Homeಮುಖಪುಟಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶ, ಗಣ್ಯರ ಸಂತಾಪ

ಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶ, ಗಣ್ಯರ ಸಂತಾಪ

ಕನ್ನಡ, ತೆಲುಗು ಮತ್ತು ತಮಿಳು ಸೇರಿದಂತೆ 400ಕ್ಕೂ ಹೆಚ್ಚು ಸಿನಿಮಾಗಳಿಗೆ ರಾಜನ್-ನಾಗೇಂದ್ರ ಜೋಡಿ ಸಂಗೀತ ನಿರ್ದೇಶನ ಮಾಡಿದೆ.

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ರಾಜನ್ (85) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಸ್ಯಾಂಡಲ್​ವುಡ್​ನ ಟಾಪ್ ಸಂಗೀತ ನಿರ್ದೇಶಕ ಜೋಡಿಯಾಗಿದ್ದ ರಾಜನ್-ನಾಗೇಂದ್ರ ಸೋದರರ ಪೈಕಿ ಅವರು ಹಿರಿಯರಾಗಿದ್ದರು. ಭಾನುವಾರ (ಅ.11) ರಾತ್ರಿ 11 ಗಂಟೆಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಕನ್ನಡ ಚಲನಚಿತ್ರರಂಗಕ್ಕೆ ರಾಜನ್–ನಾಗೇಂದ್ರ ಜೋಡಿ ನೀಡಿದ ಕೊಡುಗೆ ಅನನ್ಯವಾದುದು. ಈ ಇಬ್ಬರ ಸಂಗೀತ ನಿರ್ದೇಶನದಲ್ಲಿ ಕನ್ನಡವಷ್ಟೇ ಅಲ್ಲದೇ ತೆಲುಗು, ತಮಿಳು ಭಾಷೆಗಳಲ್ಲಿಯೂ ಅತಿ ಮಧುರವಾದ ಗೀತೆಗಳು ಮೂಡಿ ಬಂದಿವೆ. ನಾಗೇಂದ್ರ ಅವರು ಈ ಹಿಂದೆಯೇ ತೀರಿಕೊಂಡಿದ್ದಾರೆ.

ಹೆಬ್ಬಾಳದ ಚಿತಾಗಾರದಲ್ಲಿ ಇಂದು ಅಂತ್ಯಕ್ರಿಯೆ ನೆರವೇರಿಸೋದಾಗಿ ರಾಜನ್​ರ ಪುತ್ರ ಅನಂತ್ ಮಾಹಿತಿ ನೀಡಿದ್ದಾರೆ. ಇವರು ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

ಇದನ್ನೂ ಓದಿ: ಗಾನ ಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ!

ಸುಮಾರು 400ಕ್ಕೂ ಹೆಚ್ಚು ಸಿನಿಮಾಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕನ್ನಡದ ಸುಮಾರು 300, ತೆಲುಗಿನ 100 ಹಾಗೂ ತಮಿಳಿನಲ್ಲೂ ಹಲವು ಚಿತ್ರಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದರು.

ಮೂಲತಃ ಮೈಸೂರಿನವರಾದ ರಾಜನ್‌–ನಾಗೇಂದ್ರ ಜೋಡಿ, ಕನ್ನಡ ಚಿತ್ರರಂಗದ ಸಂಗೀತ ಲೋಕವನ್ನು 1950 ರಿಂದ ಸುಮಾರು ನಾಲ್ಕೂವರೆ ದಶಕಗಳ ಕಾಲ ಆಳಿದವರು. ನಾಗೇಂದ್ರ ಅವರು ತಂದೆ ಮತ್ತು ತಾಯಿಯಿಂದ ಹಾಡುವುದನ್ನು ಕಲಿತಿದ್ದರು. ರಾಜನ್ ಅವರು‌ ಪಿಟೀಲು, ವೀಣಾ ವಾದನದಲ್ಲಿ ಪರಿಣತಿ ಗಳಿಸಿಕೊಂಡಿದ್ದರು.

ಈ ಜೋಡಿ ಕನ್ನಡದಲ್ಲಿ ಎರಡು ಕನಸು, ಶ್ರೀನಿವಾಸ ಕಲ್ಯಾಣ, ಬಯಲು ದಾರಿ, ನಾ ನಿನ್ನ ಮರೆಯಲಾರೆ, ಬಂಗಾರದ ಹೂವು, ಗಂಧದಗುಡಿ, ಹೊಂಬಿಸಿಲು, ಮೇಯರ್‌ ಮುತ್ತಣ್ಣ, ಗಾಳಿಮಾತು, ಚಲಿಸುವ ಮೋಡಗಳು,ನ್ಯಾಯವೇ ದೇವರು, ಭಾಗ್ಯವಂತರು, ಗಿರಿಕನ್ಯೆ, ಚಂದನದ ಗೊಂಬೆ ಸೇರಿದಂತೆ 300ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದೆ.

ಹಿರಿಯ ಸಂಗೀತ ನಿರ್ದೇಶಕರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ’ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ ಶ್ರೀ ರಾಜನ್ ಅವರು ನಿಧನರಾದ ಸುದ್ದಿ ತೀವ್ರ ಶೋಕವನ್ನುಂಟು ಮಾಡಿದೆ. ತಮ್ಮ ಸಹೋದರ ನಾಗೇಂದ್ರಪ್ಪ ಅವರೊಂದಿಗೆ ‘ರಾಜನ್‌-ನಾಗೇಂದ್ರ’ ಹೆಸರಿನಲ್ಲಿ ಜಂಟಿಯಾಗಿ ಅನೇಕ ಜನಪ್ರಿಯ, ಯಶಸ್ವಿ ಕನ್ನಡ ಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಅನಾಥವಾಗಿದೆ’ ಎಂದು ಸಂತಾಪ ಸೂಚಿಸಿದ್ದಾರೆ.

’ಚಿತ್ರರಸಿಕರು ಎಂದಿಗೂ ಮರೆಯಲಾರದ ತಮ್ಮ ನೂರಾರು ಸುಮಧುರ ಗೀತೆಗಳ ಮೂಲಕ ಶ್ರೀ ರಾಜನ್ ಅವರು ಸದಾ ನೆನಪಿನಲ್ಲಿರುತ್ತಾರೆ. ಶ್ರೀ ರಾಜನ್ ಅವರ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ’ ಎಂದಿದ್ದಾರೆ.

ಬಹುಭಾಷಾ ನಟ ಸಾಯಿಕುಮಾರ್‌ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ’ನಿಮ್ಮ ಸುಮಧುರ ರಾಗ ಸಂಯೋಜನೆ ಮೂಲಕ ನೀವೆಂದಿಗೂ ಜೀವಂತವಾಗಿರುತ್ತಿರಿ’ ಎಂದಿದ್ದಾರೆ.


ಇದನ್ನೂ ಓದಿ: ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಗಣ್ಯರ ಕಂಬನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...