Homeಮುಖಪುಟಮೋದಿಯನ್ನು ಅಂಬೇಡ್ಕರ್‌ರವರಿಗೆ ಹೋಲಿಸಿದ ಸಂಗೀತ ನಿರ್ದೇಶಕ ಇಳಯರಾಜ

ಮೋದಿಯನ್ನು ಅಂಬೇಡ್ಕರ್‌ರವರಿಗೆ ಹೋಲಿಸಿದ ಸಂಗೀತ ನಿರ್ದೇಶಕ ಇಳಯರಾಜ

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಹೋಲಿಕೆ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ‘ಅಂಬೇಡ್ಕರ್ ಮತ್ತು ಮೋದಿ: ರಿಫಾರ್ಮರ್ಸ್ ಐಡಿಯಾಸ್, ಪರ್ಫಾಮರ್ಸ್ ಇಂಪ್ಲಿಮೆಂಟೇಶನ್’ ಪುಸ್ತಕದ ಮುನ್ನುಡಿಯನ್ನು ಇಳಯರಾಜ ಅವರು ಬರೆದಿದ್ದು, ಮೋದಿ ಹಾಗೂ ಅಂಬೇಡ್ಕರ್‌ರನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗಿದ್ದಾರೆಂದು ಆರೋಪಿಸಲಾಗಿದೆ.

ಇಳಯರಾಜ ಅವರು ತಮ್ಮ ಮುನ್ನುಡಿಯಲ್ಲಿ ಅಂಬೇಡ್ಕರ್ ಮತ್ತು ಮೋದಿಯವರ ನಡುವೆ ಸಮಾನ ಅಂಶಗಳಿವೆ ಎಂದಿದ್ದಾರೆ. “ಬಡತನ ಮತ್ತು ಉಸಿರುಗಟ್ಟಿಸುವ ಸಾಮಾಜಿಕ ರಚನೆಗಳನ್ನು ಹತ್ತಿರದಿಂದ ನೋಡಿದ ವ್ಯಕ್ತಿಗಳಿವರು. ಅವುಗಳ ನಿರ್ಮೂಲನೆಗಾಗಿ ಕೆಲಸ ಮಾಡಿದರು” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಳಯರಾಜ ಅವರ ಬರಹಕ್ಕೆ ವಿರೋಧಗಳು ಬಂದಿವೆ. ಹಲವು ವಿಷಯಗಳಲ್ಲಿ ವಿದ್ವತ್ತು ಪಡೆದ, ಸಮಾನತೆಯ ಹರಿಕಾರ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಮೋದಿಯವರಿಗೆ ಹೋಲಿಸಿರುವುದು ಸರಿಯಲ್ಲ ಎಂದು ಆಕ್ಷೇಪಗಳು ವ್ಯಕ್ತವಾಗಿವೆ.

ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಬಿಡುಗಡೆ ಮಾಡಿದ ಈ ಪುಸ್ತಕವು ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವ್ಯಕ್ತಿತ್ವಗಳ ನಡುವಿನ ಕೆಲವು ಗಮನಾರ್ಹ ಸಮಾನಾಂತರಗಳನ್ನು ತೆರೆದಿಡುತ್ತದೆ ಎಂದು ಇಳಯರಾಜ ಅವರ ಮುನ್ನುಡಿ ಹೇಳುತ್ತದೆ.

ಈ ಇಬ್ಬರೂ ವ್ಯಕ್ತಿಗಳು ಸಾಮಾಜಿಕವಾಗಿ ಅಶಕ್ತಗೊಂಡ ವರ್ಗಗಳ ಜನರ ವಿರುದ್ಧ ಧ್ವನಿ ಎತ್ತಿದವರು. ಇಬ್ಬರೂ ಬಡತನ ಮತ್ತು ಉಸಿರುಗಟ್ಟಿಸುವ ಸಾಮಾಜಿಕ ರಚನೆಗಳನ್ನು ಹತ್ತಿರದಿಂದ ನೋಡಿದವರು. ಅವುಗಳನ್ನು ನಿರ್ಮೂಲನೆ ಮಾಡುವುದಕ್ಕಾಗಿ ಕೆಲಸ ಮಾಡಿದರು. ಇಬ್ಬರೂ ಭಾರತಕ್ಕಾಗಿ ದೊಡ್ಡ ಕನಸು ಕಂಡರು. ಆದರೆ ಇಬ್ಬರೂ ಕೇವಲ ಚಿಂತನೆಯಲ್ಲಿ ತೊಡಗದೆ ಕ್ರಿಯೆಯನ್ನು ನಂಬಿದವರು ಎಂದಿದ್ದಾರೆ.

ತ್ರಿವಳಿ ತಲಾಖ್ ಮತ್ತು ‘ಬೇಟಿ ಬಚಾವೋ ಬೇಟಿ ಪಢಾವೋ’ ಕಾರ್ಯಕ್ರಮ ಸೇರಿದಂತೆ ‘ಮಹಿಳೆಯರ ಪ್ರಗತಿಗಾಗಿ’ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಕೆಲಸದ ಬಗ್ಗೆ ಅಂಬೇಡ್ಕರ್‌‌ರವರು “ಹೆಮ್ಮೆಪಡುತ್ತಿದ್ದರು” ಎಂದು ಮುನ್ನುಡಿ ಹೇಳುತ್ತದೆ. ಮಹಿಳೆಯರ ವಿವಾಹದ ವಯಸ್ಸು 18 ರಿಂದ 21ಕ್ಕೆ ಏರಿಸುವ ಉದ್ದೇಶಿತ ಶಾಸನವನ್ನು ಪ್ರಶಂಸಿಸಲಾಗಿದೆ.

“ಡಾ ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು, ದೂರದೃಷ್ಟಿಯ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ”ಯನ್ನು ಬೆಸೆಯುವ ಪ್ರಯತ್ನವನ್ನು ಪುಸ್ತಕ ಮಾಡುವುದಾಗಿ ಇಳಯರಾಜ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

“ಸಾಮಾಜಿಕವಾಗಿ ಅಂಚಿನಲ್ಲಿರುವ ಸಮುದಾಯಗಳಿಗೆ ಕಾನೂನು ರಕ್ಷಣೆಯನ್ನು ಹಲವು ರೀತಿಯಲ್ಲಿ ನೀಡಲಾಗಿದೆ” ಎಂದು ಮುನ್ನುಡಿ ಹೇಳುತ್ತದೆ. “ಶೌಚಾಲಯಗಳನ್ನು, ಮನೆಗಳನ್ನು ನಿರ್ಮಿಸುವ ಮೂಲಕ ಮತ್ತು ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ” ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳ ಜನರಿಗೆ ಸಹಾಯ ಮಾಡಲು ಪ್ರಧಾನಿ ಪ್ರಯತ್ನಿಸಿದ್ದಾರೆ ಎಂದು ಶ್ಲಾಘಿಸಲಾಗಿದೆ.

ಮುನ್ನುಡಿಯಲ್ಲಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಡಿಎಂಕೆಯ ರಾಜ್ಯಸಭಾ ಸಂಸದ ಟಿಕೆಎಸ್ ಇಳಂಗೋವನ್, ಮೋದಿ ಮತ್ತು ಅಂಬೇಡ್ಕರ್ ಅವರನ್ನು ಹೋಲಿಸುವುದು ತಪ್ಪು ಎಂದಿದ್ದಾರೆ.

ಅಂಬೇಡ್ಕರ್ ಅವರು ವರ್ಣ ವ್ಯವಸ್ಥೆಯಿಂದ ತುಳಿತಕ್ಕೊಳಗಾದವರ ಪರ ಕೆಲಸ ಮಾಡಿದರೆ, ಮೋದಿಯವರು ಅಂಬೇಡ್ಕರ್ ವಿರುದ್ಧ ಹೋರಾಡುತ್ತಿದ್ದ ಮನುಧರ್ಮ ವ್ಯವಸ್ಥೆಗೆ ಸೇರಿದ್ದಾರೆ ಎಂದು ಇಳಂಗೋವನ್ ಸ್ಪಷ್ಟಪಡಿಸಿದ್ದಾರೆ.

ಇಳಯರಾಜಾ ಅವರು ಶ್ಲಾಘಿಸಿದ ತ್ರಿವಳಿ ತಲಾಖ್ ಕಾನೂನಿನಂತಹ ನೀತಿಗಳು ಮತ್ತು ಕಾನೂನುಗಳು ದೋಷಪೂರಿತವಾಗಿವೆ, ಮುಸ್ಲಿಮರಿಗೆ ಹಾನಿಕಾರಕವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಳೆಯ ರಾಜ ನೀವು! ನಿಮ್ಮ ಮಿದುಳಿಗೆ ಏನಾಗಿದೆ? ಅಂಬೇಡ್ಕರ್ ರಿಗೆ ಮೋದಿಯವರು ಸಾಟಿಯಾಗಬಲ್ಲರೇ?

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...