Homeಕರ್ನಾಟಕತುಮಕೂರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಕೊಲೆ: ನಕಲಿ ಚಿನ್ನದ ವಂಚನಾ ಜಾಲದಿಂದ ಕೃತ್ಯ?

ತುಮಕೂರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಕೊಲೆ: ನಕಲಿ ಚಿನ್ನದ ವಂಚನಾ ಜಾಲದಿಂದ ಕೃತ್ಯ?

- Advertisement -
- Advertisement -

ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಪತ್ತೆಯಾಗಿತ್ತು. ಈ ಕುರಿತ ತನಿಖೆಯ ಹಂತದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಕುಪ್ರಸಿದ್ಧ ನಕಲಿ ಚಿನ್ನದ ವಂಚನಾ ಜಾಲ ಈ ಭಯಾನಕ ಕೃತ್ಯವನ್ನು ಎಸಗಿರುವ ಶಂಕೆ ಮೂಡಿದೆ.

ಘಟನೆಯಲ್ಲಿ ಸಾಹುಲ್ ಹಮೀದ್ (45), ಇಸಾಕ್ (56) ಹಾಗೂ ಸಿದ್ದಿಕ್ (34) ಎಂಬುವವರು ಮೃತರು. ಸಾಹುಲ್ ಹಮೀದ್, ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾನ್ ನಿವಾಸಿಯಾಗಿದ್ದು, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಇಸಾಕ್ ಕುವೆಟ್ಟು ಗ್ರಾಮದ ಮದಡ್ಕ ನಿವಾಸಿಯಾಗಿದ್ದು, ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದರು ಮತ್ತು ಸಿದ್ದಿಕ್ ಶಿರ್ಲಾಲು ಗ್ರಾಮದ ನಿವಾಸಿಯಾಗಿದ್ದರು.

ಈ ಮೂವರು 12 ದಿನಗಳ ಹಿಂದೆ ಬೆಳ್ತಂಗಡಿ ಮದ್ದಡ್ಕದ ರಫೀಕ್ ಎಂಬವರ ಕಾರನ್ನು ಬಾಡಿಗೆ ಪಡೆದುಕೊಂಡು ತುಮಕೂರಿಗೆ ಆಗಮಿಸಿದ್ದರು. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ, ಕಡಿಮೆ ಬೆಲೆಗೆ ಚಿನ್ನವನ್ನು ನೀಡುತ್ತೇವೆ ಎಂದು ದುಷ್ಕರ್ಮಿಗಳು ಸುಳ್ಳು ಹೇಳಿ ಹಣ ದೋಚುವ ಪ್ಲಾನ್ ಮಾಡಿ ಈ ಮೂವರನ್ನು ತುಮಕೂರಿಗೆ ಕರೆಸಿಕೊಂಡಿದ್ದರು. ಗುರುವಾರ ಸಂಜೆವರೆಗೂ ಕುಟುಂಬಸ್ಥರ ಜೊತೆ ಸಂಪರ್ಕದಲ್ಲಿದ್ದ ಇಸಾಕ್​ನ ಮೊಬೈಲ್ ಗುರುವಾರ ರಾತ್ರಿ ಸ್ವಿಚ್‌ ಆಫ್ ಆಗಿತ್ತು. ಬಳಿಕ ಕೈಕಾಲು ಕಟ್ಟಿ ಹಾಕಿ ಕೊಲೆ ಮಾಡಿ ಗುರತು ಪತ್ತೆಯಾಗದಂತೆ ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದೆ. ಮೃತದೇಹ ಸುಟ್ಟು ಕರಕಲಾಗಿದ್ದು, ಇಬ್ಬರ ಮೃತದೇಹ ಕಾರಿನ ಢಿಕ್ಕಿಯಲ್ಲಿ ಮತ್ತು ಓರ್ವನ ಮೃತದೇಹ ಕಾರಿನ ಮಧ್ಯದಲ್ಲಿತ್ತು ಎಂದು ತಿಳಿದು ಬಂದಿದೆ.

ಮೂವರ ಶವ ಕಾರಿನಲ್ಲಿ ಪತ್ತೆಯಾಗಿರುವ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾರು, ದಕ್ಷಿಣ ಕನ್ನಡ ಜಿಲ್ಲೆಯ ರಫೀಕ್ ಎಂಬವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಅವರನ್ನು ಪೊಲೀಸರು ವಿಚಾರಿಸಿದಾಗ ಅವರು ಇಸಾಕ್​ ಎಂಬಾತನಿಗೆ 15 ದಿನಗಳ ಹಿಂದೆ ಕಾರು ಕೊಟ್ಟಿದ್ದಾಗಿ ಹೇಳಿಕೊಂಡಿದ್ದಾರೆ. ಇದರಿಂದಾಗಿ ಮೃತರ ಗುರುತು ಪತ್ತೆಕಾರ್ಯ ಸುಲಭವಾಗಿದೆ.

ಪೊಲೀಸರು ವಶಕ್ಕೆ ಪಡೆದುಕೊಂಡಿರುವ ದುಷ್ಕರ್ಮಿಗಳ ಹೆಸರನ್ನು ಈವರೆಗೆ ಬಹಿರಂಗಪಡಿಸಲಾಗಿಲ್ಲ. ಚಿನ್ನದ ಆಮಿಷವೊಡ್ಡಿ ಮೂವರನ್ನು ತುಮಕೂರಿಗೆ ಕರೆದು ಹಣ ದೋಚಿ ಕೊಲೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಇನ್ನು ಚಿನ್ನದ ಡೀಲ್‌ಗೆ ಸಂಬಂಧಿಸಿದ್ದು ಎಂದು ಹೇಳಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದ್ದು, ಆಡಿಯೋದಲ್ಲಿ ಚಿನ್ನದ ವ್ಯವಹಾರದ ಬಗ್ಗೆ ಮಾತನಾಡುವ, ಹಣಕಾಸಿನ ಬಗ್ಗೆ ಮಾತನಾಡುವುದು, 250ಗ್ರಾಂ ಡೀಲ್‌ ಮಾಡುವುದು ಸೆರೆಯಾಗಿದೆ.

ಯುಟಿ ಖಾದರ್‌ ಪ್ರತಿಕ್ರಿಯೆ:

ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಬೆಳಕಿಗೆ ಬಂದ ಬೆಳ್ತಂಗಡಿ ತಾಲೂಕಿನ ಮೂವರು ವ್ಯಕ್ತಿಗಳ ಕೊಲೆ ಕೃತ್ಯಕ್ಕೆ  ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಆಘಾತವನ್ನು ವ್ಯಕ್ತಪಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಐಜಿಪಿ ರವಿಕಾಂತೇಗೌಡ ಹಾಗೂ ತುಮಕೂರು ಎಸ್ಪಿ ಜೊತೆ ಮಾತುಕತೆ ನಡೆಸಿದ್ದೇನೆ. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆಯ ವೈಫಲ್ಯ: ಭಾಸ್ಕರ್‌ ಪ್ರಸಾದ್

ನಕಲಿ ಚಿನ್ನದ ವಂಚನಾ ಜಾಲ ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಹಾಕಿ ಹತ್ಯೆ ಮಾಡಿರುವ ಘಟನೆ ರಾಜ್ಯದ ಗುಪ್ತಚರ ಇಲಾಖೆ ಮತ್ತು ಕಾನೂನು ಸುವ್ಯವಸ್ಥೆಯ ವೈಫಲ್ಯವಾಗಿದೆ. ಇಂತಹ ಜಾಲಗಳ ಬಗೆಗಿನ ವರದಿಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದರೂ ಸಹ, ಜನರು ಮತ್ತೆ ಮತ್ತೆ ಅಂತಹದ್ದೇ ಜಾಲಗಳ ಆಮಿಷಗಳಿಗೆ ಒಳಗಾಗಿ ಹಣ ಮತ್ತು ಜೀವ ಎರಡನ್ನೂ ಕಳೆದುಕೊಳ್ಳುತ್ತಿರುವುದು ದುರಂತ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ.

ಸರ್ಕಾರ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಇದರ ಹಿಂದಿರುವ ಗುಂಪು ಅಥವಾ ವ್ಯಕ್ತಿಗಳನ್ನು ಶೀಘ್ರವೇ ಬಂಧಿಸುವ ಮೂಲಕ ನೊಂದ ಕುಟುಂಬಗಳಿಗೆ ನ್ಯಾಯ ಕೊಡಿಸಬೇಕು, ಈ ಜಾಲದ ವಂಚನೆ ಮತ್ತು ಕೌರ್ಯಕ್ಕೆ ಇನ್ನೊಂದಷ್ಟು ಜನರು ಸಿಲುಕಿಕೊಳ್ಳದಂತೆ ನೋಡಿಕೊಳ್ಳಬೇಕು. ಈ ಘಟನೆಯಲ್ಲಿ ಜೀವ ಕಳೆದುಕೊಂಡಿರುವವರ ಕುಟುಂಬಗಳಿಗೆ ತಕ್ಷಣ ತಲಾ 50 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಭಾಸ್ಕರ್‌ ಪ್ರಸಾದ್‌ ಆಗ್ರಹಿಸಿದ್ದಾರೆ.

ಇದಲ್ಲದೆ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಡ್ಲಿಪೇಟೆ, ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ನೈಜ ವಿಷಯವನ್ನು ಸಾರ್ವಜನಿಕಗೊಳಿಸಬೇಕೆಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅಬ್ದುಲ್ ಮಜೀದ್, ತುಮಕೂರಿನ ಬಳಿಯ ಹಳ್ಳಿ ಒಂದರಲ್ಲಿ, ಬೆಳ್ತಂಗಡಿ ಮೂಲದ ಮೂವರು ಕಾರೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಅತ್ಯಂತ ಆತಂಕಕಾರಿಯಾದ ಘಟನೆಯಾಗಿದೆ. ಅತೀ ಸಂಶಯಾಸ್ಪದ ಈ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ, ನೈಜ ವಿಷಯವನ್ನು ಸಾರ್ವಜನಿಕಗೊಳಿಸಬೇಕೆಂದು ತುಮಕೂರು ಎಸ್ಪಿ ಮತ್ತು ಕರ್ನಾಟಕದ ಡಿಜಿಪಿಗೆ ಅಗ್ರಹಿಸಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...