Homeಮುಖಪುಟಮುರ್ಷಿದಾಬಾದ್ ಕೋಮು ಹಿಂಸಾಚಾರ: ಪೊಲೀಸ್ ನಿರ್ಲಕ್ಷ್ಯ, ಕೋಮು ತಾರತಮ್ಯದ ಆರೋಪ ಮಾಡಿದ ಸತ್ಯಶೋಧನಾ ಸಮಿತಿ

ಮುರ್ಷಿದಾಬಾದ್ ಕೋಮು ಹಿಂಸಾಚಾರ: ಪೊಲೀಸ್ ನಿರ್ಲಕ್ಷ್ಯ, ಕೋಮು ತಾರತಮ್ಯದ ಆರೋಪ ಮಾಡಿದ ಸತ್ಯಶೋಧನಾ ಸಮಿತಿ

- Advertisement -
- Advertisement -

ಮುರ್ಷಿದಾಬಾದ್: ಏಪ್ರಿಲ್ 11 ಮತ್ತು 12 ರಂದು ಮುರ್ಷಿದಾಬಾದ್‌ನ ಸಮ್‌ಶೇರ್‌ಗಂಜ್‌ನಲ್ಲಿ ನಡೆದ ಕೋಮು ಹಿಂಸಾಚಾರದ ನಂತರ ಭಾರೀ ಪೊಲೀಸ್ ನಿರ್ಲಕ್ಷ್ಯ, ಕೋಮು ತಾರತಮ್ಯ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳು ನಡೆದಿವೆ ಎಂದು  ನಾಗರಿಕ ಹಕ್ಕುಗಳ ರಕ್ಷಣಾ ಸಂಘ (APCR) ಮತ್ತು ಬಂದಿ ಮುಕ್ತಿ ಸಮಿತಿ ಜಂಟಿಯಾಗಿ ನಡೆಸಿದ ಸತ್ಯಶೋಧನಾ ಸಮಿತಿಯು ಆರೋಪಿಸಿದೆ.

ವಕ್ಫ್ ಚಳುವಳಿಯ ಸುತ್ತಲಿನ ವಿವಾದದಿಂದ ಈ ಹಿಂಸಾಚಾರ ಹುಟ್ಟಿಕೊಂಡಿತು ಎನ್ನಲಾಗಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಗಲಭೆ ಸಂದರ್ಭದಲ್ಲಿ ಅಂಗಡಿ ಮುಗ್ಗಟ್ಟುಗಳಿಗೆ, ವಾಹನಗಳಿಗೆ ವ್ಯಾಪಕವಾಗಿ ಬೆಂಕಿ ಹಚ್ಚುವಿಕೆ, ಲೂಟಿ, ಮತ್ತು ಹಲವರಿಗೆ ಗಾಯಗಳಾಗಿವೆ ಎಂದು ಈ ಸತ್ಯಶೋಧನಾ ಸಮಿತಿಯು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ ಪೊಲೀಸರು ಸಮಯಕ್ಕೆ ಸರಿಯಾಗಿ ಮಧ್ಯಪ್ರವೇಶಿಸಿದ್ದರೆ ಹಿಂಸಾಚಾರದ ವಿಸ್ತರಣೆಯನ್ನು ತಡೆಯಬಹುದಿತ್ತು ಎಂದು ಕಂಡುಬಂದಿದೆ. ಎಲ್ಲಾ ಸಮುದಾಯಗಳ ಸಂತ್ರಸ್ತರು, ಪೊಲೀಸರ ಆರಂಭಿಕ ಕ್ರಮವು ಹಿಂಸಾಚಾರವನ್ನು ತಡೆಯಬಹುದಿತ್ತು ಎಂದು ಒಕ್ಕೊರಲಿನಿಂದ ಹೇಳಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹರ್ಗೋಬಿಂದ್ ದಾಸ್ ಮತ್ತು ಚಂದನ್ ದಾಸ್ ಎಂಬ ಇಬ್ಬರು ಸಂತ್ರಸ್ತರು ಮೂರು ಗಂಟೆಗಳಿಗೂ ಹೆಚ್ಚು ಕಾಲ ವೈದ್ಯಕೀಯ ನೆರವು ಸಿಗದೆ ಜಾಫರಾಬಾದ್‌ನಲ್ಲಿ ಮೃತಪಟ್ಟಿದ್ದಾರೆ ಎಂಬ ಆರೋಪವೂ ಇದೆ ಎಂದು ಸಮಿತಿ ಹೇಳಿದೆ.

ಗಡಿ ಭದ್ರತಾ ಪಡೆ (BSF) ಸಿಬ್ಬಂದಿಯ ಭಾಗವಹಿಸುವಿಕೆಯ ಬಗ್ಗೆಯೂ ಸಮಿತಿಯು ಗಂಭೀರ ಕಳವಳ ವ್ಯಕ್ತಪಡಿಸಿದೆ. ಇಜಾಜ್ ಅಹ್ಮದ್ ಎಂಬುವವರು ಈ ಗಲಭೆಯಲ್ಲಿ ಕೊಲ್ಲಲ್ಪಟ್ಟರು ಮತ್ತು ಕನಿಷ್ಠ 13  ಮುಸ್ಲಿಂ ನಿವಾಸಿಗಳು ಗುಂಡೇಟುಗಳಿಂದ ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ. ಕೆಲವು ಬಿಎಸ್‌ಎಫ್ ಪಡೆಗಳು ಚಪ್ಪಲಿಗಳನ್ನು ಧರಿಸಿದ್ದವು. ಇದು ಅಸಾಮಾನ್ಯ ದೃಶ್ಯವಾಗಿತ್ತು  ಮತ್ತು ಈ ರೀತಿ ಚಪ್ಪಲಿ ಧರಿಸಿದವರು ಬಲಪಂಥೀಯ ಉಗ್ರಗಾಮಿ ಸದಸ್ಯರಾಗಿದ್ದು ಅವರು ಬಿಎಸ್‌ಎಫ್ ಸಿಬ್ಬಂದಿಯಂತೆ ನಟಿಸಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಮುಸ್ಲಿಂ ನಾಗರಿಕರನ್ನು ಮತ್ತು ಅಪ್ರಾಪ್ತ ವಯಸ್ಕರರನ್ನು ಸರಿಯಾದ ಕಾನೂನು ಪ್ರಕ್ರಿಯೆ ಇಲ್ಲದೆ ಅಕ್ರಮವಾಗಿ ಪೊಲೀಸರು ಬಂಧಿಸಿದ್ದಾರೆ ಎಂದು ಸತ್ಯಶೋಧನಾ ಸಮಿತಿ ಆರೋಪಿಸಿದೆ. ರಾತ್ರಿ ವೇಳೆ ದಾಳಿಗಳನ್ನು ನಡೆಸಲಾಗಿದ್ದು ಆರೆಸ್ಟ್ ವಾರೆಂಟ್ ಗಳನ್ನು ನೀಡಲಾಗಿಲ್ಲ ಮತ್ತು ಬಂಧಿತರನ್ನು 24 ಗಂಟೆಗಳ ಕಾನೂನು ಮಿತಿಗಿಂತ ಹೆಚ್ಚು ಕಾಲ ಪೊಲೀಸ್ ವಶದಲ್ಲಿ ಇರಿಸಿ,  ಹಿಂಸಾಚಾರಕ್ಕೆ ಒಳಪಡಿಸಲಾಗಿದೆ ಎಂದೂ ಆರೋಪಿಸಲಾಗಿದೆ.

ಸುಮಾರು 300 ದೂರುಗಳ (FIRs) ಪರಿಶೀಲನೆ ಮಾಡಿದಾಗ ಪ್ರತಿ ದೂರಿನಲ್ಲಿ “ಕಾಪಿ-ಪೇಸ್ಟ್” ಮಾಡಲಾಗಿದೆ. ಕೇವಲ ಹೆಸರುಗಳನ್ನು ಮಾತ್ರ ಬದಲಾಯಿಸಲಾಗಿದೆ ಎಂದು ಸಮಿತಿ ಹೇಳಿದೆ.  ಇದು ಸುಳ್ಳು ಮತ್ತು ಇಸ್ಲಾಮೋಫೋಬಿಕ್ ದೂರುಗಳ ಸೂಚನೆಯಾಗಿದೆ ಎಂದು ಅದು ಹೇಳಿದೆ. ಎಫ್‌ಐಆರ್‌ನಲ್ಲಿನ ನಿರೂಪಣೆಗಳು ದಲಿತರು ಮತ್ತು ಮುಸ್ಲಿಮರ ನಡುವೆ ಭಿನ್ನಾಭಿಪ್ರಾಯ ಮೂಡಿಸುವ ಉದ್ದೇಶವನ್ನು ಸೂಚಿಸಿವೆ. ಇದು ಹಿಂದೂ ರಾಷ್ಟ್ರೀಯವಾದಿ ಸಂಘಟನೆಗಳ ತಂತ್ರ ಎಂದು ಸಮಿತಿಯು ಆರೋಪಿಸಿದೆ.

ಸತ್ಯಶೋಧನಾ ವರದಿಯು ಈ ಕೆಳಗಿನಂತೆ  ಶಿಫಾರಸ್ಸು ಮಾಡಿದೆ

1.ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ

2.ಬಿಎಸ್‌ಎಫ್ ಗುಂಡಿನ ದಾಳಿಗೆ ಬಲಿಯಾದವರಿಗೆ ಪರಿಹಾರ

3.ಸುಳ್ಳು ಆರೋಪಗಳ ಅಡಿಯಲ್ಲಿ ಬಂಧಿತರಾದವರ ಬಿಡುಗಡೆ

4.ಅನಿಯಂತ್ರಿತ ಪೊಲೀಸ್ ದಾಳಿಗಳನ್ನು ಕೊನೆಗೊಳಿಸುವುದು. ಜಿಲ್ಲಾಡಳಿತವು ಪ್ರಜಾಪ್ರಭುತ್ವ ಸಭೆಗಳ ಮೇಲಿನ ನಿಷೇಧವನ್ನು ತೆಗೆದುಹಾಕಬೇಕು ಮತ್ತು ವಕೀಲರನ್ನು ನೇಮಿಸಿಕೊಳ್ಳಲು ಸಾಧ್ಯವಾಗದ ವಿಚಾರಣಾಧೀನ ಕೈದಿಗಳಿಗೆ ಕಾನೂನು ನೆರವು ಖಚಿತಪಡಿಸಬೇಕು ಎಂದು ಅದು ಒತ್ತಾಯಿಸಿದೆ.

ಇರಾನ್ ಅಣು ಸ್ಥಾವರಗಳ ವಿಕಿರಣ ಮಟ್ಟಗಳ ಮೇಲೆ ಭಾರತದ ಸೂಕ್ಷ್ಮ ನಿಗಾ: ಇರಾನ್‌ನಿಂದ ಭಾರತಕ್ಕೆ ಕೃತಜ್ಞತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...