Homeಮುಖಪುಟಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶ, ಗಣ್ಯರ ಸಂತಾಪ

ಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶ, ಗಣ್ಯರ ಸಂತಾಪ

ಕನ್ನಡ, ತೆಲುಗು ಮತ್ತು ತಮಿಳು ಸೇರಿದಂತೆ 400ಕ್ಕೂ ಹೆಚ್ಚು ಸಿನಿಮಾಗಳಿಗೆ ರಾಜನ್-ನಾಗೇಂದ್ರ ಜೋಡಿ ಸಂಗೀತ ನಿರ್ದೇಶನ ಮಾಡಿದೆ.

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ ರಾಜನ್ (85) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಸ್ಯಾಂಡಲ್​ವುಡ್​ನ ಟಾಪ್ ಸಂಗೀತ ನಿರ್ದೇಶಕ ಜೋಡಿಯಾಗಿದ್ದ ರಾಜನ್-ನಾಗೇಂದ್ರ ಸೋದರರ ಪೈಕಿ ಅವರು ಹಿರಿಯರಾಗಿದ್ದರು. ಭಾನುವಾರ (ಅ.11) ರಾತ್ರಿ 11 ಗಂಟೆಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಕನ್ನಡ ಚಲನಚಿತ್ರರಂಗಕ್ಕೆ ರಾಜನ್–ನಾಗೇಂದ್ರ ಜೋಡಿ ನೀಡಿದ ಕೊಡುಗೆ ಅನನ್ಯವಾದುದು. ಈ ಇಬ್ಬರ ಸಂಗೀತ ನಿರ್ದೇಶನದಲ್ಲಿ ಕನ್ನಡವಷ್ಟೇ ಅಲ್ಲದೇ ತೆಲುಗು, ತಮಿಳು ಭಾಷೆಗಳಲ್ಲಿಯೂ ಅತಿ ಮಧುರವಾದ ಗೀತೆಗಳು ಮೂಡಿ ಬಂದಿವೆ. ನಾಗೇಂದ್ರ ಅವರು ಈ ಹಿಂದೆಯೇ ತೀರಿಕೊಂಡಿದ್ದಾರೆ.

ಹೆಬ್ಬಾಳದ ಚಿತಾಗಾರದಲ್ಲಿ ಇಂದು ಅಂತ್ಯಕ್ರಿಯೆ ನೆರವೇರಿಸೋದಾಗಿ ರಾಜನ್​ರ ಪುತ್ರ ಅನಂತ್ ಮಾಹಿತಿ ನೀಡಿದ್ದಾರೆ. ಇವರು ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

ಇದನ್ನೂ ಓದಿ: ಗಾನ ಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ!

ಸುಮಾರು 400ಕ್ಕೂ ಹೆಚ್ಚು ಸಿನಿಮಾಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕನ್ನಡದ ಸುಮಾರು 300, ತೆಲುಗಿನ 100 ಹಾಗೂ ತಮಿಳಿನಲ್ಲೂ ಹಲವು ಚಿತ್ರಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದರು.

ಮೂಲತಃ ಮೈಸೂರಿನವರಾದ ರಾಜನ್‌–ನಾಗೇಂದ್ರ ಜೋಡಿ, ಕನ್ನಡ ಚಿತ್ರರಂಗದ ಸಂಗೀತ ಲೋಕವನ್ನು 1950 ರಿಂದ ಸುಮಾರು ನಾಲ್ಕೂವರೆ ದಶಕಗಳ ಕಾಲ ಆಳಿದವರು. ನಾಗೇಂದ್ರ ಅವರು ತಂದೆ ಮತ್ತು ತಾಯಿಯಿಂದ ಹಾಡುವುದನ್ನು ಕಲಿತಿದ್ದರು. ರಾಜನ್ ಅವರು‌ ಪಿಟೀಲು, ವೀಣಾ ವಾದನದಲ್ಲಿ ಪರಿಣತಿ ಗಳಿಸಿಕೊಂಡಿದ್ದರು.

ಈ ಜೋಡಿ ಕನ್ನಡದಲ್ಲಿ ಎರಡು ಕನಸು, ಶ್ರೀನಿವಾಸ ಕಲ್ಯಾಣ, ಬಯಲು ದಾರಿ, ನಾ ನಿನ್ನ ಮರೆಯಲಾರೆ, ಬಂಗಾರದ ಹೂವು, ಗಂಧದಗುಡಿ, ಹೊಂಬಿಸಿಲು, ಮೇಯರ್‌ ಮುತ್ತಣ್ಣ, ಗಾಳಿಮಾತು, ಚಲಿಸುವ ಮೋಡಗಳು,ನ್ಯಾಯವೇ ದೇವರು, ಭಾಗ್ಯವಂತರು, ಗಿರಿಕನ್ಯೆ, ಚಂದನದ ಗೊಂಬೆ ಸೇರಿದಂತೆ 300ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದೆ.

ಹಿರಿಯ ಸಂಗೀತ ನಿರ್ದೇಶಕರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ’ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ ಶ್ರೀ ರಾಜನ್ ಅವರು ನಿಧನರಾದ ಸುದ್ದಿ ತೀವ್ರ ಶೋಕವನ್ನುಂಟು ಮಾಡಿದೆ. ತಮ್ಮ ಸಹೋದರ ನಾಗೇಂದ್ರಪ್ಪ ಅವರೊಂದಿಗೆ ‘ರಾಜನ್‌-ನಾಗೇಂದ್ರ’ ಹೆಸರಿನಲ್ಲಿ ಜಂಟಿಯಾಗಿ ಅನೇಕ ಜನಪ್ರಿಯ, ಯಶಸ್ವಿ ಕನ್ನಡ ಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಅನಾಥವಾಗಿದೆ’ ಎಂದು ಸಂತಾಪ ಸೂಚಿಸಿದ್ದಾರೆ.

’ಚಿತ್ರರಸಿಕರು ಎಂದಿಗೂ ಮರೆಯಲಾರದ ತಮ್ಮ ನೂರಾರು ಸುಮಧುರ ಗೀತೆಗಳ ಮೂಲಕ ಶ್ರೀ ರಾಜನ್ ಅವರು ಸದಾ ನೆನಪಿನಲ್ಲಿರುತ್ತಾರೆ. ಶ್ರೀ ರಾಜನ್ ಅವರ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ’ ಎಂದಿದ್ದಾರೆ.

ಬಹುಭಾಷಾ ನಟ ಸಾಯಿಕುಮಾರ್‌ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ’ನಿಮ್ಮ ಸುಮಧುರ ರಾಗ ಸಂಯೋಜನೆ ಮೂಲಕ ನೀವೆಂದಿಗೂ ಜೀವಂತವಾಗಿರುತ್ತಿರಿ’ ಎಂದಿದ್ದಾರೆ.


ಇದನ್ನೂ ಓದಿ: ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಗಣ್ಯರ ಕಂಬನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...