Homeಕರ್ನಾಟಕಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆ: ರೈತರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

ಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆ: ರೈತರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

ಹಿಂದೆ ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿ ಘೋಷಿಸಿ ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿತ್ತು. ಈಗ ಬಿಜೆಪಿ ತುರ್ತುಪರಿಸ್ಥಿತಿ ಘೋಷಿಸದೆ ಪ್ರತಿಭಟನೆಗಳನ್ನು ನಿಯಂತ್ರಿಸುತ್ತಿದೆ.

- Advertisement -
- Advertisement -

ಕೇಂದ್ರ-ರಾಜ್ಯ ಸರ್ಕಾರಗಳ ರೈತ-ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಹರಿಯಾಣ- ಪಂಜಾಬ್ ದಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘಟನೆ ಗಳ ನೇತೃತ್ವದಲ್ಲಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ರೈತ, ದಲಿತ ಮುಖಂಡರು ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಸತ್ತಾತ್ಮಕವಾಗಿ ಹೋರಾಟ ನಡೆಸುತ್ತಿದ್ದ ರೈತರ ಪ್ರತಿಭಟನೆಗಳನ್ನು ಸರ್ಕಾರ ಹತ್ತಿಕ್ಕುತ್ತಿದೆ ಎಂದು ಕಿಡಿಕಾರಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಐಕೆಎಸ್‌ಸಿಸಿ ಜಿಲ್ಲಾ ಕಾರ್ಯದರ್ಶಿ ಸಿ.ಯತಿರಾಜು “ಹಿಂದೆ ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿಯನ್ನು ಘೋಷಿಸಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿತ್ತು. ಈಗ ಬಿಜೆಪಿ ಸರ್ಕಾರ ತುರ್ತುಪರಿಸ್ಥಿತಿಯನ್ನು ಘೋಷಣೆ ಮಾಡದೆಯೇ ಪ್ರತಿಭಟನೆಗಳನ್ನು ನಿಯಂತ್ರಿಸುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಕಾಂಗ್ರೆಸ್‌ನ ತುರ್ತುಪರಿಸ್ಥಿತಿಯನ್ನು ಟೀಕಿಸುವ ಬಿಜೆಪಿ ಅದೇ ಕೆಲಸವನ್ನು ಮಾಡುತ್ತಿದೆ. ಬಿಜೆಪಿಯ ಕ್ರೂರ ನಡೆಗಳು ಜನವಿರೋಧಿಯಾಗಿವೆ” ಎಂದು ಆರೋಪಿಸಿದರು.

ಬಿಜೆಪಿ ಪಕ್ಷವು ರೈತರು ಮತ್ತು ಕಾರ್ಮಿಕರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸುಗ್ರೀವಾಜ್ಞೆಗಳನ್ನು, ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು. ಇಲ್ಲದೇ ಇದ್ದರೆ ಕಾಂಗ್ರೆಸ್ ಗೆ ಕಲಿಸಿದ ಪಾಠವನ್ನೇ ಬಿಜೆಪಿಗೂ ಕಲಿಸುತ್ತಾರೆ ಎಂಬುದನ್ನು ಮರೆಯಬಾರದು. ದೇಶದ ಜನ ಸರ್ಕಾರದ ನಡೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಕೊಡುವುದಾಗಿ ಹೇಳುತ್ತಿದೆ. ಇದು ಕೇವಲ ಶೇ.6ರಷ್ಟು ರೈತರಿಗೆ ಮಾತ್ರ ಸಿಗುತ್ತಿದೆ. ಉಳಿದ 94ರಷ್ಟು ಮಂದಿ ರೈತರಿಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ದೊರೆಯುತ್ತಿಲ್ಲ. ಅಷ್ಟೇ ಅಲ್ಲ ಕೇವಲ 24ರಷ್ಟು ಬೆಳೆಗಳಿಗೆ ಮಾತ್ರ ಬೆಂಬಲ ಬೆಲೆ ನಿಗದಿ ಮಾಡಿದೆ. ಉಳಿದ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿಲ್ಲ ಎಂದು ದೂರಿದರು.

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದಿಂದ ಧಾನ್ಯಗಳನ್ನು ತಂದು ಮಾರಾಟ ಮಾಡಲಾಗುತ್ತಿದೆ. ವ್ಯಾಪಾರಿಗಳು ಕೇವಲ 800 ರೂಪಾಯಿಗೆ ಕ್ವಿಂಟಾಲ್ ಭತ್ತವನ್ನು ಖರೀಧಿ ಮಾಡುತ್ತಿದ್ದು ಸಾಕಷ್ಟು ಲಾಭ ಗಳಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಒಂದು ಕ್ವಿಂಟಾಲ್ ಭತ್ತದ ಬೆಂಬಲ ಬೆಲೆ 1880 ರೂಪಾಯಿ ನಿಗದಿ ಮಾಡಿದೆ. ಆದರೆ ಭತ್ತವನ್ನು ಬೆಂಬಲ ಬೆಲೆಗೆ ಖರೀದಿ ಮಾಡದೇ ಇರುವುದರಿಂದ ವ್ಯಾಪಾರಿಗಳು ಮತ್ತು ಮಧ್ಯವರ್ತಿಗಳಿಗೆ ಲಾಭದ ಅಂಶ ಹೋಗುತ್ತಿದೆ. ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

“ಕೇಂದ್ರ ಸರ್ಕಾರ ರೈತ-ದಲಿತ ಪರ ಇದ್ದೇವೆಂದು ಅಧಿಕಾರಕ್ಕೆ ಬಂದವು. ಅಧಿಕಾರ ಭದ್ರಪಡಿಸಿಕೊಂಡ ಮೇಲೆ ರೈತರು ಮತ್ತು ದಲಿತರಿಗೆ ದ್ರೋಹ ಬಗೆಯುತ್ತಿವೆ. ರೈತರಿಗೆ ಸಂಕಷ್ಟ ತರುವ ಕಾನೂನುಗಳನ್ನು ಜಾರಿಗೆ ತರುತ್ತಿದೆ. ವಿದ್ಯುತ್, ವಿಮಾನ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಖಾಸಗೀಕರಣ ಮಾಡಿ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಬಂಡವಾಳಗಾರರು ರೈತರ ತಲೆಯ ಮೇಲೆ ಕಾಲಿಟ್ಟು ತುಳಿಯುತ್ತಿದ್ದಾರೆ. ಇದನ್ನು ತಡೆಯಲು ಹೋರಾಟ ಅನಿವಾರ್ಯವಾಗಿದೆ ಎಂದರು.


ಇದನ್ನೂ ಓದಿ: ದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...