Homeಮುಖಪುಟಮುರ್ಷಿದಾಬಾದ್ ಕೋಮು ಹಿಂಸಾಚಾರ: ಪೊಲೀಸ್ ನಿರ್ಲಕ್ಷ್ಯ, ಕೋಮು ತಾರತಮ್ಯದ ಆರೋಪ ಮಾಡಿದ ಸತ್ಯಶೋಧನಾ ಸಮಿತಿ

ಮುರ್ಷಿದಾಬಾದ್ ಕೋಮು ಹಿಂಸಾಚಾರ: ಪೊಲೀಸ್ ನಿರ್ಲಕ್ಷ್ಯ, ಕೋಮು ತಾರತಮ್ಯದ ಆರೋಪ ಮಾಡಿದ ಸತ್ಯಶೋಧನಾ ಸಮಿತಿ

- Advertisement -
- Advertisement -

ಮುರ್ಷಿದಾಬಾದ್: ಏಪ್ರಿಲ್ 11 ಮತ್ತು 12 ರಂದು ಮುರ್ಷಿದಾಬಾದ್‌ನ ಸಮ್‌ಶೇರ್‌ಗಂಜ್‌ನಲ್ಲಿ ನಡೆದ ಕೋಮು ಹಿಂಸಾಚಾರದ ನಂತರ ಭಾರೀ ಪೊಲೀಸ್ ನಿರ್ಲಕ್ಷ್ಯ, ಕೋಮು ತಾರತಮ್ಯ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳು ನಡೆದಿವೆ ಎಂದು  ನಾಗರಿಕ ಹಕ್ಕುಗಳ ರಕ್ಷಣಾ ಸಂಘ (APCR) ಮತ್ತು ಬಂದಿ ಮುಕ್ತಿ ಸಮಿತಿ ಜಂಟಿಯಾಗಿ ನಡೆಸಿದ ಸತ್ಯಶೋಧನಾ ಸಮಿತಿಯು ಆರೋಪಿಸಿದೆ.

ವಕ್ಫ್ ಚಳುವಳಿಯ ಸುತ್ತಲಿನ ವಿವಾದದಿಂದ ಈ ಹಿಂಸಾಚಾರ ಹುಟ್ಟಿಕೊಂಡಿತು ಎನ್ನಲಾಗಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಗಲಭೆ ಸಂದರ್ಭದಲ್ಲಿ ಅಂಗಡಿ ಮುಗ್ಗಟ್ಟುಗಳಿಗೆ, ವಾಹನಗಳಿಗೆ ವ್ಯಾಪಕವಾಗಿ ಬೆಂಕಿ ಹಚ್ಚುವಿಕೆ, ಲೂಟಿ, ಮತ್ತು ಹಲವರಿಗೆ ಗಾಯಗಳಾಗಿವೆ ಎಂದು ಈ ಸತ್ಯಶೋಧನಾ ಸಮಿತಿಯು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ ಪೊಲೀಸರು ಸಮಯಕ್ಕೆ ಸರಿಯಾಗಿ ಮಧ್ಯಪ್ರವೇಶಿಸಿದ್ದರೆ ಹಿಂಸಾಚಾರದ ವಿಸ್ತರಣೆಯನ್ನು ತಡೆಯಬಹುದಿತ್ತು ಎಂದು ಕಂಡುಬಂದಿದೆ. ಎಲ್ಲಾ ಸಮುದಾಯಗಳ ಸಂತ್ರಸ್ತರು, ಪೊಲೀಸರ ಆರಂಭಿಕ ಕ್ರಮವು ಹಿಂಸಾಚಾರವನ್ನು ತಡೆಯಬಹುದಿತ್ತು ಎಂದು ಒಕ್ಕೊರಲಿನಿಂದ ಹೇಳಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹರ್ಗೋಬಿಂದ್ ದಾಸ್ ಮತ್ತು ಚಂದನ್ ದಾಸ್ ಎಂಬ ಇಬ್ಬರು ಸಂತ್ರಸ್ತರು ಮೂರು ಗಂಟೆಗಳಿಗೂ ಹೆಚ್ಚು ಕಾಲ ವೈದ್ಯಕೀಯ ನೆರವು ಸಿಗದೆ ಜಾಫರಾಬಾದ್‌ನಲ್ಲಿ ಮೃತಪಟ್ಟಿದ್ದಾರೆ ಎಂಬ ಆರೋಪವೂ ಇದೆ ಎಂದು ಸಮಿತಿ ಹೇಳಿದೆ.

ಗಡಿ ಭದ್ರತಾ ಪಡೆ (BSF) ಸಿಬ್ಬಂದಿಯ ಭಾಗವಹಿಸುವಿಕೆಯ ಬಗ್ಗೆಯೂ ಸಮಿತಿಯು ಗಂಭೀರ ಕಳವಳ ವ್ಯಕ್ತಪಡಿಸಿದೆ. ಇಜಾಜ್ ಅಹ್ಮದ್ ಎಂಬುವವರು ಈ ಗಲಭೆಯಲ್ಲಿ ಕೊಲ್ಲಲ್ಪಟ್ಟರು ಮತ್ತು ಕನಿಷ್ಠ 13  ಮುಸ್ಲಿಂ ನಿವಾಸಿಗಳು ಗುಂಡೇಟುಗಳಿಂದ ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ. ಕೆಲವು ಬಿಎಸ್‌ಎಫ್ ಪಡೆಗಳು ಚಪ್ಪಲಿಗಳನ್ನು ಧರಿಸಿದ್ದವು. ಇದು ಅಸಾಮಾನ್ಯ ದೃಶ್ಯವಾಗಿತ್ತು  ಮತ್ತು ಈ ರೀತಿ ಚಪ್ಪಲಿ ಧರಿಸಿದವರು ಬಲಪಂಥೀಯ ಉಗ್ರಗಾಮಿ ಸದಸ್ಯರಾಗಿದ್ದು ಅವರು ಬಿಎಸ್‌ಎಫ್ ಸಿಬ್ಬಂದಿಯಂತೆ ನಟಿಸಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಮುಸ್ಲಿಂ ನಾಗರಿಕರನ್ನು ಮತ್ತು ಅಪ್ರಾಪ್ತ ವಯಸ್ಕರರನ್ನು ಸರಿಯಾದ ಕಾನೂನು ಪ್ರಕ್ರಿಯೆ ಇಲ್ಲದೆ ಅಕ್ರಮವಾಗಿ ಪೊಲೀಸರು ಬಂಧಿಸಿದ್ದಾರೆ ಎಂದು ಸತ್ಯಶೋಧನಾ ಸಮಿತಿ ಆರೋಪಿಸಿದೆ. ರಾತ್ರಿ ವೇಳೆ ದಾಳಿಗಳನ್ನು ನಡೆಸಲಾಗಿದ್ದು ಆರೆಸ್ಟ್ ವಾರೆಂಟ್ ಗಳನ್ನು ನೀಡಲಾಗಿಲ್ಲ ಮತ್ತು ಬಂಧಿತರನ್ನು 24 ಗಂಟೆಗಳ ಕಾನೂನು ಮಿತಿಗಿಂತ ಹೆಚ್ಚು ಕಾಲ ಪೊಲೀಸ್ ವಶದಲ್ಲಿ ಇರಿಸಿ,  ಹಿಂಸಾಚಾರಕ್ಕೆ ಒಳಪಡಿಸಲಾಗಿದೆ ಎಂದೂ ಆರೋಪಿಸಲಾಗಿದೆ.

ಸುಮಾರು 300 ದೂರುಗಳ (FIRs) ಪರಿಶೀಲನೆ ಮಾಡಿದಾಗ ಪ್ರತಿ ದೂರಿನಲ್ಲಿ “ಕಾಪಿ-ಪೇಸ್ಟ್” ಮಾಡಲಾಗಿದೆ. ಕೇವಲ ಹೆಸರುಗಳನ್ನು ಮಾತ್ರ ಬದಲಾಯಿಸಲಾಗಿದೆ ಎಂದು ಸಮಿತಿ ಹೇಳಿದೆ.  ಇದು ಸುಳ್ಳು ಮತ್ತು ಇಸ್ಲಾಮೋಫೋಬಿಕ್ ದೂರುಗಳ ಸೂಚನೆಯಾಗಿದೆ ಎಂದು ಅದು ಹೇಳಿದೆ. ಎಫ್‌ಐಆರ್‌ನಲ್ಲಿನ ನಿರೂಪಣೆಗಳು ದಲಿತರು ಮತ್ತು ಮುಸ್ಲಿಮರ ನಡುವೆ ಭಿನ್ನಾಭಿಪ್ರಾಯ ಮೂಡಿಸುವ ಉದ್ದೇಶವನ್ನು ಸೂಚಿಸಿವೆ. ಇದು ಹಿಂದೂ ರಾಷ್ಟ್ರೀಯವಾದಿ ಸಂಘಟನೆಗಳ ತಂತ್ರ ಎಂದು ಸಮಿತಿಯು ಆರೋಪಿಸಿದೆ.

ಸತ್ಯಶೋಧನಾ ವರದಿಯು ಈ ಕೆಳಗಿನಂತೆ  ಶಿಫಾರಸ್ಸು ಮಾಡಿದೆ

1.ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ

2.ಬಿಎಸ್‌ಎಫ್ ಗುಂಡಿನ ದಾಳಿಗೆ ಬಲಿಯಾದವರಿಗೆ ಪರಿಹಾರ

3.ಸುಳ್ಳು ಆರೋಪಗಳ ಅಡಿಯಲ್ಲಿ ಬಂಧಿತರಾದವರ ಬಿಡುಗಡೆ

4.ಅನಿಯಂತ್ರಿತ ಪೊಲೀಸ್ ದಾಳಿಗಳನ್ನು ಕೊನೆಗೊಳಿಸುವುದು. ಜಿಲ್ಲಾಡಳಿತವು ಪ್ರಜಾಪ್ರಭುತ್ವ ಸಭೆಗಳ ಮೇಲಿನ ನಿಷೇಧವನ್ನು ತೆಗೆದುಹಾಕಬೇಕು ಮತ್ತು ವಕೀಲರನ್ನು ನೇಮಿಸಿಕೊಳ್ಳಲು ಸಾಧ್ಯವಾಗದ ವಿಚಾರಣಾಧೀನ ಕೈದಿಗಳಿಗೆ ಕಾನೂನು ನೆರವು ಖಚಿತಪಡಿಸಬೇಕು ಎಂದು ಅದು ಒತ್ತಾಯಿಸಿದೆ.

ಇರಾನ್ ಅಣು ಸ್ಥಾವರಗಳ ವಿಕಿರಣ ಮಟ್ಟಗಳ ಮೇಲೆ ಭಾರತದ ಸೂಕ್ಷ್ಮ ನಿಗಾ: ಇರಾನ್‌ನಿಂದ ಭಾರತಕ್ಕೆ ಕೃತಜ್ಞತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...