Homeಕರ್ನಾಟಕಮುರುಘಾ ಶರಣರ ಪ್ರಕರಣ: ‘ಮಕ್ಕಳ ಮೇಲೆ ಸಂಭೋಗವಾಗಿಲ್ಲ’ ಎಂದಿರುವ ವೈದ್ಯಕೀಯ ವರದಿಯ ಅಸಲಿಯತ್ತೇನು?

ಮುರುಘಾ ಶರಣರ ಪ್ರಕರಣ: ‘ಮಕ್ಕಳ ಮೇಲೆ ಸಂಭೋಗವಾಗಿಲ್ಲ’ ಎಂದಿರುವ ವೈದ್ಯಕೀಯ ವರದಿಯ ಅಸಲಿಯತ್ತೇನು?

- Advertisement -
- Advertisement -

“ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ವೈದ್ಯಕೀಯ ಪರೀಕ್ಷೆ ವರದಿಯಲ್ಲಿ ಯಾವುದೇ ಸಂಭೋಗ ನಡೆದಿಲ್ಲ ಎಂದು ಉಲ್ಲೇಖಿಸಲಾಗಿದೆ” ಎಂದು ವರದಿಯಾಗಿದೆ.

ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 27ರಂದು ಮುರುಘಾ ಮಠಾಧೀಶರ ವಿರುದ್ಧ ದಾಖಲಾದ ಮೊದಲ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು ಪರೀಕ್ಷೆ ನಡೆಸಿದ್ದರು. ಅದನ್ನು ಆಧರಿಸಿ ‘ಡೆಕ್ಕನ್‌ ಹೆರಾಲ್ಡ್‌’ ವರದಿ ಮಾಡಿದೆ.

ವರದಿಯಲ್ಲಿ ಉಲ್ಲೇಖಿಸಿರುವಂತೆ, “ಒಬ್ಬ ಬಾಲಕಿಯನ್ನು ಆಗಸ್ಟ್ 28, 2022ರಂದು ಮತ್ತು ಇನ್ನೊಬ್ಬ ಬಾಲಕಿಯನ್ನು ಸೆಪ್ಟೆಂಬರ್ 29, 2022ರಂದು ಪರೀಕ್ಷಿಸಲಾಗಿದೆ.”

ಇಬ್ಬರು ಬಾಲಕಿಯರನ್ನು ಪರೀಕ್ಷಿಸಿದ ವೈದ್ಯಕೀಯ ಅಧಿಕಾರಿ, “ಬಾಲಕಿಯ ಕನ್ಯಾ ಪೊರೆ (hymen) ಹಾಗೆಯೇ ಇದೆ” ಎಂದು ತೀರ್ಮಾನಿಸಿದ್ದಾರೆ. ಆದರೆ, ವೈದ್ಯಕೀಯ ಪರೀಕ್ಷೆಗೆ ಒಳಗಾಗುವ ಮೊದಲು ಬಾಲಕಿಯರು ಸಮಲೋಚಕರಿಗೆ, “ಸಂಭೋಗ ನಡೆದಿರುವುದಾಗಿ ಮಾಹಿತಿ ನೀಡಿದ್ದಾರೆ” ಎಂದು ಉಲ್ಲೇಖಿಸಲಾಗಿದೆ. ಆದರೆ ಕನ್ನಡದ ಕೆಲವು ಮಾಧ್ಯಮಗಳು ವರದಿ ಮಾಡುತ್ತಾ, “ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌ ಸಿಕ್ಕಿದೆ, ಮರುಘಾ ಶರಣರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ” ಎಂದೆಲ್ಲ ಬಣ್ಣಿಸಿವೆ.

ಮರುಘಾ ಮಠಾಧೀಶರ ಪ್ರಕರಣ ಹೊರಬರುವಲ್ಲಿ ಪ್ರಮುಖ ಪಾತ್ರ ವಹಿಸಿದವರಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯೂ ಒಂದು. ಈ ವರದಿಗಳ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಒಡನಾಡಿಯ ಕೆ.ವಿ.ಸ್ಟ್ಯಾನ್ಲಿ ಅವರು ಹೇಳಿದ್ದೇ ಬೇರೆ!

“ಇದು ತುಂಬಾ ಬಾಲಿಷವಾದ ಸಂಗತಿ. ಈ ವರದಿಯನ್ನು 2022ರ ಆಗಸ್ಟ್‌ನಲ್ಲಿಯೇ ಸ್ಥಳೀಯ ವೈದ್ಯರು ಸಲ್ಲಿಸಿದ್ದರು. ಇದು ಹೊಸದಾದ ವರದಿಯಲ್ಲ” ಎಂದು ಸ್ಪಷ್ಟಪಡಿಸಿದ ಅವರು, “ಪ್ರಕರಣಕ್ಕೆ ಸಂಬಂಧಿಸಿದಂತೆ ‌ಎಫ್ಎ‌ಸ್‌ಎಲ್‌ ವರದಿ ಹುಬ್ಬಳ್ಳಿಯಿಂದ ಇನ್ನೂ ಬಂದಿಲ್ಲ. ಸ್ಥಳೀಯ ವೈದ್ಯಾಧಿಕಾರಿಗಳ ವರದಿಗೆ ಯಾವುದೇ ಮಾನ್ಯತೆ ಇಲ್ಲ” ಎಂದರು.

“ಈ ರೀತಿಯ ವರದಿ ಹೊರಬಿದ್ದಿರುವ ಕಾರಣವನ್ನು ತಿಳಿದುಕೊಳ್ಳಬೇಕಾಗಿದೆ. ಪೋಕ್ಸೋ ಪ್ರಕರಣಗಳಲ್ಲಿ ಜಾಮೀನು ಸಿಗುವುದು ಕಷ್ಟ. ಆರೋಪಿಯನ್ನು ಅಪರಾಧಿ ಎಂದೇ ಪರಿಗಣಿಸಿ ನ್ಯಾಯಾಲಯ ಜೈಲಿಗೆ ಕಳಿಸಿರುತ್ತದೆ. ಮುರುಘಾ ಮಠಾಧೀಶರಿಗೆ ಜಾಮೀನು ದೊರಕಿಸಲು ಶತಾಯಗತಾಯ ಪ್ರಯತ್ನಗಳನ್ನು ಆರೋಪಿಗಳ ಪರವಾಗಿರುವವರು ಮಾಡುತ್ತಿದ್ದಾರೆ” ಎಂದು ವಿವರಿಸಿದರು.

“ಜಾಮೀನು ಸಿಗಬೇಕಾದರೆ ಇರುವ ಒಂದೇ ಒಂದು ಮಾರ್ಗವೆಂದರೆ ಸಂದೇಹಗಳನ್ನು ಸೃಷ್ಟಿಸುವುದಾಗಿದೆ. ಯಾವುದೇ ಸಂದೇಹಗಳಿಲ್ಲದಿದ್ದರೆ ನ್ಯಾಯಾಧೀಶರು ಜಾಮೀನು ನೀಡುವುದಿಲ್ಲ. ಮಠಾಧೀಶರ ಪರವಾಗಿ ಕೆಲವು ತಜ್ಞರು ಕೆಲಸ ಮಾಡುತ್ತಿದ್ದಾರೆ. ತಮ್ಮ ತಂತ್ರಗಾರಿಕೆಯನ್ನು ಅವರು ಮಾಡುತ್ತಲೇ ಇದ್ದಾರೆ. ಅದರ ಭಾಗವಾಗಿಯೇ ನಮ್ಮ ಮೇಲೆ ಸುಳ್ಳು ಪ್ರಕರಣ ಹಾಕಿದ್ದರು. ಗೊಂದಲ ಸೃಷ್ಟಿಸುವ ತಂತ್ರಗಾರಿಕೆ ಇದಾಗಿತ್ತು. ಈಗ ವೈದ್ಯಕೀಯ ವರದಿಯ ಮೂಲಕ ಗೊಂದಲವೊಂದನ್ನು ಹರಿಬಿಡಲಾಗಿದೆ” ಎಂದು ಅಭಿಪ್ರಾಯಪಟ್ಟರು.

“ಈಗ ಹರಿದಾಡಿರುವ ವರದಿ ಮಾನ್ಯತೆಯನ್ನು ಪಡೆದದ್ದಲ್ಲ. ಎಫ್ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿ ಬರಬೇಕಿದೆ. ಪೋಕ್ಸೋ ಕಾನೂನು, ವೈದ್ಯಕೀಯ ಪರೀಕ್ಷೆ ವರದಿಯನ್ನು ಪ್ರಮುಖವಾಗಿ ಪರಿಗಣಿಸಲ್ಲ. ಮಕ್ಕಳ ಹೇಳಿಕೆಯನ್ನಷ್ಟೇ ಪ್ರಮುಖವಾಗಿ ಪರಿಗಣಿಸುತ್ತದೆ. ವೈದ್ಯಕೀಯ ವರದಿ ಸೇರಿದಂತೆ ಉಳಿದೆಲ್ಲ ಸಾಕ್ಷಿಗಳು ಹೆಚ್ಚುವರಿ ಸಾಕ್ಷಿಯಾಗಿ ಉಳಿಯುತ್ತವೆ. ಇದರ ಜೊತೆಗೆ ಘನ ನ್ಯಾಯಾಲಯ ಕೂಡ ಮಾನವೀಯವಾದ ಒಳಗಣ್ಣಿನಿಂದ ಗಮನಿಸುತ್ತಿರುತ್ತದೆ ಎಂಬುದನ್ನು ನಮ್ಮ ಅನುಭವದಲ್ಲಿ ಕಂಡುಕೊಂಡಿದ್ದೇವೆ. ಆರೋಪಿ ಮುರುಘಾ ಶರಣರಿಗೆ ಹೃದಯಾಘಾತವಾಗಿದೆ ಎಂದು ಇದೇ ಜಿಲ್ಲಾ ಆರೋಗ್ಯಾಧಿಕಾರಿ ಆರಂಭದಲ್ಲಿ ಹೇಳಿದ್ದರು. ಹೇರ್‌ಲಿಫ್ಟ್‌ ಮಾಡದಿದ್ದರೆ ಶರಣರು ಬದುಕುಳಿಯುವುದಿಲ್ಲ ಎಂದೆಲ್ಲ ಹಬ್ಬಿಸಲಾಗಿತ್ತು. ಆದರೆ ಅವರು ಆರೋಗ್ಯವಾಗಿಯೇ ಇದ್ದರು. ನ್ಯಾಯಾಧೀಶರಾದ ಕೋಮಲಾ ಅವರು ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸಿ, ‘ಏನೇ ಆಗಲಿ, ಮುರುಘಾ ಶರಣರನ್ನು ಕೋರ್ಟ್‌ಗೆ ಕರೆತನ್ನಿ’ ಎಂದು ಸೂಚಿಸಿದ್ದರು. ಮುರುಘಾ ಶರಣರ ಹೃದಯ ಚೆನ್ನಾಗಿಯೇ ಕೆಲಸ ಮಾಡುತ್ತಿತ್ತು. ವೈದ್ಯಕೀಯ ವರದಿಗಳು ತಿರುಚಲ್ಪಡುತ್ತವೆ ಎಂಬುದಕ್ಕೆ ಇದು ಸೂಕ್ತ ಉದಾಹರಣೆ” ಎಂದು ಹೇಳಿದರು.

“ವೈದ್ಯಕೀಯ ವ್ಯವಸ್ಥೆ ಭ್ರಷ್ಟಾಚಾರ ಮುಕ್ತವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಆರೋಪಿಗಳನ್ನು ರಕ್ಷಿಸಲು ಮಾಡಿದ ಪ್ರಯತ್ನಗಳನ್ನು ನಾವು ನೋಡಿದ್ದೇವೆ. ಈಗ ಹರಿದಾಡುತ್ತಿರುವ ವರದಿಯು ಮಾನ್ಯತೆಯನ್ನು ಪಡೆದುಕೊಂಡಿಲ್ಲ. ಸಂತ್ರಸ್ತ ಮಕ್ಕಳಿಗೆ ನ್ಯಾಯವನ್ನು ನಮ್ಮ ನ್ಯಾಯ ವ್ಯವಸ್ಥೆ ದೊರಕಿಸಿಕೊಡುತ್ತದೆ ಎಂಬ ಭರವಸೆ ನಮಗಿದೆ” ಎಂದರು.

“ಮಗುವಿನ hymen ಹಾಗೆ ಇರಬೇಕೆಂಬ ನಿಯಮವೇನೂ ಇಲ್ಲ. ಮಗುವಿನ ಗುಪ್ತಾಂಗವನ್ನು ಸ್ಪರ್ಶಿಸಿದರೂ ಅದು ಅತ್ಯಾಚಾರವಾಗುತ್ತದೆ. ಒಂದು ಮಗು ಅತ್ಯಾಚಾರಕ್ಕೆ ಒಳಗಾಗಿರಬೇಕು ಎಂದರೆ hymen ಇಲ್ಲವಾಗಿರಬೇಕು ಎಂದು ನಾವು ನಿರೀಕ್ಷಿಸಬೇಕಾ? ನ್ಯಾಯ ಕೊಡಿಸಬೇಕೆಂದರೆ ಮಗು ಕೊಲೆಯಾಗಿಬೇಕೆಂದು ನಿರೀಕ್ಷಿಸಬೇಕಾ?” ಎಂದು ಪ್ರಶ್ನಿಸಿದ ಅವರು, “ಸದ್ಯ ಮಗು ಬದುಕಿ ಬಂದಿದೆಯಲ್ಲ ಎಂದು ಯೋಚಿಸಬೇಕಿತ್ತಲ್ಲವೇ? ಮಗು ಹೀಗೆಯೇ ಗಾಯಗೊಂಡಿರಬೇಕು ಎಂದು ಭಾವಿಸುವುದು ಕ್ರೂರ ಸಮಾಜದ ಪ್ರತೀಕವಾಗುತ್ತದೆ. ಮಗುವಿನ ಘನತೆಗೆ ಸಂಬಂಧಿಸಿದಂತೆ ಈ ರೀತಿಯ ಮಾತುಕತೆಗಳು ನಡೆಯಬಾರದು. ಮಗುವಿನ ಹೇಳಿಕೆಯನ್ನು ಅವಮಾನಿಸುವ, ಅನುಮಾನಿಸುವ ಪ್ರವೃತ್ತಿ ಅಮಾನಯವೀಯವಾದದ್ದು. ಯಾರನ್ನೋ ರಕ್ಷಿಸುವುದಕ್ಕಾಗಿ ಅಮಾಯಕ ಮಕ್ಕಳನ್ನು ಅವಮಾನಿಸುವ, ಅನುಮಾನಿಸುವುದನ್ನು ಮಾಡಬಾರದು” ಎಂದು ಆಶಿಸಿದರು.

ಒಂದು ಪೋಕ್ಸೋ ಪ್ರಕರಣ ಅಷ್ಟೇ ಅಲ್ಲ

ಮುರುಘಾ ಮಠದಲ್ಲಿ ಕೆಲಸ ಮಾಡುವ ಸೇವಕಿಯೊಬ್ಬರು ಶಿವಮೂರ್ತಿ ಶರಣರ ವಿರುದ್ಧ ಎರಡನೇ ಪ್ರಕರಣವನ್ನು ದಾಖಲಿಸಿದ್ದಾರೆ. ಮಠಾಧೀಶರು ತಮ್ಮ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೊದಲ ಪ್ರಕರಣದಲ್ಲಿನ ಸಂತ್ರಸ್ತ ಬಾಲಕಿಯರಲ್ಲಿ ಒಬ್ಬರು ದಲಿತ ಸಮುದಾಯಕ್ಕೆ ಸೇರಿರುವುದರಿಂದ ಪೋಕ್ಸೋ ಕಾಯ್ದೆ ಸೇರಿದಂತೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲೂ ಮುರುಘಾ ಮಠಾಧೀಶರ ವಿರುದ್ಧ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಪ್ರಕರಣಗಳಲ್ಲಿ ಕನಿಷ್ಠ ಮೂರು ಸಂಸ್ಥೆಗಳಿಂದ ಪಾರದರ್ಶಕವಾಗಿ ಪರೀಕ್ಷೆಗೆ ಒಳಪಡಿಸಬೇಕು,ಅಲ್ಲದೆ ಪರೀಕ್ಷಿಸುವ ತಜ್ಞರು ಆ ಆರೋಪಿತನ ಜಾತಿ ಸಮುದಾಯದವನಾಗದೆ ,ಪೂರ್ವಾಗ್ರಹ ಪೀಡಿತನಾಗಿರದೇ ವಸ್ತುಸ್ಥಿತಿ ಎನಿದೆಯೋ ಅದನ್ನ ವರದಿ ಮಾಡತಕ್ಕದ್ದು .ಅದು ಈ ಪ್ರಕರಣದಲ್ಲಿ ಆಗಿದೆಯೇ ಎನ್ನುವುದು ಪ್ರಶ್ನಾರ್ಹ,ಮಠ ಮತ್ತು ಅದರ ಭಕ್ತವೃಂದ ಶಕ್ತಿಶಾಲಿ ಸಮುದಾಯ ಜೊತೆಗೆ ಅಧಿಕಾರರೂಡ ಮುಖ್ಯಮಂತ್ರಿ ಮತ್ತು ಬಹಳಷ್ಟು ಸಚಿವರು ಅದೇ ಸಮುದಾಯದವರೆ,ಎಂದಮೇಲೆ ಬಲಿಷ್ಠ ಸಮುದಾಯ ವರು ಅದೇ ಸಮುದಾಯದ ಆರೋಪಿತನ ಬಿಡುಗಡೆಗೆ ಇದು ಪ್ರಯತ್ನ ಅಲ್ಲ ಎಂದು ನಂಬುವುದು ಹೇಗೆ?

  2. ನಿಮ್ಮ ಅನಿಸಿಕೆ ಸರಿಯಾಗಿದೆ, ಇಂತಹ ವೈದ್ಯರು ಅವರ ಕುಲಕ್ಕೆ ಕಳಂಕ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...