Homeಕರ್ನಾಟಕ’ಕಡಿದು ಕೊಲೆ ಮಾಡಬೇಕು’: ದ. ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ

’ಕಡಿದು ಕೊಲೆ ಮಾಡಬೇಕು’: ದ. ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ

ಈ ಮಧ್ಯೆ ರಾಜ್ಯ ಸರ್ಕಾರ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೇರಿದಂತೆ ಒಟ್ಟು 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಇಂದು ಆದೇಶ ಹೊರಡಿಸಿದೆ.

- Advertisement -
- Advertisement -

ಗೋಸಾಗಾಟ ನೆಪದಲ್ಲಿ ಹಲ್ಲೆ-ಗೂಂಡಾಗಿರಿ ನಡೆಸಿದರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣ ವಾಟ್ಸಪ್ ಗ್ರೂಪ್ ನಲ್ಲಿ ಕೊಲೆ ಬೆದರಿಕೆ ಒಡ್ಡಿರುವ ಘಟನೆ ನಡೆದಿದೆ.

ದ.ಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅಕ್ರಮ ಗೋ ಸಾಗಾಟ ನಡೆಸುವವರನ್ನು ಪೊಲೀಸರಿಗೆ ಒಪ್ಪಿಸಬೇಕು, ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಜಾನುವಾರು ಸಾಗಾಟ ಮಾಡುವ ವಾಹನ ಹಾಗೂ ಜನರ ಮೇಲೆ ಹಲ್ಲೆ ನಡೆಸಿದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದರು.

ಜಿಲ್ಲಾಧಿಕಾರಿಯ ಈ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡಿದ್ದು, ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ಮಾದ್ಯಮ ವರದಿಯ ಪೋಸ್ಟ್‌ಗೆ ಸಂಬಂಧಿಸಿ “ರಾಮ್ ಸೇನಾ” ಎಂಬ ವಾಟ್ಸಪ್ ಗುಂಪಿನಲ್ಲಿ +919632188546 ಮೊಬೈಲ್ ಸಂಖ್ಯೆಯಲ್ಲಿ ವ್ಯಕ್ತಿಯೊಬ್ಬ ತುಳು ಭಾಷೆಯಲ್ಲಿ ಜಿಲ್ಲಾಧಿಕಾರಿಗಳನ್ನು ಕಡಿದು ಕೊಲೆ ಮಾಡಬೇಕು ಎಂಬ ಅರ್ಥ ಬರುವ ಸಂದೇಶವನ್ನು ಹಾಕಿದ್ದಾರೆ.

 

ನಮ್ಮ ಹಿಂದುತ್ವಕ್ಕೆ ಆಗಲಿ ನಮ್ಮ ದೇವರಿಗೆ ಆಗಲಿ ಯಾರಾದರು ಧಕ್ಕೆ ಮಾಡಿದರೆ ಜೀವ ತೆಗೆಯಲೂ ತಯಾರು ಹಾಗೂ ಜೀವ ಕೊಡಲೂ ತಯಾರು ಎಂದು ಅವರು ಚಾಟ್‌ನಲ್ಲಿ ಮಾತನಾಡಿದ್ದಾರೆ. ಇದಕ್ಕೆ ಕೆಲವರು ಸಮ್ಮತಿ ಕೂಡಾ ಸೂಚಿಸಿದ್ದಾರೆ.

ಈ ಸಂದೇಶ ಇದೀಗ ವೈರಲ್ ಆಗಿದ್ದು, ಸಾರ್ವಜನಿಕ ವಲಯದಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕೊಲೆ ಬೆದರಿಕೆ ಹಾಕಿದವರನ್ನು ಕಾನೂನಿನ ಅಡಿಯಲ್ಲಿ ತಂದು ಶಿಕ್ಷಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಯಿಸಿರುವ ಮಂಗಳೂರು ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಅರುಣಾಂಶಗಿರಿ, “ಈ ಬಗ್ಗೆ ತನಿಖೆ ಪ್ರಾರಂಭವಾಗಿದೆ. ಜಿಲ್ಲಾಧಿಕಾರಿ ಜತೆ ಮಾತಾಡಿದ್ದೇವೆ. ಜಿಲ್ಲಾಧಿಕಾರಿ ದೂರು ನೀಡಿದರೆ ಸ್ವೀಕರಿಸಲಾಗುತ್ತದೆ. ಇಲ್ಲವಾದರೆ ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲಾಗುತ್ತದೆ. ಯಾವ ಕಾರಣಕ್ಕೂ ಪ್ರಕರಣವನ್ನು ಕಡೆಗಣಿಸಲಾಗುವುದಿಲ್ಲ” ಎಂದಿದ್ದಾರೆ.

ಈತನ್ಮಧ್ಯೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ತಕ್ಷಣದಿಂದ ಜಾರಿಯಾಗುವಂತೆ ವರ್ಗಾವಣೆಗೊಳಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಅವರನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಝನ್ ಸರ್ವೀಸ್(ಈಡಿಸಿಎಸ್) ನಿರ್ದೇಶಕರಾಗಿ ನಿಯೋಜಿಸಲಾಗಿದೆ.

ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಡಾ.ರಾಜೇಂದ್ರ ಕೆ.ವಿ ರವರನ್ನು ನೇಮಕಗೊಳಿಸಲಾಗಿದೆ.

ರಾಜ್ಯ ಸರಕಾರವು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೇರಿದಂತೆ ಒಟ್ಟು 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಇಂದು ಆದೇಶ ಹೊರಡಿಸಿದೆ.


ಓದಿ:  ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರು ಅಮಾಯಕರು: ವಿಧಾನಸಭಾ ಅಧಿವೇಶನದಲ್ಲಿ ಕುಮಾರಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...