Homeಮುಖಪುಟಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶ, ಗಣ್ಯರ ಸಂತಾಪ

ಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶ, ಗಣ್ಯರ ಸಂತಾಪ

ಕನ್ನಡ, ತೆಲುಗು ಮತ್ತು ತಮಿಳು ಸೇರಿದಂತೆ 400ಕ್ಕೂ ಹೆಚ್ಚು ಸಿನಿಮಾಗಳಿಗೆ ರಾಜನ್-ನಾಗೇಂದ್ರ ಜೋಡಿ ಸಂಗೀತ ನಿರ್ದೇಶನ ಮಾಡಿದೆ.

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ರಾಜನ್ (85) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಸ್ಯಾಂಡಲ್​ವುಡ್​ನ ಟಾಪ್ ಸಂಗೀತ ನಿರ್ದೇಶಕ ಜೋಡಿಯಾಗಿದ್ದ ರಾಜನ್-ನಾಗೇಂದ್ರ ಸೋದರರ ಪೈಕಿ ಅವರು ಹಿರಿಯರಾಗಿದ್ದರು. ಭಾನುವಾರ (ಅ.11) ರಾತ್ರಿ 11 ಗಂಟೆಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಕನ್ನಡ ಚಲನಚಿತ್ರರಂಗಕ್ಕೆ ರಾಜನ್–ನಾಗೇಂದ್ರ ಜೋಡಿ ನೀಡಿದ ಕೊಡುಗೆ ಅನನ್ಯವಾದುದು. ಈ ಇಬ್ಬರ ಸಂಗೀತ ನಿರ್ದೇಶನದಲ್ಲಿ ಕನ್ನಡವಷ್ಟೇ ಅಲ್ಲದೇ ತೆಲುಗು, ತಮಿಳು ಭಾಷೆಗಳಲ್ಲಿಯೂ ಅತಿ ಮಧುರವಾದ ಗೀತೆಗಳು ಮೂಡಿ ಬಂದಿವೆ. ನಾಗೇಂದ್ರ ಅವರು ಈ ಹಿಂದೆಯೇ ತೀರಿಕೊಂಡಿದ್ದಾರೆ.

ಹೆಬ್ಬಾಳದ ಚಿತಾಗಾರದಲ್ಲಿ ಇಂದು ಅಂತ್ಯಕ್ರಿಯೆ ನೆರವೇರಿಸೋದಾಗಿ ರಾಜನ್​ರ ಪುತ್ರ ಅನಂತ್ ಮಾಹಿತಿ ನೀಡಿದ್ದಾರೆ. ಇವರು ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

ಇದನ್ನೂ ಓದಿ: ಗಾನ ಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ!

ಸುಮಾರು 400ಕ್ಕೂ ಹೆಚ್ಚು ಸಿನಿಮಾಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕನ್ನಡದ ಸುಮಾರು 300, ತೆಲುಗಿನ 100 ಹಾಗೂ ತಮಿಳಿನಲ್ಲೂ ಹಲವು ಚಿತ್ರಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದರು.

ಮೂಲತಃ ಮೈಸೂರಿನವರಾದ ರಾಜನ್‌–ನಾಗೇಂದ್ರ ಜೋಡಿ, ಕನ್ನಡ ಚಿತ್ರರಂಗದ ಸಂಗೀತ ಲೋಕವನ್ನು 1950 ರಿಂದ ಸುಮಾರು ನಾಲ್ಕೂವರೆ ದಶಕಗಳ ಕಾಲ ಆಳಿದವರು. ನಾಗೇಂದ್ರ ಅವರು ತಂದೆ ಮತ್ತು ತಾಯಿಯಿಂದ ಹಾಡುವುದನ್ನು ಕಲಿತಿದ್ದರು. ರಾಜನ್ ಅವರು‌ ಪಿಟೀಲು, ವೀಣಾ ವಾದನದಲ್ಲಿ ಪರಿಣತಿ ಗಳಿಸಿಕೊಂಡಿದ್ದರು.

ಈ ಜೋಡಿ ಕನ್ನಡದಲ್ಲಿ ಎರಡು ಕನಸು, ಶ್ರೀನಿವಾಸ ಕಲ್ಯಾಣ, ಬಯಲು ದಾರಿ, ನಾ ನಿನ್ನ ಮರೆಯಲಾರೆ, ಬಂಗಾರದ ಹೂವು, ಗಂಧದಗುಡಿ, ಹೊಂಬಿಸಿಲು, ಮೇಯರ್‌ ಮುತ್ತಣ್ಣ, ಗಾಳಿಮಾತು, ಚಲಿಸುವ ಮೋಡಗಳು,ನ್ಯಾಯವೇ ದೇವರು, ಭಾಗ್ಯವಂತರು, ಗಿರಿಕನ್ಯೆ, ಚಂದನದ ಗೊಂಬೆ ಸೇರಿದಂತೆ 300ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದೆ.

ಹಿರಿಯ ಸಂಗೀತ ನಿರ್ದೇಶಕರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ’ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ ಶ್ರೀ ರಾಜನ್ ಅವರು ನಿಧನರಾದ ಸುದ್ದಿ ತೀವ್ರ ಶೋಕವನ್ನುಂಟು ಮಾಡಿದೆ. ತಮ್ಮ ಸಹೋದರ ನಾಗೇಂದ್ರಪ್ಪ ಅವರೊಂದಿಗೆ ‘ರಾಜನ್‌-ನಾಗೇಂದ್ರ’ ಹೆಸರಿನಲ್ಲಿ ಜಂಟಿಯಾಗಿ ಅನೇಕ ಜನಪ್ರಿಯ, ಯಶಸ್ವಿ ಕನ್ನಡ ಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಅನಾಥವಾಗಿದೆ’ ಎಂದು ಸಂತಾಪ ಸೂಚಿಸಿದ್ದಾರೆ.

’ಚಿತ್ರರಸಿಕರು ಎಂದಿಗೂ ಮರೆಯಲಾರದ ತಮ್ಮ ನೂರಾರು ಸುಮಧುರ ಗೀತೆಗಳ ಮೂಲಕ ಶ್ರೀ ರಾಜನ್ ಅವರು ಸದಾ ನೆನಪಿನಲ್ಲಿರುತ್ತಾರೆ. ಶ್ರೀ ರಾಜನ್ ಅವರ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ’ ಎಂದಿದ್ದಾರೆ.

ಬಹುಭಾಷಾ ನಟ ಸಾಯಿಕುಮಾರ್‌ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ’ನಿಮ್ಮ ಸುಮಧುರ ರಾಗ ಸಂಯೋಜನೆ ಮೂಲಕ ನೀವೆಂದಿಗೂ ಜೀವಂತವಾಗಿರುತ್ತಿರಿ’ ಎಂದಿದ್ದಾರೆ.


ಇದನ್ನೂ ಓದಿ: ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಗಣ್ಯರ ಕಂಬನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...