Homeಮುಖಪುಟಬೇರೆ ಕೋಣೆಯಲ್ಲಿ ಕೊಂದು ನಂತರ ಆಕೆಯ ಶವವನ್ನು ಸೆಮಿನಾರ್ ಹಾಲ್‌ಗೆ ತರಲಾಗಿದೆ: ಶಂಕೆ ವ್ಯಕ್ತಪಡಿಸಿದ ಮೃತ...

ಬೇರೆ ಕೋಣೆಯಲ್ಲಿ ಕೊಂದು ನಂತರ ಆಕೆಯ ಶವವನ್ನು ಸೆಮಿನಾರ್ ಹಾಲ್‌ಗೆ ತರಲಾಗಿದೆ: ಶಂಕೆ ವ್ಯಕ್ತಪಡಿಸಿದ ಮೃತ ವೈದ್ಯೆ ತಂದೆ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ-ಹತ್ಯೆಗೀಡಾದ ಟ್ರೈನಿ ವೈದ್ಯೆಯ ತಂದೆಯು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, “ತನ್ನ ಮಗಳನ್ನು ಬೇರೆ ಯಾವುದೋ ಕೋಣೆಯಲ್ಲಿ ಕೊಂದ ನಂತರ ಆಕೆಯ ಶವವನ್ನು ಸೆಮಿನಾರ್ ಹಾಲ್‌ಗೆ ತರಲಾಗಿದೆ” ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯ ತುರ್ತು ಕಟ್ಟಡದಲ್ಲಿರುವ ಎದೆಗೂಡಿನ ವಿಭಾಗದ ಮೂರನೇ ಮಹಡಿಯ ಸೆಮಿನಾರ್ ಹಾಲ್ ನವೀಕರಣದ ನೆಪದಲ್ಲಿ ಪ್ರಮುಖ ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ ಎಂಬ ಆರೋಪದ ನಡುವೆ ಅವರ ಈ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂತ್ರಸ್ತೆಯ ತಂದೆ, “ನಾವು ಪೊಲೀಸರಿಂದ ಲೋಪವನ್ನು ಕಂಡು ಸಿಬಿಐಗೆ ತಿಳಿಸಿದ್ದೇವೆ. ಈಗ ಆಕೆಯನ್ನು ಸೆಮಿನಾರ್ ಹಾಲ್‌ನಲ್ಲಿ ಕೊಲೆ ಮಾಡಲಾಗಿದೆಯೇ ಎಂದು ನಮಗೆ ಅನುಮಾನವಿದೆ. ಅವಳನ್ನು ಬೇರೆಡೆ ಕೊಲ್ಲಲಾಗಿದೆ” ಎಂದು ಹೇಳಿದರು.

ಆಗಸ್ಟ್ 9 ರಂದು ದೇಹದ ಮೇಲೆ ಅನೇಕ ಗಾಯಗಳೊಂದಿಗೆ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾದ 31 ವರ್ಷದ ವೈದ್ಯೆಯ ತಂದೆ, ಸಿಬಿಐ ತನಿಖೆಯಲ್ಲಿ ನನಗೆ ನಂಬಿಕೆಯಿದೆ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು.

ಆಸ್ಪತ್ರೆ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರುತ್ತೇನೆ, ತನಿಖಾ ತಂಡದ ಮೇಲೆ ನಮಗೆ ನಂಬಿಕೆ ಇದೆ. ನನ್ನ ಒಬ್ಬ ಹೆಣ್ಣು ಮಗಳು ಕಳೆದು ಹೋಗಿದ್ದಾಳೆ. ಆದರೆ, ನನ್ನ ಸಾವಿರಾರು ಕೋಟಿ ಗಂಡು-ಹೆಣ್ಣು ಮಕ್ಕಳು ಬೀದಿಗಿಳಿದಿದ್ದಾರೆ ಎಂದು ನಾನು ಭಾವಿಸುತ್ತೇನೆ. ಬಾಂಗಾಳದಿಂದ ಇಡೀ ಜಗತ್ತಿಗೆ ಈ ಬಗ್ಗೆ ಚಳುವಳಿ ನಡೆಯುತ್ತಿದೆ, ನಮಗೆ ನ್ಯಾಯ ಬೇಕು” ಎಂದು ಸಂತ್ರಸ್ತೆಯ ತಂದೆ ಆಗ್ರಹಿಸಿದರು.

ಶುಕ್ರವಾರ, ಕಲ್ಕತ್ತಾ ಹೈಕೋರ್ಟ್ ಕೂಡ ಅಪರಾಧದ ಸ್ಥಳದ ಬಳಿ ನವೀಕರಣ ಕಾರ್ಯದ “ತುರ್ತು” ಬಗ್ಗೆ ಬಂಗಾಳ ಸರ್ಕಾರವನ್ನು ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಸರ್ಕಾರ, “ಆರೋಪ ಸರಿಯಲ್ಲ, ವೈದ್ಯರಿಗೆ ವಿಶ್ರಾಂತಿ ಕೊಠಡಿ ನಿರ್ಮಿಸಲು ನವೀಕರಣ ಮಾಡಲಾಗುತ್ತಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

ಬುಧವಾರ ರಾತ್ರಿ ಹಿಂಸಾತ್ಮಕ ಜನಸಮೂಹವು ಆಸ್ಪತ್ರೆ ಆವರಣಕ್ಕೆ ನುಗ್ಗಿ ಮುಖ್ಯ ಕಟ್ಟಡದ ತುರ್ತು ಚಿಕಿತ್ಸಾ ವಿಭಾಗ, ಮೊದಲ ಮಹಡಿಯಲ್ಲಿನ ವಾರ್ಡ್ ಮತ್ತು ಎರಡನೇ ಮಹಡಿಯಲ್ಲಿ ಇಎನ್‌ಟಿ ವಿಭಾಗವನ್ನು ಧ್ವಂಸಗೊಳಿಸಿದ ನಂತರ ಅಪರಾಧದ ಸ್ಥಳವನ್ನು ನಾಶಪಡಿಸುವ ಪ್ರಯತ್ನ ನಡೆದಿದೆ ಎಂಬ ಆರೋಪಗಳಿಗೆ ಪುಷ್ಠಿ ಸಿಕ್ಕಿತು

ಆಸ್ಪತ್ರೆಯ ಹಲವಾರು ಇಂಟರ್ನ್‌ಗಳು ಮತ್ತು ವೈದ್ಯರು ಅಪರಾಧದಲ್ಲಿ ಭಾಗಿಯಾಗಿರಬಹುದು ಎಂದು ವೈದ್ಯರ ಪೋಷಕರು ಸಿಬಿಐಗೆ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

“ತಮ್ಮ ಮಗಳ ಕೊಲೆಯ ಹಿಂದೆ ಅನೇಕ ವ್ಯಕ್ತಿಗಳ ಕೈವಾಡವಿದೆ ಎಂದು ಅವರು ಶಂಕಿಸಿದ್ದಾರೆ ಎಂದು ಪೋಷಕರು ನಮಗೆ ತಿಳಿಸಿದ್ದಾರೆ. ಅವರು ಆಸ್ಪತ್ರೆಯಲ್ಲಿ ಅವಳೊಂದಿಗೆ ಕೆಲಸ ಮಾಡಿದ ಕೆಲವು ಇಂಟರ್ನ್‌ಗಳು ಮತ್ತು ವೈದ್ಯರ ಹೆಸರನ್ನು ನೀಡಿದ್ದಾರೆ” ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ; ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: 5 ಪ್ರಮುಖ ಬೇಡಿಕೆಗಳನ್ನಿಟ್ಟು ರಾಷ್ಟ್ರವ್ಯಾಪಿ ಮುಷ್ಕರ ಆರಂಭಿಸಿದ ವೈದ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...