Homeಮುಖಪುಟಮುರ್ಷಿದಾಬಾದ್ ಹಿಂಸಾಚಾರದ ಕುರಿತ ರಾಜ್ಯಪಾಲರ ವರದಿ ನಿರ್ಲಕ್ಷಿಸಿದ ಮಮತಾ ಬ್ಯಾನರ್ಜಿ

ಮುರ್ಷಿದಾಬಾದ್ ಹಿಂಸಾಚಾರದ ಕುರಿತ ರಾಜ್ಯಪಾಲರ ವರದಿ ನಿರ್ಲಕ್ಷಿಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ರಾಜ್ಯದ ಹಿಂಸಾಚಾರ ಪೀಡಿತ ಮುರ್ಷಿದಾಬಾದ್‌ನಲ್ಲಿ ಪರಿಸ್ಥಿತಿ ಸ್ಥಿರವಾಗಿದೆ ಎಂದು ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಗಲಭೆಗಳ ಕುರಿತು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಗೃಹ ಸಚಿವಾಲಯಕ್ಕೆ (MHA) ನೀಡಿರುವ ವರದಿಯ ಬಗ್ಗೆ ಅಥವಾ ರಾಜ್ಯದಲ್ಲಿ 356ನೇ ವಿಧಿಯ ಅನುಷ್ಠಾನದ ಬಗ್ಗೆ ಅವರು ನೀಡಿರುವ ಉಲ್ಲೇಖದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸೋಮವಾರ ಹೇಳಿದ್ದಾರೆ. ಮುರ್ಷಿದಾಬಾದ್ ಹಿಂಸಾಚಾರದ

ಸೋಮವಾರ ಮಧ್ಯಾಹ್ನ ಮುರ್ಷಿದಾಬಾದ್‌ಗೆ ಎರಡು ದಿನಗಳ ಭೇಟಿಗೆ ತೆರಳಿದ್ದ ಮಮತಾ ಬ್ಯಾನರ್ಜಿ, ತಾನು ಮೊದಲೇ ಭೇಟಿ ನೀಡಬಹುದಿತ್ತು, ಆದರೆ ಪರಿಸ್ಥಿತಿ ಸಾಮಾನ್ಯವಾಗುವವರೆಗೆ ಕಾಯಲು ನಿರ್ಧರಿಸಿದದಾಗಿ ಹೇಳಿದ್ದಾರೆ.

“ಬೋಸ್ ಅವರು ಗೃಹ ಸಚಿವಾಲಯಕ್ಕೆ ನೀಡಿರುವ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ರಾಜ್ಯಪಾಲರ ಆರೋಗ್ಯ ಸರಿಯಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ” ಎಂದು ಮುರ್ಷಿದಾಬಾದ್‌ಗೆ ಹೆಲಿಕಾಪ್ಟರ್ ಹತ್ತುವ ಮೊದಲು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ನಾನು ಮೊದಲೇ ಮುರ್ಷಿದಾಬಾದ್‌ಗೆ ಹೋಗಬಹುದಿತ್ತು. ಆದರೆ ಅಲ್ಲಿ ಶಾಂತಿ ಮತ್ತು ಸ್ಥಿರತೆ ಇಲ್ಲದಿದ್ದರೆ, ನಾವು ಹೋಗಿ ತೊಂದರೆ ನೀಡಬಾರದು. ಈ ಹಿಂದೆಯೇ ಮುರ್ಷಿದಾಬಾದ್‌ ಸಹಜತೆಗೆ ಮರಳಿದೆ. ಇಂದು, ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಅವರು ಆ ದಿನದ ನಂತರ ಬೆರ್ಹಾಂಪೋರ್‌ನಲ್ಲಿ ಜಿಲ್ಲಾ ಪರಿಶೀಲನಾ ಸಭೆ ನಡೆಸುವುದಾಗಿ ಹೇಳಿದ್ದಾರೆ. “ನಾಳೆ, ನಾನು ಹಿಂಸಾಚಾರ ಪೀಡಿತ ಧುಲಿಯನ್‌ಗೆ ಭೇಟಿ ನೀಡುತ್ತೇನೆ ಮತ್ತು ಮನೆಗಳು ಮತ್ತು ಅಂಗಡಿಗಳಿಗೆ ಹಾನಿಗೊಳಗಾದ ಜನರಿಗೆ ಪರಿಹಾರ ನೀಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಗಲಭೆಗಳ ಕುರಿತು ಬೋಸ್ ಗೃಹ ಸಚಿವಾಲಯಕ್ಕೆ ವರದಿಯನ್ನು ಕಳುಹಿಸಿದ್ದಾರೆ, “ಮೂಲಭೂತವಾದಿಕರಣ ಮತ್ತು ಉಗ್ರಗಾಮಿತ್ವದ ಅವಳಿ ಭೂತ” ರಾಜ್ಯಕ್ಕೆ ಗಂಭೀರ ಸವಾಲನ್ನು ಒಡ್ಡುತ್ತದೆ ಎಂದು ಉಲ್ಲೇಖಿಸಿದ್ದಾರೆ.

ತಮ್ಮ ವರದಿಯಲ್ಲಿ, ಬಾಂಗ್ಲಾದೇಶದ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ತನಿಖಾ ಆಯೋಗ ಮತ್ತು ಕೇಂದ್ರ ಪಡೆಗಳ ಹೊರಠಾಣೆಗಳನ್ನು ಸ್ಥಾಪಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಅವರು ಸೂಚಿಸಿದ್ದಾರೆ. ಜೊತೆಗೆ “ಹೆಚ್ಚುವರಿಯಾಗಿ ಹೇಳುವ ಅಗತ್ಯವಿಲ್ಲ, ಭಾರತೀಯ ಸಂವಿಧಾನದ 356ನೇ ವಿಧಿಯಡಿಯ ಷರತ್ತುಗಳು ಕೂಡ ಉಳಿದಿವೆ.” ಎಂದು ಅವರು ವರದಿಯಲ್ಲಿ ಬರೆದಿದ್ದಾರೆ. ಸಂವಿಧಾನದ 356 ನೇ ವಿಧಿಯ ಹೇರಿಕೆಯು ಒಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಸೂಚಿಸುತ್ತದೆ.

ಒಬ್ಬ ವ್ಯಕ್ತಿ ಮತ್ತು ಅವರ ಮಗ ಸೇರಿದಂತೆ ಕನಿಷ್ಠ ಮೂರು ಜನರ ಜೀವಗಳನ್ನು ಬಲಿತೆಗೆದುಕೊಂಡ ಮತ್ತು ಹಲವಾರು ಜನರು ಗಾಯಗೊಂಡ ಹಿಂಸಾಚಾರದ ನಂತರ ರಾಜ್ಯಪಾಲರು ಹಲವಾರು ಕ್ರಮಗಳನ್ನು ಸೂಚಿಸಿದ್ದಾರೆ. ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆಗಳ ನಡುವೆ ಈ ಗಲಭೆ ಸಂಭವಿಸಿತ್ತು. ವರದಿಯಲ್ಲಿ, ಗಲಭೆಗಳು “ಪೂರ್ವಯೋಜಿತ” ಎಂದು ತೋರುತ್ತಿದೆ ಮತ್ತು ರಾಜ್ಯ ಸರ್ಕಾರವು “ಮುರ್ಷಿದಾಬಾದ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂಬ ಬಗ್ಗೆ ತಿಳಿದಿತ್ತು” ಎಂದು ರಾಜ್ಯಪಾಲರು ಹೇಳಿದ್ದಾರೆ. ಮುರ್ಷಿದಾಬಾದ್ ಹಿಂಸಾಚಾರದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...