Homeದಲಿತ್ ಫೈಲ್ಸ್ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಇಬ್ಬರು ಯುವಕರು ಕೊಲೆಯಾಗಿ 10 ದಿನ ಕಳೆದಿದೆ. ಉನ್ನತ ಮಟ್ಟದ ಅಧಿಕಾರಿಗಳು, ರಾಜಕಾರಣಿಗಳು ಪೆದ್ದನಹಳ್ಳಿಗೆ ಭೇಟಿ ನೀಡಿದ್ದಾರೆ. ಆದರೆ ಜಿಲ್ಲೆಯ ಸಚಿವರಿಗೆ ಘಟನೆ ಕುರಿತು ಮಾಹಿತಿ ಇಲ್ಲವಂತೆ!

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರು ಭೀಕರವಾಗಿ ಕೊಲೆಯಾಗಿ ಹತ್ತು ದಿನಗಳೇ ಕಳೆದವು. ಗಿರೀಶ್‌ ಎಂಬ ಹೆಸರಿನ ಇಬ್ಬರು ಯುವಕರು ಏ.21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಹತ್ಯೆಯಾದರು. ಈ ಘಟನೆಗೆ ರಾಜ್ಯದ ವಿವಿಧ ದಲಿತ ಸಂಘಟನೆಗಳು, ಹೋರಾಟಗಾರರು, ಅನೇಕ ರಾಜಕೀಯ ಮುಖಂಡರು ಪ್ರತಿಕ್ರಿಯಿಸಿ, ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ. ಆದರೆ ಇಷ್ಟೆಲ್ಲ ಬೆಳವಣಿಗೆಗಳಾದರೂ ಜಿಲ್ಲೆಯ ತಿಪಟೂರು ಕ್ಷೇತ್ರದ ಶಾಸಕ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪೆದ್ದನಹಳ್ಳಿಯ ಘಟನೆಯ ಕುರಿತು ಮಾಹಿತಿ ಇಲ್ಲವಂತೆ!

ಶಾಲಾ ಪಠ್ಯದಲ್ಲಿ ಕೋಮುರಾಜಕಾರಣ, ಹಿಜಾಬ್‌ ಹೆಸರಲ್ಲಿ ಗೊಂದಲ ಸೃಷ್ಟಿಗೆ ಥಟ್‌ ಅಂತ ಸ್ಪಂದಿಸುವ ಸಚಿವರು ದಲಿತ ಯುವಕರ ಹತ್ಯೆ ವಿಚಾರದಲ್ಲಿ ಬಹಳ ಉಢಾಪೆಯಾಗಿ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಇಬ್ಬರು ಯುವಕರ ಕೊಲೆಯಾಗುತ್ತದೆ. ಅಂದು ಗ್ರಾಮದಲ್ಲಿ ಕೊಲ್ಲಾಪುರದಮ್ಮನ ಜಾತ್ರೆಯನ್ನು ತಿಗಳ ಸಮುದಾಯದವರು ಹಮ್ಮಿಕೊಂಡಿರುತ್ತಾರೆ. ಅಂದು ಪೆದ್ದನಹಳ್ಳಿಯ ಮಾದಿಗ ಕುಟುಂಬದ ಗಿರೀಶ್ ಮನೆಗೆ ಗುಬ್ಬಿ ತಾಲ್ಲೂಕು ಹಾಗಲವಾಡಿ ಹೋಬಳಿಯ ಮಂಚಲದೊರೆ ನಿವಾಸಿ, ನಾಯಕ ಸಮುದಾಯದ ಗಿರೀಶ್ ಬಂದಿರುತ್ತಾರೆ. ಅಂದು ರಾತ್ರಿ ಲಿಂಗಾಯತ ಸಮುದಾಯದ ನಂದೀಶ್ ಎಂಬಾತ ಪೆದ್ದನಹಳ್ಳಿಯ ಗಿರೀಶ್‌ ಅವರನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾನೆ. ಮಂಚಲದೊರೆಯಿಂದ ಬಂದಿದ್ದ ಗಿರೀಶ್‌ ಕೂಡ ಗೆಳೆಯನನ್ನು ಹಿಂಬಾಲಿಸುತ್ತಾನೆ. ಆದರೆ ಬೆಳಿಗ್ಗೆ ನೋಡಿದರೆ ನೆಲ್ಲಿಗೆರೆ- ಸಿರಾ ರಸ್ತೆಯ ಪಕ್ಕದಲ್ಲಿನ ಹೊಂಡದ ಬಳಿ ಇಬ್ಬರು ಗಿರೀಶರೂ ಶವವಾಗಿ ಪತ್ತೆಯಾಗುತ್ತಾರೆ.

ಜಾತಿ ದೌರ್ಜನ್ಯ ಪ್ರಕರಣ ದಾಖಲಾಗುತ್ತದೆ. ಪೆದ್ದನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ವಿಚಾರಿಸಿದ್ದಾರೆ. ತನಿಖೆ ಕೂಡ ಬಿರುಸಿನಿಂದ ಸಾಗಿದೆ. ಇಪ್ಪತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳಾದರೂ ಸಚಿವ ನಾಗೇಶ್‌ ಅವರ ಗಮನಕ್ಕೆ ಬಂದಿಲ್ಲ ಎಂದರೆ ನಂಬುವುದು ಹೇಗೆ? ಎಂಬುದು ಸದ್ಯದ ಪ್ರಶ್ನೆ

“ಪೆದ್ದನಹಳ್ಳಿಯಲ್ಲಿ ನಡೆದಿರುವ ದಲಿತ ಯುವಕರ ಕೊಲೆ ಪ್ರಕರಣದ ಘಟನೆ ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ ಸಂಗ್ರಹಿಸಿ ಅಲ್ಲಿಗೆ ಭೇಟಿ ನೀಡುತ್ತೇನೆ” ಎಂದು ಬಿ.ಸಿ.ನಾಗೇಶ್‌ ಹೇಳಿರುವುದಾಗಿ ತುಮಕೂರಿನ ಪ್ರಾದೇಶಿಕ ಪತ್ರಿಕೆ ಪ್ರಜಾಪ್ರಗತಿ ವರದಿ ಮಾಡಿದೆ.

ಶನಿವಾರದಂದು ಪೆದ್ದನಹಳ್ಳಿಗೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ (ವಾಸು), ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಂತ್ವಾನ ಹೇಳಿದ್ದರು.

ಆ ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, “ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಪೆದ್ದನಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟಿಲ್ಲ’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಸಿರಾದಲ್ಲಿ ಪ್ರತಿಕ್ರಿಯೆ ನೀಡಿರುವ ನಾಗೇಶ್‌ ಉಡಾಫೆಯಾಗಿ ಮಾತನಾಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

“ನಾನು ಪ್ರವಾಸದಲ್ಲಿದ್ದೆ. ಅದು ಜಿಲ್ಲಾ ಮಟ್ಟದ ಸುದ್ದಿಯಾಗಿದೆ. ಮಾಹಿತಿ ಪಡೆದು ಭೇಟಿ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, “ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಕೊಡಬೇಕೆಂದು ಈಗಾಗಲೇ ತಿರ್ಮಾನ ಮಾಡಲಾಗಿದೆ. ಅದಕ್ಕೊಂದು ಸಮಿತಿ ರಚನೆ ಮಾಡಲಾಗಿತ್ತು. ಅದನು ಏನೇನು ಇರಬೇಕೆಂದು ತೀರ್ಮಾನಿಸುತ್ತದೆ. ಭಗವದ್ಗೀತೆ ಜೊತೆಗೆ ಬೈಬಲ್, ಕುರಾನ್‌ ಇರಬೇಕೆಂದು ಕೆಲವರು ವಾದ ಮಾಡುತ್ತಾರೆ. ವಾದ ಮಾಡುವ ಗುಂಪು 60 ವರ್ಷದಲ್ಲಿ ನೈತಿಕ ಶಿಕ್ಷಣ ನೀಡುವ ಕೆಲಸ ಮಾಡಿದ್ದಿದ್ದರೆ ನಮಗೆ ಕೆಲಸ ಮಾಡುವಂತಹ ಅವಕಾಶನೇ ಇರ್ತಿರಲಿಲ್ಲ. ಮಾರಲ್ ಸೈನ್ಸ್‌ ಅನ್ನು ಯಾವ ಸರ್ಕಾರ ತೆಗೆದು ಹಾಕಿತ್ತು ಅನ್ನೋದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಎಲ್ಲವೂ ರಾಜಕೀಯ ಪ್ರೇರಿತ ನಿರ್ಧಾರಗಳಾಗಿರುವುದರಿಂದ ಶಿಕ್ಷಣ ಈ ಮಟ್ಟಕ್ಕೆ ಕುಸಿದಿದೆ” ಎಂದಿದ್ದಾರೆ.

ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಧರ್ಮರಾಜಕಾರಣ, ಪಠ್ಯದ ಕೇಸರೀಕರಣದ ಕುರಿತು ಸದಾ ಧ್ಯಾನಿಸುವ ನಾಗೇಶ್ ಅವರಿಗೆ ತಮ್ಮ ಪಕ್ಕದ ಕ್ಷೇತ್ರವಾದ ತುರುವೇಕೆರೆಗೆ ಸೇರಿದ ಗ್ರಾಮವೊಂದರಲ್ಲಿ ನಡೆದಿರುವ ದುಷ್ಕೃತ್ಯವೊಂದು ತಿಳಿಯದೇ ಇರುವುದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ಪ್ರಬಲ ಜಾತಿಗಳಿಗೆ ಸೇರಿದ್ದು, ದಲಿತರ ಮೇಲೆ ಸಚಿವರಿಗೆ ನಿಜವಾದ ಕಾಳಜಿ ಇಲ್ಲ ಎಂಬುದನ್ನು ಅವರು ಮಾತುಗಳು ಸೂಚಿಸುತ್ತಿವೆ ಎಂಬ ಅಭಿಪ್ರಾಯಗಳು ಬಂದಿವೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

ದಲಿತ ಹೋರಾಟಗಾರ ಕೊಟ್ಟ ಶಂಕರ್‌ ಹಾಕಿರುವ ಪೋಸ್ಟ್‌ಗೆ ಅನೇಕರು ಕಮೆಂಟ್ ಮಾಡಿ ನಾಗೇಶ್ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.

“ಕೊಲೆ ಮಾಡಿದೋರು ಯಾರು ಅನ್ನೋದರ ಮೇಲೆ ಅವರಿಗೆ ಮಾಹಿತಿ ಹೋಗುತ್ತೆ. ಬಾಕಿ ಎಲ್ಲ ವಜಾ” ಎಂದು ಟೀನಾ ಶಶಿಕಾಂತ್‌ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯ ಮತ್ತು ದೇಶದಾದ್ಯಂತ ಪೆದ್ದನಹಳ್ಳಿ ಘಟನೆ ಬಗ್ಗೆ ಸುದ್ದಿಯಾಗಿದೆ. ಆದರೆ ಸಚಿವ ನಾಗೇಶ್ ಅವರಿಗೆ ಮಾತ್ರ ಗೊತ್ತಿಲ್ಲ ಅಂದ್ರೆ ಈ ಸಚಿವರು ನಿಷ್ಕ್ರಿಯರಾಗಿದ್ದಾರೆ. ಇವರಿಗೆ ಹಳ್ಳಿಗಳ ಮಕ್ಕಳ ವಿಷಯಗಳು ತಲುಪಲು ಸಾಧ್ಯವೆ ಇಲ್ಲ ಅಂದರೆ ಇವರು ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವೆ? ಎಲ್ಲಿದ್ದೀರಿ ಸಚಿವರೆ? ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ವ್ಯಾಪ್ತಿಯ ಪೆದ್ದನಹಳ್ಳಿಯಲ್ಲಿ ಘಟನೆ ನಡೆದಿದೆ. ನಿಮಗೆ ಮಾಹಿತಿ ಅಗತ್ಯವಿದ್ದರೆ ನಾವೇ ತಿಳಿಸುತ್ತೇವೆ” ಓಬಳೇಶ್‌ ಕೆ.ಬಿ. ತಿಳಿಸಿದ್ದಾರೆ.

“ಆರೆಸ್ಸೆಸ್ ಹಿಂದೂ ಸಂಘಟನೆಯ ಮುಖಂಡರುಗಳಿಗೆ ಚಿಕ್ಕ ಗಾಯ, ಚಿಕ್ಕ ಘಟನೆಯಾದರೂ ಓಡಿ ಓಡಿ ಅವರ ಬಳಿಗೆ ಹೋಗುತ್ತಾರೆ” ಎಂದು ರಾಮಯ್ಯ ಪಿ.ಎನ್‌.ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಾಪ ಈ ಮನುಷ್ಯ ಪ್ರಾಥಮಿಕ ಶಾಲೆಯ ಪಠ್ಯ ಪುಸ್ತಕ ಬರೀತಾ ಕೂತಿದ್ದಾನೆ. ಡಿಸ್ಟರ್ಬ್ ಮಾಡಬೇಡಿ….!!!

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...