Homeದಲಿತ್ ಫೈಲ್ಸ್ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಇಬ್ಬರು ಯುವಕರು ಕೊಲೆಯಾಗಿ 10 ದಿನ ಕಳೆದಿದೆ. ಉನ್ನತ ಮಟ್ಟದ ಅಧಿಕಾರಿಗಳು, ರಾಜಕಾರಣಿಗಳು ಪೆದ್ದನಹಳ್ಳಿಗೆ ಭೇಟಿ ನೀಡಿದ್ದಾರೆ. ಆದರೆ ಜಿಲ್ಲೆಯ ಸಚಿವರಿಗೆ ಘಟನೆ ಕುರಿತು ಮಾಹಿತಿ ಇಲ್ಲವಂತೆ!

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರು ಭೀಕರವಾಗಿ ಕೊಲೆಯಾಗಿ ಹತ್ತು ದಿನಗಳೇ ಕಳೆದವು. ಗಿರೀಶ್‌ ಎಂಬ ಹೆಸರಿನ ಇಬ್ಬರು ಯುವಕರು ಏ.21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಹತ್ಯೆಯಾದರು. ಈ ಘಟನೆಗೆ ರಾಜ್ಯದ ವಿವಿಧ ದಲಿತ ಸಂಘಟನೆಗಳು, ಹೋರಾಟಗಾರರು, ಅನೇಕ ರಾಜಕೀಯ ಮುಖಂಡರು ಪ್ರತಿಕ್ರಿಯಿಸಿ, ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ. ಆದರೆ ಇಷ್ಟೆಲ್ಲ ಬೆಳವಣಿಗೆಗಳಾದರೂ ಜಿಲ್ಲೆಯ ತಿಪಟೂರು ಕ್ಷೇತ್ರದ ಶಾಸಕ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪೆದ್ದನಹಳ್ಳಿಯ ಘಟನೆಯ ಕುರಿತು ಮಾಹಿತಿ ಇಲ್ಲವಂತೆ!

ಶಾಲಾ ಪಠ್ಯದಲ್ಲಿ ಕೋಮುರಾಜಕಾರಣ, ಹಿಜಾಬ್‌ ಹೆಸರಲ್ಲಿ ಗೊಂದಲ ಸೃಷ್ಟಿಗೆ ಥಟ್‌ ಅಂತ ಸ್ಪಂದಿಸುವ ಸಚಿವರು ದಲಿತ ಯುವಕರ ಹತ್ಯೆ ವಿಚಾರದಲ್ಲಿ ಬಹಳ ಉಢಾಪೆಯಾಗಿ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಇಬ್ಬರು ಯುವಕರ ಕೊಲೆಯಾಗುತ್ತದೆ. ಅಂದು ಗ್ರಾಮದಲ್ಲಿ ಕೊಲ್ಲಾಪುರದಮ್ಮನ ಜಾತ್ರೆಯನ್ನು ತಿಗಳ ಸಮುದಾಯದವರು ಹಮ್ಮಿಕೊಂಡಿರುತ್ತಾರೆ. ಅಂದು ಪೆದ್ದನಹಳ್ಳಿಯ ಮಾದಿಗ ಕುಟುಂಬದ ಗಿರೀಶ್ ಮನೆಗೆ ಗುಬ್ಬಿ ತಾಲ್ಲೂಕು ಹಾಗಲವಾಡಿ ಹೋಬಳಿಯ ಮಂಚಲದೊರೆ ನಿವಾಸಿ, ನಾಯಕ ಸಮುದಾಯದ ಗಿರೀಶ್ ಬಂದಿರುತ್ತಾರೆ. ಅಂದು ರಾತ್ರಿ ಲಿಂಗಾಯತ ಸಮುದಾಯದ ನಂದೀಶ್ ಎಂಬಾತ ಪೆದ್ದನಹಳ್ಳಿಯ ಗಿರೀಶ್‌ ಅವರನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾನೆ. ಮಂಚಲದೊರೆಯಿಂದ ಬಂದಿದ್ದ ಗಿರೀಶ್‌ ಕೂಡ ಗೆಳೆಯನನ್ನು ಹಿಂಬಾಲಿಸುತ್ತಾನೆ. ಆದರೆ ಬೆಳಿಗ್ಗೆ ನೋಡಿದರೆ ನೆಲ್ಲಿಗೆರೆ- ಸಿರಾ ರಸ್ತೆಯ ಪಕ್ಕದಲ್ಲಿನ ಹೊಂಡದ ಬಳಿ ಇಬ್ಬರು ಗಿರೀಶರೂ ಶವವಾಗಿ ಪತ್ತೆಯಾಗುತ್ತಾರೆ.

ಜಾತಿ ದೌರ್ಜನ್ಯ ಪ್ರಕರಣ ದಾಖಲಾಗುತ್ತದೆ. ಪೆದ್ದನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ವಿಚಾರಿಸಿದ್ದಾರೆ. ತನಿಖೆ ಕೂಡ ಬಿರುಸಿನಿಂದ ಸಾಗಿದೆ. ಇಪ್ಪತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳಾದರೂ ಸಚಿವ ನಾಗೇಶ್‌ ಅವರ ಗಮನಕ್ಕೆ ಬಂದಿಲ್ಲ ಎಂದರೆ ನಂಬುವುದು ಹೇಗೆ? ಎಂಬುದು ಸದ್ಯದ ಪ್ರಶ್ನೆ

“ಪೆದ್ದನಹಳ್ಳಿಯಲ್ಲಿ ನಡೆದಿರುವ ದಲಿತ ಯುವಕರ ಕೊಲೆ ಪ್ರಕರಣದ ಘಟನೆ ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ ಸಂಗ್ರಹಿಸಿ ಅಲ್ಲಿಗೆ ಭೇಟಿ ನೀಡುತ್ತೇನೆ” ಎಂದು ಬಿ.ಸಿ.ನಾಗೇಶ್‌ ಹೇಳಿರುವುದಾಗಿ ತುಮಕೂರಿನ ಪ್ರಾದೇಶಿಕ ಪತ್ರಿಕೆ ಪ್ರಜಾಪ್ರಗತಿ ವರದಿ ಮಾಡಿದೆ.

ಶನಿವಾರದಂದು ಪೆದ್ದನಹಳ್ಳಿಗೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ (ವಾಸು), ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಂತ್ವಾನ ಹೇಳಿದ್ದರು.

ಆ ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, “ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಪೆದ್ದನಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟಿಲ್ಲ’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಸಿರಾದಲ್ಲಿ ಪ್ರತಿಕ್ರಿಯೆ ನೀಡಿರುವ ನಾಗೇಶ್‌ ಉಡಾಫೆಯಾಗಿ ಮಾತನಾಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

“ನಾನು ಪ್ರವಾಸದಲ್ಲಿದ್ದೆ. ಅದು ಜಿಲ್ಲಾ ಮಟ್ಟದ ಸುದ್ದಿಯಾಗಿದೆ. ಮಾಹಿತಿ ಪಡೆದು ಭೇಟಿ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, “ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಕೊಡಬೇಕೆಂದು ಈಗಾಗಲೇ ತಿರ್ಮಾನ ಮಾಡಲಾಗಿದೆ. ಅದಕ್ಕೊಂದು ಸಮಿತಿ ರಚನೆ ಮಾಡಲಾಗಿತ್ತು. ಅದನು ಏನೇನು ಇರಬೇಕೆಂದು ತೀರ್ಮಾನಿಸುತ್ತದೆ. ಭಗವದ್ಗೀತೆ ಜೊತೆಗೆ ಬೈಬಲ್, ಕುರಾನ್‌ ಇರಬೇಕೆಂದು ಕೆಲವರು ವಾದ ಮಾಡುತ್ತಾರೆ. ವಾದ ಮಾಡುವ ಗುಂಪು 60 ವರ್ಷದಲ್ಲಿ ನೈತಿಕ ಶಿಕ್ಷಣ ನೀಡುವ ಕೆಲಸ ಮಾಡಿದ್ದಿದ್ದರೆ ನಮಗೆ ಕೆಲಸ ಮಾಡುವಂತಹ ಅವಕಾಶನೇ ಇರ್ತಿರಲಿಲ್ಲ. ಮಾರಲ್ ಸೈನ್ಸ್‌ ಅನ್ನು ಯಾವ ಸರ್ಕಾರ ತೆಗೆದು ಹಾಕಿತ್ತು ಅನ್ನೋದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಎಲ್ಲವೂ ರಾಜಕೀಯ ಪ್ರೇರಿತ ನಿರ್ಧಾರಗಳಾಗಿರುವುದರಿಂದ ಶಿಕ್ಷಣ ಈ ಮಟ್ಟಕ್ಕೆ ಕುಸಿದಿದೆ” ಎಂದಿದ್ದಾರೆ.

ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಧರ್ಮರಾಜಕಾರಣ, ಪಠ್ಯದ ಕೇಸರೀಕರಣದ ಕುರಿತು ಸದಾ ಧ್ಯಾನಿಸುವ ನಾಗೇಶ್ ಅವರಿಗೆ ತಮ್ಮ ಪಕ್ಕದ ಕ್ಷೇತ್ರವಾದ ತುರುವೇಕೆರೆಗೆ ಸೇರಿದ ಗ್ರಾಮವೊಂದರಲ್ಲಿ ನಡೆದಿರುವ ದುಷ್ಕೃತ್ಯವೊಂದು ತಿಳಿಯದೇ ಇರುವುದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ಪ್ರಬಲ ಜಾತಿಗಳಿಗೆ ಸೇರಿದ್ದು, ದಲಿತರ ಮೇಲೆ ಸಚಿವರಿಗೆ ನಿಜವಾದ ಕಾಳಜಿ ಇಲ್ಲ ಎಂಬುದನ್ನು ಅವರು ಮಾತುಗಳು ಸೂಚಿಸುತ್ತಿವೆ ಎಂಬ ಅಭಿಪ್ರಾಯಗಳು ಬಂದಿವೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

ದಲಿತ ಹೋರಾಟಗಾರ ಕೊಟ್ಟ ಶಂಕರ್‌ ಹಾಕಿರುವ ಪೋಸ್ಟ್‌ಗೆ ಅನೇಕರು ಕಮೆಂಟ್ ಮಾಡಿ ನಾಗೇಶ್ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.

“ಕೊಲೆ ಮಾಡಿದೋರು ಯಾರು ಅನ್ನೋದರ ಮೇಲೆ ಅವರಿಗೆ ಮಾಹಿತಿ ಹೋಗುತ್ತೆ. ಬಾಕಿ ಎಲ್ಲ ವಜಾ” ಎಂದು ಟೀನಾ ಶಶಿಕಾಂತ್‌ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯ ಮತ್ತು ದೇಶದಾದ್ಯಂತ ಪೆದ್ದನಹಳ್ಳಿ ಘಟನೆ ಬಗ್ಗೆ ಸುದ್ದಿಯಾಗಿದೆ. ಆದರೆ ಸಚಿವ ನಾಗೇಶ್ ಅವರಿಗೆ ಮಾತ್ರ ಗೊತ್ತಿಲ್ಲ ಅಂದ್ರೆ ಈ ಸಚಿವರು ನಿಷ್ಕ್ರಿಯರಾಗಿದ್ದಾರೆ. ಇವರಿಗೆ ಹಳ್ಳಿಗಳ ಮಕ್ಕಳ ವಿಷಯಗಳು ತಲುಪಲು ಸಾಧ್ಯವೆ ಇಲ್ಲ ಅಂದರೆ ಇವರು ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವೆ? ಎಲ್ಲಿದ್ದೀರಿ ಸಚಿವರೆ? ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ವ್ಯಾಪ್ತಿಯ ಪೆದ್ದನಹಳ್ಳಿಯಲ್ಲಿ ಘಟನೆ ನಡೆದಿದೆ. ನಿಮಗೆ ಮಾಹಿತಿ ಅಗತ್ಯವಿದ್ದರೆ ನಾವೇ ತಿಳಿಸುತ್ತೇವೆ” ಓಬಳೇಶ್‌ ಕೆ.ಬಿ. ತಿಳಿಸಿದ್ದಾರೆ.

“ಆರೆಸ್ಸೆಸ್ ಹಿಂದೂ ಸಂಘಟನೆಯ ಮುಖಂಡರುಗಳಿಗೆ ಚಿಕ್ಕ ಗಾಯ, ಚಿಕ್ಕ ಘಟನೆಯಾದರೂ ಓಡಿ ಓಡಿ ಅವರ ಬಳಿಗೆ ಹೋಗುತ್ತಾರೆ” ಎಂದು ರಾಮಯ್ಯ ಪಿ.ಎನ್‌.ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಾಪ ಈ ಮನುಷ್ಯ ಪ್ರಾಥಮಿಕ ಶಾಲೆಯ ಪಠ್ಯ ಪುಸ್ತಕ ಬರೀತಾ ಕೂತಿದ್ದಾನೆ. ಡಿಸ್ಟರ್ಬ್ ಮಾಡಬೇಡಿ….!!!

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...