Homeಕರ್ನಾಟಕಮುರುಘಾ ಶರಣರ ಪ್ರಕರಣ: ಒಡನಾಡಿಗೆ ಬೆದರಿಕೆ; ರಕ್ಷಣೆಗಾಗಿ ಪೊಲೀಸ್ ಮೊರೆಹೋದ ಸಂಸ್ಥೆ

ಮುರುಘಾ ಶರಣರ ಪ್ರಕರಣ: ಒಡನಾಡಿಗೆ ಬೆದರಿಕೆ; ರಕ್ಷಣೆಗಾಗಿ ಪೊಲೀಸ್ ಮೊರೆಹೋದ ಸಂಸ್ಥೆ

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಲು ಪ್ರಮುಖ ಪಾತ್ರವಹಿಸಿದ ಒಡನಾಡಿ ಸಂಸ್ಥೆ ಹಾಗೂ ಅದರ ಮುಖ್ಯಸ್ಥರಿಗೆ ಬೆದರಿಕೆ ಕರೆಗಳು ಬರುತ್ತಿದ್ದು, ಈ ಕುರಿತು ಮೈಸೂರಿನಲ್ಲಿ ದೂರು ದಾಖಲಾಗಿದೆ.

“ನಮಗೆ ಮತ್ತು ಒಡನಾಡಿ ಸಂಸ್ಥೆಗೆ ಪೊಲೀಸ್‌ ರಕ್ಷಣೆ ನೀಡಬೇಕು” ಎಂದು ಕೋರಿ ಒಡನಾಡಿ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿಯವರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

“ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನಡೆಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಪ್ರಮುಖ ಆರೋಪಿ ಮುರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುರುಘಾ ಸ್ವಾಮೀಜಿಯ ಅನುಯಾಯಿಗಳು ಮತ್ತು ಮಠದ ಪರವಾಗಿರುವ ಕೆಲವು ಹಿತಾಸಕ್ತಿಗಳು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಹಾಗೂ ಹಾಗೂ ಪರಶು ಅವರಿಗೆ ಜೀವ ಬೆದರಿಕೆಗಳನ್ನು ಒಡ್ಡುತ್ತಿದ್ದಾರೆ. ಹಲವಾರು ಕರೆಗಳ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಾಗಾಗಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಹಾಗೂ ಪರುಶರಾಮ್‌ ರವರಿಗೆ ಗನ್ ಮ್ಯಾನ್ ಹಾಗೂ ನಮ್ಮ ಕುಟುಂಬಗಳಿಗೂ ರಕ್ಷಣೆಯನ್ನು ಒದಗಿಸಿಕೊಡಬೇಕಾಗಿ ಕೇಳಿಕೊಳ್ಳುತ್ತೇವೆ. ಅಲ್ಲದೇ ಒಡನಾಡಿಯ ಮಡಿಲು ಸಂಸ್ಥೆಯು ಹೆಣ್ಣು ಮಕ್ಕಳ ಪುನರ್ ವಸತಿ ಕೇಂದ್ರವಾಗಿದ್ದು, ಹೆಣ್ಣು ಮಕ್ಕಳೇ ಇರುವ ಸಂಸ್ಥೆಯಾದ್ದರಿಂದ ಸಂಸ್ಥೆಯ ಎಲ್ಲಾ ಮಕ್ಕಳಿಗೂ ಸಿಬ್ಬಂದಿಗೂ ರಕ್ಷಣೆಯ ಅವಶ್ಯಕತೆ ಇರುತ್ತದೆ. ಹಾಗಾಗಿ ಪೊಲೀಸ್ ರಕ್ಷಣೆಯ ವ್ಯವಸ್ಥೆಯ ಸೌಲಭ್ಯವನ್ನು ತಕ್ಷಣ ಕಲ್ಪಿಸಬೇಕು” ಎಂದು ಅವರು ಕೋರಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ್ದ ಸ್ಟ್ಯಾನ್ಲಿ, “ಈ ಪ್ರತಿಭಟನೆಯಲ್ಲಿ ನಾವು ಮಾಡಿದ್ದಾದರೂ ತಪ್ಪೇನಿದೆ? ಸ್ಥಳೀಯವಾಗಿ ನ್ಯಾಯ ಸಿಗದ ಕಾರಣ ನಮ್ಮ ಸಂಸ್ಥೆಯನ್ನು ಹುಡುಕಿಕೊಂಡು ಅನೇಕ ಸಂತ್ರಸ್ತರು ಬರುತ್ತಾರೆ. ಅಧಿಕಾರದ ಬಲದಿಂದ, ಧರ್ಮದ ಬಲದಿಂದ ಪ್ರಕರಣವನ್ನು ಮುಚ್ಚಿಹಾಕುತ್ತಾರೆ. ಈ ರೀತಿಯ ಹೇಸಿಗೆ ಕೆಲಸವನ್ನು ಒಡನಾಡಿ ಎಂದಿಗೂ ಮಾಡಿಲ್ಲ, ಮಾಡುವುದಿಲ್ಲ” ಎಂದಿದ್ದರು.

“ಎದೆಯಲ್ಲಿ ಕಿಚ್ಚು ಇಟ್ಟುಕೊಂಡು ಈ ಸಂಸ್ಥೆಯನ್ನು ಕಟ್ಟಿದ್ದೇವೆ. ನಾನಾಗಲೀ ಪರಶುವಾಗಲೀ ಮಕ್ಕಳಿಗೆ ಮಾನವೀಯ ಧರ್ಮವನ್ನು ಕಲಿಸುತ್ತಿದ್ದೇವೆ. ಮಕ್ಕಳ ಘನತೆಯ ಜೀವನವನ್ನು ಎತ್ತಿಹಿಡಿಯುತ್ತಿದ್ದೇವೆ. ಇದು ಇಂದು ನಿನ್ನೆಯ ಕೆಲಸವಲ್ಲ. ಒಡನಾಡಿಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುವವರಿಗೆ ಇದು ತಿಳಿಯಲಿ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

“ಸಂಸ್ಥೆಯನ್ನು ಯಾಕೆ ಟಾರ್ಗೆಟ್ ಮಾಡುತ್ತಿದ್ದೀರಿ? ನಿಮ್ಮ ಉದ್ದೇಶವೇನು? ನಮ್ಮ ಬಳಿ ಬಂದು ಮಕ್ಕಳು ನೋವು ಹೇಳಿಕೊಂಡಿದ್ದು ತಪ್ಪಾ? ಅವರ ಸಮಸ್ಯೆಗೆ ನಾವು ಕಿವಿಕೊಟ್ಟಿದ್ದು ತಪ್ಪಾ? ಅವರ ಸಮಸ್ಯೆಗಳನ್ನು ಗ್ರಹಿಸಿದ್ದು ತಪ್ಪಾ? ಅವರ ಸಮಲೋಚನೆ ಮಾಡಿ ಸ್ಥಿತಿಯನ್ನು ತಿಳಿದುಕೊಂಡಿದ್ದು ತಪ್ಪಾ? ಬಳಿಕ ಕಾನೂನು ಬದ್ಧವಾಗಿ ಪ್ರಕರಣವನ್ನು ಮಕ್ಕಳ ಕಲ್ಯಾಣ ಸಮಿತಿಗೆ ವರ್ಗಾಯಿಸಿದ್ದು ತಪ್ಪಾ?” ಎಂದು ಪ್ರಶ್ನಿಸಿದ್ದಾರೆ.

“ಆ ನಂತರದಲ್ಲಿ ಎಲ್ಲರೂ ಅವರವರ ಕೆಲಸವನ್ನು ಸರಿಯಾಗಿ ಮಾಡಿದ್ದರೆ ನಾವು ಹೆಚ್ಚು ಮುಂದೆ ಬರಬೇಕಾದ ಅವಶ್ಯಕತೆ ಇರಲಿಲ್ಲ. ಏನಪ್ಪಾ ಮಾಡೋಣ ಅಂತ ಪೊಲೀಸರು ಕೂಡ ಹುಬ್ಬೇರಿಸುತ್ತಾ ಕೂತಿದ್ದಾರೆ. ಏನಪ್ಪ ಮಾಡೋಣ ಅಂದರೆ ಹೇಗೆ? ಎಲ್ಲರ ವಿಚಾರದಲ್ಲಿ ಏನನ್ನು ಮಾಡಿದ್ದೀರೋ ಅದನ್ನೇ ಈ ಪ್ರಕರಣದಲ್ಲಿಯೂ ಮಾಡಿರಿ. ಇಲ್ಲಿ ಒಬ್ಬರಿಗೊಂದು ಕಾನೂನು, ಇನ್ನೊಬ್ಬರಿಗೊಂದು ಕಾನೂನು ಇಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...