Homeಕರ್ನಾಟಕ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

- Advertisement -
- Advertisement -

’ಬಲಿತವರು ದಲಿತರನ್ನು ತಾವು ಮೇಲೆತ್ತುತ್ತಿದ್ದೇವೆ ಎಂದು ಹೇಳಿ ಅವರ ಮನೆಗೆ ಹೋಗಿ ಊಟ ಮಾಡಿದರೆ ದಲಿತರ ಉದ್ದಾರ ಆಗುವುದಿಲ್ಲ’ ಎಂಬ ಅರ್ಥದಲ್ಲಿ ಮಾತನಾಡಿದ್ದ ಸಂಗೀತ ನಿರ್ದೇಶಕ ಡಾ.ಹಂಸಲೇಖ ಅವರ ಮೇಲೆ  ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು ಮಾನಸಿಕ ದಾಳಿ ನಡೆಸಿದ್ದರು. ಇದೇ ವೇಳೆ ಶನಿವಾರ (ನ.28) ನಡೆದ ಝೀ ಕನ್ನಡ ಚಾನೆಲ್‌ನ ಸರಿಗಮಪ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದು ಸಾಮಾಜಿಕ ಜಾಲತಾಣಾದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಹಿತಿ ಹಂಸಲೇಖ ಅವರನ್ನು ಚಾನೆಲ್ ಕಾರ್ಯಕ್ರಮದಿಂದ ಹೊರಗಿಟ್ಟಿದೆ ಎಂದು ಖಂಡನೆ ವ್ಯಕ್ತವಾಗಿತ್ತು.

ರಾತ್ರಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ #boycottzeekannadatv ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಅಭಿಯಾನ ಆರಂಭಿಸಲಾಗಿತ್ತು. ಇದಕ್ಕೆ ತ್ವರಿತವಾಗಿ ಸ್ಪಂಧಿಸಿರುವ ಝೀ ಕನ್ನಡದ ಕ್ರಿಯೇಟಿವ್ ಹೆಡ್ ರಾಘವೇಂದ್ರ ಹುಣಸೂರು, ಮುಂದಿನ ವಾರದಿಂದ ಮಹಾಗುರುಗಳು ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದಿದ್ದಾರೆ.

ನಿರ್ದೇಶಕ ಡಾ.ಹಂಸಲೇಖ ಅವರು ಕೂಡ ಸಾಮಾಜಿಕ ಮಾಧ್ಯಮಗಳ ಮೂಲಕ ತಾವು ಮತ್ತೆ ಸರಿಗಮಪ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. “ಡಿಯರ್ ರಘು, ನನ್ನ ಆರೋಗ್ಯ ಸ್ಥಿರವಾಗಿದೆ. ಸರಿಗಮಪ ನನ್ನ ಪ್ರೀತಿಯ ಭೂಮಿಕೆ. ಅದು ಮನಸ್ಸು ಮನಸ್ಸುಗಳನ್ನು ನೇಯುವ ವೇದಿಕೆ. ಸುಧಾರಣೆಗಳ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ. ಬೇಗ ಬಂದು ಸೇರುತ್ತೇನೆ. ಸಂಗೀತ ಕದನಗಳನ್ನು ತಪ್ಪಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಂಸಲೇಖ ಹೇಳಿಕೆ ಪರವಾಗಿ ಬೆಂಗಳೂರಿನಲ್ಲಿ ಬೃಹತ್‌ ‘ಜನದನಿ’ ರ್‍ಯಾಲಿ

ಸಾಮಾಜಿಕ ಜಾಲತಾಣಗಳಲ್ಲಿ ಜನಪರ ಹೋರಾಟಗಾರರು ಝೀ ಕನ್ನಡ ಚಾನೆಲ್ ಮತ್ತು ರಾಘವೇಂದ್ರ ಹುಣಸೂರ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

“ನಾದಬ್ರಹ್ಮ ಇಲ್ಲದೇ ಹೋದರೆ ನಾವ್ಯಾರೂ ಝೀ ನೋಡುವುದಿಲ್ಲ ಎಂಬ ಟ್ರೋಲ್ ಮಾಡಬೇಕು. ಮೂರು ಪರ್ಸೆಂಟ್ ಬ್ರಾಹ್ಮಣರ ಮಕ್ಕಳು ಹಾಡೋದನ್ನ ನಾವಿಲ್ಲಿ ತೊಂಬತ್ತೇಳು ಪರ್ಸೆಂಟ್ ಜನ ಕೆಲಸ ಬಿಟ್ಟು ಗಂಟೆಗಟ್ಟಲೆ ಯಾಕೆ ನೋಡಿ, ಚಪ್ಪಾಳೆ ಹೊಡೆಯಬೇಕು..? ನಮ್ಮ ನಾದಬ್ರಹ್ಮ ಬಂದ ಮೇಲೆ ನಮ್ಮ ಹುಡುಗರು ಸಹ ವೇದಿಕೆಯಲ್ಲಿ ಹಾಡುತ್ತಿದ್ದರು, ಹನುಮಂತನಂತಹ ಹುಡುಗರು ಬ್ರಾಹ್ಮಣರನ್ನು ಮೀರಿಸಿ ಗೆದ್ದರು. ಈಗ ನಮ್ಮ ನಾದಬ್ರಹ್ಮ ಅವರೇ ಅಲ್ಲಿಲ್ಲ ಎಂದ ಮೇಲೆ ನಾವು ಝೀ ನೋಡುವುದನ್ನೇ ಬಾಯ್ಕಾಟ್ ಮಾಡೋಣ…ನೋಡೋಣ ಕೇವಲ ಮೂರು ಪರ್ಸೆಂಟ್ ಬ್ರಾಹ್ಮಣರು ಅದ್ಹೇಗೆ ಅವರಿಗೆ ಟಿ.ಆರ್.ಪಿ ಕೊಡುತ್ತಾರೆ! ಮಹಾನಾಯಕ ಸೀರಿಯಲ್ ನಿಂದಾಗಿ ಇಂದು ಝೀ ಟಿವಿಯ ಟಿಆರ್ಪಿ ಏರಿದೆ.‌ ಊರೂರಲ್ಲೂ ಸ್ವಪ್ರೇರಣೆಯಿಂದ ನಮ್ಮ ಜನ ಫ್ಲೆಕ್ಸ್ ಗಳನ್ನು ಹಾಕಿ, ಮೆರವಣಿಗೆ ಮಾಡಿ, ಬಿಟ್ಟಿ ಪ್ರಚಾರ ನೀಡಿ ಝೀ ಟಿವಿ ಬೆಳೆಸಿದ್ದಾರೆ. ಅದನ್ನು ಝೀ ಟಿವಿಗೆ ಅರ್ಥ ಮಾಡಿಸೋಣ. ನಾದಬ್ರಹ್ಮನಿಲ್ಲದಝೀಗೆ ಹೇಳಿ ಧಿಕ್ಕಾರ” ಎಂದು ’ಮೊದಲು ಮಾನವನಾಗು’ ಎಂಬ ಫೇಸ್‌ಬುಕ್‌ ಅಕೌಂಟ್‌ನಿಂದ ಪೋಸ್ಟ್ ಮಾಡಲಾಗಿತ್ತು.

ಹಲವು ಮಂದಿ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ರಾಘವೇಂದ್ರ ಹುಣಸೂರು ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ “ಮಹಾಗುರುಗಳು ತಮ್ಮ ಆರೋಗ್ಯ ಮತ್ತು ವೈಯಕ್ತಿಕ ಕಾರಣಗಳಿಂದ ಒಂದು ವಾರ ಹೊರಗುಳಿಯಲು ನಿರ್ಧರಿಸಿದರು. ನಾವು ಅವರ ನಿರ್ಧಾರವನ್ನು ಗೌರವಿಸಿ, ವಿರಾಮ ತೆಗೆದುಕೊಳ್ಳಲು ಒಪ್ಪಿದ್ದೇವೆ. ಮುಂದಿನ ವಾರದಿಂದ ಎಂದಿನಂತೆ ಗುರುಗಳು ನಮ್ಮೊಂದಿಗಿರುತ್ತಾರೆ” ಎಂದು ಹೇಳಿಕೆ ನೀಡಿದ್ದರು.

ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಪರವಾಗಿ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ಶುಕ್ರವಾರ ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕಿನವರೆಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ (ಕರ್ನಾಟಕ) ಯು ಈ ಜಾಥಾವನ್ನು ಆಯೋಜಿಸಿತ್ತು. ಜಾಥಾದಲ್ಲಿ ಹಲವಾರು ಸಾಹಿತಿಗಳು, ಹೋರಾಟಗಾರರು, ದಲಿತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.


ಇದನ್ನೂ ಓದಿ: ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Naadabrahma Games Lekha never commit any mistake it is the Illusion of the Interpreters it is really very disastrous development. Let our Literate argue in this matter irrespective of caste and creed.

  2. The hashtag shows the low mentality of people. Are they don’t understand other side people can also start against taking Hamsalekha…? But they don’t hurt the interest of a channel or a musician. I think he learnt the lesson.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...