Homeಮುಖಪುಟಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ

ಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ

- Advertisement -
- Advertisement -

ಹೊಸದಿಲ್ಲಿ: ಬಿಹಾರ ಸೇರಿದಂತೆ ದೇಶದ ಹಲವೆಡೆ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯ ಮೂಲಕ ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್ (AIMMM) ತೀವ್ರ ಕಳವಳ ವ್ಯಕ್ತಪಡಿಸಿದೆ. ಮುಸ್ಲಿಂ ಸಂಘಟನೆಗಳು ಮತ್ತು ಪ್ರಮುಖ ವ್ಯಕ್ತಿಗಳ ಒಕ್ಕೂಟವಾಗಿರುವ ಮುಶಾವರತ್, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೋಮು ಹಿಂಸಾಚಾರ ಮತ್ತು ದ್ವೇಷದ ಅಪರಾಧಗಳು ಅಪಾಯಕಾರಿ ಮಟ್ಟಕ್ಕೆ ಹೆಚ್ಚಿರುವುದನ್ನು ಖಂಡಿಸಿದೆ.

ಶನಿವಾರ ಇಲ್ಲಿ ನಡೆದ ಮಹತ್ವದ ಸಭೆಯಲ್ಲಿ, ಮುಶಾವರತ್ ದೇಶದಲ್ಲಿ ಮುಸ್ಲಿಮರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿತು. ಅಸ್ಸಾಂನಲ್ಲಿ ಮುಸ್ಲಿಮರನ್ನು ಕಾನೂನುಬಾಹಿರವಾಗಿ ಒಕ್ಕಲೆಬ್ಬಿಸುವುದು ಮತ್ತು ದೇಶದ ವಿವಿಧ ಭಾಗಗಳಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಗುರಿಯಾಗಿಸುವುದು ಈ ಅಪಾಯಕಾರಿ ಪ್ರವೃತ್ತಿಗಳ ಭಾಗವಾಗಿದೆ ಎಂದು ಅದು ಹೇಳಿದೆ. ಈ ವಿದ್ಯಮಾನಗಳು ದೇಶದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ತಳಹದಿಗೆ ಗಂಭೀರ ಅಪಾಯವನ್ನು ತಂದೊಡ್ಡುತ್ತಿವೆ ಎಂದು ಸಭೆ ಎಚ್ಚರಿಸಿದೆ.

ಮತದಾರರ ಹಕ್ಕುಗಳ ದುರುಪಯೋಗ ಮತ್ತು ಕಾನೂನು ಸವಾಲುಗಳ ಕುರಿತು ಮುಶಾವರತ್‌ನ ಪತ್ರಿಕಾ ಪ್ರಕಟಣೆಯು ಗಂಭೀರ ಆತಂಕ ವ್ಯಕ್ತಪಡಿಸಿದೆ. ಮತದಾರರ ಪಟ್ಟಿಗಳಲ್ಲಿ ಪಾರದರ್ಶಕತೆ ಮತ್ತು ನಿಖರತೆಯನ್ನು ಕಾಯ್ದುಕೊಳ್ಳಲು ಜಾರಿಗೆ ತಂದ ‘ಎಸ್ಐಆರ್’ ಪ್ರಕ್ರಿಯೆಯು, ಇಂದು ಮುಸ್ಲಿಮರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಆರ್ಥಿಕವಾಗಿ ದುರ್ಬಲರಾದ ಅಂಚಿನ ಸಮುದಾಯಗಳ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಅಳಿಸಲು ದುರುಪಯೋಗವಾಗುತ್ತಿದೆ ಎಂದು ಅದು ಹೇಳಿದೆ. ಭಾರತದ ಸಂವಿಧಾನವು ಖಾತ್ರಿಪಡಿಸಿದ ಪ್ರಜಾಪ್ರಭುತ್ವದ ಹಕ್ಕುಗಳ ಮೇಲೆ ನಡೆಯುತ್ತಿರುವ ಈ ವ್ಯವಸ್ಥಿತ ದಾಳಿಯನ್ನು AIMMM ತೀವ್ರವಾಗಿ ವಿರೋಧಿಸಿದೆ

“ಮತದಾನದ ಹಕ್ಕು ಕೇವಲ ಸವಲತ್ತಲ್ಲ, ಅದು ಪೌರತ್ವದ ಮೂಲಭೂತ ಅಭಿವ್ಯಕ್ತಿ. ಅದನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವು ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುವ ದಾಳಿಯಾಗಿದೆ” ಎಂದು ಮುಶಾವರತ್ ಪ್ರತಿಪಾದಿಸಿದೆ. ಸಭೆಯಲ್ಲಿ 2025ರ ವಕ್ಫ್ (ತಿದ್ದುಪಡಿ) ಕಾಯಿದೆಯ ಅಪಾಯಕಾರಿ ಪರಿಣಾಮ, ಮಲೆಗಾಂವ್ ಸ್ಫೋಟಗಳ ಆರೋಪಿಗಳ ಖುಲಾಸೆ ಮತ್ತು ಮಲೆಗಾಂವ್ ಹಾಗೂ ಮುಂಬೈ ರೈಲು ಸ್ಫೋಟಗಳ ತೀರ್ಪುಗಳಿಗೆ ಮಹಾರಾಷ್ಟ್ರ ಸರ್ಕಾರದ ವಿಭಿನ್ನ ಪ್ರತಿಕ್ರಿಯೆಗಳ ಬಗ್ಗೆಯೂ ಆತಂಕ ವ್ಯಕ್ತಪಡಿಸಲಾಯಿತು.

ಅಮೆರಿಕ ಹೇರಿರುವ ಸುಂಕಗಳಿಂದಾಗಿ ಭಾರತೀಯ ರಫ್ತುದಾರರು, ಕೈಗಾರಿಕೆಗಳು ಮತ್ತು ಲಕ್ಷಾಂತರ ಕಾರ್ಮಿಕರ ಬದುಕು ಅಪಾಯಕ್ಕೆ ಸಿಲುಕಿದೆ. ಈ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರವು ಅಪಕ್ವತೆ ಮತ್ತು ದೂರದೃಷ್ಟಿಯ ಕೊರತೆಯನ್ನು ಪ್ರದರ್ಶಿಸಿದೆ. ಇದು ನಮ್ಮ ಕಾರ್ಯತಂತ್ರದ ಪಾಲುದಾರರನ್ನು ಮತ್ತಷ್ಟು ದೂರ ಮಾಡಿ, ಜಾಗತಿಕ ವ್ಯಾಪಾರದಲ್ಲಿ ಭಾರತದ ಸ್ಥಾನವನ್ನು ಕುಗ್ಗಿಸುತ್ತಿದೆ ಎಂದು AIMIM ಉಪಾಧ್ಯಕ್ಷ ನಾವಿದ್ ಹಮೀದ್ ಅವರು ಆಳವಾದ ಕಳವಳ ವ್ಯಕ್ತಪಡಿಸಿದರು.

ಇಸ್ರೇಲಿ ಸರ್ಕಾರವು ಪ್ಯಾಲೆಸ್ತೀನ್ ಜನರ ವಿರುದ್ಧ ನಡೆಸುತ್ತಿರುವ ನರಮೇಧ, ಯುದ್ಧ ಅಪರಾಧಗಳು ಮತ್ತು ದೌರ್ಜನ್ಯಗಳ ಬಗ್ಗೆಯೂ ಎಐಎಂಎಂ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಜಿನೀವಾ ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅದು ಖಂಡಿಸಿದೆ. ಗಾಝಾದಲ್ಲಿ ಕದನ ವಿರಾಮ, ಮಾನವೀಯ ನೆರವಿನ ಪ್ರವೇಶ ಮತ್ತು ದಿಗ್ಬಂಧನವನ್ನು ಕೊನೆಗೊಳಿಸಲು ತಕ್ಷಣದ ಅಂತರರಾಷ್ಟ್ರೀಯ ಹಸ್ತಕ್ಷೇಪಕ್ಕೆ ಮುಶಾವರತ್ ಕರೆ ನೀಡಿದೆ.

ಬೇಡಿಕೆಗಳು ಮತ್ತು ಭವಿಷ್ಯದ ಕಾರ್ಯತಂತ್ರ ಮುಶಾವರತ್‌ನ ಅಧ್ಯಕ್ಷ ಫಿರೋಜ್ ಅಹ್ಮದ್ ಅಡ್ವೊಕೇಟ್ ಅವರು ಸಂಸ್ಥೆಯ ಬದ್ಧತೆಗಳನ್ನು ಪುನರುಚ್ಚರಿಸಿದರು. ಮತದಾರರ ಹಕ್ಕುಗಳ ಕಸಿದುಕೊಳ್ಳುವಿಕೆ, ಕೋಮು ಹಿಂಸಾಚಾರ, ಸಾಂಸ್ಥಿಕ ಪಕ್ಷಪಾತ ಮತ್ತು ದಬ್ಬಾಳಿಕೆಗೆ ಕಾನೂನು, ರಾಜಕೀಯ ಮತ್ತು ನೈತಿಕ ಪ್ರತಿರೋಧವನ್ನು ನೀಡುವುದಾಗಿ ಅವರು ಪ್ರತಿಜ್ಞೆ ಮಾಡಿದರು. ಅಲ್ಲದೆ, ಮುಶಾವರತ್ ಶೀಘ್ರದಲ್ಲೇ ದೆಹಲಿಯಲ್ಲಿ ಈ ವಿಷಯಗಳ ಕುರಿತು ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುವುದಾಗಿ ಘೋಷಿಸಿದರು.

ಮುಶಾವರತ್‌ನ ಪ್ರಮುಖ ಬೇಡಿಕೆಗಳು ಹೀಗಿವೆ:

ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವುದು: ಅದರ ಪ್ರಸ್ತುತ ದೋಷಪೂರಿತ ರೂಪದಲ್ಲಿ ನಡೆಯುತ್ತಿರುವ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಿ, ಇದುವರೆಗೆ ಅಳಿಸಿಹಾಕಿರುವ ಹೆಸರುಗಳ ಬಗ್ಗೆ ಸಮಗ್ರ ಮತ್ತು ಸ್ವತಂತ್ರ ಪರಿಶೀಲನೆ ನಡೆಸಬೇಕು.

ಅಸ್ಸಾಂ ಒಕ್ಕಲೆಬ್ಬಿಸುವಿಕೆ ನಿಲ್ಲಿಸುವುದು: ಸೂಕ್ತ ಪುನರ್ವಸತಿ ಮತ್ತು ಕಾನೂನು ಪ್ರಕ್ರಿಯೆಯಿಲ್ಲದೆ ಅಸ್ಸಾಂನಲ್ಲಿನ ಒಕ್ಕಲೆಬ್ಬಿಸುವಿಕೆಯನ್ನು ತಕ್ಷಣವೇ ನಿಲ್ಲಿಸಬೇಕು. ಬಾಧಿತ ಸಮುದಾಯಗಳಿಗೆ ರಕ್ಷಣೆ ನೀಡಿ, ಪೌರತ್ವ ಮತ್ತು ಭೂ ದಾಖಲೆಗಳ ಪಾರದರ್ಶಕ ಪರಿಶೀಲನೆ ನಡೆಸಬೇಕು.

ಪ್ಯಾಲೆಸ್ತೀನ್‌ಗೆ ಬೆಂಬಲ: ಭಾರತ ಸರ್ಕಾರವು ಪ್ಯಾಲೆಸ್ತೀನ್ ಪರ ತನ್ನ ಐತಿಹಾಸಿಕ ನಿಲುವನ್ನು ಎತ್ತಿ ಹಿಡಿದು, ಇಸ್ರೇಲಿ ಯುದ್ಧ ಅಪರಾಧಗಳ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು.

ದೇಶೀಯ ಮತ್ತು ಜಾಗತಿಕ ಬಿಕ್ಕಟ್ಟುಗಳು ಪರಸ್ಪರ ಸಂಬಂಧ ಹೊಂದಿದ್ದು, ನ್ಯಾಯ, ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಮೇಲೆ ನಡೆಯುತ್ತಿರುವ ದಾಳಿಗಳೆಂದು ನಾವೈದ್ ಹಮೀದ್ ಹೇಳಿದರು. ಈ ಸವಾಲುಗಳನ್ನು ಎದುರಿಸಲು ಮುಶಾವರತ್ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಉತ್ತರಾಖಂಡ: ರಾಮನಗರದಲ್ಲಿ ಸರ್ಕಾರಿ ಶಾಲಾ ಆವರಣದಲ್ಲಿದ್ದ ದಶಕಗಳ ಹಳೆಯ ಸಮಾಧಿ ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...