Homeಮುಖಪುಟಮುರ್ಷಿದಾಬಾದ್ ಹಿಂಸಾಚಾರದ ಕುರಿತ ರಾಜ್ಯಪಾಲರ ವರದಿ ನಿರ್ಲಕ್ಷಿಸಿದ ಮಮತಾ ಬ್ಯಾನರ್ಜಿ

ಮುರ್ಷಿದಾಬಾದ್ ಹಿಂಸಾಚಾರದ ಕುರಿತ ರಾಜ್ಯಪಾಲರ ವರದಿ ನಿರ್ಲಕ್ಷಿಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ರಾಜ್ಯದ ಹಿಂಸಾಚಾರ ಪೀಡಿತ ಮುರ್ಷಿದಾಬಾದ್‌ನಲ್ಲಿ ಪರಿಸ್ಥಿತಿ ಸ್ಥಿರವಾಗಿದೆ ಎಂದು ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಗಲಭೆಗಳ ಕುರಿತು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಗೃಹ ಸಚಿವಾಲಯಕ್ಕೆ (MHA) ನೀಡಿರುವ ವರದಿಯ ಬಗ್ಗೆ ಅಥವಾ ರಾಜ್ಯದಲ್ಲಿ 356ನೇ ವಿಧಿಯ ಅನುಷ್ಠಾನದ ಬಗ್ಗೆ ಅವರು ನೀಡಿರುವ ಉಲ್ಲೇಖದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸೋಮವಾರ ಹೇಳಿದ್ದಾರೆ. ಮುರ್ಷಿದಾಬಾದ್ ಹಿಂಸಾಚಾರದ

ಸೋಮವಾರ ಮಧ್ಯಾಹ್ನ ಮುರ್ಷಿದಾಬಾದ್‌ಗೆ ಎರಡು ದಿನಗಳ ಭೇಟಿಗೆ ತೆರಳಿದ್ದ ಮಮತಾ ಬ್ಯಾನರ್ಜಿ, ತಾನು ಮೊದಲೇ ಭೇಟಿ ನೀಡಬಹುದಿತ್ತು, ಆದರೆ ಪರಿಸ್ಥಿತಿ ಸಾಮಾನ್ಯವಾಗುವವರೆಗೆ ಕಾಯಲು ನಿರ್ಧರಿಸಿದದಾಗಿ ಹೇಳಿದ್ದಾರೆ.

“ಬೋಸ್ ಅವರು ಗೃಹ ಸಚಿವಾಲಯಕ್ಕೆ ನೀಡಿರುವ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ರಾಜ್ಯಪಾಲರ ಆರೋಗ್ಯ ಸರಿಯಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ” ಎಂದು ಮುರ್ಷಿದಾಬಾದ್‌ಗೆ ಹೆಲಿಕಾಪ್ಟರ್ ಹತ್ತುವ ಮೊದಲು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ನಾನು ಮೊದಲೇ ಮುರ್ಷಿದಾಬಾದ್‌ಗೆ ಹೋಗಬಹುದಿತ್ತು. ಆದರೆ ಅಲ್ಲಿ ಶಾಂತಿ ಮತ್ತು ಸ್ಥಿರತೆ ಇಲ್ಲದಿದ್ದರೆ, ನಾವು ಹೋಗಿ ತೊಂದರೆ ನೀಡಬಾರದು. ಈ ಹಿಂದೆಯೇ ಮುರ್ಷಿದಾಬಾದ್‌ ಸಹಜತೆಗೆ ಮರಳಿದೆ. ಇಂದು, ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಅವರು ಆ ದಿನದ ನಂತರ ಬೆರ್ಹಾಂಪೋರ್‌ನಲ್ಲಿ ಜಿಲ್ಲಾ ಪರಿಶೀಲನಾ ಸಭೆ ನಡೆಸುವುದಾಗಿ ಹೇಳಿದ್ದಾರೆ. “ನಾಳೆ, ನಾನು ಹಿಂಸಾಚಾರ ಪೀಡಿತ ಧುಲಿಯನ್‌ಗೆ ಭೇಟಿ ನೀಡುತ್ತೇನೆ ಮತ್ತು ಮನೆಗಳು ಮತ್ತು ಅಂಗಡಿಗಳಿಗೆ ಹಾನಿಗೊಳಗಾದ ಜನರಿಗೆ ಪರಿಹಾರ ನೀಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಗಲಭೆಗಳ ಕುರಿತು ಬೋಸ್ ಗೃಹ ಸಚಿವಾಲಯಕ್ಕೆ ವರದಿಯನ್ನು ಕಳುಹಿಸಿದ್ದಾರೆ, “ಮೂಲಭೂತವಾದಿಕರಣ ಮತ್ತು ಉಗ್ರಗಾಮಿತ್ವದ ಅವಳಿ ಭೂತ” ರಾಜ್ಯಕ್ಕೆ ಗಂಭೀರ ಸವಾಲನ್ನು ಒಡ್ಡುತ್ತದೆ ಎಂದು ಉಲ್ಲೇಖಿಸಿದ್ದಾರೆ.

ತಮ್ಮ ವರದಿಯಲ್ಲಿ, ಬಾಂಗ್ಲಾದೇಶದ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ತನಿಖಾ ಆಯೋಗ ಮತ್ತು ಕೇಂದ್ರ ಪಡೆಗಳ ಹೊರಠಾಣೆಗಳನ್ನು ಸ್ಥಾಪಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಅವರು ಸೂಚಿಸಿದ್ದಾರೆ. ಜೊತೆಗೆ “ಹೆಚ್ಚುವರಿಯಾಗಿ ಹೇಳುವ ಅಗತ್ಯವಿಲ್ಲ, ಭಾರತೀಯ ಸಂವಿಧಾನದ 356ನೇ ವಿಧಿಯಡಿಯ ಷರತ್ತುಗಳು ಕೂಡ ಉಳಿದಿವೆ.” ಎಂದು ಅವರು ವರದಿಯಲ್ಲಿ ಬರೆದಿದ್ದಾರೆ. ಸಂವಿಧಾನದ 356 ನೇ ವಿಧಿಯ ಹೇರಿಕೆಯು ಒಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಸೂಚಿಸುತ್ತದೆ.

ಒಬ್ಬ ವ್ಯಕ್ತಿ ಮತ್ತು ಅವರ ಮಗ ಸೇರಿದಂತೆ ಕನಿಷ್ಠ ಮೂರು ಜನರ ಜೀವಗಳನ್ನು ಬಲಿತೆಗೆದುಕೊಂಡ ಮತ್ತು ಹಲವಾರು ಜನರು ಗಾಯಗೊಂಡ ಹಿಂಸಾಚಾರದ ನಂತರ ರಾಜ್ಯಪಾಲರು ಹಲವಾರು ಕ್ರಮಗಳನ್ನು ಸೂಚಿಸಿದ್ದಾರೆ. ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆಗಳ ನಡುವೆ ಈ ಗಲಭೆ ಸಂಭವಿಸಿತ್ತು. ವರದಿಯಲ್ಲಿ, ಗಲಭೆಗಳು “ಪೂರ್ವಯೋಜಿತ” ಎಂದು ತೋರುತ್ತಿದೆ ಮತ್ತು ರಾಜ್ಯ ಸರ್ಕಾರವು “ಮುರ್ಷಿದಾಬಾದ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂಬ ಬಗ್ಗೆ ತಿಳಿದಿತ್ತು” ಎಂದು ರಾಜ್ಯಪಾಲರು ಹೇಳಿದ್ದಾರೆ. ಮುರ್ಷಿದಾಬಾದ್ ಹಿಂಸಾಚಾರದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...