Homeಕರ್ನಾಟಕಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ...

ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಿಸಲು ವಿದ್ಯಾರ್ಥಿನಿಯರನ್ನು ಮಾಜಿ ಶಾಸಕ ಬಸವರಾಜನ್ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಠದ ಪ್ರತಿನಿಧಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ಮಠದ ಆಡಳಿತಾಧಿಕಾರಿ ಬಸರಾಜನ್ ಅವರ ಮೇಲೂ ಅತ್ಯಾಚಾರ ಯತ್ನ ಆರೋಪ ಹೊರಿಸಲಾಗಿದೆ.

ವಿದ್ಯಾರ್ಥಿಗಳನ್ನು ಮುಂದೆ ಬಿಟ್ಟು ದೂರು ಕೊಡಿಸಿ ಮುರುಘ ಶರಣರ ಮೇಲೆ ಬಸವರಾಜನ್ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೈಸೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿಯಾಗಿರುವ ಮಹಿಳಾ ವಾರ್ಡನ್ ನೀಡಿರುವ ದೂರಿನ ಅನ್ವಯ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ತನ್ನನ್ನು ಅತ್ಯಾಚಾರ ಮಾಡಲು ಬಸವರಾಜನ್ ಯತ್ನಿಸಿದ್ದಾರೆಂದು ವಾರ್ಡನ್ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನನ್ನ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾರೆ. ಇದನ್ನು ವಿರೋಧಿಸಿದಾಗ ನಾನು ಮಾಜಿ ಶಾಸಕನಾಗಿದ್ದು, ಮಠ ಹಾಗೂ ವಿದ್ಯಾಪೀಠದ ಅಧಿಕಾರಿಯಾಗಿದ್ದೇನೆ. ಸದರಿ ವಿಚಾರವನ್ನು ಯಾರ ಬಳಿಯಾದರೂ ಹೇಳಿದರೆ, ಜೀವ ತೆಗೆಯುವುದಾಗಿ ಪ್ರಾಣ ಬೆದರಿಕೆ ಹಾಕಿದ್ದಾರೆ. ನಮ್ಮ ಭವಿಷ್ಯದ ಹಿತದೃಷ್ಟಿಯಿಂದ ಯಾರ ಬಳಿಯೂ ಹೇಳಿರುವುದಿಲ್ಲ. ಆ ನಂತರದಲ್ಲಿ ಬಸವರಾಜನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ’ ಎಂದು ತಿಳಿಸಿದ್ದಾರೆ.

ವಾರ್ಡನ್‌ ದೂರಿನಲ್ಲಿ ಏನಿದೆ?

“ಮುರುಘಾ ರಾಜೇಂದ್ರ ಬೃಹನ್ಮಠದ ಆಡಳಿತಾಧಿಕಾರಿಯಾಗಿ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿ ಎಸ್ ಕೆ ಬಸವರಾಜನ್‌ ಕೆಲಸ ನಿರ್ವಹಿಸುತ್ತಿದ್ದರು. ಸ್ವಾಮೀಜಿ ವಿದೇಶ ಪ್ರವಾಸದಲ್ಲಿರುವಾಗ ಜುಲೈ 24ರಂದು ಇಬ್ಬರು ವಿದ್ಯಾರ್ಥಿಗಳು ವಾರ್ಡನ್‌ನಿಂದ ಗೇಟ್ ಪಾಸ್ ಪಡೆದು ವಿದ್ಯಾರ್ಥಿ ನಿಲಯದಿಂದ ಹೊರಗೆ ಹೋಗಿದ್ದರು. ಸದರಿ ವಿದ್ಯಾರ್ಥಿಗಳನ್ನು ಬೆಂಗಳೂರಿನ ಕಾಟನ್‌ ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು 24.07.2022ರ ರಾತ್ರಿ ಸುಮಾರು 12.30 ವೇಳೆಯಲ್ಲಿ ಕರೆ ಮಾಡಿದ್ದರು. ಆಡಳಿತಾಧಿಕಾರಿಯಾದ ಎಸ್.ಕೆ.ಬಸವರಾಜನ್‌ ಮತ್ತು ಸಹಾಯಕ ವ್ಯವಸ್ಥಾಪಕರಾದ ರವಿ ಅವರಿಗೆ ಫೋನ್ ಮಾಡಲಾಗಿತ್ತು.”

ಇದನ್ನೂ ಓದಿರಿ: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಸ್ವಾಮೀಜಿಗಳು: ಇಲ್ಲಿದೆ ಪ್ರಮುಖರ ಪಟ್ಟಿ

“ರವಿ ಅವರು ವಿದ್ಯಾರ್ಥಿಗಳನ್ನು ಕರೆತರಲು ನನ್ನೊಂದಿಗೆ 25.07.22ರಲ್ಲಿ ಠಾಣೆಗೆ ಭೇಟಿ ನೀಡಿದಾಗ ಪೊಲೀಸರು, ‘ಮಠದ ಆಡಳಿತಾಧಿಕಾರಿಯಾದ ಎಸ್.ಕೆ. ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರು ಬೆಳಿಗ್ಗೆ 5 ಗಂಟೆ ವೇಳೆಗೆ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗೆ ಕರೆದುಕೊಂಡು ಹೋಗಿದ್ದಾರೆ’ ಎಂದು ತಿಳಿಸಿದರು. ಎಸ್.ಕೆ.ಬಸವರಾಜನ್ ಮತ್ತು ಸೌಭಾಗ್ಯ ಅವರು ಮಠದ ಸಂಬಂಧಪಟ್ಟವರ ಗಮನಕ್ಕೆ ತಾರದೆ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗೂ ಕರೆತರದೆ, ಅವರ ಪೋಷಕರಿಗೂ ಒಪ್ಪಿಸದೆ 25.07.2022ರ ಬೆಳಿಗ್ಗೆ 5 ಗಂಟೆಯಿಂದ 27.07.2022ರ ಮಧ್ಯಾಹ್ನದವರೆಗೆ ತಮ್ಮ ವಶದಲ್ಲಿಯೇ ಇರಿಸಿಕೊಂಡಿದ್ದರು. ಮಠದ ಘಟನೆಗೆ ಚ್ಯುತಿ ತರಲು ವಿದ್ಯಾರ್ಥಿಗಳನ್ನು ಮತ್ತು ಅವರ ಕುಟುಂಬದವರನ್ನು ಬಳಸಿಕೊಳ್ಳಲಾಗಿದೆ. ಮಠದ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡಲಾಗಿದೆ. ಎಸ್‌ ಕೆ ಬಸವರಾಜನ್ ಅವರು ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳ ಪೋಷಕರ ವಿಳಾಸ, ದೂರವಾಣಿ ಸಂಖ್ಯೆ, ಇತ್ಯಾದಿ ವಿವರಗಳನ್ನು ತಂದುಕೊಂಡುವಂತೆ ನನಗೆ ಆಗಾಗ್ಗೆ ಒತ್ತಾಯಿಸುತ್ತಿದ್ದರು. ಇದಕ್ಕೆ ನಿರಾಕರಿಸಿದ್ದಕ್ಕಾಗಿ ಮಠದ ಭಕ್ತಾದಿಗಳು ಮತ್ತು ಸಾರ್ವಜನಿಕರ ಎದುರು ನಿಂದಿಸಿದ್ದರು. ಆ ನಂತರದಲ್ಲಿ ವಿದ್ಯಾರ್ಥಿಗಳನ್ನು ವಿದ್ಯಾರ್ಥಿನಿಲಯಕ್ಕೆ ಕರೆತರುವ ಎಲ್ಲಾ ಪ್ರಯತ್ನಗಳು  ವಿಫಲವಾದವು.”

“27.07.2022ರಂದು ವಿದ್ಯಾರ್ಥಿಗಳಾರೂ ನಿಲಯದಲ್ಲಿ ಇಲ್ಲದಿರುವ ಸಮಯದಲ್ಲಿ, ಸಂಜೆ ಸುಮಾರು 06 ಗಂಟೆಯಲ್ಲಿ ನನ್ನನ್ನು ವಿದ್ಯಾರ್ಥಿ ನಿಲಯಕ್ಕೆ ಕರೆಯಿಸಿಕೊಂಡು ಬಸವರಾಜನ್‌ ದೌರ್ಜನ್ಯ ಎಸಗಿದ್ದಾರೆ. ಬಸವರಾಜನ್ ರವರ ದುರ್ನಡತೆ ಹಾಗೂ ಇತರೆ ಕಾರಣಕ್ಕಾಗಿ ಮುರುಘಾ ಶರಣರು ಕ್ರಮ ಜರುಗಿದರು. ಬಸವರಾಜನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರು.”

– ಇಷ್ಟು ಮಠದ ವಾರ್ಡನ್ ನೀಡಿರುವ ದೂರಿನ ಸಾರಾಂಶ.

ಮುರುಘಾ ಮಠದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ವಕೀಲ ವಿಶ್ವನಾಥಯ್ಯ, “ಮಾಧ್ಯಮಗಳಲ್ಲಿ ಬಂದ ಸುದ್ದಿಯಿಂದ ಸ್ವಾಮೀಜಿಯರಿಗೆ ನೋವಾಗಿದೆ. ಮಕ್ಕಳು ಮೈಸೂರು ಠಾಣೆಯಲ್ಲಿ ದೂರು ದಾಖಲಿಸಿರುವ ವಿಚಾರ ಗೊತ್ತಾಗಿದೆ. ದೂರಿನ ಪೂರ್ಣ ವಿವರ ನಮಗೆ ಗೊತ್ತಿಲ್ಲ” ಎಂದಿದ್ದಾರೆ.

“ಸ್ವಾಮೀಜಿಯವರಿಗೆ ಬಹಳ ನೋವಾಗಿದ್ದು, ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆದರೆ ಯಾವುದೋ ಮಠದ ವಿರೋಧಿ ಶಕ್ತಿ ಅತಿಯಾಸೆಯಿಂದ ಇಂಥ ಕೆಲಸ ಮಾಡಿಬಹುದು. ಮಕ್ಕಳನ್ನು ದುರ್ಬಳಕೆ ಮಾಡಿಕೊಂಡು ದೂರು ನೀಡಿದ್ದಾರೆ ಎನ್ನಬಹುದು” ಎಂದು ತಿಳಿಸಿದ್ದಾರೆ.

“ಇದರ ಹಿಂದೆ ವಿರೋಧಿ ಶಕ್ತಿಗಳ ಕೈವಾಡ ಇದೆ ಎಂದು ತಿಳಿದು ಬಂದಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಹೆಚ್ಚಿನದಾಗಿ ದೂರಿನ ಅಂಶಗಳು ತಿಳಿದ ಬಳಿಕ ಸ್ವಾಮೀಜಿ ಮಾತನಾಡುತ್ತಾರೆ. ಈ ಕುರಿತು ಕಾನೂನು ಹೋರಾಟ ಮಾಡುತ್ತೇವೆ. ತಪ್ಪು ದೂರು ನೀಡಿದ್ದರೆ ಮುರುಘೇಶ ಅವರಿಗೆ ಬುದ್ದಿ ನೀಡಲಿ. ತಪ್ಪಿನ ಅರಿವಾಗಿ ಅವರು ಕೇಸ್ ವಾಪಸ್ ಪಡೆಯಲಿ. ಎಲ್ಲಾ ಭಕ್ತ ವೃಂದದ ಪರವಾಗಿ ದೇವರಲ್ಲಿ ಪ್ರಾರ್ಥಿಸುವೆ” ಎಂದು ಹೇಳಿದ್ದಾರೆ.

ಚಿತ್ರದುರ್ಗ ವೀರಶೈವ ಮುಖಂಡ ಎಲ್.ಬಿ.ರಾಜಶೇಖರ್ ಪ್ರತಿಕ್ರಿಯಿಸಿ, “ಮಾಧ್ಯಮಗಳಲ್ಲಿ ಬಂದ ವಿಷಯ ಸ್ವಾಮೀಜಿಗಳ ತೇಜೋವಧೆಗೆ ಕಾರಣವಾಗಿದೆ. ಸ್ವಾಮೀಜಿಗಳಿಗೆ ಹಿತಶತ್ರುಗಳಿದ್ದು, ಅವರು ಈ ಕೆಲಸ ಮಾಡುತ್ತಿದ್ದಾರೆ. ಆಡಳಿತಾಧಿಕಾರಿ ಹಾಗೂ ಸ್ವಾಮೀಜಿ ನಡುವೆ ಈ ಮನಸ್ತಾಪ ಉಂಟಾಗಿದೆ. ಆಡಳಿತಾಧಿಕಾರಿಯೇ ಈ ಕೆಲಸ ಮಾಡಿದ್ದಾನೆ” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿ ಎಫ್‌ಐಆರ್‌

“ಮಕ್ಕಳನ್ನು ಕರೆದುಕೊಂಡು ಹೋಗಿ ಮೈಸೂರಿನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುರುಘಾ ಶರಣರು ಸೇರಿ 5 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಇದು ಎರಡು ವರ್ಷದಿಂದ ಷಡ್ಯಂತ್ರ ನಡೆಯುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ, ಏನೇ ಬಂದರು ಎದುರಿಸೋಣ ಎಂದು ಸಲಹಾ ಸಮಿತಿಯಲ್ಲಿ ಹೇಳಿದ್ದಾರೆ. ಆಡಳಿತಾಧಿಕಾರಿಗೆ ಹೆಚ್ಚಿನ ಅಧಿಕಾರ ನೀಡುವ ವಿಚಾರವಾಗಿ ವೈಮನಸ್ಸು ಆಗಿದೆ” ಎಂದು ಆರೋಪಿಸಿದ್ದಾರೆ.

ಮಾಜಿ ನಗರಸಭೆ ಅಧ್ಯಕ್ಷ ಬಿ.ಕಾಂತರಾಜ್ ಮಾತನಾಡಿ, “ಮುರುಘಾ ಮಠದ ವಿಚಾರ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ನಮ್ಮ ರಾಜ್ಯಕ್ಕೆ ಪ್ರಸಿದ್ದವಾದ ಮಠವಿದು. ಸರ್ಕಾರ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಶೀಲನೆ ಮಾಡಬೇಕು. ಮಠಕ್ಕೆ ಕಪ್ಪು ಚುಕ್ಕೆ ಬಾರದ ರೀತಿಯಲ್ಲಿ ತನಿಖೆ ನಡೆಸಬೇಕು. ತೇಜೋವಧೆ ಯಾವ ವಿಚಾರಕ್ಕೆ ಆಗುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಪ್ರಕರಣದೊಳಗೆ ಉತ್ತರಾಧಿಕಾರಿಯನ್ನು ಸೇರಿಸುವ ವಿಚಾರ ಏನಿತ್ತು? ಪರಮಶಿವಯ್ಯ ಅವರನ್ನ ಕೇಸ್‌ನಲ್ಲಿ ಸೇರಿಸುವ ಅಗತ್ಯ ಏನಿತ್ತು? ಮೇಲ್ನೋಟಕ್ಕೆ ಸುಳ್ಳು ಎಂಬುದು ಗೊತ್ತಾಗುತ್ತಿದೆ. ಮಠದ ಮಾನ ಮರ್ಯಾದೆ ಪ್ರಶ್ನೆ ಇದಾಗಿದ್ದು, ಭಕ್ತರ ಮನಸ್ಸಿಗೆ ನೋವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಬಾವಿ ಆರೋಪಿಯನ್ನು ರಕ್ಷಿಸಲು ಏನೇನೋ ಸರ್ಕಸ್ ನಡೆಯುತ್ತಿದೆ. ಬಸವಣ್ಣ ಎರಡು ಮದುವೆ ಆಗಿದ್ದರು. ಬಸವಾನುಯಾಯಿಗಳಾದ ಈ ಮಟಾದೀಶರು ಯಾಕೆ ಮದುವೆಯಾಗದೆ, ಬಲವಂತದ ಬ್ರಾಹ್ಮಚರ್ಯ ಆಚರಿಸುತ್ತಾರೆ? ಈ ಮಟಾದಿಪತಿಗಳು ಸಂಸಾರಿಗಳಾಗುವುದು ಒಳ್ಳೆಯದು. ಇವರ ಬಕ್ತರ ಮಾನವಾದರೂ ಉಳಿಯುತ್ತದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...