Homeಕರ್ನಾಟಕ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

- Advertisement -
- Advertisement -

’ಬಲಿತವರು ದಲಿತರನ್ನು ತಾವು ಮೇಲೆತ್ತುತ್ತಿದ್ದೇವೆ ಎಂದು ಹೇಳಿ ಅವರ ಮನೆಗೆ ಹೋಗಿ ಊಟ ಮಾಡಿದರೆ ದಲಿತರ ಉದ್ದಾರ ಆಗುವುದಿಲ್ಲ’ ಎಂಬ ಅರ್ಥದಲ್ಲಿ ಮಾತನಾಡಿದ್ದ ಸಂಗೀತ ನಿರ್ದೇಶಕ ಡಾ.ಹಂಸಲೇಖ ಅವರ ಮೇಲೆ  ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು ಮಾನಸಿಕ ದಾಳಿ ನಡೆಸಿದ್ದರು. ಇದೇ ವೇಳೆ ಶನಿವಾರ (ನ.28) ನಡೆದ ಝೀ ಕನ್ನಡ ಚಾನೆಲ್‌ನ ಸರಿಗಮಪ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದು ಸಾಮಾಜಿಕ ಜಾಲತಾಣಾದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಹಿತಿ ಹಂಸಲೇಖ ಅವರನ್ನು ಚಾನೆಲ್ ಕಾರ್ಯಕ್ರಮದಿಂದ ಹೊರಗಿಟ್ಟಿದೆ ಎಂದು ಖಂಡನೆ ವ್ಯಕ್ತವಾಗಿತ್ತು.

ರಾತ್ರಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ #boycottzeekannadatv ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಅಭಿಯಾನ ಆರಂಭಿಸಲಾಗಿತ್ತು. ಇದಕ್ಕೆ ತ್ವರಿತವಾಗಿ ಸ್ಪಂಧಿಸಿರುವ ಝೀ ಕನ್ನಡದ ಕ್ರಿಯೇಟಿವ್ ಹೆಡ್ ರಾಘವೇಂದ್ರ ಹುಣಸೂರು, ಮುಂದಿನ ವಾರದಿಂದ ಮಹಾಗುರುಗಳು ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದಿದ್ದಾರೆ.

ನಿರ್ದೇಶಕ ಡಾ.ಹಂಸಲೇಖ ಅವರು ಕೂಡ ಸಾಮಾಜಿಕ ಮಾಧ್ಯಮಗಳ ಮೂಲಕ ತಾವು ಮತ್ತೆ ಸರಿಗಮಪ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. “ಡಿಯರ್ ರಘು, ನನ್ನ ಆರೋಗ್ಯ ಸ್ಥಿರವಾಗಿದೆ. ಸರಿಗಮಪ ನನ್ನ ಪ್ರೀತಿಯ ಭೂಮಿಕೆ. ಅದು ಮನಸ್ಸು ಮನಸ್ಸುಗಳನ್ನು ನೇಯುವ ವೇದಿಕೆ. ಸುಧಾರಣೆಗಳ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ. ಬೇಗ ಬಂದು ಸೇರುತ್ತೇನೆ. ಸಂಗೀತ ಕದನಗಳನ್ನು ತಪ್ಪಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಂಸಲೇಖ ಹೇಳಿಕೆ ಪರವಾಗಿ ಬೆಂಗಳೂರಿನಲ್ಲಿ ಬೃಹತ್‌ ‘ಜನದನಿ’ ರ್‍ಯಾಲಿ

ಸಾಮಾಜಿಕ ಜಾಲತಾಣಗಳಲ್ಲಿ ಜನಪರ ಹೋರಾಟಗಾರರು ಝೀ ಕನ್ನಡ ಚಾನೆಲ್ ಮತ್ತು ರಾಘವೇಂದ್ರ ಹುಣಸೂರ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

“ನಾದಬ್ರಹ್ಮ ಇಲ್ಲದೇ ಹೋದರೆ ನಾವ್ಯಾರೂ ಝೀ ನೋಡುವುದಿಲ್ಲ ಎಂಬ ಟ್ರೋಲ್ ಮಾಡಬೇಕು. ಮೂರು ಪರ್ಸೆಂಟ್ ಬ್ರಾಹ್ಮಣರ ಮಕ್ಕಳು ಹಾಡೋದನ್ನ ನಾವಿಲ್ಲಿ ತೊಂಬತ್ತೇಳು ಪರ್ಸೆಂಟ್ ಜನ ಕೆಲಸ ಬಿಟ್ಟು ಗಂಟೆಗಟ್ಟಲೆ ಯಾಕೆ ನೋಡಿ, ಚಪ್ಪಾಳೆ ಹೊಡೆಯಬೇಕು..? ನಮ್ಮ ನಾದಬ್ರಹ್ಮ ಬಂದ ಮೇಲೆ ನಮ್ಮ ಹುಡುಗರು ಸಹ ವೇದಿಕೆಯಲ್ಲಿ ಹಾಡುತ್ತಿದ್ದರು, ಹನುಮಂತನಂತಹ ಹುಡುಗರು ಬ್ರಾಹ್ಮಣರನ್ನು ಮೀರಿಸಿ ಗೆದ್ದರು. ಈಗ ನಮ್ಮ ನಾದಬ್ರಹ್ಮ ಅವರೇ ಅಲ್ಲಿಲ್ಲ ಎಂದ ಮೇಲೆ ನಾವು ಝೀ ನೋಡುವುದನ್ನೇ ಬಾಯ್ಕಾಟ್ ಮಾಡೋಣ…ನೋಡೋಣ ಕೇವಲ ಮೂರು ಪರ್ಸೆಂಟ್ ಬ್ರಾಹ್ಮಣರು ಅದ್ಹೇಗೆ ಅವರಿಗೆ ಟಿ.ಆರ್.ಪಿ ಕೊಡುತ್ತಾರೆ! ಮಹಾನಾಯಕ ಸೀರಿಯಲ್ ನಿಂದಾಗಿ ಇಂದು ಝೀ ಟಿವಿಯ ಟಿಆರ್ಪಿ ಏರಿದೆ.‌ ಊರೂರಲ್ಲೂ ಸ್ವಪ್ರೇರಣೆಯಿಂದ ನಮ್ಮ ಜನ ಫ್ಲೆಕ್ಸ್ ಗಳನ್ನು ಹಾಕಿ, ಮೆರವಣಿಗೆ ಮಾಡಿ, ಬಿಟ್ಟಿ ಪ್ರಚಾರ ನೀಡಿ ಝೀ ಟಿವಿ ಬೆಳೆಸಿದ್ದಾರೆ. ಅದನ್ನು ಝೀ ಟಿವಿಗೆ ಅರ್ಥ ಮಾಡಿಸೋಣ. ನಾದಬ್ರಹ್ಮನಿಲ್ಲದಝೀಗೆ ಹೇಳಿ ಧಿಕ್ಕಾರ” ಎಂದು ’ಮೊದಲು ಮಾನವನಾಗು’ ಎಂಬ ಫೇಸ್‌ಬುಕ್‌ ಅಕೌಂಟ್‌ನಿಂದ ಪೋಸ್ಟ್ ಮಾಡಲಾಗಿತ್ತು.

ಹಲವು ಮಂದಿ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ರಾಘವೇಂದ್ರ ಹುಣಸೂರು ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ “ಮಹಾಗುರುಗಳು ತಮ್ಮ ಆರೋಗ್ಯ ಮತ್ತು ವೈಯಕ್ತಿಕ ಕಾರಣಗಳಿಂದ ಒಂದು ವಾರ ಹೊರಗುಳಿಯಲು ನಿರ್ಧರಿಸಿದರು. ನಾವು ಅವರ ನಿರ್ಧಾರವನ್ನು ಗೌರವಿಸಿ, ವಿರಾಮ ತೆಗೆದುಕೊಳ್ಳಲು ಒಪ್ಪಿದ್ದೇವೆ. ಮುಂದಿನ ವಾರದಿಂದ ಎಂದಿನಂತೆ ಗುರುಗಳು ನಮ್ಮೊಂದಿಗಿರುತ್ತಾರೆ” ಎಂದು ಹೇಳಿಕೆ ನೀಡಿದ್ದರು.

ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಪರವಾಗಿ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ಶುಕ್ರವಾರ ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕಿನವರೆಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ (ಕರ್ನಾಟಕ) ಯು ಈ ಜಾಥಾವನ್ನು ಆಯೋಜಿಸಿತ್ತು. ಜಾಥಾದಲ್ಲಿ ಹಲವಾರು ಸಾಹಿತಿಗಳು, ಹೋರಾಟಗಾರರು, ದಲಿತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.


ಇದನ್ನೂ ಓದಿ: ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Naadabrahma Games Lekha never commit any mistake it is the Illusion of the Interpreters it is really very disastrous development. Let our Literate argue in this matter irrespective of caste and creed.

  2. The hashtag shows the low mentality of people. Are they don’t understand other side people can also start against taking Hamsalekha…? But they don’t hurt the interest of a channel or a musician. I think he learnt the lesson.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....