Homeಕರ್ನಾಟಕಮುರುಘಾ ಶರಣರ ಪ್ರಕರಣ: ‘ಮಕ್ಕಳ ಮೇಲೆ ಸಂಭೋಗವಾಗಿಲ್ಲ’ ಎಂದಿರುವ ವೈದ್ಯಕೀಯ ವರದಿಯ ಅಸಲಿಯತ್ತೇನು?

ಮುರುಘಾ ಶರಣರ ಪ್ರಕರಣ: ‘ಮಕ್ಕಳ ಮೇಲೆ ಸಂಭೋಗವಾಗಿಲ್ಲ’ ಎಂದಿರುವ ವೈದ್ಯಕೀಯ ವರದಿಯ ಅಸಲಿಯತ್ತೇನು?

- Advertisement -
- Advertisement -

“ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ವೈದ್ಯಕೀಯ ಪರೀಕ್ಷೆ ವರದಿಯಲ್ಲಿ ಯಾವುದೇ ಸಂಭೋಗ ನಡೆದಿಲ್ಲ ಎಂದು ಉಲ್ಲೇಖಿಸಲಾಗಿದೆ” ಎಂದು ವರದಿಯಾಗಿದೆ.

ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 27ರಂದು ಮುರುಘಾ ಮಠಾಧೀಶರ ವಿರುದ್ಧ ದಾಖಲಾದ ಮೊದಲ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು ಪರೀಕ್ಷೆ ನಡೆಸಿದ್ದರು. ಅದನ್ನು ಆಧರಿಸಿ ‘ಡೆಕ್ಕನ್‌ ಹೆರಾಲ್ಡ್‌’ ವರದಿ ಮಾಡಿದೆ.

ವರದಿಯಲ್ಲಿ ಉಲ್ಲೇಖಿಸಿರುವಂತೆ, “ಒಬ್ಬ ಬಾಲಕಿಯನ್ನು ಆಗಸ್ಟ್ 28, 2022ರಂದು ಮತ್ತು ಇನ್ನೊಬ್ಬ ಬಾಲಕಿಯನ್ನು ಸೆಪ್ಟೆಂಬರ್ 29, 2022ರಂದು ಪರೀಕ್ಷಿಸಲಾಗಿದೆ.”

ಇಬ್ಬರು ಬಾಲಕಿಯರನ್ನು ಪರೀಕ್ಷಿಸಿದ ವೈದ್ಯಕೀಯ ಅಧಿಕಾರಿ, “ಬಾಲಕಿಯ ಕನ್ಯಾ ಪೊರೆ (hymen) ಹಾಗೆಯೇ ಇದೆ” ಎಂದು ತೀರ್ಮಾನಿಸಿದ್ದಾರೆ. ಆದರೆ, ವೈದ್ಯಕೀಯ ಪರೀಕ್ಷೆಗೆ ಒಳಗಾಗುವ ಮೊದಲು ಬಾಲಕಿಯರು ಸಮಲೋಚಕರಿಗೆ, “ಸಂಭೋಗ ನಡೆದಿರುವುದಾಗಿ ಮಾಹಿತಿ ನೀಡಿದ್ದಾರೆ” ಎಂದು ಉಲ್ಲೇಖಿಸಲಾಗಿದೆ. ಆದರೆ ಕನ್ನಡದ ಕೆಲವು ಮಾಧ್ಯಮಗಳು ವರದಿ ಮಾಡುತ್ತಾ, “ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌ ಸಿಕ್ಕಿದೆ, ಮರುಘಾ ಶರಣರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ” ಎಂದೆಲ್ಲ ಬಣ್ಣಿಸಿವೆ.

ಮರುಘಾ ಮಠಾಧೀಶರ ಪ್ರಕರಣ ಹೊರಬರುವಲ್ಲಿ ಪ್ರಮುಖ ಪಾತ್ರ ವಹಿಸಿದವರಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯೂ ಒಂದು. ಈ ವರದಿಗಳ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಒಡನಾಡಿಯ ಕೆ.ವಿ.ಸ್ಟ್ಯಾನ್ಲಿ ಅವರು ಹೇಳಿದ್ದೇ ಬೇರೆ!

“ಇದು ತುಂಬಾ ಬಾಲಿಷವಾದ ಸಂಗತಿ. ಈ ವರದಿಯನ್ನು 2022ರ ಆಗಸ್ಟ್‌ನಲ್ಲಿಯೇ ಸ್ಥಳೀಯ ವೈದ್ಯರು ಸಲ್ಲಿಸಿದ್ದರು. ಇದು ಹೊಸದಾದ ವರದಿಯಲ್ಲ” ಎಂದು ಸ್ಪಷ್ಟಪಡಿಸಿದ ಅವರು, “ಪ್ರಕರಣಕ್ಕೆ ಸಂಬಂಧಿಸಿದಂತೆ ‌ಎಫ್ಎ‌ಸ್‌ಎಲ್‌ ವರದಿ ಹುಬ್ಬಳ್ಳಿಯಿಂದ ಇನ್ನೂ ಬಂದಿಲ್ಲ. ಸ್ಥಳೀಯ ವೈದ್ಯಾಧಿಕಾರಿಗಳ ವರದಿಗೆ ಯಾವುದೇ ಮಾನ್ಯತೆ ಇಲ್ಲ” ಎಂದರು.

“ಈ ರೀತಿಯ ವರದಿ ಹೊರಬಿದ್ದಿರುವ ಕಾರಣವನ್ನು ತಿಳಿದುಕೊಳ್ಳಬೇಕಾಗಿದೆ. ಪೋಕ್ಸೋ ಪ್ರಕರಣಗಳಲ್ಲಿ ಜಾಮೀನು ಸಿಗುವುದು ಕಷ್ಟ. ಆರೋಪಿಯನ್ನು ಅಪರಾಧಿ ಎಂದೇ ಪರಿಗಣಿಸಿ ನ್ಯಾಯಾಲಯ ಜೈಲಿಗೆ ಕಳಿಸಿರುತ್ತದೆ. ಮುರುಘಾ ಮಠಾಧೀಶರಿಗೆ ಜಾಮೀನು ದೊರಕಿಸಲು ಶತಾಯಗತಾಯ ಪ್ರಯತ್ನಗಳನ್ನು ಆರೋಪಿಗಳ ಪರವಾಗಿರುವವರು ಮಾಡುತ್ತಿದ್ದಾರೆ” ಎಂದು ವಿವರಿಸಿದರು.

“ಜಾಮೀನು ಸಿಗಬೇಕಾದರೆ ಇರುವ ಒಂದೇ ಒಂದು ಮಾರ್ಗವೆಂದರೆ ಸಂದೇಹಗಳನ್ನು ಸೃಷ್ಟಿಸುವುದಾಗಿದೆ. ಯಾವುದೇ ಸಂದೇಹಗಳಿಲ್ಲದಿದ್ದರೆ ನ್ಯಾಯಾಧೀಶರು ಜಾಮೀನು ನೀಡುವುದಿಲ್ಲ. ಮಠಾಧೀಶರ ಪರವಾಗಿ ಕೆಲವು ತಜ್ಞರು ಕೆಲಸ ಮಾಡುತ್ತಿದ್ದಾರೆ. ತಮ್ಮ ತಂತ್ರಗಾರಿಕೆಯನ್ನು ಅವರು ಮಾಡುತ್ತಲೇ ಇದ್ದಾರೆ. ಅದರ ಭಾಗವಾಗಿಯೇ ನಮ್ಮ ಮೇಲೆ ಸುಳ್ಳು ಪ್ರಕರಣ ಹಾಕಿದ್ದರು. ಗೊಂದಲ ಸೃಷ್ಟಿಸುವ ತಂತ್ರಗಾರಿಕೆ ಇದಾಗಿತ್ತು. ಈಗ ವೈದ್ಯಕೀಯ ವರದಿಯ ಮೂಲಕ ಗೊಂದಲವೊಂದನ್ನು ಹರಿಬಿಡಲಾಗಿದೆ” ಎಂದು ಅಭಿಪ್ರಾಯಪಟ್ಟರು.

“ಈಗ ಹರಿದಾಡಿರುವ ವರದಿ ಮಾನ್ಯತೆಯನ್ನು ಪಡೆದದ್ದಲ್ಲ. ಎಫ್ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿ ಬರಬೇಕಿದೆ. ಪೋಕ್ಸೋ ಕಾನೂನು, ವೈದ್ಯಕೀಯ ಪರೀಕ್ಷೆ ವರದಿಯನ್ನು ಪ್ರಮುಖವಾಗಿ ಪರಿಗಣಿಸಲ್ಲ. ಮಕ್ಕಳ ಹೇಳಿಕೆಯನ್ನಷ್ಟೇ ಪ್ರಮುಖವಾಗಿ ಪರಿಗಣಿಸುತ್ತದೆ. ವೈದ್ಯಕೀಯ ವರದಿ ಸೇರಿದಂತೆ ಉಳಿದೆಲ್ಲ ಸಾಕ್ಷಿಗಳು ಹೆಚ್ಚುವರಿ ಸಾಕ್ಷಿಯಾಗಿ ಉಳಿಯುತ್ತವೆ. ಇದರ ಜೊತೆಗೆ ಘನ ನ್ಯಾಯಾಲಯ ಕೂಡ ಮಾನವೀಯವಾದ ಒಳಗಣ್ಣಿನಿಂದ ಗಮನಿಸುತ್ತಿರುತ್ತದೆ ಎಂಬುದನ್ನು ನಮ್ಮ ಅನುಭವದಲ್ಲಿ ಕಂಡುಕೊಂಡಿದ್ದೇವೆ. ಆರೋಪಿ ಮುರುಘಾ ಶರಣರಿಗೆ ಹೃದಯಾಘಾತವಾಗಿದೆ ಎಂದು ಇದೇ ಜಿಲ್ಲಾ ಆರೋಗ್ಯಾಧಿಕಾರಿ ಆರಂಭದಲ್ಲಿ ಹೇಳಿದ್ದರು. ಹೇರ್‌ಲಿಫ್ಟ್‌ ಮಾಡದಿದ್ದರೆ ಶರಣರು ಬದುಕುಳಿಯುವುದಿಲ್ಲ ಎಂದೆಲ್ಲ ಹಬ್ಬಿಸಲಾಗಿತ್ತು. ಆದರೆ ಅವರು ಆರೋಗ್ಯವಾಗಿಯೇ ಇದ್ದರು. ನ್ಯಾಯಾಧೀಶರಾದ ಕೋಮಲಾ ಅವರು ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸಿ, ‘ಏನೇ ಆಗಲಿ, ಮುರುಘಾ ಶರಣರನ್ನು ಕೋರ್ಟ್‌ಗೆ ಕರೆತನ್ನಿ’ ಎಂದು ಸೂಚಿಸಿದ್ದರು. ಮುರುಘಾ ಶರಣರ ಹೃದಯ ಚೆನ್ನಾಗಿಯೇ ಕೆಲಸ ಮಾಡುತ್ತಿತ್ತು. ವೈದ್ಯಕೀಯ ವರದಿಗಳು ತಿರುಚಲ್ಪಡುತ್ತವೆ ಎಂಬುದಕ್ಕೆ ಇದು ಸೂಕ್ತ ಉದಾಹರಣೆ” ಎಂದು ಹೇಳಿದರು.

“ವೈದ್ಯಕೀಯ ವ್ಯವಸ್ಥೆ ಭ್ರಷ್ಟಾಚಾರ ಮುಕ್ತವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಆರೋಪಿಗಳನ್ನು ರಕ್ಷಿಸಲು ಮಾಡಿದ ಪ್ರಯತ್ನಗಳನ್ನು ನಾವು ನೋಡಿದ್ದೇವೆ. ಈಗ ಹರಿದಾಡುತ್ತಿರುವ ವರದಿಯು ಮಾನ್ಯತೆಯನ್ನು ಪಡೆದುಕೊಂಡಿಲ್ಲ. ಸಂತ್ರಸ್ತ ಮಕ್ಕಳಿಗೆ ನ್ಯಾಯವನ್ನು ನಮ್ಮ ನ್ಯಾಯ ವ್ಯವಸ್ಥೆ ದೊರಕಿಸಿಕೊಡುತ್ತದೆ ಎಂಬ ಭರವಸೆ ನಮಗಿದೆ” ಎಂದರು.

“ಮಗುವಿನ hymen ಹಾಗೆ ಇರಬೇಕೆಂಬ ನಿಯಮವೇನೂ ಇಲ್ಲ. ಮಗುವಿನ ಗುಪ್ತಾಂಗವನ್ನು ಸ್ಪರ್ಶಿಸಿದರೂ ಅದು ಅತ್ಯಾಚಾರವಾಗುತ್ತದೆ. ಒಂದು ಮಗು ಅತ್ಯಾಚಾರಕ್ಕೆ ಒಳಗಾಗಿರಬೇಕು ಎಂದರೆ hymen ಇಲ್ಲವಾಗಿರಬೇಕು ಎಂದು ನಾವು ನಿರೀಕ್ಷಿಸಬೇಕಾ? ನ್ಯಾಯ ಕೊಡಿಸಬೇಕೆಂದರೆ ಮಗು ಕೊಲೆಯಾಗಿಬೇಕೆಂದು ನಿರೀಕ್ಷಿಸಬೇಕಾ?” ಎಂದು ಪ್ರಶ್ನಿಸಿದ ಅವರು, “ಸದ್ಯ ಮಗು ಬದುಕಿ ಬಂದಿದೆಯಲ್ಲ ಎಂದು ಯೋಚಿಸಬೇಕಿತ್ತಲ್ಲವೇ? ಮಗು ಹೀಗೆಯೇ ಗಾಯಗೊಂಡಿರಬೇಕು ಎಂದು ಭಾವಿಸುವುದು ಕ್ರೂರ ಸಮಾಜದ ಪ್ರತೀಕವಾಗುತ್ತದೆ. ಮಗುವಿನ ಘನತೆಗೆ ಸಂಬಂಧಿಸಿದಂತೆ ಈ ರೀತಿಯ ಮಾತುಕತೆಗಳು ನಡೆಯಬಾರದು. ಮಗುವಿನ ಹೇಳಿಕೆಯನ್ನು ಅವಮಾನಿಸುವ, ಅನುಮಾನಿಸುವ ಪ್ರವೃತ್ತಿ ಅಮಾನಯವೀಯವಾದದ್ದು. ಯಾರನ್ನೋ ರಕ್ಷಿಸುವುದಕ್ಕಾಗಿ ಅಮಾಯಕ ಮಕ್ಕಳನ್ನು ಅವಮಾನಿಸುವ, ಅನುಮಾನಿಸುವುದನ್ನು ಮಾಡಬಾರದು” ಎಂದು ಆಶಿಸಿದರು.

ಒಂದು ಪೋಕ್ಸೋ ಪ್ರಕರಣ ಅಷ್ಟೇ ಅಲ್ಲ

ಮುರುಘಾ ಮಠದಲ್ಲಿ ಕೆಲಸ ಮಾಡುವ ಸೇವಕಿಯೊಬ್ಬರು ಶಿವಮೂರ್ತಿ ಶರಣರ ವಿರುದ್ಧ ಎರಡನೇ ಪ್ರಕರಣವನ್ನು ದಾಖಲಿಸಿದ್ದಾರೆ. ಮಠಾಧೀಶರು ತಮ್ಮ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೊದಲ ಪ್ರಕರಣದಲ್ಲಿನ ಸಂತ್ರಸ್ತ ಬಾಲಕಿಯರಲ್ಲಿ ಒಬ್ಬರು ದಲಿತ ಸಮುದಾಯಕ್ಕೆ ಸೇರಿರುವುದರಿಂದ ಪೋಕ್ಸೋ ಕಾಯ್ದೆ ಸೇರಿದಂತೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲೂ ಮುರುಘಾ ಮಠಾಧೀಶರ ವಿರುದ್ಧ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಪ್ರಕರಣಗಳಲ್ಲಿ ಕನಿಷ್ಠ ಮೂರು ಸಂಸ್ಥೆಗಳಿಂದ ಪಾರದರ್ಶಕವಾಗಿ ಪರೀಕ್ಷೆಗೆ ಒಳಪಡಿಸಬೇಕು,ಅಲ್ಲದೆ ಪರೀಕ್ಷಿಸುವ ತಜ್ಞರು ಆ ಆರೋಪಿತನ ಜಾತಿ ಸಮುದಾಯದವನಾಗದೆ ,ಪೂರ್ವಾಗ್ರಹ ಪೀಡಿತನಾಗಿರದೇ ವಸ್ತುಸ್ಥಿತಿ ಎನಿದೆಯೋ ಅದನ್ನ ವರದಿ ಮಾಡತಕ್ಕದ್ದು .ಅದು ಈ ಪ್ರಕರಣದಲ್ಲಿ ಆಗಿದೆಯೇ ಎನ್ನುವುದು ಪ್ರಶ್ನಾರ್ಹ,ಮಠ ಮತ್ತು ಅದರ ಭಕ್ತವೃಂದ ಶಕ್ತಿಶಾಲಿ ಸಮುದಾಯ ಜೊತೆಗೆ ಅಧಿಕಾರರೂಡ ಮುಖ್ಯಮಂತ್ರಿ ಮತ್ತು ಬಹಳಷ್ಟು ಸಚಿವರು ಅದೇ ಸಮುದಾಯದವರೆ,ಎಂದಮೇಲೆ ಬಲಿಷ್ಠ ಸಮುದಾಯ ವರು ಅದೇ ಸಮುದಾಯದ ಆರೋಪಿತನ ಬಿಡುಗಡೆಗೆ ಇದು ಪ್ರಯತ್ನ ಅಲ್ಲ ಎಂದು ನಂಬುವುದು ಹೇಗೆ?

  2. ನಿಮ್ಮ ಅನಿಸಿಕೆ ಸರಿಯಾಗಿದೆ, ಇಂತಹ ವೈದ್ಯರು ಅವರ ಕುಲಕ್ಕೆ ಕಳಂಕ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...