Homeಮುಖಪುಟಮೋದಿಯನ್ನು ಅಂಬೇಡ್ಕರ್‌ರವರಿಗೆ ಹೋಲಿಸಿದ ಸಂಗೀತ ನಿರ್ದೇಶಕ ಇಳಯರಾಜ

ಮೋದಿಯನ್ನು ಅಂಬೇಡ್ಕರ್‌ರವರಿಗೆ ಹೋಲಿಸಿದ ಸಂಗೀತ ನಿರ್ದೇಶಕ ಇಳಯರಾಜ

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಹೋಲಿಕೆ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ‘ಅಂಬೇಡ್ಕರ್ ಮತ್ತು ಮೋದಿ: ರಿಫಾರ್ಮರ್ಸ್ ಐಡಿಯಾಸ್, ಪರ್ಫಾಮರ್ಸ್ ಇಂಪ್ಲಿಮೆಂಟೇಶನ್’ ಪುಸ್ತಕದ ಮುನ್ನುಡಿಯನ್ನು ಇಳಯರಾಜ ಅವರು ಬರೆದಿದ್ದು, ಮೋದಿ ಹಾಗೂ ಅಂಬೇಡ್ಕರ್‌ರನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗಿದ್ದಾರೆಂದು ಆರೋಪಿಸಲಾಗಿದೆ.

ಇಳಯರಾಜ ಅವರು ತಮ್ಮ ಮುನ್ನುಡಿಯಲ್ಲಿ ಅಂಬೇಡ್ಕರ್ ಮತ್ತು ಮೋದಿಯವರ ನಡುವೆ ಸಮಾನ ಅಂಶಗಳಿವೆ ಎಂದಿದ್ದಾರೆ. “ಬಡತನ ಮತ್ತು ಉಸಿರುಗಟ್ಟಿಸುವ ಸಾಮಾಜಿಕ ರಚನೆಗಳನ್ನು ಹತ್ತಿರದಿಂದ ನೋಡಿದ ವ್ಯಕ್ತಿಗಳಿವರು. ಅವುಗಳ ನಿರ್ಮೂಲನೆಗಾಗಿ ಕೆಲಸ ಮಾಡಿದರು” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಳಯರಾಜ ಅವರ ಬರಹಕ್ಕೆ ವಿರೋಧಗಳು ಬಂದಿವೆ. ಹಲವು ವಿಷಯಗಳಲ್ಲಿ ವಿದ್ವತ್ತು ಪಡೆದ, ಸಮಾನತೆಯ ಹರಿಕಾರ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಮೋದಿಯವರಿಗೆ ಹೋಲಿಸಿರುವುದು ಸರಿಯಲ್ಲ ಎಂದು ಆಕ್ಷೇಪಗಳು ವ್ಯಕ್ತವಾಗಿವೆ.

ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಬಿಡುಗಡೆ ಮಾಡಿದ ಈ ಪುಸ್ತಕವು ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವ್ಯಕ್ತಿತ್ವಗಳ ನಡುವಿನ ಕೆಲವು ಗಮನಾರ್ಹ ಸಮಾನಾಂತರಗಳನ್ನು ತೆರೆದಿಡುತ್ತದೆ ಎಂದು ಇಳಯರಾಜ ಅವರ ಮುನ್ನುಡಿ ಹೇಳುತ್ತದೆ.

ಈ ಇಬ್ಬರೂ ವ್ಯಕ್ತಿಗಳು ಸಾಮಾಜಿಕವಾಗಿ ಅಶಕ್ತಗೊಂಡ ವರ್ಗಗಳ ಜನರ ವಿರುದ್ಧ ಧ್ವನಿ ಎತ್ತಿದವರು. ಇಬ್ಬರೂ ಬಡತನ ಮತ್ತು ಉಸಿರುಗಟ್ಟಿಸುವ ಸಾಮಾಜಿಕ ರಚನೆಗಳನ್ನು ಹತ್ತಿರದಿಂದ ನೋಡಿದವರು. ಅವುಗಳನ್ನು ನಿರ್ಮೂಲನೆ ಮಾಡುವುದಕ್ಕಾಗಿ ಕೆಲಸ ಮಾಡಿದರು. ಇಬ್ಬರೂ ಭಾರತಕ್ಕಾಗಿ ದೊಡ್ಡ ಕನಸು ಕಂಡರು. ಆದರೆ ಇಬ್ಬರೂ ಕೇವಲ ಚಿಂತನೆಯಲ್ಲಿ ತೊಡಗದೆ ಕ್ರಿಯೆಯನ್ನು ನಂಬಿದವರು ಎಂದಿದ್ದಾರೆ.

ತ್ರಿವಳಿ ತಲಾಖ್ ಮತ್ತು ‘ಬೇಟಿ ಬಚಾವೋ ಬೇಟಿ ಪಢಾವೋ’ ಕಾರ್ಯಕ್ರಮ ಸೇರಿದಂತೆ ‘ಮಹಿಳೆಯರ ಪ್ರಗತಿಗಾಗಿ’ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಕೆಲಸದ ಬಗ್ಗೆ ಅಂಬೇಡ್ಕರ್‌‌ರವರು “ಹೆಮ್ಮೆಪಡುತ್ತಿದ್ದರು” ಎಂದು ಮುನ್ನುಡಿ ಹೇಳುತ್ತದೆ. ಮಹಿಳೆಯರ ವಿವಾಹದ ವಯಸ್ಸು 18 ರಿಂದ 21ಕ್ಕೆ ಏರಿಸುವ ಉದ್ದೇಶಿತ ಶಾಸನವನ್ನು ಪ್ರಶಂಸಿಸಲಾಗಿದೆ.

“ಡಾ ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು, ದೂರದೃಷ್ಟಿಯ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ”ಯನ್ನು ಬೆಸೆಯುವ ಪ್ರಯತ್ನವನ್ನು ಪುಸ್ತಕ ಮಾಡುವುದಾಗಿ ಇಳಯರಾಜ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

“ಸಾಮಾಜಿಕವಾಗಿ ಅಂಚಿನಲ್ಲಿರುವ ಸಮುದಾಯಗಳಿಗೆ ಕಾನೂನು ರಕ್ಷಣೆಯನ್ನು ಹಲವು ರೀತಿಯಲ್ಲಿ ನೀಡಲಾಗಿದೆ” ಎಂದು ಮುನ್ನುಡಿ ಹೇಳುತ್ತದೆ. “ಶೌಚಾಲಯಗಳನ್ನು, ಮನೆಗಳನ್ನು ನಿರ್ಮಿಸುವ ಮೂಲಕ ಮತ್ತು ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ” ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳ ಜನರಿಗೆ ಸಹಾಯ ಮಾಡಲು ಪ್ರಧಾನಿ ಪ್ರಯತ್ನಿಸಿದ್ದಾರೆ ಎಂದು ಶ್ಲಾಘಿಸಲಾಗಿದೆ.

ಮುನ್ನುಡಿಯಲ್ಲಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಡಿಎಂಕೆಯ ರಾಜ್ಯಸಭಾ ಸಂಸದ ಟಿಕೆಎಸ್ ಇಳಂಗೋವನ್, ಮೋದಿ ಮತ್ತು ಅಂಬೇಡ್ಕರ್ ಅವರನ್ನು ಹೋಲಿಸುವುದು ತಪ್ಪು ಎಂದಿದ್ದಾರೆ.

ಅಂಬೇಡ್ಕರ್ ಅವರು ವರ್ಣ ವ್ಯವಸ್ಥೆಯಿಂದ ತುಳಿತಕ್ಕೊಳಗಾದವರ ಪರ ಕೆಲಸ ಮಾಡಿದರೆ, ಮೋದಿಯವರು ಅಂಬೇಡ್ಕರ್ ವಿರುದ್ಧ ಹೋರಾಡುತ್ತಿದ್ದ ಮನುಧರ್ಮ ವ್ಯವಸ್ಥೆಗೆ ಸೇರಿದ್ದಾರೆ ಎಂದು ಇಳಂಗೋವನ್ ಸ್ಪಷ್ಟಪಡಿಸಿದ್ದಾರೆ.

ಇಳಯರಾಜಾ ಅವರು ಶ್ಲಾಘಿಸಿದ ತ್ರಿವಳಿ ತಲಾಖ್ ಕಾನೂನಿನಂತಹ ನೀತಿಗಳು ಮತ್ತು ಕಾನೂನುಗಳು ದೋಷಪೂರಿತವಾಗಿವೆ, ಮುಸ್ಲಿಮರಿಗೆ ಹಾನಿಕಾರಕವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಳೆಯ ರಾಜ ನೀವು! ನಿಮ್ಮ ಮಿದುಳಿಗೆ ಏನಾಗಿದೆ? ಅಂಬೇಡ್ಕರ್ ರಿಗೆ ಮೋದಿಯವರು ಸಾಟಿಯಾಗಬಲ್ಲರೇ?

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...