Homeಕರ್ನಾಟಕಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

ಅತ್ಯಾಚಾರ ಪ್ರಕರಣವೊಂದರಲ್ಲಿ ಮುರುಘಾ ಮಠದ ಅಧಿಕಾರಿಗಳ ವಿರುದ್ಧ ಮಹಿಳೆಯೊಬ್ಬರು ಎಫ್‌ಐಆರ್ ದಾಖಲಿಸಿದ್ದರು. ಈ ಕುರಿತು ತನಿಖಾ ವರದಿ ಮಾಡಿರುವ ಮಹಂತೇಶ್, ಈ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ದಾಖಲೆಗಳ ಸಮೇತ ಒದಗಿಸಿದ್ದರು.

- Advertisement -
- Advertisement -

ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿಯ ಭಾವಚಿತ್ರವನ್ನು ಸುದ್ದಿಯೊಂದರಲ್ಲಿ ಬಳಸಿದ್ದಕ್ಕಾಗಿ ಖ್ಯಾತ ಮತ್ತು ಸಂವೇದನಾಶೀಲ ಪತ್ರಕರ್ತ ಮತ್ತು ದಿ ಫೈಲ್‌ನ ಮುಖ್ಯಸ್ಥ ಜಿ ಮಹಂತೇಶ್ ವಿರುದ್ಧ ದೂರು ನೀಡಲಾಗಿದ್ದು, ಎಫ್‌ಐಆರ್ ದಾಖಲಾಗಿದೆ.

ಅತ್ಯಾಚಾರ ಪ್ರಕರಣವೊಂದರಲ್ಲಿ ಮುರುಘಾ ಮಠದ ಅಧಿಕಾರಿಯೊಬ್ಬರ ವಿರುದ್ಧ ಮಹಿಳೆಯೊಬ್ಬರು ಎಫ್‌ಐಆರ್ ದಾಖಲಿಸಿದ್ದರು. ಈ ಕುರಿತು ತನಿಖಾ ವರದಿ ಮಾಡಿರುವ ಮಹಂತೇಶ್, ಈ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ದಾಖಲೆಗಳ ಸಮೇತ ಒದಗಿಸಿದ್ದರು.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಮಹಂತೇಶ್, “ಈ ಪ್ರಕರಣದಲ್ಲಿ ಮುರುಘಾ ಶರಣರ ಭಾವಚಿತ್ರ ಬಳಸಿರುವುದಕ್ಕೆ ನಾನು ಸ್ಪಷ್ಟನೆ ನೀಡುತ್ತೇನೆ. ಈ ಅತ್ಯಾಚಾರ ಪ್ರಕರಣದಲ್ಲಿ ಮಠದ ಆಡಳಿತಾಧಿಕಾರಿ ಸೇರಿದಂತೆ ಇತರೆ 3 ಅಧಿಕಾರಿಗಳ ಹೆಸರಿದೆ. ಜೊತೆಗೆ ಈ ವಿಷಯ ಮುರುಘಾ ಶರಣರಿಗೆ ಗೊತ್ತಿದೆ ಎಂದು ಅತ್ಯಾಚಾರ ಸಂತ್ರಸ್ತೆಯು ದೂರಿನಲ್ಲಿ ತಿಳಿಸಿದ್ದಾರೆ. ಒಂದು ಮಠದ ಉನ್ನತ ಅಧಿಕಾರಿ ಮಠಾಧೀಶರೇ ಆಗಿರುತ್ತಾರೆ. ಹಾಗಾಗಿ ಸಾಂಕೇತಿಕವಾಗಿ ಮುರುಘಾ ಶರಣರ ಭಾವಚಿತ್ರವನ್ನು ಬಳಸಿದ್ದೇನೆ. ಇಷ್ಟಕ್ಕೆ ಮಠದವರು ನನ್ನ ವಿರುದ್ಧ ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಾಗಿದೆ” ಎಂದು ಹೇಳಿದರು.

ಮಹಾಂತೇಶ್ ವಿರುದ್ಧ ದಾಖಲಾಗಿರುವ ಎಫ್‌ಐಆರ್

ಇನ್ನು ಈ ಪ್ರಕರಣ ದಾಖಲಾದ ನಂತರ, ಮುರುಘಾ ಶರಣರು ಪತ್ರಿಕಾ ಘೋಷ್ಠಿ ನಡೆಸಿ, “ಮುರುಘಾ ಮಠವನ್ನು ರಕ್ತಸಂಬಂಧಗಳಿಂದ ಮುಕ್ತಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ. ಹಾಗಾಗಿ 10 ಅಧಿಕಾರಿಗಳಿಂದ ರಾಜೀನಾಮೆ ಪಡೆಯಲಾಗಿದೆ” ಎಂದು ಹೇಳಿದ್ದರು. ಈ ಏಕಮುಖ ಪತ್ರಿಕಾ ಗೋಷ್ಠಿಯಲ್ಲಿ ಶರಣರು ಬಹುತೇಕ ಗೊಂದಲಗಳನ್ನು ಉಳಿಸಿದ್ದಾರೆ ಎಂದು ಮತ್ತೊಂದು ವರದಿ ಮಾಡಿದ್ದೆ. ಜೊತೆಗೆ, ಇತ್ತೀಚೆಗೆ ಮಠದ ಆಸ್ತಿ ಮತ್ತು ಹಣ ದುರುಪಯೋಗ ಆಗಿದೆ ಎಂದು ಶರಣರಿಗೆ ಕೋರ್ಟ್ ನೋಟಿಸ್ ನೀಡಿತ್ತು. ಅದನ್ನೂ ವರದಿ ಮಾಡಿದ್ದೆ. ಇದಕ್ಕೆ ನೊಂದುಕೊಂಡ ಮಠ, ನನ್ನನ್ನು ನಿಗೂಢ ವ್ಯಕ್ತಿ ಎಂದು ಕರೆದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ ಎಂದು ಮಹಂತೇಶ್ ವಿವರಿಸಿದರು.

 

ಮಠ ಹೊರಡಿಸಿರುವ ಪತ್ರಿಕಾ ಹೇಳಿಕೆ

ನಾನು ಮಾಡಿರುವ ಪ್ರತಿ ವರದಿಗೂ ದಾಖಲೆಗಳಿವೆ. ಹಾಗಾಗಿ ಮಠದ ಈ ಕ್ರಮದ ವಿರುದ್ಧ ದೆಹಲಿಯಲ್ಲಿರುವ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ಲಿಖಿತ ದೂರು ನೀಡಿದ್ದೇನೆ. ಬೆಂಗಳೂರಿನಲ್ಲಿರುವ ಪತ್ರಕರ್ತರ ಸಂಘಕ್ಕೂ ದೂರು ನೀಡುತ್ತೇನೆ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: 1856ರಲ್ಲೇ ಸಮಾನತೆಯ ಪ್ರಶ್ನೆ ಎತ್ತಿದ್ದ ಧಾರವಾಡದ ಎರ್‍ಲೂ ಬಿನ್ ನಾರಾಯಣ್

ಘಟನೆಯ ಹಿನ್ನೆಲೆ ಏನು?

ವರದಿ- 1

ಫೆಬ್ರವರಿ 6ರಂದು ಮಹಂತೇಶ್, “ಅತ್ಯಾಚಾರ ಆರೋಪ; ಮುರುಘಾ ಶರಣರ ಸೋದರನಿಗೆ ಜಾಮೀನು ನೀಡಲು ಕೋರ್ಟ್ ನಕಾರ” ಎನ್ನುವ ವರದಿ ಮಾಡಿದ್ದರು. 32 ವರ್ಷದ ಉಪನ್ಯಾಸಕಿಯೊಬ್ಬರನ್ನು ಮುರುಘಾ ಶರಣರ ಪೂರ್ವಾಶ್ರಮದ ಖಾಸಾ ಸಹೋದರ ಮತ್ತು ಮಠದ ಸಿಇಒ (ಆಡಳಿತಾಧಿಕಾರಿ) ಎಂ.ಜಿ ದೊರೆಸ್ವಾಮಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಎಫ್‌ಐಆರ್ ದಾಖಲಾಗಿದೆ (ಈಗ ಈ ಎಫ್‌ಐಆರ್ ಅನ್ನು ಯಾರಿಗೂ ಕಾಣದಂತೆ ವೆಬ್‌ಸೈಟ್‌ನಿಂದ ಮರೆಮಾಚಲಾಗಿದೆ. ಇದು ಕಾನೂನು ಬಾಹಿರ). ಹಾಗಾಗಿ ದೊರೆಸ್ವಾಮಿಯವರು ಜಾಮೀನಿಗಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ ಎಂದು ಮಹಂತೇಶ್ ವರದಿ ಮಾಡಿದ್ದರು. ಇದರಲ್ಲಿ ಜಾಮೀನು ನಿರಾಕರಣೆ ಮಾಡಿರುವ ದಾಖಲೆ ಮತ್ತು ಸಂತ್ರಸ್ತ ಮಹಿಳೆ ನೀಡಿರುವ ದೂರಿನ ದಾಖಲೆಯನ್ನೂ ಒದಗಿಸಿದ್ದರು.

ಅದರಲ್ಲಿ ಶ್ರೀ ಜಗದ್ಗುರು ಮುರುಘಾ ರಾಜೇಂದ್ರ ಮಠದ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ ಪರಮಶಿವಯ್ಯ, ಮಠದ ಕಾನೂನು ಸಲಹೆಗಾರರಾದ ಎನ್‌.ಗಂಗಾಧರ್ ಮತ್ತು ಸ್ಥಳೀಯ ಜಂಗಮ ಸಮಾಜದ ಅದ್ಯಕ್ಷ ಎಂ.ಟಿ ಮಲ್ಲಿಕಾರ್ಜುನ ಅವರ ಹೆಸರುಗಳು ಉಲ್ಲೇಖವಾಗಿದೆ. ಸಂತ್ರಸ್ತೆಗೆ ಜೀವ ಬೆದರಿಕೆ ನೀಡಿದ ಆರೋಪ ಈ ಮೂರು ಜನರ ಮೇಲಿದೆ ಎಂಬುದು ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಜೊತೆಗೆ ದೂರಿನ ಕೊನೆಯಲ್ಲಿ ಈ ಘಟನೆಯನ್ನು ಮುರುಘಾ ಶರಣರ ಗಮನಕ್ಕೂ ತಂದಿರುತ್ತೇನೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ.

ಈ ವರದಿಯ ವಿರುದ್ಧ ಮಹಂತೇಶ್‌ ಅವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಕಾರಣ, ಇದರಲ್ಲಿ ಶರಣರ ಭಾವಚಿತ್ರ ಬಳಸಲಾಗಿದೆ ಎಂಬುದೇ ಆಗಿದೆ. ಈ ಸುದ್ದಿಯನ್ನು ಸಂಪೂರ್ಣವಾಗಿ ಓದಲು ಇಲ್ಲಿ ಕ್ಲಿಕ್ ಮಾಡಿ.

ವರದಿ- 2

ಫೆಬ್ರವರಿ 16 ರಂದು, “ಸೋದರ ದೊರೆಸ್ವಾಮಿ ವಿರುದ್ಧ ಅತ್ಯಾಚಾರ ಆರೋಪ; ಕಡೆಗೂ ಬಾಯ್ಬಿಟ್ಟ ಶರಣರು” ಎಂದು ಮತ್ತೊಂದು ವರದಿ ಮಾಡಿದ್ದರು. ಇದರಲ್ಲಿ, ಶರಣರು ಫೆ. 15 ರಂದು ಮಠದಲ್ಲಿ ನಡೆಸಿದ ತುರ್ತು ಪತ್ರಿಕಾ ಗೋಷ್ಠಿಯ ಬಗ್ಗೆ ಮಹಂತೇಶ್‌ ಬರೆದಿದ್ದಾರೆ. ಕೇವಲ 4 ನಿಮಿಷಗಳ ಪತ್ರಿಕಾ ಗೋಷ್ಠಿಯಲ್ಲಿ ಶರಣರು, “ಮಠವನ್ನು ರಕ್ತಸಂಬಂಧದಿಂದ ಮುಕ್ತಗೊಳಿಸಲು ನಿರ್ಣಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಠದ ಗೌರವ ಮತ್ತು ಘನತೆಯನ್ನು ಕಾಪಾಡುವ ಸಲುವಾಗಿ 10 ಅಧಿಕಾರಿಗಳಿಂದ ರಾಜೀನಾಮೆ ಪಡೆಯಲಾಗಿದೆ” ಎಂದು ಹೇಳಿದ್ದರು.

ಮುಂದುವರಿದು, ಈ ಮಠ ಒಂದು ಐತಿಹಾಸಿಕ ಮಠವಾಗಿ ಬೆಳೆದು ನಿಂತಿದೆ. ಒಂದು ಸಂಸ್ಥೆ ಎಂದಮೇಲೆ ಅಲ್ಲಿ ಸಾವಿರಾರು ಜನ ಕೆಲಸ ಮಾಡುತ್ತಿರುತ್ತಾರೆ. ಅವರಲ್ಲಿ ಭಿನ್ನತೆಯೂ ಇರುತ್ತದೆ. ಯಾರು ತಮ್ಮ ಮಿತಿಮೀರಿ ವರ್ತಿಸುತ್ತಾರೋ ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಈಗಾಗಲೇ ಅವರಿಂದ ರಾಜೀನಾಮೆ ಪಡೆಯಲಾಗಿದೆ ಎಂದು ಹೇಳಿದ ಶರಣರು ಪತ್ರಿಕಾಗೋ‍ಷ್ಠಿಯನ್ನು ಮುಗಿಸಿದ್ದರು ಎಂಬುದಾಗಿ ಮಹಂತೇಶ್ ವರದಿಯಲ್ಲಿ ಹೇಳಿದ್ದಾರೆ. ಶರಣರ ಪತ್ರಿಕಾ ಗೋಷ್ಠಿಯ ನಂತರವೂ ಕೇಳದೇ ಉಳಿದಿದ್ದ ಕೆಲವು ಪ್ರಶ್ನೆಗಳನ್ನೂ ಸಹ ಮಹಂತೇಶ್ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಜೊತೆಗೆ ಶರಣರ ಕೌಟುಂಬಿಕ ವಿವರದಿಂದ ಹಿಡಿದು, ಪ್ರಸ್ತುತ ಆರೋಪಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ವರದಿಯಲ್ಲಿ ಒದಗಿಸಿದ್ದಾರೆ. ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವರದಿ- 3

ಫೆಬ್ರವರಿ 24 ರಂದು, “ಹಣ-ಆಸ್ತಿ ದುರುಪಯೋಗ ಆರೋಪ; ಮುರುಘಾ ಶರಣರಿಗೆ ಹೈಕೋರ್ಟ್ ತುರ್ತು ನೋಟಿಸ್” ಎನ್ನುವ ಮತ್ತೊಂದು ವರದಿಯನ್ನು ಮಹಂತೇಶ್ ಮಾಡಿದ್ದರು. ಈ ವರದಿಯಲ್ಲಿ, “ಮಠದ ಆಸ್ತಿ-ಹಣವನ್ನು ಮಠಾಧೀಶರಾದ ಮುರುಘಾ ಶರಣರು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರುದಾರರೊಬ್ಬರು ಅರ್ಜಿ ಸಲ್ಲಿಸಿದ್ದರು. ಜೊತೆಗೆ ಶರಣರು ಮಠದ ಸಂಪ್ರದಾಯ ಹಾಗೂ ಧಾರ್ಮಿಕ ಕ್ರಿಯೆಗಳ ಅನೂಚಾನ ಪಾಲನೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು” ಎಂದು ಮಹಂತೇಶ್ ದಾಖಲೆ ಸಮೇತ ತಿಳಿಸಿದ್ದರು.

ಈ ಮೇಲಿನ ಮೂರೂ ವರದಿಗಳು ಮಠದ ಮತ್ತು ಶರಣರ ವಿರುದ್ಧ ಇರುವುದರಿಂದ ಮಹಂತೇಶ್ ಅವರನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ಹಲವರು ಖಂಡನೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮಹಂತೇಶ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ಪತ್ರಕರ್ತ ದಿನೇಶ್ ಕುಮಾರ್ ಅವರು, “ಪತ್ರಕರ್ತ ಜಿ.ಮಹಂತೇಶ್ ಅವರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಕಳೆದ ಎರಡು ದಶಕಗಳಿಂದ ಮಹಂತೇಶ್ ಹಲವು ಪತ್ರಿಕೆ, ವಾಹಿನಿಗಳಲ್ಲಿ ಕೆಲಸ ಮಾಡಿದವರು. ‘ದಿ ಫೈಲ್’ ಎಂಬ ನ್ಯೂಸ್ ಪೋರ್ಟಲ್ ಮೂಲಕ ತನಿಖಾ ಪತ್ರಿಕೋದ್ಯಮದ ಹೊಸ ರೂಪವನ್ನು ಬಿಡಿಸಿಟ್ಟವರು. ಮಹಂತೇಶ್ ಏನನ್ನೇ ಬರೆದರೂ ದಾಖಲೆ ಇಟ್ಟುಕೊಂಡೇ, ಜವಾಬ್ದಾರಿಯುತವಾಗಿಯೇ, ಬರೆಯುತ್ತಾರೆ. ದಿ ಫೈಲ್ ಕೋವಿಡ್ ಕಾಲದ ನೂರೆಂಟು ಹಗರಣಗಳನ್ನು ಬಯಲಿಗೆಳೆದಿದ್ದನ್ನು ನಾವು ಗಮನಿಸಿದ್ದೇವೆ. ದಿ ಫೈಲ್ ವರದಿಗಳು ವಿಧಾನಮಂಡಲ ಅಧಿವೇಶದಲ್ಲೂ ಸದ್ದು ಮಾಡಿದವು. ಈಗ ಮುರುಘಾ ಮಠದ ಶರಣರ ಪೂರ್ವಾಶ್ರಮದ ಸೋದರ ಮತ್ತು ಮಠದ ಅಧಿಕಾರಿ ಮೇಲೆ ದಾಖಲಾಗಿರುವ ಅತ್ಯಾಚಾರ ಪ್ರಕರಣ ಸಂಬಂಧದ ವರದಿಯಲ್ಲಿ ಶರಣರ ಫೊಟೋ ಬಳಸಿದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಇದು ನ್ಯಾಯೋಚಿತವಲ್ಲ. ಶರಣರನ್ನು ಅಪಾರವಾಗಿ ಗೌರವಿಸುವ ನನ್ನಂಥವರಿಗೆ ಇದು ಆಘಾತಕಾರಿ ವಿಷಯ. ನಿಷ್ಠುರ ಪತ್ರಿಕಾವೃತ್ತಿ ನಡೆಸುವವರ ಮೇಲೆ ಪೊಲೀಸರ ಮೂಲಕ ಕೇಸು ದಾಖಲಿಸಿ ಅವರ ಧ್ವನಿ ಹತ್ತಿಕ್ಕುತ್ತ ಹೋದರೆ, ನಾವು ಸಮಾಜದ ಧ್ವನಿಯನ್ನೇ ಕಿತ್ತುಕೊಂಡಂತಾಗುತ್ತದೆ. ಈ ದುರಿತ ಕಾಲದಲ್ಲಿ ಸತ್ಯಕ್ಕಾಗಿ, ನ್ಯಾಯಕ್ಕಾಗಿ, ಬಡವರ ಪರವಾಗಿ ಬಡಿದಾಡುವ ಒಂದೊಂದು ಧ್ವನಿಯೂ ಮುಖ್ಯ. ಯಾವುದನ್ನೂ ನಾವು ಕಳೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಶರಣರಿಗೆ ನಿಕಟವಾಗಿರುವವರು ಕೂಡಲೇ ಅವರೊಂದಿಗೆ ಮಾತನಾಡಿ ಇದನ್ನೆಲ್ಲ ನಿಲ್ಲಿಸಲು ಆಗ್ರಹಿಸಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿಯ ಮುಖಂಡರಾದ ರವಿಕೃಷ್ಣ ರೆಡ್ಡಿಯವರು, “ತಮ್ಮ (ಮುರುಘಾ ಮಠ) ಸಂಸ್ಥೆಯ ಮಾಜಿ ಸಿಬ್ಬಂದಿ ಮೂಲಕ ನೀಡಿರುವ ದೂರನ್ನು ಹಿಂಪಡೆಯಲು ತಾವು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ಪ್ರಾಮಾಣಿಕ ಪತ್ರಕರ್ತರ ಧ್ವನಿ ಅಡಗಿಸುವ ಕೆಲಸ ತಮ್ಮ ಸಂಸ್ಥೆಯ ಯಾರಿಂದಲೂ ಆಗಲು ನ್ಯಾಯಪಕ್ಷಪಾತಿಗಳಾದ ತಾವು ಬಿಡಬಾರದು ಎಂದು ತಮ್ಮಲ್ಲಿ ವಿನಮ್ರತೆಯಿಂದ ಕೋರುತ್ತೇನೆ. ಶ್ರೀಮಠದ ಮತ್ತು ತಮ್ಮ ಜನಪರ ಕಾಳಜಿಯ ಬಗ್ಗೆ ಅಪಾರ ಗೌರವ ಇರುವ ನಮ್ಮಂತಹವರಿಗೆ ತಮ್ಮ ಸಂಸ್ಥೆಯ ಕೆಲವರ ಕೃತ್ಯಗಳಿಂದಾಗಿ ಟೀಕೆ, ಧರಣಿ, ಪ್ರತಿಭಟನೆ ಮಾಡಿ ನ್ಯಾಯ ಪಡೆದುಕೊಳ್ಳಬೇಕಾಗಿ ಬರುವಂತಹ ಪರಿಸ್ಥಿತಿ ಸೃಷ್ಟಿಸಬಾರದಾಗಿ ಕೈಮುಗಿದು ವಿನಂತಿಸುತ್ತೇನೆ” ಎಂದು ಎಫ್‌ಐಆರ್ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಜೊತೆಗೆ ಇನ್ನೂ ಹತ್ತಾರು ಜನ ಪತ್ರಕರ್ತ ಮಹಂತೇಶ್ ಪರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಮಹಂತೇಶ್ ಅವರ ಮೇಲೆ ಮಠ ತೆಗೆದುಕೊಂಡಿರುವ ಕ್ರಮಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಖಂಡನೆ

ಒಬ್ಬ ಪ್ರಾಮಾಣಿಕ ಪತ್ರಕರ್ತನ ದನಿಯನ್ನು ಅಡಗಿಸಲು ಪ್ರಯತ್ನಿಸುವುದು ನಿಜಕ್ಕೂ ಖಂಡನೀಯ. ಹಾಗಾಗಿ ಪ್ರಜ್ಞಾವಂತರು ಇದರ ವಿರುದ್ಧ ಮಾತನಾಡಲೇ ಬೇಕು. ಇಲ್ಲದಿದ್ದರೆ ಇದೇ ಪರಿಸ್ಥಿತಿ ಸಾಂಕ್ರಾಮಿಕದಂತೆ ಹರಡುವುದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಏನಿವು ಮೂರು ಕೃಷಿ ಕಾಯಿದೆಗಳು – ಮರು ಓದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....