ಮಂಡ್ಯದ ಶ್ರೀ ಅರ್ಕೇಶ್ವರ ದೇವಸ್ಥಾನದಲ್ಲಿ ಮಲಗಿದ್ದ ಮೂವರು ಅರ್ಚಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 09 ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣೆಯ ಪೊಲೀಸರು ಕಳೆದ ವಾರ ಐವರನ್ನು ಬಂಧಿಸಿದ್ದರು. ನಿನ್ನೆ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ, ಬಂಧಿತರಿಂದ 4.7 ಲಕ್ಷ ರೂಪಾಯಿ ನಗದು, 2 ಮೊಬೈಲ್, 2 ಬೈಕ್, 1 ವಾಹನವನ್ನು ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ: ಮಂಡ್ಯ: ಅರ್ಚಕರನ್ನು ಕೊಲೆಗೈದ ಆರೋಪಿಗಳನ್ನು ಬಂಧಿಸಿದ ಪೊಲೀಸರು
ಮಂಡ್ಯದ ಗುತ್ತಲು ರಸ್ತೆಯಲ್ಲಿರುವ ಅರ್ಕೇಶ್ವರ ದೇವಾಲಯದ ಪ್ರಾಂಗಣದಲ್ಲಿ ಮಲಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ಕಳೆದ ವಾರ ಬೆಳಗ್ಗಿನ ಜಾವ ಹತ್ಯೆಗೈದು ಹುಂಡಿಯ ಹಣವನ್ನು ದರೋಡೆ ಮಾಡಲಾಗಿತ್ತು.
ಈ ಕೃತ್ಯದಲ್ಲಿ ಹತ್ತು ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕಳೆದ ಮೂರು ದಿನದ ಹಿಂದಷ್ಟೆ ಪೊಲೀಸರು ಐವರನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಇದನ್ನೂ ಓದಿ: ಫ್ಯಾಕ್ಟ್ಚೆಕ್: ಅಯೋಧ್ಯೆಯಿಂದ ಪ್ರೇರಿತರಾಗಿ ಕರ್ನಾಟಕದ ಅರ್ಚಕರು ಪ್ರತಿಭಟನೆ ನಡೆಸಿದರೆ?