Homeಮುಖಪುಟಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ

ಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ

- Advertisement -
- Advertisement -

ಹೊಸದಿಲ್ಲಿ: ಬಿಹಾರ ಸೇರಿದಂತೆ ದೇಶದ ಹಲವೆಡೆ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯ ಮೂಲಕ ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್ (AIMMM) ತೀವ್ರ ಕಳವಳ ವ್ಯಕ್ತಪಡಿಸಿದೆ. ಮುಸ್ಲಿಂ ಸಂಘಟನೆಗಳು ಮತ್ತು ಪ್ರಮುಖ ವ್ಯಕ್ತಿಗಳ ಒಕ್ಕೂಟವಾಗಿರುವ ಮುಶಾವರತ್, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೋಮು ಹಿಂಸಾಚಾರ ಮತ್ತು ದ್ವೇಷದ ಅಪರಾಧಗಳು ಅಪಾಯಕಾರಿ ಮಟ್ಟಕ್ಕೆ ಹೆಚ್ಚಿರುವುದನ್ನು ಖಂಡಿಸಿದೆ.

ಶನಿವಾರ ಇಲ್ಲಿ ನಡೆದ ಮಹತ್ವದ ಸಭೆಯಲ್ಲಿ, ಮುಶಾವರತ್ ದೇಶದಲ್ಲಿ ಮುಸ್ಲಿಮರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿತು. ಅಸ್ಸಾಂನಲ್ಲಿ ಮುಸ್ಲಿಮರನ್ನು ಕಾನೂನುಬಾಹಿರವಾಗಿ ಒಕ್ಕಲೆಬ್ಬಿಸುವುದು ಮತ್ತು ದೇಶದ ವಿವಿಧ ಭಾಗಗಳಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಗುರಿಯಾಗಿಸುವುದು ಈ ಅಪಾಯಕಾರಿ ಪ್ರವೃತ್ತಿಗಳ ಭಾಗವಾಗಿದೆ ಎಂದು ಅದು ಹೇಳಿದೆ. ಈ ವಿದ್ಯಮಾನಗಳು ದೇಶದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ತಳಹದಿಗೆ ಗಂಭೀರ ಅಪಾಯವನ್ನು ತಂದೊಡ್ಡುತ್ತಿವೆ ಎಂದು ಸಭೆ ಎಚ್ಚರಿಸಿದೆ.

ಮತದಾರರ ಹಕ್ಕುಗಳ ದುರುಪಯೋಗ ಮತ್ತು ಕಾನೂನು ಸವಾಲುಗಳ ಕುರಿತು ಮುಶಾವರತ್‌ನ ಪತ್ರಿಕಾ ಪ್ರಕಟಣೆಯು ಗಂಭೀರ ಆತಂಕ ವ್ಯಕ್ತಪಡಿಸಿದೆ. ಮತದಾರರ ಪಟ್ಟಿಗಳಲ್ಲಿ ಪಾರದರ್ಶಕತೆ ಮತ್ತು ನಿಖರತೆಯನ್ನು ಕಾಯ್ದುಕೊಳ್ಳಲು ಜಾರಿಗೆ ತಂದ ‘ಎಸ್ಐಆರ್’ ಪ್ರಕ್ರಿಯೆಯು, ಇಂದು ಮುಸ್ಲಿಮರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಆರ್ಥಿಕವಾಗಿ ದುರ್ಬಲರಾದ ಅಂಚಿನ ಸಮುದಾಯಗಳ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಅಳಿಸಲು ದುರುಪಯೋಗವಾಗುತ್ತಿದೆ ಎಂದು ಅದು ಹೇಳಿದೆ. ಭಾರತದ ಸಂವಿಧಾನವು ಖಾತ್ರಿಪಡಿಸಿದ ಪ್ರಜಾಪ್ರಭುತ್ವದ ಹಕ್ಕುಗಳ ಮೇಲೆ ನಡೆಯುತ್ತಿರುವ ಈ ವ್ಯವಸ್ಥಿತ ದಾಳಿಯನ್ನು AIMMM ತೀವ್ರವಾಗಿ ವಿರೋಧಿಸಿದೆ

“ಮತದಾನದ ಹಕ್ಕು ಕೇವಲ ಸವಲತ್ತಲ್ಲ, ಅದು ಪೌರತ್ವದ ಮೂಲಭೂತ ಅಭಿವ್ಯಕ್ತಿ. ಅದನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವು ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುವ ದಾಳಿಯಾಗಿದೆ” ಎಂದು ಮುಶಾವರತ್ ಪ್ರತಿಪಾದಿಸಿದೆ. ಸಭೆಯಲ್ಲಿ 2025ರ ವಕ್ಫ್ (ತಿದ್ದುಪಡಿ) ಕಾಯಿದೆಯ ಅಪಾಯಕಾರಿ ಪರಿಣಾಮ, ಮಲೆಗಾಂವ್ ಸ್ಫೋಟಗಳ ಆರೋಪಿಗಳ ಖುಲಾಸೆ ಮತ್ತು ಮಲೆಗಾಂವ್ ಹಾಗೂ ಮುಂಬೈ ರೈಲು ಸ್ಫೋಟಗಳ ತೀರ್ಪುಗಳಿಗೆ ಮಹಾರಾಷ್ಟ್ರ ಸರ್ಕಾರದ ವಿಭಿನ್ನ ಪ್ರತಿಕ್ರಿಯೆಗಳ ಬಗ್ಗೆಯೂ ಆತಂಕ ವ್ಯಕ್ತಪಡಿಸಲಾಯಿತು.

ಅಮೆರಿಕ ಹೇರಿರುವ ಸುಂಕಗಳಿಂದಾಗಿ ಭಾರತೀಯ ರಫ್ತುದಾರರು, ಕೈಗಾರಿಕೆಗಳು ಮತ್ತು ಲಕ್ಷಾಂತರ ಕಾರ್ಮಿಕರ ಬದುಕು ಅಪಾಯಕ್ಕೆ ಸಿಲುಕಿದೆ. ಈ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರವು ಅಪಕ್ವತೆ ಮತ್ತು ದೂರದೃಷ್ಟಿಯ ಕೊರತೆಯನ್ನು ಪ್ರದರ್ಶಿಸಿದೆ. ಇದು ನಮ್ಮ ಕಾರ್ಯತಂತ್ರದ ಪಾಲುದಾರರನ್ನು ಮತ್ತಷ್ಟು ದೂರ ಮಾಡಿ, ಜಾಗತಿಕ ವ್ಯಾಪಾರದಲ್ಲಿ ಭಾರತದ ಸ್ಥಾನವನ್ನು ಕುಗ್ಗಿಸುತ್ತಿದೆ ಎಂದು AIMIM ಉಪಾಧ್ಯಕ್ಷ ನಾವಿದ್ ಹಮೀದ್ ಅವರು ಆಳವಾದ ಕಳವಳ ವ್ಯಕ್ತಪಡಿಸಿದರು.

ಇಸ್ರೇಲಿ ಸರ್ಕಾರವು ಪ್ಯಾಲೆಸ್ತೀನ್ ಜನರ ವಿರುದ್ಧ ನಡೆಸುತ್ತಿರುವ ನರಮೇಧ, ಯುದ್ಧ ಅಪರಾಧಗಳು ಮತ್ತು ದೌರ್ಜನ್ಯಗಳ ಬಗ್ಗೆಯೂ ಎಐಎಂಎಂ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಜಿನೀವಾ ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅದು ಖಂಡಿಸಿದೆ. ಗಾಝಾದಲ್ಲಿ ಕದನ ವಿರಾಮ, ಮಾನವೀಯ ನೆರವಿನ ಪ್ರವೇಶ ಮತ್ತು ದಿಗ್ಬಂಧನವನ್ನು ಕೊನೆಗೊಳಿಸಲು ತಕ್ಷಣದ ಅಂತರರಾಷ್ಟ್ರೀಯ ಹಸ್ತಕ್ಷೇಪಕ್ಕೆ ಮುಶಾವರತ್ ಕರೆ ನೀಡಿದೆ.

ಬೇಡಿಕೆಗಳು ಮತ್ತು ಭವಿಷ್ಯದ ಕಾರ್ಯತಂತ್ರ ಮುಶಾವರತ್‌ನ ಅಧ್ಯಕ್ಷ ಫಿರೋಜ್ ಅಹ್ಮದ್ ಅಡ್ವೊಕೇಟ್ ಅವರು ಸಂಸ್ಥೆಯ ಬದ್ಧತೆಗಳನ್ನು ಪುನರುಚ್ಚರಿಸಿದರು. ಮತದಾರರ ಹಕ್ಕುಗಳ ಕಸಿದುಕೊಳ್ಳುವಿಕೆ, ಕೋಮು ಹಿಂಸಾಚಾರ, ಸಾಂಸ್ಥಿಕ ಪಕ್ಷಪಾತ ಮತ್ತು ದಬ್ಬಾಳಿಕೆಗೆ ಕಾನೂನು, ರಾಜಕೀಯ ಮತ್ತು ನೈತಿಕ ಪ್ರತಿರೋಧವನ್ನು ನೀಡುವುದಾಗಿ ಅವರು ಪ್ರತಿಜ್ಞೆ ಮಾಡಿದರು. ಅಲ್ಲದೆ, ಮುಶಾವರತ್ ಶೀಘ್ರದಲ್ಲೇ ದೆಹಲಿಯಲ್ಲಿ ಈ ವಿಷಯಗಳ ಕುರಿತು ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುವುದಾಗಿ ಘೋಷಿಸಿದರು.

ಮುಶಾವರತ್‌ನ ಪ್ರಮುಖ ಬೇಡಿಕೆಗಳು ಹೀಗಿವೆ:

ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವುದು: ಅದರ ಪ್ರಸ್ತುತ ದೋಷಪೂರಿತ ರೂಪದಲ್ಲಿ ನಡೆಯುತ್ತಿರುವ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಿ, ಇದುವರೆಗೆ ಅಳಿಸಿಹಾಕಿರುವ ಹೆಸರುಗಳ ಬಗ್ಗೆ ಸಮಗ್ರ ಮತ್ತು ಸ್ವತಂತ್ರ ಪರಿಶೀಲನೆ ನಡೆಸಬೇಕು.

ಅಸ್ಸಾಂ ಒಕ್ಕಲೆಬ್ಬಿಸುವಿಕೆ ನಿಲ್ಲಿಸುವುದು: ಸೂಕ್ತ ಪುನರ್ವಸತಿ ಮತ್ತು ಕಾನೂನು ಪ್ರಕ್ರಿಯೆಯಿಲ್ಲದೆ ಅಸ್ಸಾಂನಲ್ಲಿನ ಒಕ್ಕಲೆಬ್ಬಿಸುವಿಕೆಯನ್ನು ತಕ್ಷಣವೇ ನಿಲ್ಲಿಸಬೇಕು. ಬಾಧಿತ ಸಮುದಾಯಗಳಿಗೆ ರಕ್ಷಣೆ ನೀಡಿ, ಪೌರತ್ವ ಮತ್ತು ಭೂ ದಾಖಲೆಗಳ ಪಾರದರ್ಶಕ ಪರಿಶೀಲನೆ ನಡೆಸಬೇಕು.

ಪ್ಯಾಲೆಸ್ತೀನ್‌ಗೆ ಬೆಂಬಲ: ಭಾರತ ಸರ್ಕಾರವು ಪ್ಯಾಲೆಸ್ತೀನ್ ಪರ ತನ್ನ ಐತಿಹಾಸಿಕ ನಿಲುವನ್ನು ಎತ್ತಿ ಹಿಡಿದು, ಇಸ್ರೇಲಿ ಯುದ್ಧ ಅಪರಾಧಗಳ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು.

ದೇಶೀಯ ಮತ್ತು ಜಾಗತಿಕ ಬಿಕ್ಕಟ್ಟುಗಳು ಪರಸ್ಪರ ಸಂಬಂಧ ಹೊಂದಿದ್ದು, ನ್ಯಾಯ, ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಮೇಲೆ ನಡೆಯುತ್ತಿರುವ ದಾಳಿಗಳೆಂದು ನಾವೈದ್ ಹಮೀದ್ ಹೇಳಿದರು. ಈ ಸವಾಲುಗಳನ್ನು ಎದುರಿಸಲು ಮುಶಾವರತ್ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಉತ್ತರಾಖಂಡ: ರಾಮನಗರದಲ್ಲಿ ಸರ್ಕಾರಿ ಶಾಲಾ ಆವರಣದಲ್ಲಿದ್ದ ದಶಕಗಳ ಹಳೆಯ ಸಮಾಧಿ ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...