ್ಯವಿದ್ದರೆ ನಾವೇ ತಿಳಿಸುತ್ತೇವೆ” ಓಬಳೇಶ್‌ ಕೆ.ಬಿ. ತಿಳಿಸಿದ್ದಾರೆ.

“ಆರೆಸ್ಸೆಸ್ ಹಿಂದೂ ಸಂಘಟನೆಯ ಮುಖಂಡರುಗಳಿಗೆ ಚಿಕ್ಕ ಗಾಯ, ಚಿಕ್ಕ ಘಟನೆಯಾದರೂ ಓಡಿ ಓಡಿ ಅವರ ಬಳಿಗೆ ಹೋಗುತ್ತಾರೆ” ಎಂದು ರಾಮಯ್ಯ ಪಿ.ಎನ್‌.ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಾಪ ಈ ಮನುಷ್ಯ ಪ್ರಾಥಮಿಕ ಶಾಲೆಯ ಪಠ್ಯ ಪುಸ್ತಕ ಬರೀತಾ ಕೂತಿದ್ದಾನೆ. ಡಿಸ್ಟರ್ಬ್ ಮಾಡಬೇಡಿ….!!!

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...