Homeಮುಖಪುಟನಾಗಾಲ್ಯಾಂಡ್ ನಾಗರಿಕರ ಹತ್ಯೆ: ಪರಿಹಾರ ನಿರಾಕರಿಸಿದ ಸಂತ್ರಸ್ತ ಕುಟುಂಬಗಳು

ನಾಗಾಲ್ಯಾಂಡ್ ನಾಗರಿಕರ ಹತ್ಯೆ: ಪರಿಹಾರ ನಿರಾಕರಿಸಿದ ಸಂತ್ರಸ್ತ ಕುಟುಂಬಗಳು

- Advertisement -
- Advertisement -

ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯ ಓಟಿಂಗ್‌ನ ಗ್ರಾಮಸ್ಥರು ಮತ್ತು ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ 14 ಜನರ ಕುಟುಂಬ ಸದಸ್ಯರು ಸರ್ಕಾರದ ಪರಿಹಾರವನ್ನು ನಿರಾಕರಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾದ ಸೇನಾ ಸಿಬ್ಬಂದಿಯನ್ನು “ನ್ಯಾಯಾಂಗ ವಿಚಾರಣೆಗೆ ಒಳಪಡಿಸುವವರೆಗೆ ಯಾವುದೇ ಸರ್ಕಾರಿ ಪರಿಹಾರ ನಮಗೆ ಬೇಡ” ಎಂದು ಹೇಳಿದ್ದಾರೆ.

ಹತ್ಯೆಯ ನಂತರ ಸ್ಥಳೀಯರು ಶವಸಂಸ್ಕಾರ ಮತ್ತು ಇತರ ಕೆಲಸಗಳಲ್ಲಿ ನಿರತರಾಗಿದ್ದಾಗ ಡಿಸೆಂಬರ್ 5 ರಂದು ರಾಜ್ಯ ಸಚಿವ ಪಿ. ಪೈವಾಂಗ್ ಕೊನ್ಯಾಕ್ ಮತ್ತು ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ 18.30 ಲಕ್ಷ ರೂ.ಗಳನ್ನು ನೀಡಲಾಗಿದೆ ಎಂದು ಓಟಿಂಗ್ ವಿಲೇಜ್ ಕೌನ್ಸಿಲ್ ಹೇಳಿಕೆಯಲ್ಲಿ ತಿಳಿಸಿದೆ.

ಸಚಿವರಿಂದ ನೀಡಿದ “ಪ್ರೀತಿ ಮತ್ತು ಉಡುಗೊರೆಯ ಟೋಕನ್” ಎಂದು ಸಂತ್ರಸ್ತರು ಮೊದಲು ಭಾವಿಸಿದರು. ಆದರೆ ಇದು ಕೊಲ್ಲಲ್ಪಟ್ಟ ಮತ್ತು ಗಾಯಗೊಂಡವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ನೀಡಲಾದ ಅನುಕಂಪದ ಕಂತು ಎಂದು ತಿಳಿಯಿತು ಎಂದು ಗ್ರಾಮಸ್ಥರು ಹೇಳಿದ್ದಾರೆ.

“ಭಾರತೀಯ ಸಶಸ್ತ್ರ ಪಡೆಗಳ 21ನೇ ಪ್ಯಾರಾ ಕಮಾಂಡೋಗಳ ಅಪರಾಧವನ್ನು ನ್ಯಾಯಾಂಗದ ಅಂಗಳಕ್ಕೆ ತರುವವರೆಗೆ, ನಾಗರಿಕ ಕಾನೂನು ಸಂಹಿತೆ ಮತ್ತು ಸಂಪೂರ್ಣ ಸಶಸ್ತ್ರ ಪಡೆ ವಿಶೇಷ ಅಧಿಕಾರ ಕಾಯಿದೆ (AFSPA) ಹಿಂಪಡೆಯುವವರೆಗೆ ಪರಿಹಾರವನ್ನು ಕುಟುಂಬಗಳು ಸ್ವೀಕರಿಸುವುದಿಲ್ಲ” ಎಂದು ಹೇಳಿಕೆ ತಿಳಿಸಿದೆ.

ಭಾನುವಾರ ಹೊರಡಿಸಿದ ಹೇಳಿಕೆಗೆ ವಿಲೇಜ್ ಕೌನ್ಸಿಲ್ ಅಧ್ಯಕ್ಷ ಲಾಂಗ್‌ವಾಂಗ್ ಕೊನ್ಯಾಕ್, ಆಂಗ್ (‘ರಾಜ’) ತಹ್ವಾಂಗ್, ಡೆಪ್ಯೂಟಿ ಅಂಗ್ ಚಿಂಗ್‌ವಾಂಗ್ ಮತ್ತು ಗಾವ್ ಬುರಾಹ್‌ಗಳು (ಗ್ರಾಮ ಮುಖ್ಯಸ್ಥರು) ಸಹಿ ಮಾಡಿದ್ದಾರೆ.

ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ 14 ಜನರ ಕುಟುಂಬಗಳಿಗೆ ನಾಗಾಲ್ಯಾಂಡ್ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ಗ್ರಾಮಸ್ಥರು ಸಾವನ್ನಪ್ಪಿದ್ದರು. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದರು.

ಘಟನೆಯ ಬಳಿಕ ವಿಷಾದ ವ್ಯಕ್ತಪಡಿಸಿದ್ದ ಗೃಹಸಚಿವ ಅಮಿತ್ ಶಾ, “ಭಾರತ ಸರ್ಕಾರವು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತದೆ ಮತ್ತು ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸುತ್ತದೆ. ಘಟನೆಯ ತನಿಖೆಗಾಗಿ SIT ರಚಿಸಲಾಗಿದ್ದು, ಒಂದು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ದೇಶಿಸಲಾಗಿದೆ. ನಾಗಾಲ್ಯಾಂಡ್ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಆದರೆ ನಿಯಂತ್ರಣದಲ್ಲಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯುವುದಿಲ್ಲ ಎಂದು ಎಲ್ಲಾ ಸಂಸ್ಥೆಗಳು ಅದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಹೇಳಿದ್ದರು.


ಇದನ್ನೂ ಓದಿರಿ: ನಾಗಾಲ್ಯಾಂಡ್‌: ಎಎಫ್‌ಎಸ್‌ಪಿಎ ಹಿಂಪಡೆಯಲು ಒತ್ತಾಯಿಸಿ ಮುಂದುವರಿದ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...