Homeಕರ್ನಾಟಕಮುರುಘಾ ಶರಣರ ಪ್ರಕರಣ: ‘ಮಕ್ಕಳ ಮೇಲೆ ಸಂಭೋಗವಾಗಿಲ್ಲ’ ಎಂದಿರುವ ವೈದ್ಯಕೀಯ ವರದಿಯ ಅಸಲಿಯತ್ತೇನು?

ಮುರುಘಾ ಶರಣರ ಪ್ರಕರಣ: ‘ಮಕ್ಕಳ ಮೇಲೆ ಸಂಭೋಗವಾಗಿಲ್ಲ’ ಎಂದಿರುವ ವೈದ್ಯಕೀಯ ವರದಿಯ ಅಸಲಿಯತ್ತೇನು?

- Advertisement -
- Advertisement -

“ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ವೈದ್ಯಕೀಯ ಪರೀಕ್ಷೆ ವರದಿಯಲ್ಲಿ ಯಾವುದೇ ಸಂಭೋಗ ನಡೆದಿಲ್ಲ ಎಂದು ಉಲ್ಲೇಖಿಸಲಾಗಿದೆ” ಎಂದು ವರದಿಯಾಗಿದೆ.

ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 27ರಂದು ಮುರುಘಾ ಮಠಾಧೀಶರ ವಿರುದ್ಧ ದಾಖಲಾದ ಮೊದಲ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು ಪರೀಕ್ಷೆ ನಡೆಸಿದ್ದರು. ಅದನ್ನು ಆಧರಿಸಿ ‘ಡೆಕ್ಕನ್‌ ಹೆರಾಲ್ಡ್‌’ ವರದಿ ಮಾಡಿದೆ.

ವರದಿಯಲ್ಲಿ ಉಲ್ಲೇಖಿಸಿರುವಂತೆ, “ಒಬ್ಬ ಬಾಲಕಿಯನ್ನು ಆಗಸ್ಟ್ 28, 2022ರಂದು ಮತ್ತು ಇನ್ನೊಬ್ಬ ಬಾಲಕಿಯನ್ನು ಸೆಪ್ಟೆಂಬರ್ 29, 2022ರಂದು ಪರೀಕ್ಷಿಸಲಾಗಿದೆ.”

ಇಬ್ಬರು ಬಾಲಕಿಯರನ್ನು ಪರೀಕ್ಷಿಸಿದ ವೈದ್ಯಕೀಯ ಅಧಿಕಾರಿ, “ಬಾಲಕಿಯ ಕನ್ಯಾ ಪೊರೆ (hymen) ಹಾಗೆಯೇ ಇದೆ” ಎಂದು ತೀರ್ಮಾನಿಸಿದ್ದಾರೆ. ಆದರೆ, ವೈದ್ಯಕೀಯ ಪರೀಕ್ಷೆಗೆ ಒಳಗಾಗುವ ಮೊದಲು ಬಾಲಕಿಯರು ಸಮಲೋಚಕರಿಗೆ, “ಸಂಭೋಗ ನಡೆದಿರುವುದಾಗಿ ಮಾಹಿತಿ ನೀಡಿದ್ದಾರೆ” ಎಂದು ಉಲ್ಲೇಖಿಸಲಾಗಿದೆ. ಆದರೆ ಕನ್ನಡದ ಕೆಲವು ಮಾಧ್ಯಮಗಳು ವರದಿ ಮಾಡುತ್ತಾ, “ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌ ಸಿಕ್ಕಿದೆ, ಮರುಘಾ ಶರಣರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ” ಎಂದೆಲ್ಲ ಬಣ್ಣಿಸಿವೆ.

ಮರುಘಾ ಮಠಾಧೀಶರ ಪ್ರಕರಣ ಹೊರಬರುವಲ್ಲಿ ಪ್ರಮುಖ ಪಾತ್ರ ವಹಿಸಿದವರಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯೂ ಒಂದು. ಈ ವರದಿಗಳ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಒಡನಾಡಿಯ ಕೆ.ವಿ.ಸ್ಟ್ಯಾನ್ಲಿ ಅವರು ಹೇಳಿದ್ದೇ ಬೇರೆ!

“ಇದು ತುಂಬಾ ಬಾಲಿಷವಾದ ಸಂಗತಿ. ಈ ವರದಿಯನ್ನು 2022ರ ಆಗಸ್ಟ್‌ನಲ್ಲಿಯೇ ಸ್ಥಳೀಯ ವೈದ್ಯರು ಸಲ್ಲಿಸಿದ್ದರು. ಇದು ಹೊಸದಾದ ವರದಿಯಲ್ಲ” ಎಂದು ಸ್ಪಷ್ಟಪಡಿಸಿದ ಅವರು, “ಪ್ರಕರಣಕ್ಕೆ ಸಂಬಂಧಿಸಿದಂತೆ ‌ಎಫ್ಎ‌ಸ್‌ಎಲ್‌ ವರದಿ ಹುಬ್ಬಳ್ಳಿಯಿಂದ ಇನ್ನೂ ಬಂದಿಲ್ಲ. ಸ್ಥಳೀಯ ವೈದ್ಯಾಧಿಕಾರಿಗಳ ವರದಿಗೆ ಯಾವುದೇ ಮಾನ್ಯತೆ ಇಲ್ಲ” ಎಂದರು.

“ಈ ರೀತಿಯ ವರದಿ ಹೊರಬಿದ್ದಿರುವ ಕಾರಣವನ್ನು ತಿಳಿದುಕೊಳ್ಳಬೇಕಾಗಿದೆ. ಪೋಕ್ಸೋ ಪ್ರಕರಣಗಳಲ್ಲಿ ಜಾಮೀನು ಸಿಗುವುದು ಕಷ್ಟ. ಆರೋಪಿಯನ್ನು ಅಪರಾಧಿ ಎಂದೇ ಪರಿಗಣಿಸಿ ನ್ಯಾಯಾಲಯ ಜೈಲಿಗೆ ಕಳಿಸಿರುತ್ತದೆ. ಮುರುಘಾ ಮಠಾಧೀಶರಿಗೆ ಜಾಮೀನು ದೊರಕಿಸಲು ಶತಾಯಗತಾಯ ಪ್ರಯತ್ನಗಳನ್ನು ಆರೋಪಿಗಳ ಪರವಾಗಿರುವವರು ಮಾಡುತ್ತಿದ್ದಾರೆ” ಎಂದು ವಿವರಿಸಿದರು.

“ಜಾಮೀನು ಸಿಗಬೇಕಾದರೆ ಇರುವ ಒಂದೇ ಒಂದು ಮಾರ್ಗವೆಂದರೆ ಸಂದೇಹಗಳನ್ನು ಸೃಷ್ಟಿಸುವುದಾಗಿದೆ. ಯಾವುದೇ ಸಂದೇಹಗಳಿಲ್ಲದಿದ್ದರೆ ನ್ಯಾಯಾಧೀಶರು ಜಾಮೀನು ನೀಡುವುದಿಲ್ಲ. ಮಠಾಧೀಶರ ಪರವಾಗಿ ಕೆಲವು ತಜ್ಞರು ಕೆಲಸ ಮಾಡುತ್ತಿದ್ದಾರೆ. ತಮ್ಮ ತಂತ್ರಗಾರಿಕೆಯನ್ನು ಅವರು ಮಾಡುತ್ತಲೇ ಇದ್ದಾರೆ. ಅದರ ಭಾಗವಾಗಿಯೇ ನಮ್ಮ ಮೇಲೆ ಸುಳ್ಳು ಪ್ರಕರಣ ಹಾಕಿದ್ದರು. ಗೊಂದಲ ಸೃಷ್ಟಿಸುವ ತಂತ್ರಗಾರಿಕೆ ಇದಾಗಿತ್ತು. ಈಗ ವೈದ್ಯಕೀಯ ವರದಿಯ ಮೂಲಕ ಗೊಂದಲವೊಂದನ್ನು ಹರಿಬಿಡಲಾಗಿದೆ” ಎಂದು ಅಭಿಪ್ರಾಯಪಟ್ಟರು.

“ಈಗ ಹರಿದಾಡಿರುವ ವರದಿ ಮಾನ್ಯತೆಯನ್ನು ಪಡೆದದ್ದಲ್ಲ. ಎಫ್ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿ ಬರಬೇಕಿದೆ. ಪೋಕ್ಸೋ ಕಾನೂನು, ವೈದ್ಯಕೀಯ ಪರೀಕ್ಷೆ ವರದಿಯನ್ನು ಪ್ರಮುಖವಾಗಿ ಪರಿಗಣಿಸಲ್ಲ. ಮಕ್ಕಳ ಹೇಳಿಕೆಯನ್ನಷ್ಟೇ ಪ್ರಮುಖವಾಗಿ ಪರಿಗಣಿಸುತ್ತದೆ. ವೈದ್ಯಕೀಯ ವರದಿ ಸೇರಿದಂತೆ ಉಳಿದೆಲ್ಲ ಸಾಕ್ಷಿಗಳು ಹೆಚ್ಚುವರಿ ಸಾಕ್ಷಿಯಾಗಿ ಉಳಿಯುತ್ತವೆ. ಇದರ ಜೊತೆಗೆ ಘನ ನ್ಯಾಯಾಲಯ ಕೂಡ ಮಾನವೀಯವಾದ ಒಳಗಣ್ಣಿನಿಂದ ಗಮನಿಸುತ್ತಿರುತ್ತದೆ ಎಂಬುದನ್ನು ನಮ್ಮ ಅನುಭವದಲ್ಲಿ ಕಂಡುಕೊಂಡಿದ್ದೇವೆ. ಆರೋಪಿ ಮುರುಘಾ ಶರಣರಿಗೆ ಹೃದಯಾಘಾತವಾಗಿದೆ ಎಂದು ಇದೇ ಜಿಲ್ಲಾ ಆರೋಗ್ಯಾಧಿಕಾರಿ ಆರಂಭದಲ್ಲಿ ಹೇಳಿದ್ದರು. ಹೇರ್‌ಲಿಫ್ಟ್‌ ಮಾಡದಿದ್ದರೆ ಶರಣರು ಬದುಕುಳಿಯುವುದಿಲ್ಲ ಎಂದೆಲ್ಲ ಹಬ್ಬಿಸಲಾಗಿತ್ತು. ಆದರೆ ಅವರು ಆರೋಗ್ಯವಾಗಿಯೇ ಇದ್ದರು. ನ್ಯಾಯಾಧೀಶರಾದ ಕೋಮಲಾ ಅವರು ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸಿ, ‘ಏನೇ ಆಗಲಿ, ಮುರುಘಾ ಶರಣರನ್ನು ಕೋರ್ಟ್‌ಗೆ ಕರೆತನ್ನಿ’ ಎಂದು ಸೂಚಿಸಿದ್ದರು. ಮುರುಘಾ ಶರಣರ ಹೃದಯ ಚೆನ್ನಾಗಿಯೇ ಕೆಲಸ ಮಾಡುತ್ತಿತ್ತು. ವೈದ್ಯಕೀಯ ವರದಿಗಳು ತಿರುಚಲ್ಪಡುತ್ತವೆ ಎಂಬುದಕ್ಕೆ ಇದು ಸೂಕ್ತ ಉದಾಹರಣೆ” ಎಂದು ಹೇಳಿದರು.

“ವೈದ್ಯಕೀಯ ವ್ಯವಸ್ಥೆ ಭ್ರಷ್ಟಾಚಾರ ಮುಕ್ತವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಆರೋಪಿಗಳನ್ನು ರಕ್ಷಿಸಲು ಮಾಡಿದ ಪ್ರಯತ್ನಗಳನ್ನು ನಾವು ನೋಡಿದ್ದೇವೆ. ಈಗ ಹರಿದಾಡುತ್ತಿರುವ ವರದಿಯು ಮಾನ್ಯತೆಯನ್ನು ಪಡೆದುಕೊಂಡಿಲ್ಲ. ಸಂತ್ರಸ್ತ ಮಕ್ಕಳಿಗೆ ನ್ಯಾಯವನ್ನು ನಮ್ಮ ನ್ಯಾಯ ವ್ಯವಸ್ಥೆ ದೊರಕಿಸಿಕೊಡುತ್ತದೆ ಎಂಬ ಭರವಸೆ ನಮಗಿದೆ” ಎಂದರು.

“ಮಗುವಿನ hymen ಹಾಗೆ ಇರಬೇಕೆಂಬ ನಿಯಮವೇನೂ ಇಲ್ಲ. ಮಗುವಿನ ಗುಪ್ತಾಂಗವನ್ನು ಸ್ಪರ್ಶಿಸಿದರೂ ಅದು ಅತ್ಯಾಚಾರವಾಗುತ್ತದೆ. ಒಂದು ಮಗು ಅತ್ಯಾಚಾರಕ್ಕೆ ಒಳಗಾಗಿರಬೇಕು ಎಂದರೆ hymen ಇಲ್ಲವಾಗಿರಬೇಕು ಎಂದು ನಾವು ನಿರೀಕ್ಷಿಸಬೇಕಾ? ನ್ಯಾಯ ಕೊಡಿಸಬೇಕೆಂದರೆ ಮಗು ಕೊಲೆಯಾಗಿಬೇಕೆಂದು ನಿರೀಕ್ಷಿಸಬೇಕಾ?” ಎಂದು ಪ್ರಶ್ನಿಸಿದ ಅವರು, “ಸದ್ಯ ಮಗು ಬದುಕಿ ಬಂದಿದೆಯಲ್ಲ ಎಂದು ಯೋಚಿಸಬೇಕಿತ್ತಲ್ಲವೇ? ಮಗು ಹೀಗೆಯೇ ಗಾಯಗೊಂಡಿರಬೇಕು ಎಂದು ಭಾವಿಸುವುದು ಕ್ರೂರ ಸಮಾಜದ ಪ್ರತೀಕವಾಗುತ್ತದೆ. ಮಗುವಿನ ಘನತೆಗೆ ಸಂಬಂಧಿಸಿದಂತೆ ಈ ರೀತಿಯ ಮಾತುಕತೆಗಳು ನಡೆಯಬಾರದು. ಮಗುವಿನ ಹೇಳಿಕೆಯನ್ನು ಅವಮಾನಿಸುವ, ಅನುಮಾನಿಸುವ ಪ್ರವೃತ್ತಿ ಅಮಾನಯವೀಯವಾದದ್ದು. ಯಾರನ್ನೋ ರಕ್ಷಿಸುವುದಕ್ಕಾಗಿ ಅಮಾಯಕ ಮಕ್ಕಳನ್ನು ಅವಮಾನಿಸುವ, ಅನುಮಾನಿಸುವುದನ್ನು ಮಾಡಬಾರದು” ಎಂದು ಆಶಿಸಿದರು.

ಒಂದು ಪೋಕ್ಸೋ ಪ್ರಕರಣ ಅಷ್ಟೇ ಅಲ್ಲ

ಮುರುಘಾ ಮಠದಲ್ಲಿ ಕೆಲಸ ಮಾಡುವ ಸೇವಕಿಯೊಬ್ಬರು ಶಿವಮೂರ್ತಿ ಶರಣರ ವಿರುದ್ಧ ಎರಡನೇ ಪ್ರಕರಣವನ್ನು ದಾಖಲಿಸಿದ್ದಾರೆ. ಮಠಾಧೀಶರು ತಮ್ಮ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೊದಲ ಪ್ರಕರಣದಲ್ಲಿನ ಸಂತ್ರಸ್ತ ಬಾಲಕಿಯರಲ್ಲಿ ಒಬ್ಬರು ದಲಿತ ಸಮುದಾಯಕ್ಕೆ ಸೇರಿರುವುದರಿಂದ ಪೋಕ್ಸೋ ಕಾಯ್ದೆ ಸೇರಿದಂತೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲೂ ಮುರುಘಾ ಮಠಾಧೀಶರ ವಿರುದ್ಧ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಪ್ರಕರಣಗಳಲ್ಲಿ ಕನಿಷ್ಠ ಮೂರು ಸಂಸ್ಥೆಗಳಿಂದ ಪಾರದರ್ಶಕವಾಗಿ ಪರೀಕ್ಷೆಗೆ ಒಳಪಡಿಸಬೇಕು,ಅಲ್ಲದೆ ಪರೀಕ್ಷಿಸುವ ತಜ್ಞರು ಆ ಆರೋಪಿತನ ಜಾತಿ ಸಮುದಾಯದವನಾಗದೆ ,ಪೂರ್ವಾಗ್ರಹ ಪೀಡಿತನಾಗಿರದೇ ವಸ್ತುಸ್ಥಿತಿ ಎನಿದೆಯೋ ಅದನ್ನ ವರದಿ ಮಾಡತಕ್ಕದ್ದು .ಅದು ಈ ಪ್ರಕರಣದಲ್ಲಿ ಆಗಿದೆಯೇ ಎನ್ನುವುದು ಪ್ರಶ್ನಾರ್ಹ,ಮಠ ಮತ್ತು ಅದರ ಭಕ್ತವೃಂದ ಶಕ್ತಿಶಾಲಿ ಸಮುದಾಯ ಜೊತೆಗೆ ಅಧಿಕಾರರೂಡ ಮುಖ್ಯಮಂತ್ರಿ ಮತ್ತು ಬಹಳಷ್ಟು ಸಚಿವರು ಅದೇ ಸಮುದಾಯದವರೆ,ಎಂದಮೇಲೆ ಬಲಿಷ್ಠ ಸಮುದಾಯ ವರು ಅದೇ ಸಮುದಾಯದ ಆರೋಪಿತನ ಬಿಡುಗಡೆಗೆ ಇದು ಪ್ರಯತ್ನ ಅಲ್ಲ ಎಂದು ನಂಬುವುದು ಹೇಗೆ?

  2. ನಿಮ್ಮ ಅನಿಸಿಕೆ ಸರಿಯಾಗಿದೆ, ಇಂತಹ ವೈದ್ಯರು ಅವರ ಕುಲಕ್ಕೆ ಕಳಂಕ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...