Homeಕರ್ನಾಟಕಮುರುಘಾ ಶರಣರ ಪ್ರಕರಣ: ಒಡನಾಡಿಗೆ ಬೆದರಿಕೆ; ರಕ್ಷಣೆಗಾಗಿ ಪೊಲೀಸ್ ಮೊರೆಹೋದ ಸಂಸ್ಥೆ

ಮುರುಘಾ ಶರಣರ ಪ್ರಕರಣ: ಒಡನಾಡಿಗೆ ಬೆದರಿಕೆ; ರಕ್ಷಣೆಗಾಗಿ ಪೊಲೀಸ್ ಮೊರೆಹೋದ ಸಂಸ್ಥೆ

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಲು ಪ್ರಮುಖ ಪಾತ್ರವಹಿಸಿದ ಒಡನಾಡಿ ಸಂಸ್ಥೆ ಹಾಗೂ ಅದರ ಮುಖ್ಯಸ್ಥರಿಗೆ ಬೆದರಿಕೆ ಕರೆಗಳು ಬರುತ್ತಿದ್ದು, ಈ ಕುರಿತು ಮೈಸೂರಿನಲ್ಲಿ ದೂರು ದಾಖಲಾಗಿದೆ.

“ನಮಗೆ ಮತ್ತು ಒಡನಾಡಿ ಸಂಸ್ಥೆಗೆ ಪೊಲೀಸ್‌ ರಕ್ಷಣೆ ನೀಡಬೇಕು” ಎಂದು ಕೋರಿ ಒಡನಾಡಿ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿಯವರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

“ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನಡೆಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಪ್ರಮುಖ ಆರೋಪಿ ಮುರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುರುಘಾ ಸ್ವಾಮೀಜಿಯ ಅನುಯಾಯಿಗಳು ಮತ್ತು ಮಠದ ಪರವಾಗಿರುವ ಕೆಲವು ಹಿತಾಸಕ್ತಿಗಳು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಹಾಗೂ ಹಾಗೂ ಪರಶು ಅವರಿಗೆ ಜೀವ ಬೆದರಿಕೆಗಳನ್ನು ಒಡ್ಡುತ್ತಿದ್ದಾರೆ. ಹಲವಾರು ಕರೆಗಳ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಾಗಾಗಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಹಾಗೂ ಪರುಶರಾಮ್‌ ರವರಿಗೆ ಗನ್ ಮ್ಯಾನ್ ಹಾಗೂ ನಮ್ಮ ಕುಟುಂಬಗಳಿಗೂ ರಕ್ಷಣೆಯನ್ನು ಒದಗಿಸಿಕೊಡಬೇಕಾಗಿ ಕೇಳಿಕೊಳ್ಳುತ್ತೇವೆ. ಅಲ್ಲದೇ ಒಡನಾಡಿಯ ಮಡಿಲು ಸಂಸ್ಥೆಯು ಹೆಣ್ಣು ಮಕ್ಕಳ ಪುನರ್ ವಸತಿ ಕೇಂದ್ರವಾಗಿದ್ದು, ಹೆಣ್ಣು ಮಕ್ಕಳೇ ಇರುವ ಸಂಸ್ಥೆಯಾದ್ದರಿಂದ ಸಂಸ್ಥೆಯ ಎಲ್ಲಾ ಮಕ್ಕಳಿಗೂ ಸಿಬ್ಬಂದಿಗೂ ರಕ್ಷಣೆಯ ಅವಶ್ಯಕತೆ ಇರುತ್ತದೆ. ಹಾಗಾಗಿ ಪೊಲೀಸ್ ರಕ್ಷಣೆಯ ವ್ಯವಸ್ಥೆಯ ಸೌಲಭ್ಯವನ್ನು ತಕ್ಷಣ ಕಲ್ಪಿಸಬೇಕು” ಎಂದು ಅವರು ಕೋರಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ್ದ ಸ್ಟ್ಯಾನ್ಲಿ, “ಈ ಪ್ರತಿಭಟನೆಯಲ್ಲಿ ನಾವು ಮಾಡಿದ್ದಾದರೂ ತಪ್ಪೇನಿದೆ? ಸ್ಥಳೀಯವಾಗಿ ನ್ಯಾಯ ಸಿಗದ ಕಾರಣ ನಮ್ಮ ಸಂಸ್ಥೆಯನ್ನು ಹುಡುಕಿಕೊಂಡು ಅನೇಕ ಸಂತ್ರಸ್ತರು ಬರುತ್ತಾರೆ. ಅಧಿಕಾರದ ಬಲದಿಂದ, ಧರ್ಮದ ಬಲದಿಂದ ಪ್ರಕರಣವನ್ನು ಮುಚ್ಚಿಹಾಕುತ್ತಾರೆ. ಈ ರೀತಿಯ ಹೇಸಿಗೆ ಕೆಲಸವನ್ನು ಒಡನಾಡಿ ಎಂದಿಗೂ ಮಾಡಿಲ್ಲ, ಮಾಡುವುದಿಲ್ಲ” ಎಂದಿದ್ದರು.

“ಎದೆಯಲ್ಲಿ ಕಿಚ್ಚು ಇಟ್ಟುಕೊಂಡು ಈ ಸಂಸ್ಥೆಯನ್ನು ಕಟ್ಟಿದ್ದೇವೆ. ನಾನಾಗಲೀ ಪರಶುವಾಗಲೀ ಮಕ್ಕಳಿಗೆ ಮಾನವೀಯ ಧರ್ಮವನ್ನು ಕಲಿಸುತ್ತಿದ್ದೇವೆ. ಮಕ್ಕಳ ಘನತೆಯ ಜೀವನವನ್ನು ಎತ್ತಿಹಿಡಿಯುತ್ತಿದ್ದೇವೆ. ಇದು ಇಂದು ನಿನ್ನೆಯ ಕೆಲಸವಲ್ಲ. ಒಡನಾಡಿಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುವವರಿಗೆ ಇದು ತಿಳಿಯಲಿ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

“ಸಂಸ್ಥೆಯನ್ನು ಯಾಕೆ ಟಾರ್ಗೆಟ್ ಮಾಡುತ್ತಿದ್ದೀರಿ? ನಿಮ್ಮ ಉದ್ದೇಶವೇನು? ನಮ್ಮ ಬಳಿ ಬಂದು ಮಕ್ಕಳು ನೋವು ಹೇಳಿಕೊಂಡಿದ್ದು ತಪ್ಪಾ? ಅವರ ಸಮಸ್ಯೆಗೆ ನಾವು ಕಿವಿಕೊಟ್ಟಿದ್ದು ತಪ್ಪಾ? ಅವರ ಸಮಸ್ಯೆಗಳನ್ನು ಗ್ರಹಿಸಿದ್ದು ತಪ್ಪಾ? ಅವರ ಸಮಲೋಚನೆ ಮಾಡಿ ಸ್ಥಿತಿಯನ್ನು ತಿಳಿದುಕೊಂಡಿದ್ದು ತಪ್ಪಾ? ಬಳಿಕ ಕಾನೂನು ಬದ್ಧವಾಗಿ ಪ್ರಕರಣವನ್ನು ಮಕ್ಕಳ ಕಲ್ಯಾಣ ಸಮಿತಿಗೆ ವರ್ಗಾಯಿಸಿದ್ದು ತಪ್ಪಾ?” ಎಂದು ಪ್ರಶ್ನಿಸಿದ್ದಾರೆ.

“ಆ ನಂತರದಲ್ಲಿ ಎಲ್ಲರೂ ಅವರವರ ಕೆಲಸವನ್ನು ಸರಿಯಾಗಿ ಮಾಡಿದ್ದರೆ ನಾವು ಹೆಚ್ಚು ಮುಂದೆ ಬರಬೇಕಾದ ಅವಶ್ಯಕತೆ ಇರಲಿಲ್ಲ. ಏನಪ್ಪಾ ಮಾಡೋಣ ಅಂತ ಪೊಲೀಸರು ಕೂಡ ಹುಬ್ಬೇರಿಸುತ್ತಾ ಕೂತಿದ್ದಾರೆ. ಏನಪ್ಪ ಮಾಡೋಣ ಅಂದರೆ ಹೇಗೆ? ಎಲ್ಲರ ವಿಚಾರದಲ್ಲಿ ಏನನ್ನು ಮಾಡಿದ್ದೀರೋ ಅದನ್ನೇ ಈ ಪ್ರಕರಣದಲ್ಲಿಯೂ ಮಾಡಿರಿ. ಇಲ್ಲಿ ಒಬ್ಬರಿಗೊಂದು ಕಾನೂನು, ಇನ್ನೊಬ್ಬರಿಗೊಂದು ಕಾನೂನು ಇಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...