Homeದಲಿತ್ ಫೈಲ್ಸ್ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಇಬ್ಬರು ಯುವಕರು ಕೊಲೆಯಾಗಿ 10 ದಿನ ಕಳೆದಿದೆ. ಉನ್ನತ ಮಟ್ಟದ ಅಧಿಕಾರಿಗಳು, ರಾಜಕಾರಣಿಗಳು ಪೆದ್ದನಹಳ್ಳಿಗೆ ಭೇಟಿ ನೀಡಿದ್ದಾರೆ. ಆದರೆ ಜಿಲ್ಲೆಯ ಸಚಿವರಿಗೆ ಘಟನೆ ಕುರಿತು ಮಾಹಿತಿ ಇಲ್ಲವಂತೆ!

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರು ಭೀಕರವಾಗಿ ಕೊಲೆಯಾಗಿ ಹತ್ತು ದಿನಗಳೇ ಕಳೆದವು. ಗಿರೀಶ್‌ ಎಂಬ ಹೆಸರಿನ ಇಬ್ಬರು ಯುವಕರು ಏ.21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಹತ್ಯೆಯಾದರು. ಈ ಘಟನೆಗೆ ರಾಜ್ಯದ ವಿವಿಧ ದಲಿತ ಸಂಘಟನೆಗಳು, ಹೋರಾಟಗಾರರು, ಅನೇಕ ರಾಜಕೀಯ ಮುಖಂಡರು ಪ್ರತಿಕ್ರಿಯಿಸಿ, ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ. ಆದರೆ ಇಷ್ಟೆಲ್ಲ ಬೆಳವಣಿಗೆಗಳಾದರೂ ಜಿಲ್ಲೆಯ ತಿಪಟೂರು ಕ್ಷೇತ್ರದ ಶಾಸಕ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪೆದ್ದನಹಳ್ಳಿಯ ಘಟನೆಯ ಕುರಿತು ಮಾಹಿತಿ ಇಲ್ಲವಂತೆ!

ಶಾಲಾ ಪಠ್ಯದಲ್ಲಿ ಕೋಮುರಾಜಕಾರಣ, ಹಿಜಾಬ್‌ ಹೆಸರಲ್ಲಿ ಗೊಂದಲ ಸೃಷ್ಟಿಗೆ ಥಟ್‌ ಅಂತ ಸ್ಪಂದಿಸುವ ಸಚಿವರು ದಲಿತ ಯುವಕರ ಹತ್ಯೆ ವಿಚಾರದಲ್ಲಿ ಬಹಳ ಉಢಾಪೆಯಾಗಿ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಇಬ್ಬರು ಯುವಕರ ಕೊಲೆಯಾಗುತ್ತದೆ. ಅಂದು ಗ್ರಾಮದಲ್ಲಿ ಕೊಲ್ಲಾಪುರದಮ್ಮನ ಜಾತ್ರೆಯನ್ನು ತಿಗಳ ಸಮುದಾಯದವರು ಹಮ್ಮಿಕೊಂಡಿರುತ್ತಾರೆ. ಅಂದು ಪೆದ್ದನಹಳ್ಳಿಯ ಮಾದಿಗ ಕುಟುಂಬದ ಗಿರೀಶ್ ಮನೆಗೆ ಗುಬ್ಬಿ ತಾಲ್ಲೂಕು ಹಾಗಲವಾಡಿ ಹೋಬಳಿಯ ಮಂಚಲದೊರೆ ನಿವಾಸಿ, ನಾಯಕ ಸಮುದಾಯದ ಗಿರೀಶ್ ಬಂದಿರುತ್ತಾರೆ. ಅಂದು ರಾತ್ರಿ ಲಿಂಗಾಯತ ಸಮುದಾಯದ ನಂದೀಶ್ ಎಂಬಾತ ಪೆದ್ದನಹಳ್ಳಿಯ ಗಿರೀಶ್‌ ಅವರನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾನೆ. ಮಂಚಲದೊರೆಯಿಂದ ಬಂದಿದ್ದ ಗಿರೀಶ್‌ ಕೂಡ ಗೆಳೆಯನನ್ನು ಹಿಂಬಾಲಿಸುತ್ತಾನೆ. ಆದರೆ ಬೆಳಿಗ್ಗೆ ನೋಡಿದರೆ ನೆಲ್ಲಿಗೆರೆ- ಸಿರಾ ರಸ್ತೆಯ ಪಕ್ಕದಲ್ಲಿನ ಹೊಂಡದ ಬಳಿ ಇಬ್ಬರು ಗಿರೀಶರೂ ಶವವಾಗಿ ಪತ್ತೆಯಾಗುತ್ತಾರೆ.

ಜಾತಿ ದೌರ್ಜನ್ಯ ಪ್ರಕರಣ ದಾಖಲಾಗುತ್ತದೆ. ಪೆದ್ದನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ವಿಚಾರಿಸಿದ್ದಾರೆ. ತನಿಖೆ ಕೂಡ ಬಿರುಸಿನಿಂದ ಸಾಗಿದೆ. ಇಪ್ಪತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳಾದರೂ ಸಚಿವ ನಾಗೇಶ್‌ ಅವರ ಗಮನಕ್ಕೆ ಬಂದಿಲ್ಲ ಎಂದರೆ ನಂಬುವುದು ಹೇಗೆ? ಎಂಬುದು ಸದ್ಯದ ಪ್ರಶ್ನೆ

“ಪೆದ್ದನಹಳ್ಳಿಯಲ್ಲಿ ನಡೆದಿರುವ ದಲಿತ ಯುವಕರ ಕೊಲೆ ಪ್ರಕರಣದ ಘಟನೆ ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ ಸಂಗ್ರಹಿಸಿ ಅಲ್ಲಿಗೆ ಭೇಟಿ ನೀಡುತ್ತೇನೆ” ಎಂದು ಬಿ.ಸಿ.ನಾಗೇಶ್‌ ಹೇಳಿರುವುದಾಗಿ ತುಮಕೂರಿನ ಪ್ರಾದೇಶಿಕ ಪತ್ರಿಕೆ ಪ್ರಜಾಪ್ರಗತಿ ವರದಿ ಮಾಡಿದೆ.

ಶನಿವಾರದಂದು ಪೆದ್ದನಹಳ್ಳಿಗೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ (ವಾಸು), ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಂತ್ವಾನ ಹೇಳಿದ್ದರು.

ಆ ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, “ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಪೆದ್ದನಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟಿಲ್ಲ’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಸಿರಾದಲ್ಲಿ ಪ್ರತಿಕ್ರಿಯೆ ನೀಡಿರುವ ನಾಗೇಶ್‌ ಉಡಾಫೆಯಾಗಿ ಮಾತನಾಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

“ನಾನು ಪ್ರವಾಸದಲ್ಲಿದ್ದೆ. ಅದು ಜಿಲ್ಲಾ ಮಟ್ಟದ ಸುದ್ದಿಯಾಗಿದೆ. ಮಾಹಿತಿ ಪಡೆದು ಭೇಟಿ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, “ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಕೊಡಬೇಕೆಂದು ಈಗಾಗಲೇ ತಿರ್ಮಾನ ಮಾಡಲಾಗಿದೆ. ಅದಕ್ಕೊಂದು ಸಮಿತಿ ರಚನೆ ಮಾಡಲಾಗಿತ್ತು. ಅದನು ಏನೇನು ಇರಬೇಕೆಂದು ತೀರ್ಮಾನಿಸುತ್ತದೆ. ಭಗವದ್ಗೀತೆ ಜೊತೆಗೆ ಬೈಬಲ್, ಕುರಾನ್‌ ಇರಬೇಕೆಂದು ಕೆಲವರು ವಾದ ಮಾಡುತ್ತಾರೆ. ವಾದ ಮಾಡುವ ಗುಂಪು 60 ವರ್ಷದಲ್ಲಿ ನೈತಿಕ ಶಿಕ್ಷಣ ನೀಡುವ ಕೆಲಸ ಮಾಡಿದ್ದಿದ್ದರೆ ನಮಗೆ ಕೆಲಸ ಮಾಡುವಂತಹ ಅವಕಾಶನೇ ಇರ್ತಿರಲಿಲ್ಲ. ಮಾರಲ್ ಸೈನ್ಸ್‌ ಅನ್ನು ಯಾವ ಸರ್ಕಾರ ತೆಗೆದು ಹಾಕಿತ್ತು ಅನ್ನೋದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಎಲ್ಲವೂ ರಾಜಕೀಯ ಪ್ರೇರಿತ ನಿರ್ಧಾರಗಳಾಗಿರುವುದರಿಂದ ಶಿಕ್ಷಣ ಈ ಮಟ್ಟಕ್ಕೆ ಕುಸಿದಿದೆ” ಎಂದಿದ್ದಾರೆ.

ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಧರ್ಮರಾಜಕಾರಣ, ಪಠ್ಯದ ಕೇಸರೀಕರಣದ ಕುರಿತು ಸದಾ ಧ್ಯಾನಿಸುವ ನಾಗೇಶ್ ಅವರಿಗೆ ತಮ್ಮ ಪಕ್ಕದ ಕ್ಷೇತ್ರವಾದ ತುರುವೇಕೆರೆಗೆ ಸೇರಿದ ಗ್ರಾಮವೊಂದರಲ್ಲಿ ನಡೆದಿರುವ ದುಷ್ಕೃತ್ಯವೊಂದು ತಿಳಿಯದೇ ಇರುವುದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ಪ್ರಬಲ ಜಾತಿಗಳಿಗೆ ಸೇರಿದ್ದು, ದಲಿತರ ಮೇಲೆ ಸಚಿವರಿಗೆ ನಿಜವಾದ ಕಾಳಜಿ ಇಲ್ಲ ಎಂಬುದನ್ನು ಅವರು ಮಾತುಗಳು ಸೂಚಿಸುತ್ತಿವೆ ಎಂಬ ಅಭಿಪ್ರಾಯಗಳು ಬಂದಿವೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

ದಲಿತ ಹೋರಾಟಗಾರ ಕೊಟ್ಟ ಶಂಕರ್‌ ಹಾಕಿರುವ ಪೋಸ್ಟ್‌ಗೆ ಅನೇಕರು ಕಮೆಂಟ್ ಮಾಡಿ ನಾಗೇಶ್ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.

“ಕೊಲೆ ಮಾಡಿದೋರು ಯಾರು ಅನ್ನೋದರ ಮೇಲೆ ಅವರಿಗೆ ಮಾಹಿತಿ ಹೋಗುತ್ತೆ. ಬಾಕಿ ಎಲ್ಲ ವಜಾ” ಎಂದು ಟೀನಾ ಶಶಿಕಾಂತ್‌ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯ ಮತ್ತು ದೇಶದಾದ್ಯಂತ ಪೆದ್ದನಹಳ್ಳಿ ಘಟನೆ ಬಗ್ಗೆ ಸುದ್ದಿಯಾಗಿದೆ. ಆದರೆ ಸಚಿವ ನಾಗೇಶ್ ಅವರಿಗೆ ಮಾತ್ರ ಗೊತ್ತಿಲ್ಲ ಅಂದ್ರೆ ಈ ಸಚಿವರು ನಿಷ್ಕ್ರಿಯರಾಗಿದ್ದಾರೆ. ಇವರಿಗೆ ಹಳ್ಳಿಗಳ ಮಕ್ಕಳ ವಿಷಯಗಳು ತಲುಪಲು ಸಾಧ್ಯವೆ ಇಲ್ಲ ಅಂದರೆ ಇವರು ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವೆ? ಎಲ್ಲಿದ್ದೀರಿ ಸಚಿವರೆ? ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ವ್ಯಾಪ್ತಿಯ ಪೆದ್ದನಹಳ್ಳಿಯಲ್ಲಿ ಘಟನೆ ನಡೆದಿದೆ. ನಿಮಗೆ ಮಾಹಿತಿ ಅಗತ್ಯವಿದ್ದರೆ ನಾವೇ ತಿಳಿಸುತ್ತೇವೆ” ಓಬಳೇಶ್‌ ಕೆ.ಬಿ. ತಿಳಿಸಿದ್ದಾರೆ.

“ಆರೆಸ್ಸೆಸ್ ಹಿಂದೂ ಸಂಘಟನೆಯ ಮುಖಂಡರುಗಳಿಗೆ ಚಿಕ್ಕ ಗಾಯ, ಚಿಕ್ಕ ಘಟನೆಯಾದರೂ ಓಡಿ ಓಡಿ ಅವರ ಬಳಿಗೆ ಹೋಗುತ್ತಾರೆ” ಎಂದು ರಾಮಯ್ಯ ಪಿ.ಎನ್‌.ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಾಪ ಈ ಮನುಷ್ಯ ಪ್ರಾಥಮಿಕ ಶಾಲೆಯ ಪಠ್ಯ ಪುಸ್ತಕ ಬರೀತಾ ಕೂತಿದ್ದಾನೆ. ಡಿಸ್ಟರ್ಬ್ ಮಾಡಬೇಡಿ….!!!

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...