Homeಮುಖಪುಟಮುರ್ಷಿದಾಬಾದ್ ಹಿಂಸಾಚಾರದ ಕುರಿತ ರಾಜ್ಯಪಾಲರ ವರದಿ ನಿರ್ಲಕ್ಷಿಸಿದ ಮಮತಾ ಬ್ಯಾನರ್ಜಿ

ಮುರ್ಷಿದಾಬಾದ್ ಹಿಂಸಾಚಾರದ ಕುರಿತ ರಾಜ್ಯಪಾಲರ ವರದಿ ನಿರ್ಲಕ್ಷಿಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ರಾಜ್ಯದ ಹಿಂಸಾಚಾರ ಪೀಡಿತ ಮುರ್ಷಿದಾಬಾದ್‌ನಲ್ಲಿ ಪರಿಸ್ಥಿತಿ ಸ್ಥಿರವಾಗಿದೆ ಎಂದು ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಗಲಭೆಗಳ ಕುರಿತು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಗೃಹ ಸಚಿವಾಲಯಕ್ಕೆ (MHA) ನೀಡಿರುವ ವರದಿಯ ಬಗ್ಗೆ ಅಥವಾ ರಾಜ್ಯದಲ್ಲಿ 356ನೇ ವಿಧಿಯ ಅನುಷ್ಠಾನದ ಬಗ್ಗೆ ಅವರು ನೀಡಿರುವ ಉಲ್ಲೇಖದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸೋಮವಾರ ಹೇಳಿದ್ದಾರೆ. ಮುರ್ಷಿದಾಬಾದ್ ಹಿಂಸಾಚಾರದ

ಸೋಮವಾರ ಮಧ್ಯಾಹ್ನ ಮುರ್ಷಿದಾಬಾದ್‌ಗೆ ಎರಡು ದಿನಗಳ ಭೇಟಿಗೆ ತೆರಳಿದ್ದ ಮಮತಾ ಬ್ಯಾನರ್ಜಿ, ತಾನು ಮೊದಲೇ ಭೇಟಿ ನೀಡಬಹುದಿತ್ತು, ಆದರೆ ಪರಿಸ್ಥಿತಿ ಸಾಮಾನ್ಯವಾಗುವವರೆಗೆ ಕಾಯಲು ನಿರ್ಧರಿಸಿದದಾಗಿ ಹೇಳಿದ್ದಾರೆ.

“ಬೋಸ್ ಅವರು ಗೃಹ ಸಚಿವಾಲಯಕ್ಕೆ ನೀಡಿರುವ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ರಾಜ್ಯಪಾಲರ ಆರೋಗ್ಯ ಸರಿಯಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ” ಎಂದು ಮುರ್ಷಿದಾಬಾದ್‌ಗೆ ಹೆಲಿಕಾಪ್ಟರ್ ಹತ್ತುವ ಮೊದಲು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ನಾನು ಮೊದಲೇ ಮುರ್ಷಿದಾಬಾದ್‌ಗೆ ಹೋಗಬಹುದಿತ್ತು. ಆದರೆ ಅಲ್ಲಿ ಶಾಂತಿ ಮತ್ತು ಸ್ಥಿರತೆ ಇಲ್ಲದಿದ್ದರೆ, ನಾವು ಹೋಗಿ ತೊಂದರೆ ನೀಡಬಾರದು. ಈ ಹಿಂದೆಯೇ ಮುರ್ಷಿದಾಬಾದ್‌ ಸಹಜತೆಗೆ ಮರಳಿದೆ. ಇಂದು, ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಅವರು ಆ ದಿನದ ನಂತರ ಬೆರ್ಹಾಂಪೋರ್‌ನಲ್ಲಿ ಜಿಲ್ಲಾ ಪರಿಶೀಲನಾ ಸಭೆ ನಡೆಸುವುದಾಗಿ ಹೇಳಿದ್ದಾರೆ. “ನಾಳೆ, ನಾನು ಹಿಂಸಾಚಾರ ಪೀಡಿತ ಧುಲಿಯನ್‌ಗೆ ಭೇಟಿ ನೀಡುತ್ತೇನೆ ಮತ್ತು ಮನೆಗಳು ಮತ್ತು ಅಂಗಡಿಗಳಿಗೆ ಹಾನಿಗೊಳಗಾದ ಜನರಿಗೆ ಪರಿಹಾರ ನೀಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಗಲಭೆಗಳ ಕುರಿತು ಬೋಸ್ ಗೃಹ ಸಚಿವಾಲಯಕ್ಕೆ ವರದಿಯನ್ನು ಕಳುಹಿಸಿದ್ದಾರೆ, “ಮೂಲಭೂತವಾದಿಕರಣ ಮತ್ತು ಉಗ್ರಗಾಮಿತ್ವದ ಅವಳಿ ಭೂತ” ರಾಜ್ಯಕ್ಕೆ ಗಂಭೀರ ಸವಾಲನ್ನು ಒಡ್ಡುತ್ತದೆ ಎಂದು ಉಲ್ಲೇಖಿಸಿದ್ದಾರೆ.

ತಮ್ಮ ವರದಿಯಲ್ಲಿ, ಬಾಂಗ್ಲಾದೇಶದ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ತನಿಖಾ ಆಯೋಗ ಮತ್ತು ಕೇಂದ್ರ ಪಡೆಗಳ ಹೊರಠಾಣೆಗಳನ್ನು ಸ್ಥಾಪಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಅವರು ಸೂಚಿಸಿದ್ದಾರೆ. ಜೊತೆಗೆ “ಹೆಚ್ಚುವರಿಯಾಗಿ ಹೇಳುವ ಅಗತ್ಯವಿಲ್ಲ, ಭಾರತೀಯ ಸಂವಿಧಾನದ 356ನೇ ವಿಧಿಯಡಿಯ ಷರತ್ತುಗಳು ಕೂಡ ಉಳಿದಿವೆ.” ಎಂದು ಅವರು ವರದಿಯಲ್ಲಿ ಬರೆದಿದ್ದಾರೆ. ಸಂವಿಧಾನದ 356 ನೇ ವಿಧಿಯ ಹೇರಿಕೆಯು ಒಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಸೂಚಿಸುತ್ತದೆ.

ಒಬ್ಬ ವ್ಯಕ್ತಿ ಮತ್ತು ಅವರ ಮಗ ಸೇರಿದಂತೆ ಕನಿಷ್ಠ ಮೂರು ಜನರ ಜೀವಗಳನ್ನು ಬಲಿತೆಗೆದುಕೊಂಡ ಮತ್ತು ಹಲವಾರು ಜನರು ಗಾಯಗೊಂಡ ಹಿಂಸಾಚಾರದ ನಂತರ ರಾಜ್ಯಪಾಲರು ಹಲವಾರು ಕ್ರಮಗಳನ್ನು ಸೂಚಿಸಿದ್ದಾರೆ. ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆಗಳ ನಡುವೆ ಈ ಗಲಭೆ ಸಂಭವಿಸಿತ್ತು. ವರದಿಯಲ್ಲಿ, ಗಲಭೆಗಳು “ಪೂರ್ವಯೋಜಿತ” ಎಂದು ತೋರುತ್ತಿದೆ ಮತ್ತು ರಾಜ್ಯ ಸರ್ಕಾರವು “ಮುರ್ಷಿದಾಬಾದ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂಬ ಬಗ್ಗೆ ತಿಳಿದಿತ್ತು” ಎಂದು ರಾಜ್ಯಪಾಲರು ಹೇಳಿದ್ದಾರೆ. ಮುರ್ಷಿದಾಬಾದ್ ಹಿಂಸಾಚಾರದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...