Homeಕರ್ನಾಟಕಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ...

ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಿಸಲು ವಿದ್ಯಾರ್ಥಿನಿಯರನ್ನು ಮಾಜಿ ಶಾಸಕ ಬಸವರಾಜನ್ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಠದ ಪ್ರತಿನಿಧಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ಮಠದ ಆಡಳಿತಾಧಿಕಾರಿ ಬಸರಾಜನ್ ಅವರ ಮೇಲೂ ಅತ್ಯಾಚಾರ ಯತ್ನ ಆರೋಪ ಹೊರಿಸಲಾಗಿದೆ.

ವಿದ್ಯಾರ್ಥಿಗಳನ್ನು ಮುಂದೆ ಬಿಟ್ಟು ದೂರು ಕೊಡಿಸಿ ಮುರುಘ ಶರಣರ ಮೇಲೆ ಬಸವರಾಜನ್ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೈಸೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿಯಾಗಿರುವ ಮಹಿಳಾ ವಾರ್ಡನ್ ನೀಡಿರುವ ದೂರಿನ ಅನ್ವಯ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ತನ್ನನ್ನು ಅತ್ಯಾಚಾರ ಮಾಡಲು ಬಸವರಾಜನ್ ಯತ್ನಿಸಿದ್ದಾರೆಂದು ವಾರ್ಡನ್ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನನ್ನ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾರೆ. ಇದನ್ನು ವಿರೋಧಿಸಿದಾಗ ನಾನು ಮಾಜಿ ಶಾಸಕನಾಗಿದ್ದು, ಮಠ ಹಾಗೂ ವಿದ್ಯಾಪೀಠದ ಅಧಿಕಾರಿಯಾಗಿದ್ದೇನೆ. ಸದರಿ ವಿಚಾರವನ್ನು ಯಾರ ಬಳಿಯಾದರೂ ಹೇಳಿದರೆ, ಜೀವ ತೆಗೆಯುವುದಾಗಿ ಪ್ರಾಣ ಬೆದರಿಕೆ ಹಾಕಿದ್ದಾರೆ. ನಮ್ಮ ಭವಿಷ್ಯದ ಹಿತದೃಷ್ಟಿಯಿಂದ ಯಾರ ಬಳಿಯೂ ಹೇಳಿರುವುದಿಲ್ಲ. ಆ ನಂತರದಲ್ಲಿ ಬಸವರಾಜನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ’ ಎಂದು ತಿಳಿಸಿದ್ದಾರೆ.

ವಾರ್ಡನ್‌ ದೂರಿನಲ್ಲಿ ಏನಿದೆ?

“ಮುರುಘಾ ರಾಜೇಂದ್ರ ಬೃಹನ್ಮಠದ ಆಡಳಿತಾಧಿಕಾರಿಯಾಗಿ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿ ಎಸ್ ಕೆ ಬಸವರಾಜನ್‌ ಕೆಲಸ ನಿರ್ವಹಿಸುತ್ತಿದ್ದರು. ಸ್ವಾಮೀಜಿ ವಿದೇಶ ಪ್ರವಾಸದಲ್ಲಿರುವಾಗ ಜುಲೈ 24ರಂದು ಇಬ್ಬರು ವಿದ್ಯಾರ್ಥಿಗಳು ವಾರ್ಡನ್‌ನಿಂದ ಗೇಟ್ ಪಾಸ್ ಪಡೆದು ವಿದ್ಯಾರ್ಥಿ ನಿಲಯದಿಂದ ಹೊರಗೆ ಹೋಗಿದ್ದರು. ಸದರಿ ವಿದ್ಯಾರ್ಥಿಗಳನ್ನು ಬೆಂಗಳೂರಿನ ಕಾಟನ್‌ ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು 24.07.2022ರ ರಾತ್ರಿ ಸುಮಾರು 12.30 ವೇಳೆಯಲ್ಲಿ ಕರೆ ಮಾಡಿದ್ದರು. ಆಡಳಿತಾಧಿಕಾರಿಯಾದ ಎಸ್.ಕೆ.ಬಸವರಾಜನ್‌ ಮತ್ತು ಸಹಾಯಕ ವ್ಯವಸ್ಥಾಪಕರಾದ ರವಿ ಅವರಿಗೆ ಫೋನ್ ಮಾಡಲಾಗಿತ್ತು.”

ಇದನ್ನೂ ಓದಿರಿ: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಸ್ವಾಮೀಜಿಗಳು: ಇಲ್ಲಿದೆ ಪ್ರಮುಖರ ಪಟ್ಟಿ

“ರವಿ ಅವರು ವಿದ್ಯಾರ್ಥಿಗಳನ್ನು ಕರೆತರಲು ನನ್ನೊಂದಿಗೆ 25.07.22ರಲ್ಲಿ ಠಾಣೆಗೆ ಭೇಟಿ ನೀಡಿದಾಗ ಪೊಲೀಸರು, ‘ಮಠದ ಆಡಳಿತಾಧಿಕಾರಿಯಾದ ಎಸ್.ಕೆ. ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರು ಬೆಳಿಗ್ಗೆ 5 ಗಂಟೆ ವೇಳೆಗೆ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗೆ ಕರೆದುಕೊಂಡು ಹೋಗಿದ್ದಾರೆ’ ಎಂದು ತಿಳಿಸಿದರು. ಎಸ್.ಕೆ.ಬಸವರಾಜನ್ ಮತ್ತು ಸೌಭಾಗ್ಯ ಅವರು ಮಠದ ಸಂಬಂಧಪಟ್ಟವರ ಗಮನಕ್ಕೆ ತಾರದೆ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗೂ ಕರೆತರದೆ, ಅವರ ಪೋಷಕರಿಗೂ ಒಪ್ಪಿಸದೆ 25.07.2022ರ ಬೆಳಿಗ್ಗೆ 5 ಗಂಟೆಯಿಂದ 27.07.2022ರ ಮಧ್ಯಾಹ್ನದವರೆಗೆ ತಮ್ಮ ವಶದಲ್ಲಿಯೇ ಇರಿಸಿಕೊಂಡಿದ್ದರು. ಮಠದ ಘಟನೆಗೆ ಚ್ಯುತಿ ತರಲು ವಿದ್ಯಾರ್ಥಿಗಳನ್ನು ಮತ್ತು ಅವರ ಕುಟುಂಬದವರನ್ನು ಬಳಸಿಕೊಳ್ಳಲಾಗಿದೆ. ಮಠದ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡಲಾಗಿದೆ. ಎಸ್‌ ಕೆ ಬಸವರಾಜನ್ ಅವರು ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳ ಪೋಷಕರ ವಿಳಾಸ, ದೂರವಾಣಿ ಸಂಖ್ಯೆ, ಇತ್ಯಾದಿ ವಿವರಗಳನ್ನು ತಂದುಕೊಂಡುವಂತೆ ನನಗೆ ಆಗಾಗ್ಗೆ ಒತ್ತಾಯಿಸುತ್ತಿದ್ದರು. ಇದಕ್ಕೆ ನಿರಾಕರಿಸಿದ್ದಕ್ಕಾಗಿ ಮಠದ ಭಕ್ತಾದಿಗಳು ಮತ್ತು ಸಾರ್ವಜನಿಕರ ಎದುರು ನಿಂದಿಸಿದ್ದರು. ಆ ನಂತರದಲ್ಲಿ ವಿದ್ಯಾರ್ಥಿಗಳನ್ನು ವಿದ್ಯಾರ್ಥಿನಿಲಯಕ್ಕೆ ಕರೆತರುವ ಎಲ್ಲಾ ಪ್ರಯತ್ನಗಳು  ವಿಫಲವಾದವು.”

“27.07.2022ರಂದು ವಿದ್ಯಾರ್ಥಿಗಳಾರೂ ನಿಲಯದಲ್ಲಿ ಇಲ್ಲದಿರುವ ಸಮಯದಲ್ಲಿ, ಸಂಜೆ ಸುಮಾರು 06 ಗಂಟೆಯಲ್ಲಿ ನನ್ನನ್ನು ವಿದ್ಯಾರ್ಥಿ ನಿಲಯಕ್ಕೆ ಕರೆಯಿಸಿಕೊಂಡು ಬಸವರಾಜನ್‌ ದೌರ್ಜನ್ಯ ಎಸಗಿದ್ದಾರೆ. ಬಸವರಾಜನ್ ರವರ ದುರ್ನಡತೆ ಹಾಗೂ ಇತರೆ ಕಾರಣಕ್ಕಾಗಿ ಮುರುಘಾ ಶರಣರು ಕ್ರಮ ಜರುಗಿದರು. ಬಸವರಾಜನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರು.”

– ಇಷ್ಟು ಮಠದ ವಾರ್ಡನ್ ನೀಡಿರುವ ದೂರಿನ ಸಾರಾಂಶ.

ಮುರುಘಾ ಮಠದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ವಕೀಲ ವಿಶ್ವನಾಥಯ್ಯ, “ಮಾಧ್ಯಮಗಳಲ್ಲಿ ಬಂದ ಸುದ್ದಿಯಿಂದ ಸ್ವಾಮೀಜಿಯರಿಗೆ ನೋವಾಗಿದೆ. ಮಕ್ಕಳು ಮೈಸೂರು ಠಾಣೆಯಲ್ಲಿ ದೂರು ದಾಖಲಿಸಿರುವ ವಿಚಾರ ಗೊತ್ತಾಗಿದೆ. ದೂರಿನ ಪೂರ್ಣ ವಿವರ ನಮಗೆ ಗೊತ್ತಿಲ್ಲ” ಎಂದಿದ್ದಾರೆ.

“ಸ್ವಾಮೀಜಿಯವರಿಗೆ ಬಹಳ ನೋವಾಗಿದ್ದು, ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆದರೆ ಯಾವುದೋ ಮಠದ ವಿರೋಧಿ ಶಕ್ತಿ ಅತಿಯಾಸೆಯಿಂದ ಇಂಥ ಕೆಲಸ ಮಾಡಿಬಹುದು. ಮಕ್ಕಳನ್ನು ದುರ್ಬಳಕೆ ಮಾಡಿಕೊಂಡು ದೂರು ನೀಡಿದ್ದಾರೆ ಎನ್ನಬಹುದು” ಎಂದು ತಿಳಿಸಿದ್ದಾರೆ.

“ಇದರ ಹಿಂದೆ ವಿರೋಧಿ ಶಕ್ತಿಗಳ ಕೈವಾಡ ಇದೆ ಎಂದು ತಿಳಿದು ಬಂದಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಹೆಚ್ಚಿನದಾಗಿ ದೂರಿನ ಅಂಶಗಳು ತಿಳಿದ ಬಳಿಕ ಸ್ವಾಮೀಜಿ ಮಾತನಾಡುತ್ತಾರೆ. ಈ ಕುರಿತು ಕಾನೂನು ಹೋರಾಟ ಮಾಡುತ್ತೇವೆ. ತಪ್ಪು ದೂರು ನೀಡಿದ್ದರೆ ಮುರುಘೇಶ ಅವರಿಗೆ ಬುದ್ದಿ ನೀಡಲಿ. ತಪ್ಪಿನ ಅರಿವಾಗಿ ಅವರು ಕೇಸ್ ವಾಪಸ್ ಪಡೆಯಲಿ. ಎಲ್ಲಾ ಭಕ್ತ ವೃಂದದ ಪರವಾಗಿ ದೇವರಲ್ಲಿ ಪ್ರಾರ್ಥಿಸುವೆ” ಎಂದು ಹೇಳಿದ್ದಾರೆ.

ಚಿತ್ರದುರ್ಗ ವೀರಶೈವ ಮುಖಂಡ ಎಲ್.ಬಿ.ರಾಜಶೇಖರ್ ಪ್ರತಿಕ್ರಿಯಿಸಿ, “ಮಾಧ್ಯಮಗಳಲ್ಲಿ ಬಂದ ವಿಷಯ ಸ್ವಾಮೀಜಿಗಳ ತೇಜೋವಧೆಗೆ ಕಾರಣವಾಗಿದೆ. ಸ್ವಾಮೀಜಿಗಳಿಗೆ ಹಿತಶತ್ರುಗಳಿದ್ದು, ಅವರು ಈ ಕೆಲಸ ಮಾಡುತ್ತಿದ್ದಾರೆ. ಆಡಳಿತಾಧಿಕಾರಿ ಹಾಗೂ ಸ್ವಾಮೀಜಿ ನಡುವೆ ಈ ಮನಸ್ತಾಪ ಉಂಟಾಗಿದೆ. ಆಡಳಿತಾಧಿಕಾರಿಯೇ ಈ ಕೆಲಸ ಮಾಡಿದ್ದಾನೆ” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿ ಎಫ್‌ಐಆರ್‌

“ಮಕ್ಕಳನ್ನು ಕರೆದುಕೊಂಡು ಹೋಗಿ ಮೈಸೂರಿನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುರುಘಾ ಶರಣರು ಸೇರಿ 5 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಇದು ಎರಡು ವರ್ಷದಿಂದ ಷಡ್ಯಂತ್ರ ನಡೆಯುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ, ಏನೇ ಬಂದರು ಎದುರಿಸೋಣ ಎಂದು ಸಲಹಾ ಸಮಿತಿಯಲ್ಲಿ ಹೇಳಿದ್ದಾರೆ. ಆಡಳಿತಾಧಿಕಾರಿಗೆ ಹೆಚ್ಚಿನ ಅಧಿಕಾರ ನೀಡುವ ವಿಚಾರವಾಗಿ ವೈಮನಸ್ಸು ಆಗಿದೆ” ಎಂದು ಆರೋಪಿಸಿದ್ದಾರೆ.

ಮಾಜಿ ನಗರಸಭೆ ಅಧ್ಯಕ್ಷ ಬಿ.ಕಾಂತರಾಜ್ ಮಾತನಾಡಿ, “ಮುರುಘಾ ಮಠದ ವಿಚಾರ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ನಮ್ಮ ರಾಜ್ಯಕ್ಕೆ ಪ್ರಸಿದ್ದವಾದ ಮಠವಿದು. ಸರ್ಕಾರ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಶೀಲನೆ ಮಾಡಬೇಕು. ಮಠಕ್ಕೆ ಕಪ್ಪು ಚುಕ್ಕೆ ಬಾರದ ರೀತಿಯಲ್ಲಿ ತನಿಖೆ ನಡೆಸಬೇಕು. ತೇಜೋವಧೆ ಯಾವ ವಿಚಾರಕ್ಕೆ ಆಗುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಪ್ರಕರಣದೊಳಗೆ ಉತ್ತರಾಧಿಕಾರಿಯನ್ನು ಸೇರಿಸುವ ವಿಚಾರ ಏನಿತ್ತು? ಪರಮಶಿವಯ್ಯ ಅವರನ್ನ ಕೇಸ್‌ನಲ್ಲಿ ಸೇರಿಸುವ ಅಗತ್ಯ ಏನಿತ್ತು? ಮೇಲ್ನೋಟಕ್ಕೆ ಸುಳ್ಳು ಎಂಬುದು ಗೊತ್ತಾಗುತ್ತಿದೆ. ಮಠದ ಮಾನ ಮರ್ಯಾದೆ ಪ್ರಶ್ನೆ ಇದಾಗಿದ್ದು, ಭಕ್ತರ ಮನಸ್ಸಿಗೆ ನೋವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಬಾವಿ ಆರೋಪಿಯನ್ನು ರಕ್ಷಿಸಲು ಏನೇನೋ ಸರ್ಕಸ್ ನಡೆಯುತ್ತಿದೆ. ಬಸವಣ್ಣ ಎರಡು ಮದುವೆ ಆಗಿದ್ದರು. ಬಸವಾನುಯಾಯಿಗಳಾದ ಈ ಮಟಾದೀಶರು ಯಾಕೆ ಮದುವೆಯಾಗದೆ, ಬಲವಂತದ ಬ್ರಾಹ್ಮಚರ್ಯ ಆಚರಿಸುತ್ತಾರೆ? ಈ ಮಟಾದಿಪತಿಗಳು ಸಂಸಾರಿಗಳಾಗುವುದು ಒಳ್ಳೆಯದು. ಇವರ ಬಕ್ತರ ಮಾನವಾದರೂ ಉಳಿಯುತ್ತದೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...