Homeಮುಖಪುಟಮೋದಿಯನ್ನು ಅಂಬೇಡ್ಕರ್‌ರವರಿಗೆ ಹೋಲಿಸಿದ ಸಂಗೀತ ನಿರ್ದೇಶಕ ಇಳಯರಾಜ

ಮೋದಿಯನ್ನು ಅಂಬೇಡ್ಕರ್‌ರವರಿಗೆ ಹೋಲಿಸಿದ ಸಂಗೀತ ನಿರ್ದೇಶಕ ಇಳಯರಾಜ

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಹೋಲಿಕೆ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ‘ಅಂಬೇಡ್ಕರ್ ಮತ್ತು ಮೋದಿ: ರಿಫಾರ್ಮರ್ಸ್ ಐಡಿಯಾಸ್, ಪರ್ಫಾಮರ್ಸ್ ಇಂಪ್ಲಿಮೆಂಟೇಶನ್’ ಪುಸ್ತಕದ ಮುನ್ನುಡಿಯನ್ನು ಇಳಯರಾಜ ಅವರು ಬರೆದಿದ್ದು, ಮೋದಿ ಹಾಗೂ ಅಂಬೇಡ್ಕರ್‌ರನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗಿದ್ದಾರೆಂದು ಆರೋಪಿಸಲಾಗಿದೆ.

ಇಳಯರಾಜ ಅವರು ತಮ್ಮ ಮುನ್ನುಡಿಯಲ್ಲಿ ಅಂಬೇಡ್ಕರ್ ಮತ್ತು ಮೋದಿಯವರ ನಡುವೆ ಸಮಾನ ಅಂಶಗಳಿವೆ ಎಂದಿದ್ದಾರೆ. “ಬಡತನ ಮತ್ತು ಉಸಿರುಗಟ್ಟಿಸುವ ಸಾಮಾಜಿಕ ರಚನೆಗಳನ್ನು ಹತ್ತಿರದಿಂದ ನೋಡಿದ ವ್ಯಕ್ತಿಗಳಿವರು. ಅವುಗಳ ನಿರ್ಮೂಲನೆಗಾಗಿ ಕೆಲಸ ಮಾಡಿದರು” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಳಯರಾಜ ಅವರ ಬರಹಕ್ಕೆ ವಿರೋಧಗಳು ಬಂದಿವೆ. ಹಲವು ವಿಷಯಗಳಲ್ಲಿ ವಿದ್ವತ್ತು ಪಡೆದ, ಸಮಾನತೆಯ ಹರಿಕಾರ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಮೋದಿಯವರಿಗೆ ಹೋಲಿಸಿರುವುದು ಸರಿಯಲ್ಲ ಎಂದು ಆಕ್ಷೇಪಗಳು ವ್ಯಕ್ತವಾಗಿವೆ.

ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಬಿಡುಗಡೆ ಮಾಡಿದ ಈ ಪುಸ್ತಕವು ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವ್ಯಕ್ತಿತ್ವಗಳ ನಡುವಿನ ಕೆಲವು ಗಮನಾರ್ಹ ಸಮಾನಾಂತರಗಳನ್ನು ತೆರೆದಿಡುತ್ತದೆ ಎಂದು ಇಳಯರಾಜ ಅವರ ಮುನ್ನುಡಿ ಹೇಳುತ್ತದೆ.

ಈ ಇಬ್ಬರೂ ವ್ಯಕ್ತಿಗಳು ಸಾಮಾಜಿಕವಾಗಿ ಅಶಕ್ತಗೊಂಡ ವರ್ಗಗಳ ಜನರ ವಿರುದ್ಧ ಧ್ವನಿ ಎತ್ತಿದವರು. ಇಬ್ಬರೂ ಬಡತನ ಮತ್ತು ಉಸಿರುಗಟ್ಟಿಸುವ ಸಾಮಾಜಿಕ ರಚನೆಗಳನ್ನು ಹತ್ತಿರದಿಂದ ನೋಡಿದವರು. ಅವುಗಳನ್ನು ನಿರ್ಮೂಲನೆ ಮಾಡುವುದಕ್ಕಾಗಿ ಕೆಲಸ ಮಾಡಿದರು. ಇಬ್ಬರೂ ಭಾರತಕ್ಕಾಗಿ ದೊಡ್ಡ ಕನಸು ಕಂಡರು. ಆದರೆ ಇಬ್ಬರೂ ಕೇವಲ ಚಿಂತನೆಯಲ್ಲಿ ತೊಡಗದೆ ಕ್ರಿಯೆಯನ್ನು ನಂಬಿದವರು ಎಂದಿದ್ದಾರೆ.

ತ್ರಿವಳಿ ತಲಾಖ್ ಮತ್ತು ‘ಬೇಟಿ ಬಚಾವೋ ಬೇಟಿ ಪಢಾವೋ’ ಕಾರ್ಯಕ್ರಮ ಸೇರಿದಂತೆ ‘ಮಹಿಳೆಯರ ಪ್ರಗತಿಗಾಗಿ’ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಕೆಲಸದ ಬಗ್ಗೆ ಅಂಬೇಡ್ಕರ್‌‌ರವರು “ಹೆಮ್ಮೆಪಡುತ್ತಿದ್ದರು” ಎಂದು ಮುನ್ನುಡಿ ಹೇಳುತ್ತದೆ. ಮಹಿಳೆಯರ ವಿವಾಹದ ವಯಸ್ಸು 18 ರಿಂದ 21ಕ್ಕೆ ಏರಿಸುವ ಉದ್ದೇಶಿತ ಶಾಸನವನ್ನು ಪ್ರಶಂಸಿಸಲಾಗಿದೆ.

“ಡಾ ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು, ದೂರದೃಷ್ಟಿಯ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ”ಯನ್ನು ಬೆಸೆಯುವ ಪ್ರಯತ್ನವನ್ನು ಪುಸ್ತಕ ಮಾಡುವುದಾಗಿ ಇಳಯರಾಜ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

“ಸಾಮಾಜಿಕವಾಗಿ ಅಂಚಿನಲ್ಲಿರುವ ಸಮುದಾಯಗಳಿಗೆ ಕಾನೂನು ರಕ್ಷಣೆಯನ್ನು ಹಲವು ರೀತಿಯಲ್ಲಿ ನೀಡಲಾಗಿದೆ” ಎಂದು ಮುನ್ನುಡಿ ಹೇಳುತ್ತದೆ. “ಶೌಚಾಲಯಗಳನ್ನು, ಮನೆಗಳನ್ನು ನಿರ್ಮಿಸುವ ಮೂಲಕ ಮತ್ತು ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ” ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳ ಜನರಿಗೆ ಸಹಾಯ ಮಾಡಲು ಪ್ರಧಾನಿ ಪ್ರಯತ್ನಿಸಿದ್ದಾರೆ ಎಂದು ಶ್ಲಾಘಿಸಲಾಗಿದೆ.

ಮುನ್ನುಡಿಯಲ್ಲಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಡಿಎಂಕೆಯ ರಾಜ್ಯಸಭಾ ಸಂಸದ ಟಿಕೆಎಸ್ ಇಳಂಗೋವನ್, ಮೋದಿ ಮತ್ತು ಅಂಬೇಡ್ಕರ್ ಅವರನ್ನು ಹೋಲಿಸುವುದು ತಪ್ಪು ಎಂದಿದ್ದಾರೆ.

ಅಂಬೇಡ್ಕರ್ ಅವರು ವರ್ಣ ವ್ಯವಸ್ಥೆಯಿಂದ ತುಳಿತಕ್ಕೊಳಗಾದವರ ಪರ ಕೆಲಸ ಮಾಡಿದರೆ, ಮೋದಿಯವರು ಅಂಬೇಡ್ಕರ್ ವಿರುದ್ಧ ಹೋರಾಡುತ್ತಿದ್ದ ಮನುಧರ್ಮ ವ್ಯವಸ್ಥೆಗೆ ಸೇರಿದ್ದಾರೆ ಎಂದು ಇಳಂಗೋವನ್ ಸ್ಪಷ್ಟಪಡಿಸಿದ್ದಾರೆ.

ಇಳಯರಾಜಾ ಅವರು ಶ್ಲಾಘಿಸಿದ ತ್ರಿವಳಿ ತಲಾಖ್ ಕಾನೂನಿನಂತಹ ನೀತಿಗಳು ಮತ್ತು ಕಾನೂನುಗಳು ದೋಷಪೂರಿತವಾಗಿವೆ, ಮುಸ್ಲಿಮರಿಗೆ ಹಾನಿಕಾರಕವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಳೆಯ ರಾಜ ನೀವು! ನಿಮ್ಮ ಮಿದುಳಿಗೆ ಏನಾಗಿದೆ? ಅಂಬೇಡ್ಕರ್ ರಿಗೆ ಮೋದಿಯವರು ಸಾಟಿಯಾಗಬಲ್ಲರೇ?

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...