Homeಮುಖಪುಟಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ

ಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ

- Advertisement -
- Advertisement -

ಹೊಸದಿಲ್ಲಿ: ಬಿಹಾರ ಸೇರಿದಂತೆ ದೇಶದ ಹಲವೆಡೆ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯ ಮೂಲಕ ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್ (AIMMM) ತೀವ್ರ ಕಳವಳ ವ್ಯಕ್ತಪಡಿಸಿದೆ. ಮುಸ್ಲಿಂ ಸಂಘಟನೆಗಳು ಮತ್ತು ಪ್ರಮುಖ ವ್ಯಕ್ತಿಗಳ ಒಕ್ಕೂಟವಾಗಿರುವ ಮುಶಾವರತ್, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೋಮು ಹಿಂಸಾಚಾರ ಮತ್ತು ದ್ವೇಷದ ಅಪರಾಧಗಳು ಅಪಾಯಕಾರಿ ಮಟ್ಟಕ್ಕೆ ಹೆಚ್ಚಿರುವುದನ್ನು ಖಂಡಿಸಿದೆ.

ಶನಿವಾರ ಇಲ್ಲಿ ನಡೆದ ಮಹತ್ವದ ಸಭೆಯಲ್ಲಿ, ಮುಶಾವರತ್ ದೇಶದಲ್ಲಿ ಮುಸ್ಲಿಮರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿತು. ಅಸ್ಸಾಂನಲ್ಲಿ ಮುಸ್ಲಿಮರನ್ನು ಕಾನೂನುಬಾಹಿರವಾಗಿ ಒಕ್ಕಲೆಬ್ಬಿಸುವುದು ಮತ್ತು ದೇಶದ ವಿವಿಧ ಭಾಗಗಳಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಗುರಿಯಾಗಿಸುವುದು ಈ ಅಪಾಯಕಾರಿ ಪ್ರವೃತ್ತಿಗಳ ಭಾಗವಾಗಿದೆ ಎಂದು ಅದು ಹೇಳಿದೆ. ಈ ವಿದ್ಯಮಾನಗಳು ದೇಶದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ತಳಹದಿಗೆ ಗಂಭೀರ ಅಪಾಯವನ್ನು ತಂದೊಡ್ಡುತ್ತಿವೆ ಎಂದು ಸಭೆ ಎಚ್ಚರಿಸಿದೆ.

ಮತದಾರರ ಹಕ್ಕುಗಳ ದುರುಪಯೋಗ ಮತ್ತು ಕಾನೂನು ಸವಾಲುಗಳ ಕುರಿತು ಮುಶಾವರತ್‌ನ ಪತ್ರಿಕಾ ಪ್ರಕಟಣೆಯು ಗಂಭೀರ ಆತಂಕ ವ್ಯಕ್ತಪಡಿಸಿದೆ. ಮತದಾರರ ಪಟ್ಟಿಗಳಲ್ಲಿ ಪಾರದರ್ಶಕತೆ ಮತ್ತು ನಿಖರತೆಯನ್ನು ಕಾಯ್ದುಕೊಳ್ಳಲು ಜಾರಿಗೆ ತಂದ ‘ಎಸ್ಐಆರ್’ ಪ್ರಕ್ರಿಯೆಯು, ಇಂದು ಮುಸ್ಲಿಮರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಆರ್ಥಿಕವಾಗಿ ದುರ್ಬಲರಾದ ಅಂಚಿನ ಸಮುದಾಯಗಳ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಅಳಿಸಲು ದುರುಪಯೋಗವಾಗುತ್ತಿದೆ ಎಂದು ಅದು ಹೇಳಿದೆ. ಭಾರತದ ಸಂವಿಧಾನವು ಖಾತ್ರಿಪಡಿಸಿದ ಪ್ರಜಾಪ್ರಭುತ್ವದ ಹಕ್ಕುಗಳ ಮೇಲೆ ನಡೆಯುತ್ತಿರುವ ಈ ವ್ಯವಸ್ಥಿತ ದಾಳಿಯನ್ನು AIMMM ತೀವ್ರವಾಗಿ ವಿರೋಧಿಸಿದೆ

“ಮತದಾನದ ಹಕ್ಕು ಕೇವಲ ಸವಲತ್ತಲ್ಲ, ಅದು ಪೌರತ್ವದ ಮೂಲಭೂತ ಅಭಿವ್ಯಕ್ತಿ. ಅದನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವು ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುವ ದಾಳಿಯಾಗಿದೆ” ಎಂದು ಮುಶಾವರತ್ ಪ್ರತಿಪಾದಿಸಿದೆ. ಸಭೆಯಲ್ಲಿ 2025ರ ವಕ್ಫ್ (ತಿದ್ದುಪಡಿ) ಕಾಯಿದೆಯ ಅಪಾಯಕಾರಿ ಪರಿಣಾಮ, ಮಲೆಗಾಂವ್ ಸ್ಫೋಟಗಳ ಆರೋಪಿಗಳ ಖುಲಾಸೆ ಮತ್ತು ಮಲೆಗಾಂವ್ ಹಾಗೂ ಮುಂಬೈ ರೈಲು ಸ್ಫೋಟಗಳ ತೀರ್ಪುಗಳಿಗೆ ಮಹಾರಾಷ್ಟ್ರ ಸರ್ಕಾರದ ವಿಭಿನ್ನ ಪ್ರತಿಕ್ರಿಯೆಗಳ ಬಗ್ಗೆಯೂ ಆತಂಕ ವ್ಯಕ್ತಪಡಿಸಲಾಯಿತು.

ಅಮೆರಿಕ ಹೇರಿರುವ ಸುಂಕಗಳಿಂದಾಗಿ ಭಾರತೀಯ ರಫ್ತುದಾರರು, ಕೈಗಾರಿಕೆಗಳು ಮತ್ತು ಲಕ್ಷಾಂತರ ಕಾರ್ಮಿಕರ ಬದುಕು ಅಪಾಯಕ್ಕೆ ಸಿಲುಕಿದೆ. ಈ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರವು ಅಪಕ್ವತೆ ಮತ್ತು ದೂರದೃಷ್ಟಿಯ ಕೊರತೆಯನ್ನು ಪ್ರದರ್ಶಿಸಿದೆ. ಇದು ನಮ್ಮ ಕಾರ್ಯತಂತ್ರದ ಪಾಲುದಾರರನ್ನು ಮತ್ತಷ್ಟು ದೂರ ಮಾಡಿ, ಜಾಗತಿಕ ವ್ಯಾಪಾರದಲ್ಲಿ ಭಾರತದ ಸ್ಥಾನವನ್ನು ಕುಗ್ಗಿಸುತ್ತಿದೆ ಎಂದು AIMIM ಉಪಾಧ್ಯಕ್ಷ ನಾವಿದ್ ಹಮೀದ್ ಅವರು ಆಳವಾದ ಕಳವಳ ವ್ಯಕ್ತಪಡಿಸಿದರು.

ಇಸ್ರೇಲಿ ಸರ್ಕಾರವು ಪ್ಯಾಲೆಸ್ತೀನ್ ಜನರ ವಿರುದ್ಧ ನಡೆಸುತ್ತಿರುವ ನರಮೇಧ, ಯುದ್ಧ ಅಪರಾಧಗಳು ಮತ್ತು ದೌರ್ಜನ್ಯಗಳ ಬಗ್ಗೆಯೂ ಎಐಎಂಎಂ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಜಿನೀವಾ ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅದು ಖಂಡಿಸಿದೆ. ಗಾಝಾದಲ್ಲಿ ಕದನ ವಿರಾಮ, ಮಾನವೀಯ ನೆರವಿನ ಪ್ರವೇಶ ಮತ್ತು ದಿಗ್ಬಂಧನವನ್ನು ಕೊನೆಗೊಳಿಸಲು ತಕ್ಷಣದ ಅಂತರರಾಷ್ಟ್ರೀಯ ಹಸ್ತಕ್ಷೇಪಕ್ಕೆ ಮುಶಾವರತ್ ಕರೆ ನೀಡಿದೆ.

ಬೇಡಿಕೆಗಳು ಮತ್ತು ಭವಿಷ್ಯದ ಕಾರ್ಯತಂತ್ರ ಮುಶಾವರತ್‌ನ ಅಧ್ಯಕ್ಷ ಫಿರೋಜ್ ಅಹ್ಮದ್ ಅಡ್ವೊಕೇಟ್ ಅವರು ಸಂಸ್ಥೆಯ ಬದ್ಧತೆಗಳನ್ನು ಪುನರುಚ್ಚರಿಸಿದರು. ಮತದಾರರ ಹಕ್ಕುಗಳ ಕಸಿದುಕೊಳ್ಳುವಿಕೆ, ಕೋಮು ಹಿಂಸಾಚಾರ, ಸಾಂಸ್ಥಿಕ ಪಕ್ಷಪಾತ ಮತ್ತು ದಬ್ಬಾಳಿಕೆಗೆ ಕಾನೂನು, ರಾಜಕೀಯ ಮತ್ತು ನೈತಿಕ ಪ್ರತಿರೋಧವನ್ನು ನೀಡುವುದಾಗಿ ಅವರು ಪ್ರತಿಜ್ಞೆ ಮಾಡಿದರು. ಅಲ್ಲದೆ, ಮುಶಾವರತ್ ಶೀಘ್ರದಲ್ಲೇ ದೆಹಲಿಯಲ್ಲಿ ಈ ವಿಷಯಗಳ ಕುರಿತು ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುವುದಾಗಿ ಘೋಷಿಸಿದರು.

ಮುಶಾವರತ್‌ನ ಪ್ರಮುಖ ಬೇಡಿಕೆಗಳು ಹೀಗಿವೆ:

ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವುದು: ಅದರ ಪ್ರಸ್ತುತ ದೋಷಪೂರಿತ ರೂಪದಲ್ಲಿ ನಡೆಯುತ್ತಿರುವ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಿ, ಇದುವರೆಗೆ ಅಳಿಸಿಹಾಕಿರುವ ಹೆಸರುಗಳ ಬಗ್ಗೆ ಸಮಗ್ರ ಮತ್ತು ಸ್ವತಂತ್ರ ಪರಿಶೀಲನೆ ನಡೆಸಬೇಕು.

ಅಸ್ಸಾಂ ಒಕ್ಕಲೆಬ್ಬಿಸುವಿಕೆ ನಿಲ್ಲಿಸುವುದು: ಸೂಕ್ತ ಪುನರ್ವಸತಿ ಮತ್ತು ಕಾನೂನು ಪ್ರಕ್ರಿಯೆಯಿಲ್ಲದೆ ಅಸ್ಸಾಂನಲ್ಲಿನ ಒಕ್ಕಲೆಬ್ಬಿಸುವಿಕೆಯನ್ನು ತಕ್ಷಣವೇ ನಿಲ್ಲಿಸಬೇಕು. ಬಾಧಿತ ಸಮುದಾಯಗಳಿಗೆ ರಕ್ಷಣೆ ನೀಡಿ, ಪೌರತ್ವ ಮತ್ತು ಭೂ ದಾಖಲೆಗಳ ಪಾರದರ್ಶಕ ಪರಿಶೀಲನೆ ನಡೆಸಬೇಕು.

ಪ್ಯಾಲೆಸ್ತೀನ್‌ಗೆ ಬೆಂಬಲ: ಭಾರತ ಸರ್ಕಾರವು ಪ್ಯಾಲೆಸ್ತೀನ್ ಪರ ತನ್ನ ಐತಿಹಾಸಿಕ ನಿಲುವನ್ನು ಎತ್ತಿ ಹಿಡಿದು, ಇಸ್ರೇಲಿ ಯುದ್ಧ ಅಪರಾಧಗಳ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು.

ದೇಶೀಯ ಮತ್ತು ಜಾಗತಿಕ ಬಿಕ್ಕಟ್ಟುಗಳು ಪರಸ್ಪರ ಸಂಬಂಧ ಹೊಂದಿದ್ದು, ನ್ಯಾಯ, ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಮೇಲೆ ನಡೆಯುತ್ತಿರುವ ದಾಳಿಗಳೆಂದು ನಾವೈದ್ ಹಮೀದ್ ಹೇಳಿದರು. ಈ ಸವಾಲುಗಳನ್ನು ಎದುರಿಸಲು ಮುಶಾವರತ್ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಉತ್ತರಾಖಂಡ: ರಾಮನಗರದಲ್ಲಿ ಸರ್ಕಾರಿ ಶಾಲಾ ಆವರಣದಲ್ಲಿದ್ದ ದಶಕಗಳ ಹಳೆಯ ಸಮಾಧಿ ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...