Homeಮುಖಪುಟಮೋದಿಯನ್ನು ಅಂಬೇಡ್ಕರ್‌ರವರಿಗೆ ಹೋಲಿಸಿದ ಸಂಗೀತ ನಿರ್ದೇಶಕ ಇಳಯರಾಜ

ಮೋದಿಯನ್ನು ಅಂಬೇಡ್ಕರ್‌ರವರಿಗೆ ಹೋಲಿಸಿದ ಸಂಗೀತ ನಿರ್ದೇಶಕ ಇಳಯರಾಜ

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಹೋಲಿಕೆ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ‘ಅಂಬೇಡ್ಕರ್ ಮತ್ತು ಮೋದಿ: ರಿಫಾರ್ಮರ್ಸ್ ಐಡಿಯಾಸ್, ಪರ್ಫಾಮರ್ಸ್ ಇಂಪ್ಲಿಮೆಂಟೇಶನ್’ ಪುಸ್ತಕದ ಮುನ್ನುಡಿಯನ್ನು ಇಳಯರಾಜ ಅವರು ಬರೆದಿದ್ದು, ಮೋದಿ ಹಾಗೂ ಅಂಬೇಡ್ಕರ್‌ರನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗಿದ್ದಾರೆಂದು ಆರೋಪಿಸಲಾಗಿದೆ.

ಇಳಯರಾಜ ಅವರು ತಮ್ಮ ಮುನ್ನುಡಿಯಲ್ಲಿ ಅಂಬೇಡ್ಕರ್ ಮತ್ತು ಮೋದಿಯವರ ನಡುವೆ ಸಮಾನ ಅಂಶಗಳಿವೆ ಎಂದಿದ್ದಾರೆ. “ಬಡತನ ಮತ್ತು ಉಸಿರುಗಟ್ಟಿಸುವ ಸಾಮಾಜಿಕ ರಚನೆಗಳನ್ನು ಹತ್ತಿರದಿಂದ ನೋಡಿದ ವ್ಯಕ್ತಿಗಳಿವರು. ಅವುಗಳ ನಿರ್ಮೂಲನೆಗಾಗಿ ಕೆಲಸ ಮಾಡಿದರು” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಳಯರಾಜ ಅವರ ಬರಹಕ್ಕೆ ವಿರೋಧಗಳು ಬಂದಿವೆ. ಹಲವು ವಿಷಯಗಳಲ್ಲಿ ವಿದ್ವತ್ತು ಪಡೆದ, ಸಮಾನತೆಯ ಹರಿಕಾರ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಮೋದಿಯವರಿಗೆ ಹೋಲಿಸಿರುವುದು ಸರಿಯಲ್ಲ ಎಂದು ಆಕ್ಷೇಪಗಳು ವ್ಯಕ್ತವಾಗಿವೆ.

ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಬಿಡುಗಡೆ ಮಾಡಿದ ಈ ಪುಸ್ತಕವು ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವ್ಯಕ್ತಿತ್ವಗಳ ನಡುವಿನ ಕೆಲವು ಗಮನಾರ್ಹ ಸಮಾನಾಂತರಗಳನ್ನು ತೆರೆದಿಡುತ್ತದೆ ಎಂದು ಇಳಯರಾಜ ಅವರ ಮುನ್ನುಡಿ ಹೇಳುತ್ತದೆ.

ಈ ಇಬ್ಬರೂ ವ್ಯಕ್ತಿಗಳು ಸಾಮಾಜಿಕವಾಗಿ ಅಶಕ್ತಗೊಂಡ ವರ್ಗಗಳ ಜನರ ವಿರುದ್ಧ ಧ್ವನಿ ಎತ್ತಿದವರು. ಇಬ್ಬರೂ ಬಡತನ ಮತ್ತು ಉಸಿರುಗಟ್ಟಿಸುವ ಸಾಮಾಜಿಕ ರಚನೆಗಳನ್ನು ಹತ್ತಿರದಿಂದ ನೋಡಿದವರು. ಅವುಗಳನ್ನು ನಿರ್ಮೂಲನೆ ಮಾಡುವುದಕ್ಕಾಗಿ ಕೆಲಸ ಮಾಡಿದರು. ಇಬ್ಬರೂ ಭಾರತಕ್ಕಾಗಿ ದೊಡ್ಡ ಕನಸು ಕಂಡರು. ಆದರೆ ಇಬ್ಬರೂ ಕೇವಲ ಚಿಂತನೆಯಲ್ಲಿ ತೊಡಗದೆ ಕ್ರಿಯೆಯನ್ನು ನಂಬಿದವರು ಎಂದಿದ್ದಾರೆ.

ತ್ರಿವಳಿ ತಲಾಖ್ ಮತ್ತು ‘ಬೇಟಿ ಬಚಾವೋ ಬೇಟಿ ಪಢಾವೋ’ ಕಾರ್ಯಕ್ರಮ ಸೇರಿದಂತೆ ‘ಮಹಿಳೆಯರ ಪ್ರಗತಿಗಾಗಿ’ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಕೆಲಸದ ಬಗ್ಗೆ ಅಂಬೇಡ್ಕರ್‌‌ರವರು “ಹೆಮ್ಮೆಪಡುತ್ತಿದ್ದರು” ಎಂದು ಮುನ್ನುಡಿ ಹೇಳುತ್ತದೆ. ಮಹಿಳೆಯರ ವಿವಾಹದ ವಯಸ್ಸು 18 ರಿಂದ 21ಕ್ಕೆ ಏರಿಸುವ ಉದ್ದೇಶಿತ ಶಾಸನವನ್ನು ಪ್ರಶಂಸಿಸಲಾಗಿದೆ.

“ಡಾ ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು, ದೂರದೃಷ್ಟಿಯ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ”ಯನ್ನು ಬೆಸೆಯುವ ಪ್ರಯತ್ನವನ್ನು ಪುಸ್ತಕ ಮಾಡುವುದಾಗಿ ಇಳಯರಾಜ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

“ಸಾಮಾಜಿಕವಾಗಿ ಅಂಚಿನಲ್ಲಿರುವ ಸಮುದಾಯಗಳಿಗೆ ಕಾನೂನು ರಕ್ಷಣೆಯನ್ನು ಹಲವು ರೀತಿಯಲ್ಲಿ ನೀಡಲಾಗಿದೆ” ಎಂದು ಮುನ್ನುಡಿ ಹೇಳುತ್ತದೆ. “ಶೌಚಾಲಯಗಳನ್ನು, ಮನೆಗಳನ್ನು ನಿರ್ಮಿಸುವ ಮೂಲಕ ಮತ್ತು ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ” ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳ ಜನರಿಗೆ ಸಹಾಯ ಮಾಡಲು ಪ್ರಧಾನಿ ಪ್ರಯತ್ನಿಸಿದ್ದಾರೆ ಎಂದು ಶ್ಲಾಘಿಸಲಾಗಿದೆ.

ಮುನ್ನುಡಿಯಲ್ಲಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಡಿಎಂಕೆಯ ರಾಜ್ಯಸಭಾ ಸಂಸದ ಟಿಕೆಎಸ್ ಇಳಂಗೋವನ್, ಮೋದಿ ಮತ್ತು ಅಂಬೇಡ್ಕರ್ ಅವರನ್ನು ಹೋಲಿಸುವುದು ತಪ್ಪು ಎಂದಿದ್ದಾರೆ.

ಅಂಬೇಡ್ಕರ್ ಅವರು ವರ್ಣ ವ್ಯವಸ್ಥೆಯಿಂದ ತುಳಿತಕ್ಕೊಳಗಾದವರ ಪರ ಕೆಲಸ ಮಾಡಿದರೆ, ಮೋದಿಯವರು ಅಂಬೇಡ್ಕರ್ ವಿರುದ್ಧ ಹೋರಾಡುತ್ತಿದ್ದ ಮನುಧರ್ಮ ವ್ಯವಸ್ಥೆಗೆ ಸೇರಿದ್ದಾರೆ ಎಂದು ಇಳಂಗೋವನ್ ಸ್ಪಷ್ಟಪಡಿಸಿದ್ದಾರೆ.

ಇಳಯರಾಜಾ ಅವರು ಶ್ಲಾಘಿಸಿದ ತ್ರಿವಳಿ ತಲಾಖ್ ಕಾನೂನಿನಂತಹ ನೀತಿಗಳು ಮತ್ತು ಕಾನೂನುಗಳು ದೋಷಪೂರಿತವಾಗಿವೆ, ಮುಸ್ಲಿಮರಿಗೆ ಹಾನಿಕಾರಕವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಳೆಯ ರಾಜ ನೀವು! ನಿಮ್ಮ ಮಿದುಳಿಗೆ ಏನಾಗಿದೆ? ಅಂಬೇಡ್ಕರ್ ರಿಗೆ ಮೋದಿಯವರು ಸಾಟಿಯಾಗಬಲ್ಲರೇ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...