Homeಮುಖಪುಟಮೋದಿಯನ್ನು ಅಂಬೇಡ್ಕರ್‌ರವರಿಗೆ ಹೋಲಿಸಿದ ಸಂಗೀತ ನಿರ್ದೇಶಕ ಇಳಯರಾಜ

ಮೋದಿಯನ್ನು ಅಂಬೇಡ್ಕರ್‌ರವರಿಗೆ ಹೋಲಿಸಿದ ಸಂಗೀತ ನಿರ್ದೇಶಕ ಇಳಯರಾಜ

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಹೋಲಿಕೆ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ‘ಅಂಬೇಡ್ಕರ್ ಮತ್ತು ಮೋದಿ: ರಿಫಾರ್ಮರ್ಸ್ ಐಡಿಯಾಸ್, ಪರ್ಫಾಮರ್ಸ್ ಇಂಪ್ಲಿಮೆಂಟೇಶನ್’ ಪುಸ್ತಕದ ಮುನ್ನುಡಿಯನ್ನು ಇಳಯರಾಜ ಅವರು ಬರೆದಿದ್ದು, ಮೋದಿ ಹಾಗೂ ಅಂಬೇಡ್ಕರ್‌ರನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗಿದ್ದಾರೆಂದು ಆರೋಪಿಸಲಾಗಿದೆ.

ಇಳಯರಾಜ ಅವರು ತಮ್ಮ ಮುನ್ನುಡಿಯಲ್ಲಿ ಅಂಬೇಡ್ಕರ್ ಮತ್ತು ಮೋದಿಯವರ ನಡುವೆ ಸಮಾನ ಅಂಶಗಳಿವೆ ಎಂದಿದ್ದಾರೆ. “ಬಡತನ ಮತ್ತು ಉಸಿರುಗಟ್ಟಿಸುವ ಸಾಮಾಜಿಕ ರಚನೆಗಳನ್ನು ಹತ್ತಿರದಿಂದ ನೋಡಿದ ವ್ಯಕ್ತಿಗಳಿವರು. ಅವುಗಳ ನಿರ್ಮೂಲನೆಗಾಗಿ ಕೆಲಸ ಮಾಡಿದರು” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಳಯರಾಜ ಅವರ ಬರಹಕ್ಕೆ ವಿರೋಧಗಳು ಬಂದಿವೆ. ಹಲವು ವಿಷಯಗಳಲ್ಲಿ ವಿದ್ವತ್ತು ಪಡೆದ, ಸಮಾನತೆಯ ಹರಿಕಾರ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಮೋದಿಯವರಿಗೆ ಹೋಲಿಸಿರುವುದು ಸರಿಯಲ್ಲ ಎಂದು ಆಕ್ಷೇಪಗಳು ವ್ಯಕ್ತವಾಗಿವೆ.

ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಬಿಡುಗಡೆ ಮಾಡಿದ ಈ ಪುಸ್ತಕವು ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವ್ಯಕ್ತಿತ್ವಗಳ ನಡುವಿನ ಕೆಲವು ಗಮನಾರ್ಹ ಸಮಾನಾಂತರಗಳನ್ನು ತೆರೆದಿಡುತ್ತದೆ ಎಂದು ಇಳಯರಾಜ ಅವರ ಮುನ್ನುಡಿ ಹೇಳುತ್ತದೆ.

ಈ ಇಬ್ಬರೂ ವ್ಯಕ್ತಿಗಳು ಸಾಮಾಜಿಕವಾಗಿ ಅಶಕ್ತಗೊಂಡ ವರ್ಗಗಳ ಜನರ ವಿರುದ್ಧ ಧ್ವನಿ ಎತ್ತಿದವರು. ಇಬ್ಬರೂ ಬಡತನ ಮತ್ತು ಉಸಿರುಗಟ್ಟಿಸುವ ಸಾಮಾಜಿಕ ರಚನೆಗಳನ್ನು ಹತ್ತಿರದಿಂದ ನೋಡಿದವರು. ಅವುಗಳನ್ನು ನಿರ್ಮೂಲನೆ ಮಾಡುವುದಕ್ಕಾಗಿ ಕೆಲಸ ಮಾಡಿದರು. ಇಬ್ಬರೂ ಭಾರತಕ್ಕಾಗಿ ದೊಡ್ಡ ಕನಸು ಕಂಡರು. ಆದರೆ ಇಬ್ಬರೂ ಕೇವಲ ಚಿಂತನೆಯಲ್ಲಿ ತೊಡಗದೆ ಕ್ರಿಯೆಯನ್ನು ನಂಬಿದವರು ಎಂದಿದ್ದಾರೆ.

ತ್ರಿವಳಿ ತಲಾಖ್ ಮತ್ತು ‘ಬೇಟಿ ಬಚಾವೋ ಬೇಟಿ ಪಢಾವೋ’ ಕಾರ್ಯಕ್ರಮ ಸೇರಿದಂತೆ ‘ಮಹಿಳೆಯರ ಪ್ರಗತಿಗಾಗಿ’ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಕೆಲಸದ ಬಗ್ಗೆ ಅಂಬೇಡ್ಕರ್‌‌ರವರು “ಹೆಮ್ಮೆಪಡುತ್ತಿದ್ದರು” ಎಂದು ಮುನ್ನುಡಿ ಹೇಳುತ್ತದೆ. ಮಹಿಳೆಯರ ವಿವಾಹದ ವಯಸ್ಸು 18 ರಿಂದ 21ಕ್ಕೆ ಏರಿಸುವ ಉದ್ದೇಶಿತ ಶಾಸನವನ್ನು ಪ್ರಶಂಸಿಸಲಾಗಿದೆ.

“ಡಾ ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು, ದೂರದೃಷ್ಟಿಯ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ”ಯನ್ನು ಬೆಸೆಯುವ ಪ್ರಯತ್ನವನ್ನು ಪುಸ್ತಕ ಮಾಡುವುದಾಗಿ ಇಳಯರಾಜ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

“ಸಾಮಾಜಿಕವಾಗಿ ಅಂಚಿನಲ್ಲಿರುವ ಸಮುದಾಯಗಳಿಗೆ ಕಾನೂನು ರಕ್ಷಣೆಯನ್ನು ಹಲವು ರೀತಿಯಲ್ಲಿ ನೀಡಲಾಗಿದೆ” ಎಂದು ಮುನ್ನುಡಿ ಹೇಳುತ್ತದೆ. “ಶೌಚಾಲಯಗಳನ್ನು, ಮನೆಗಳನ್ನು ನಿರ್ಮಿಸುವ ಮೂಲಕ ಮತ್ತು ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ” ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳ ಜನರಿಗೆ ಸಹಾಯ ಮಾಡಲು ಪ್ರಧಾನಿ ಪ್ರಯತ್ನಿಸಿದ್ದಾರೆ ಎಂದು ಶ್ಲಾಘಿಸಲಾಗಿದೆ.

ಮುನ್ನುಡಿಯಲ್ಲಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಡಿಎಂಕೆಯ ರಾಜ್ಯಸಭಾ ಸಂಸದ ಟಿಕೆಎಸ್ ಇಳಂಗೋವನ್, ಮೋದಿ ಮತ್ತು ಅಂಬೇಡ್ಕರ್ ಅವರನ್ನು ಹೋಲಿಸುವುದು ತಪ್ಪು ಎಂದಿದ್ದಾರೆ.

ಅಂಬೇಡ್ಕರ್ ಅವರು ವರ್ಣ ವ್ಯವಸ್ಥೆಯಿಂದ ತುಳಿತಕ್ಕೊಳಗಾದವರ ಪರ ಕೆಲಸ ಮಾಡಿದರೆ, ಮೋದಿಯವರು ಅಂಬೇಡ್ಕರ್ ವಿರುದ್ಧ ಹೋರಾಡುತ್ತಿದ್ದ ಮನುಧರ್ಮ ವ್ಯವಸ್ಥೆಗೆ ಸೇರಿದ್ದಾರೆ ಎಂದು ಇಳಂಗೋವನ್ ಸ್ಪಷ್ಟಪಡಿಸಿದ್ದಾರೆ.

ಇಳಯರಾಜಾ ಅವರು ಶ್ಲಾಘಿಸಿದ ತ್ರಿವಳಿ ತಲಾಖ್ ಕಾನೂನಿನಂತಹ ನೀತಿಗಳು ಮತ್ತು ಕಾನೂನುಗಳು ದೋಷಪೂರಿತವಾಗಿವೆ, ಮುಸ್ಲಿಮರಿಗೆ ಹಾನಿಕಾರಕವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಳೆಯ ರಾಜ ನೀವು! ನಿಮ್ಮ ಮಿದುಳಿಗೆ ಏನಾಗಿದೆ? ಅಂಬೇಡ್ಕರ್ ರಿಗೆ ಮೋದಿಯವರು ಸಾಟಿಯಾಗಬಲ್ಲರೇ?

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...