Homeಮುಖಪುಟಚುನಾವಣಾ ಅಧಿಕಾರಿಗಳಿಂದ ಮಲ್ಲಿಕಾರ್ಜುನ ಖರ್ಗೆ ಹೆಲಿಕಾಪ್ಟರ್‌ ಶೋಧ: ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಕಾಂಗ್ರೆಸ್‌

ಚುನಾವಣಾ ಅಧಿಕಾರಿಗಳಿಂದ ಮಲ್ಲಿಕಾರ್ಜುನ ಖರ್ಗೆ ಹೆಲಿಕಾಪ್ಟರ್‌ ಶೋಧ: ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಕಾಂಗ್ರೆಸ್‌

- Advertisement -
- Advertisement -

ಚುನಾವಣಾ ಆಯೋಗದ ಅಧಿಕಾರಿಗಳು ಭಾನುವಾರ ಬಿಹಾರದ ಸಮಸ್ತಿಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್‌ನ್ನು ಶೋಧ ನಡೆಸಿದ್ದು, ಇದನ್ನು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಬಿಹಾರದ ಸಮಷ್ಠಿಪುರದಲ್ಲಿ ಚುನಾವಣಾ ಸಮಾವೇಶಕ್ಕೆ ಹೆಲಿಕಾಪ್ಟರ್‌ ಮೂಲಕ ಖರ್ಗೆ ಆಗಮಿಸಿದ್ದರು. ಈ ವೇಳೆ ಹೆಲಿಕಾಪ್ಟರ್‌ನ್ನು ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಅಧಿಕಾರಿಗಳು ಹೆಲಿಕಾಪ್ಟರ್‌ ತಪಾಸಣೆ ಮಾಡುವ ವಿಡಿಯೊವನ್ನು ಕಾಂಗ್ರೆಸ್ ವಕ್ತಾರ ರಾಜೇಶ್ ರಾಥೋಡ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಈ ಕುರಿತು ಕಾಂಗ್ರೆಸ್‌ ವಕ್ತಾರ ರಾಜೇಶ್ ರಾಥೋರ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಬಿಹಾರದ ಸಮಸ್ತಿಪುರದಲ್ಲಿ  ಚುನಾವಣಾ ಆಯೋಗ ಮತ್ತು ಪೊಲೀಸರು ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್‌ನ್ನು ಶೋಧ ನಡೆಸಿರುವುದು ಪ್ರತಿಪಕ್ಷಗಳ ವಿರುದ್ಧ ಚುನಾವಣಾ ಆಯೋಗದ ದುರುದ್ದೇಶಪೂರಿತ ವರ್ತನೆಯನ್ನು ತೋರಿಸುತ್ತದೆ, ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ತಮಿಳುನಾಡಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ರಾಹುಲ್‌ ಅವರು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಕೇರಳದ ವಯನಾಡ್‌ಗೆ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ನ್ನು ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು ತಮಿಳುನಾಡಿನಲ್ಲಿ ತಪಾಸಣೆ ನಡೆಸಿದ್ದರು.

ಇದಲ್ಲದೆ ಟಿಎಂಸಿ ಮುಖಂಡ ಅಭಿಷೇಕ್‌ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದರು, ಇದು ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ನಾಯಕರು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಬಳಸುವ ಹೆಲಿಕಾಪ್ಟರ್‌ಗಳನ್ನು ತಪಾಸಣೆಗೆ ಒಳಪಡಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸವಾಲು ಹಾಕಿದ್ದರು.

ಇದನ್ನು ಓದಿ: ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...