Homeದಲಿತ್ ಫೈಲ್ಸ್ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಇಬ್ಬರು ಯುವಕರು ಕೊಲೆಯಾಗಿ 10 ದಿನ ಕಳೆದಿದೆ. ಉನ್ನತ ಮಟ್ಟದ ಅಧಿಕಾರಿಗಳು, ರಾಜಕಾರಣಿಗಳು ಪೆದ್ದನಹಳ್ಳಿಗೆ ಭೇಟಿ ನೀಡಿದ್ದಾರೆ. ಆದರೆ ಜಿಲ್ಲೆಯ ಸಚಿವರಿಗೆ ಘಟನೆ ಕುರಿತು ಮಾಹಿತಿ ಇಲ್ಲವಂತೆ!

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರು ಭೀಕರವಾಗಿ ಕೊಲೆಯಾಗಿ ಹತ್ತು ದಿನಗಳೇ ಕಳೆದವು. ಗಿರೀಶ್‌ ಎಂಬ ಹೆಸರಿನ ಇಬ್ಬರು ಯುವಕರು ಏ.21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಹತ್ಯೆಯಾದರು. ಈ ಘಟನೆಗೆ ರಾಜ್ಯದ ವಿವಿಧ ದಲಿತ ಸಂಘಟನೆಗಳು, ಹೋರಾಟಗಾರರು, ಅನೇಕ ರಾಜಕೀಯ ಮುಖಂಡರು ಪ್ರತಿಕ್ರಿಯಿಸಿ, ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ. ಆದರೆ ಇಷ್ಟೆಲ್ಲ ಬೆಳವಣಿಗೆಗಳಾದರೂ ಜಿಲ್ಲೆಯ ತಿಪಟೂರು ಕ್ಷೇತ್ರದ ಶಾಸಕ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪೆದ್ದನಹಳ್ಳಿಯ ಘಟನೆಯ ಕುರಿತು ಮಾಹಿತಿ ಇಲ್ಲವಂತೆ!

ಶಾಲಾ ಪಠ್ಯದಲ್ಲಿ ಕೋಮುರಾಜಕಾರಣ, ಹಿಜಾಬ್‌ ಹೆಸರಲ್ಲಿ ಗೊಂದಲ ಸೃಷ್ಟಿಗೆ ಥಟ್‌ ಅಂತ ಸ್ಪಂದಿಸುವ ಸಚಿವರು ದಲಿತ ಯುವಕರ ಹತ್ಯೆ ವಿಚಾರದಲ್ಲಿ ಬಹಳ ಉಢಾಪೆಯಾಗಿ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಇಬ್ಬರು ಯುವಕರ ಕೊಲೆಯಾಗುತ್ತದೆ. ಅಂದು ಗ್ರಾಮದಲ್ಲಿ ಕೊಲ್ಲಾಪುರದಮ್ಮನ ಜಾತ್ರೆಯನ್ನು ತಿಗಳ ಸಮುದಾಯದವರು ಹಮ್ಮಿಕೊಂಡಿರುತ್ತಾರೆ. ಅಂದು ಪೆದ್ದನಹಳ್ಳಿಯ ಮಾದಿಗ ಕುಟುಂಬದ ಗಿರೀಶ್ ಮನೆಗೆ ಗುಬ್ಬಿ ತಾಲ್ಲೂಕು ಹಾಗಲವಾಡಿ ಹೋಬಳಿಯ ಮಂಚಲದೊರೆ ನಿವಾಸಿ, ನಾಯಕ ಸಮುದಾಯದ ಗಿರೀಶ್ ಬಂದಿರುತ್ತಾರೆ. ಅಂದು ರಾತ್ರಿ ಲಿಂಗಾಯತ ಸಮುದಾಯದ ನಂದೀಶ್ ಎಂಬಾತ ಪೆದ್ದನಹಳ್ಳಿಯ ಗಿರೀಶ್‌ ಅವರನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾನೆ. ಮಂಚಲದೊರೆಯಿಂದ ಬಂದಿದ್ದ ಗಿರೀಶ್‌ ಕೂಡ ಗೆಳೆಯನನ್ನು ಹಿಂಬಾಲಿಸುತ್ತಾನೆ. ಆದರೆ ಬೆಳಿಗ್ಗೆ ನೋಡಿದರೆ ನೆಲ್ಲಿಗೆರೆ- ಸಿರಾ ರಸ್ತೆಯ ಪಕ್ಕದಲ್ಲಿನ ಹೊಂಡದ ಬಳಿ ಇಬ್ಬರು ಗಿರೀಶರೂ ಶವವಾಗಿ ಪತ್ತೆಯಾಗುತ್ತಾರೆ.

ಜಾತಿ ದೌರ್ಜನ್ಯ ಪ್ರಕರಣ ದಾಖಲಾಗುತ್ತದೆ. ಪೆದ್ದನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ವಿಚಾರಿಸಿದ್ದಾರೆ. ತನಿಖೆ ಕೂಡ ಬಿರುಸಿನಿಂದ ಸಾಗಿದೆ. ಇಪ್ಪತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳಾದರೂ ಸಚಿವ ನಾಗೇಶ್‌ ಅವರ ಗಮನಕ್ಕೆ ಬಂದಿಲ್ಲ ಎಂದರೆ ನಂಬುವುದು ಹೇಗೆ? ಎಂಬುದು ಸದ್ಯದ ಪ್ರಶ್ನೆ

“ಪೆದ್ದನಹಳ್ಳಿಯಲ್ಲಿ ನಡೆದಿರುವ ದಲಿತ ಯುವಕರ ಕೊಲೆ ಪ್ರಕರಣದ ಘಟನೆ ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ ಸಂಗ್ರಹಿಸಿ ಅಲ್ಲಿಗೆ ಭೇಟಿ ನೀಡುತ್ತೇನೆ” ಎಂದು ಬಿ.ಸಿ.ನಾಗೇಶ್‌ ಹೇಳಿರುವುದಾಗಿ ತುಮಕೂರಿನ ಪ್ರಾದೇಶಿಕ ಪತ್ರಿಕೆ ಪ್ರಜಾಪ್ರಗತಿ ವರದಿ ಮಾಡಿದೆ.

ಶನಿವಾರದಂದು ಪೆದ್ದನಹಳ್ಳಿಗೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ (ವಾಸು), ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಂತ್ವಾನ ಹೇಳಿದ್ದರು.

ಆ ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, “ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಪೆದ್ದನಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟಿಲ್ಲ’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಸಿರಾದಲ್ಲಿ ಪ್ರತಿಕ್ರಿಯೆ ನೀಡಿರುವ ನಾಗೇಶ್‌ ಉಡಾಫೆಯಾಗಿ ಮಾತನಾಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

“ನಾನು ಪ್ರವಾಸದಲ್ಲಿದ್ದೆ. ಅದು ಜಿಲ್ಲಾ ಮಟ್ಟದ ಸುದ್ದಿಯಾಗಿದೆ. ಮಾಹಿತಿ ಪಡೆದು ಭೇಟಿ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, “ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಕೊಡಬೇಕೆಂದು ಈಗಾಗಲೇ ತಿರ್ಮಾನ ಮಾಡಲಾಗಿದೆ. ಅದಕ್ಕೊಂದು ಸಮಿತಿ ರಚನೆ ಮಾಡಲಾಗಿತ್ತು. ಅದನು ಏನೇನು ಇರಬೇಕೆಂದು ತೀರ್ಮಾನಿಸುತ್ತದೆ. ಭಗವದ್ಗೀತೆ ಜೊತೆಗೆ ಬೈಬಲ್, ಕುರಾನ್‌ ಇರಬೇಕೆಂದು ಕೆಲವರು ವಾದ ಮಾಡುತ್ತಾರೆ. ವಾದ ಮಾಡುವ ಗುಂಪು 60 ವರ್ಷದಲ್ಲಿ ನೈತಿಕ ಶಿಕ್ಷಣ ನೀಡುವ ಕೆಲಸ ಮಾಡಿದ್ದಿದ್ದರೆ ನಮಗೆ ಕೆಲಸ ಮಾಡುವಂತಹ ಅವಕಾಶನೇ ಇರ್ತಿರಲಿಲ್ಲ. ಮಾರಲ್ ಸೈನ್ಸ್‌ ಅನ್ನು ಯಾವ ಸರ್ಕಾರ ತೆಗೆದು ಹಾಕಿತ್ತು ಅನ್ನೋದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಎಲ್ಲವೂ ರಾಜಕೀಯ ಪ್ರೇರಿತ ನಿರ್ಧಾರಗಳಾಗಿರುವುದರಿಂದ ಶಿಕ್ಷಣ ಈ ಮಟ್ಟಕ್ಕೆ ಕುಸಿದಿದೆ” ಎಂದಿದ್ದಾರೆ.

ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಧರ್ಮರಾಜಕಾರಣ, ಪಠ್ಯದ ಕೇಸರೀಕರಣದ ಕುರಿತು ಸದಾ ಧ್ಯಾನಿಸುವ ನಾಗೇಶ್ ಅವರಿಗೆ ತಮ್ಮ ಪಕ್ಕದ ಕ್ಷೇತ್ರವಾದ ತುರುವೇಕೆರೆಗೆ ಸೇರಿದ ಗ್ರಾಮವೊಂದರಲ್ಲಿ ನಡೆದಿರುವ ದುಷ್ಕೃತ್ಯವೊಂದು ತಿಳಿಯದೇ ಇರುವುದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ಪ್ರಬಲ ಜಾತಿಗಳಿಗೆ ಸೇರಿದ್ದು, ದಲಿತರ ಮೇಲೆ ಸಚಿವರಿಗೆ ನಿಜವಾದ ಕಾಳಜಿ ಇಲ್ಲ ಎಂಬುದನ್ನು ಅವರು ಮಾತುಗಳು ಸೂಚಿಸುತ್ತಿವೆ ಎಂಬ ಅಭಿಪ್ರಾಯಗಳು ಬಂದಿವೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

ದಲಿತ ಹೋರಾಟಗಾರ ಕೊಟ್ಟ ಶಂಕರ್‌ ಹಾಕಿರುವ ಪೋಸ್ಟ್‌ಗೆ ಅನೇಕರು ಕಮೆಂಟ್ ಮಾಡಿ ನಾಗೇಶ್ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.

“ಕೊಲೆ ಮಾಡಿದೋರು ಯಾರು ಅನ್ನೋದರ ಮೇಲೆ ಅವರಿಗೆ ಮಾಹಿತಿ ಹೋಗುತ್ತೆ. ಬಾಕಿ ಎಲ್ಲ ವಜಾ” ಎಂದು ಟೀನಾ ಶಶಿಕಾಂತ್‌ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯ ಮತ್ತು ದೇಶದಾದ್ಯಂತ ಪೆದ್ದನಹಳ್ಳಿ ಘಟನೆ ಬಗ್ಗೆ ಸುದ್ದಿಯಾಗಿದೆ. ಆದರೆ ಸಚಿವ ನಾಗೇಶ್ ಅವರಿಗೆ ಮಾತ್ರ ಗೊತ್ತಿಲ್ಲ ಅಂದ್ರೆ ಈ ಸಚಿವರು ನಿಷ್ಕ್ರಿಯರಾಗಿದ್ದಾರೆ. ಇವರಿಗೆ ಹಳ್ಳಿಗಳ ಮಕ್ಕಳ ವಿಷಯಗಳು ತಲುಪಲು ಸಾಧ್ಯವೆ ಇಲ್ಲ ಅಂದರೆ ಇವರು ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವೆ? ಎಲ್ಲಿದ್ದೀರಿ ಸಚಿವರೆ? ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ವ್ಯಾಪ್ತಿಯ ಪೆದ್ದನಹಳ್ಳಿಯಲ್ಲಿ ಘಟನೆ ನಡೆದಿದೆ. ನಿಮಗೆ ಮಾಹಿತಿ ಅಗತ್ಯವಿದ್ದರೆ ನಾವೇ ತಿಳಿಸುತ್ತೇವೆ” ಓಬಳೇಶ್‌ ಕೆ.ಬಿ. ತಿಳಿಸಿದ್ದಾರೆ.

“ಆರೆಸ್ಸೆಸ್ ಹಿಂದೂ ಸಂಘಟನೆಯ ಮುಖಂಡರುಗಳಿಗೆ ಚಿಕ್ಕ ಗಾಯ, ಚಿಕ್ಕ ಘಟನೆಯಾದರೂ ಓಡಿ ಓಡಿ ಅವರ ಬಳಿಗೆ ಹೋಗುತ್ತಾರೆ” ಎಂದು ರಾಮಯ್ಯ ಪಿ.ಎನ್‌.ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಾಪ ಈ ಮನುಷ್ಯ ಪ್ರಾಥಮಿಕ ಶಾಲೆಯ ಪಠ್ಯ ಪುಸ್ತಕ ಬರೀತಾ ಕೂತಿದ್ದಾನೆ. ಡಿಸ್ಟರ್ಬ್ ಮಾಡಬೇಡಿ….!!!

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....