Homeದಲಿತ್ ಫೈಲ್ಸ್ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಇಬ್ಬರು ಯುವಕರು ಕೊಲೆಯಾಗಿ 10 ದಿನ ಕಳೆದಿದೆ. ಉನ್ನತ ಮಟ್ಟದ ಅಧಿಕಾರಿಗಳು, ರಾಜಕಾರಣಿಗಳು ಪೆದ್ದನಹಳ್ಳಿಗೆ ಭೇಟಿ ನೀಡಿದ್ದಾರೆ. ಆದರೆ ಜಿಲ್ಲೆಯ ಸಚಿವರಿಗೆ ಘಟನೆ ಕುರಿತು ಮಾಹಿತಿ ಇಲ್ಲವಂತೆ!

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರು ಭೀಕರವಾಗಿ ಕೊಲೆಯಾಗಿ ಹತ್ತು ದಿನಗಳೇ ಕಳೆದವು. ಗಿರೀಶ್‌ ಎಂಬ ಹೆಸರಿನ ಇಬ್ಬರು ಯುವಕರು ಏ.21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಹತ್ಯೆಯಾದರು. ಈ ಘಟನೆಗೆ ರಾಜ್ಯದ ವಿವಿಧ ದಲಿತ ಸಂಘಟನೆಗಳು, ಹೋರಾಟಗಾರರು, ಅನೇಕ ರಾಜಕೀಯ ಮುಖಂಡರು ಪ್ರತಿಕ್ರಿಯಿಸಿ, ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ. ಆದರೆ ಇಷ್ಟೆಲ್ಲ ಬೆಳವಣಿಗೆಗಳಾದರೂ ಜಿಲ್ಲೆಯ ತಿಪಟೂರು ಕ್ಷೇತ್ರದ ಶಾಸಕ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪೆದ್ದನಹಳ್ಳಿಯ ಘಟನೆಯ ಕುರಿತು ಮಾಹಿತಿ ಇಲ್ಲವಂತೆ!

ಶಾಲಾ ಪಠ್ಯದಲ್ಲಿ ಕೋಮುರಾಜಕಾರಣ, ಹಿಜಾಬ್‌ ಹೆಸರಲ್ಲಿ ಗೊಂದಲ ಸೃಷ್ಟಿಗೆ ಥಟ್‌ ಅಂತ ಸ್ಪಂದಿಸುವ ಸಚಿವರು ದಲಿತ ಯುವಕರ ಹತ್ಯೆ ವಿಚಾರದಲ್ಲಿ ಬಹಳ ಉಢಾಪೆಯಾಗಿ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಇಬ್ಬರು ಯುವಕರ ಕೊಲೆಯಾಗುತ್ತದೆ. ಅಂದು ಗ್ರಾಮದಲ್ಲಿ ಕೊಲ್ಲಾಪುರದಮ್ಮನ ಜಾತ್ರೆಯನ್ನು ತಿಗಳ ಸಮುದಾಯದವರು ಹಮ್ಮಿಕೊಂಡಿರುತ್ತಾರೆ. ಅಂದು ಪೆದ್ದನಹಳ್ಳಿಯ ಮಾದಿಗ ಕುಟುಂಬದ ಗಿರೀಶ್ ಮನೆಗೆ ಗುಬ್ಬಿ ತಾಲ್ಲೂಕು ಹಾಗಲವಾಡಿ ಹೋಬಳಿಯ ಮಂಚಲದೊರೆ ನಿವಾಸಿ, ನಾಯಕ ಸಮುದಾಯದ ಗಿರೀಶ್ ಬಂದಿರುತ್ತಾರೆ. ಅಂದು ರಾತ್ರಿ ಲಿಂಗಾಯತ ಸಮುದಾಯದ ನಂದೀಶ್ ಎಂಬಾತ ಪೆದ್ದನಹಳ್ಳಿಯ ಗಿರೀಶ್‌ ಅವರನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾನೆ. ಮಂಚಲದೊರೆಯಿಂದ ಬಂದಿದ್ದ ಗಿರೀಶ್‌ ಕೂಡ ಗೆಳೆಯನನ್ನು ಹಿಂಬಾಲಿಸುತ್ತಾನೆ. ಆದರೆ ಬೆಳಿಗ್ಗೆ ನೋಡಿದರೆ ನೆಲ್ಲಿಗೆರೆ- ಸಿರಾ ರಸ್ತೆಯ ಪಕ್ಕದಲ್ಲಿನ ಹೊಂಡದ ಬಳಿ ಇಬ್ಬರು ಗಿರೀಶರೂ ಶವವಾಗಿ ಪತ್ತೆಯಾಗುತ್ತಾರೆ.

ಜಾತಿ ದೌರ್ಜನ್ಯ ಪ್ರಕರಣ ದಾಖಲಾಗುತ್ತದೆ. ಪೆದ್ದನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ವಿಚಾರಿಸಿದ್ದಾರೆ. ತನಿಖೆ ಕೂಡ ಬಿರುಸಿನಿಂದ ಸಾಗಿದೆ. ಇಪ್ಪತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳಾದರೂ ಸಚಿವ ನಾಗೇಶ್‌ ಅವರ ಗಮನಕ್ಕೆ ಬಂದಿಲ್ಲ ಎಂದರೆ ನಂಬುವುದು ಹೇಗೆ? ಎಂಬುದು ಸದ್ಯದ ಪ್ರಶ್ನೆ

“ಪೆದ್ದನಹಳ್ಳಿಯಲ್ಲಿ ನಡೆದಿರುವ ದಲಿತ ಯುವಕರ ಕೊಲೆ ಪ್ರಕರಣದ ಘಟನೆ ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ ಸಂಗ್ರಹಿಸಿ ಅಲ್ಲಿಗೆ ಭೇಟಿ ನೀಡುತ್ತೇನೆ” ಎಂದು ಬಿ.ಸಿ.ನಾಗೇಶ್‌ ಹೇಳಿರುವುದಾಗಿ ತುಮಕೂರಿನ ಪ್ರಾದೇಶಿಕ ಪತ್ರಿಕೆ ಪ್ರಜಾಪ್ರಗತಿ ವರದಿ ಮಾಡಿದೆ.

ಶನಿವಾರದಂದು ಪೆದ್ದನಹಳ್ಳಿಗೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ (ವಾಸು), ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಂತ್ವಾನ ಹೇಳಿದ್ದರು.

ಆ ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, “ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಪೆದ್ದನಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟಿಲ್ಲ’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಸಿರಾದಲ್ಲಿ ಪ್ರತಿಕ್ರಿಯೆ ನೀಡಿರುವ ನಾಗೇಶ್‌ ಉಡಾಫೆಯಾಗಿ ಮಾತನಾಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

“ನಾನು ಪ್ರವಾಸದಲ್ಲಿದ್ದೆ. ಅದು ಜಿಲ್ಲಾ ಮಟ್ಟದ ಸುದ್ದಿಯಾಗಿದೆ. ಮಾಹಿತಿ ಪಡೆದು ಭೇಟಿ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, “ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಕೊಡಬೇಕೆಂದು ಈಗಾಗಲೇ ತಿರ್ಮಾನ ಮಾಡಲಾಗಿದೆ. ಅದಕ್ಕೊಂದು ಸಮಿತಿ ರಚನೆ ಮಾಡಲಾಗಿತ್ತು. ಅದನು ಏನೇನು ಇರಬೇಕೆಂದು ತೀರ್ಮಾನಿಸುತ್ತದೆ. ಭಗವದ್ಗೀತೆ ಜೊತೆಗೆ ಬೈಬಲ್, ಕುರಾನ್‌ ಇರಬೇಕೆಂದು ಕೆಲವರು ವಾದ ಮಾಡುತ್ತಾರೆ. ವಾದ ಮಾಡುವ ಗುಂಪು 60 ವರ್ಷದಲ್ಲಿ ನೈತಿಕ ಶಿಕ್ಷಣ ನೀಡುವ ಕೆಲಸ ಮಾಡಿದ್ದಿದ್ದರೆ ನಮಗೆ ಕೆಲಸ ಮಾಡುವಂತಹ ಅವಕಾಶನೇ ಇರ್ತಿರಲಿಲ್ಲ. ಮಾರಲ್ ಸೈನ್ಸ್‌ ಅನ್ನು ಯಾವ ಸರ್ಕಾರ ತೆಗೆದು ಹಾಕಿತ್ತು ಅನ್ನೋದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಎಲ್ಲವೂ ರಾಜಕೀಯ ಪ್ರೇರಿತ ನಿರ್ಧಾರಗಳಾಗಿರುವುದರಿಂದ ಶಿಕ್ಷಣ ಈ ಮಟ್ಟಕ್ಕೆ ಕುಸಿದಿದೆ” ಎಂದಿದ್ದಾರೆ.

ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಧರ್ಮರಾಜಕಾರಣ, ಪಠ್ಯದ ಕೇಸರೀಕರಣದ ಕುರಿತು ಸದಾ ಧ್ಯಾನಿಸುವ ನಾಗೇಶ್ ಅವರಿಗೆ ತಮ್ಮ ಪಕ್ಕದ ಕ್ಷೇತ್ರವಾದ ತುರುವೇಕೆರೆಗೆ ಸೇರಿದ ಗ್ರಾಮವೊಂದರಲ್ಲಿ ನಡೆದಿರುವ ದುಷ್ಕೃತ್ಯವೊಂದು ತಿಳಿಯದೇ ಇರುವುದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ಪ್ರಬಲ ಜಾತಿಗಳಿಗೆ ಸೇರಿದ್ದು, ದಲಿತರ ಮೇಲೆ ಸಚಿವರಿಗೆ ನಿಜವಾದ ಕಾಳಜಿ ಇಲ್ಲ ಎಂಬುದನ್ನು ಅವರು ಮಾತುಗಳು ಸೂಚಿಸುತ್ತಿವೆ ಎಂಬ ಅಭಿಪ್ರಾಯಗಳು ಬಂದಿವೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

ದಲಿತ ಹೋರಾಟಗಾರ ಕೊಟ್ಟ ಶಂಕರ್‌ ಹಾಕಿರುವ ಪೋಸ್ಟ್‌ಗೆ ಅನೇಕರು ಕಮೆಂಟ್ ಮಾಡಿ ನಾಗೇಶ್ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.

“ಕೊಲೆ ಮಾಡಿದೋರು ಯಾರು ಅನ್ನೋದರ ಮೇಲೆ ಅವರಿಗೆ ಮಾಹಿತಿ ಹೋಗುತ್ತೆ. ಬಾಕಿ ಎಲ್ಲ ವಜಾ” ಎಂದು ಟೀನಾ ಶಶಿಕಾಂತ್‌ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯ ಮತ್ತು ದೇಶದಾದ್ಯಂತ ಪೆದ್ದನಹಳ್ಳಿ ಘಟನೆ ಬಗ್ಗೆ ಸುದ್ದಿಯಾಗಿದೆ. ಆದರೆ ಸಚಿವ ನಾಗೇಶ್ ಅವರಿಗೆ ಮಾತ್ರ ಗೊತ್ತಿಲ್ಲ ಅಂದ್ರೆ ಈ ಸಚಿವರು ನಿಷ್ಕ್ರಿಯರಾಗಿದ್ದಾರೆ. ಇವರಿಗೆ ಹಳ್ಳಿಗಳ ಮಕ್ಕಳ ವಿಷಯಗಳು ತಲುಪಲು ಸಾಧ್ಯವೆ ಇಲ್ಲ ಅಂದರೆ ಇವರು ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವೆ? ಎಲ್ಲಿದ್ದೀರಿ ಸಚಿವರೆ? ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ವ್ಯಾಪ್ತಿಯ ಪೆದ್ದನಹಳ್ಳಿಯಲ್ಲಿ ಘಟನೆ ನಡೆದಿದೆ. ನಿಮಗೆ ಮಾಹಿತಿ ಅಗತ್ಯವಿದ್ದರೆ ನಾವೇ ತಿಳಿಸುತ್ತೇವೆ” ಓಬಳೇಶ್‌ ಕೆ.ಬಿ. ತಿಳಿಸಿದ್ದಾರೆ.

“ಆರೆಸ್ಸೆಸ್ ಹಿಂದೂ ಸಂಘಟನೆಯ ಮುಖಂಡರುಗಳಿಗೆ ಚಿಕ್ಕ ಗಾಯ, ಚಿಕ್ಕ ಘಟನೆಯಾದರೂ ಓಡಿ ಓಡಿ ಅವರ ಬಳಿಗೆ ಹೋಗುತ್ತಾರೆ” ಎಂದು ರಾಮಯ್ಯ ಪಿ.ಎನ್‌.ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಾಪ ಈ ಮನುಷ್ಯ ಪ್ರಾಥಮಿಕ ಶಾಲೆಯ ಪಠ್ಯ ಪುಸ್ತಕ ಬರೀತಾ ಕೂತಿದ್ದಾನೆ. ಡಿಸ್ಟರ್ಬ್ ಮಾಡಬೇಡಿ….!!!

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...