Homeಕರ್ನಾಟಕ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

- Advertisement -
- Advertisement -

’ಬಲಿತವರು ದಲಿತರನ್ನು ತಾವು ಮೇಲೆತ್ತುತ್ತಿದ್ದೇವೆ ಎಂದು ಹೇಳಿ ಅವರ ಮನೆಗೆ ಹೋಗಿ ಊಟ ಮಾಡಿದರೆ ದಲಿತರ ಉದ್ದಾರ ಆಗುವುದಿಲ್ಲ’ ಎಂಬ ಅರ್ಥದಲ್ಲಿ ಮಾತನಾಡಿದ್ದ ಸಂಗೀತ ನಿರ್ದೇಶಕ ಡಾ.ಹಂಸಲೇಖ ಅವರ ಮೇಲೆ  ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು ಮಾನಸಿಕ ದಾಳಿ ನಡೆಸಿದ್ದರು. ಇದೇ ವೇಳೆ ಶನಿವಾರ (ನ.28) ನಡೆದ ಝೀ ಕನ್ನಡ ಚಾನೆಲ್‌ನ ಸರಿಗಮಪ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದು ಸಾಮಾಜಿಕ ಜಾಲತಾಣಾದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಹಿತಿ ಹಂಸಲೇಖ ಅವರನ್ನು ಚಾನೆಲ್ ಕಾರ್ಯಕ್ರಮದಿಂದ ಹೊರಗಿಟ್ಟಿದೆ ಎಂದು ಖಂಡನೆ ವ್ಯಕ್ತವಾಗಿತ್ತು.

ರಾತ್ರಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ #boycottzeekannadatv ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಅಭಿಯಾನ ಆರಂಭಿಸಲಾಗಿತ್ತು. ಇದಕ್ಕೆ ತ್ವರಿತವಾಗಿ ಸ್ಪಂಧಿಸಿರುವ ಝೀ ಕನ್ನಡದ ಕ್ರಿಯೇಟಿವ್ ಹೆಡ್ ರಾಘವೇಂದ್ರ ಹುಣಸೂರು, ಮುಂದಿನ ವಾರದಿಂದ ಮಹಾಗುರುಗಳು ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದಿದ್ದಾರೆ.

ನಿರ್ದೇಶಕ ಡಾ.ಹಂಸಲೇಖ ಅವರು ಕೂಡ ಸಾಮಾಜಿಕ ಮಾಧ್ಯಮಗಳ ಮೂಲಕ ತಾವು ಮತ್ತೆ ಸರಿಗಮಪ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. “ಡಿಯರ್ ರಘು, ನನ್ನ ಆರೋಗ್ಯ ಸ್ಥಿರವಾಗಿದೆ. ಸರಿಗಮಪ ನನ್ನ ಪ್ರೀತಿಯ ಭೂಮಿಕೆ. ಅದು ಮನಸ್ಸು ಮನಸ್ಸುಗಳನ್ನು ನೇಯುವ ವೇದಿಕೆ. ಸುಧಾರಣೆಗಳ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ. ಬೇಗ ಬಂದು ಸೇರುತ್ತೇನೆ. ಸಂಗೀತ ಕದನಗಳನ್ನು ತಪ್ಪಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಂಸಲೇಖ ಹೇಳಿಕೆ ಪರವಾಗಿ ಬೆಂಗಳೂರಿನಲ್ಲಿ ಬೃಹತ್‌ ‘ಜನದನಿ’ ರ್‍ಯಾಲಿ

ಸಾಮಾಜಿಕ ಜಾಲತಾಣಗಳಲ್ಲಿ ಜನಪರ ಹೋರಾಟಗಾರರು ಝೀ ಕನ್ನಡ ಚಾನೆಲ್ ಮತ್ತು ರಾಘವೇಂದ್ರ ಹುಣಸೂರ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

“ನಾದಬ್ರಹ್ಮ ಇಲ್ಲದೇ ಹೋದರೆ ನಾವ್ಯಾರೂ ಝೀ ನೋಡುವುದಿಲ್ಲ ಎಂಬ ಟ್ರೋಲ್ ಮಾಡಬೇಕು. ಮೂರು ಪರ್ಸೆಂಟ್ ಬ್ರಾಹ್ಮಣರ ಮಕ್ಕಳು ಹಾಡೋದನ್ನ ನಾವಿಲ್ಲಿ ತೊಂಬತ್ತೇಳು ಪರ್ಸೆಂಟ್ ಜನ ಕೆಲಸ ಬಿಟ್ಟು ಗಂಟೆಗಟ್ಟಲೆ ಯಾಕೆ ನೋಡಿ, ಚಪ್ಪಾಳೆ ಹೊಡೆಯಬೇಕು..? ನಮ್ಮ ನಾದಬ್ರಹ್ಮ ಬಂದ ಮೇಲೆ ನಮ್ಮ ಹುಡುಗರು ಸಹ ವೇದಿಕೆಯಲ್ಲಿ ಹಾಡುತ್ತಿದ್ದರು, ಹನುಮಂತನಂತಹ ಹುಡುಗರು ಬ್ರಾಹ್ಮಣರನ್ನು ಮೀರಿಸಿ ಗೆದ್ದರು. ಈಗ ನಮ್ಮ ನಾದಬ್ರಹ್ಮ ಅವರೇ ಅಲ್ಲಿಲ್ಲ ಎಂದ ಮೇಲೆ ನಾವು ಝೀ ನೋಡುವುದನ್ನೇ ಬಾಯ್ಕಾಟ್ ಮಾಡೋಣ…ನೋಡೋಣ ಕೇವಲ ಮೂರು ಪರ್ಸೆಂಟ್ ಬ್ರಾಹ್ಮಣರು ಅದ್ಹೇಗೆ ಅವರಿಗೆ ಟಿ.ಆರ್.ಪಿ ಕೊಡುತ್ತಾರೆ! ಮಹಾನಾಯಕ ಸೀರಿಯಲ್ ನಿಂದಾಗಿ ಇಂದು ಝೀ ಟಿವಿಯ ಟಿಆರ್ಪಿ ಏರಿದೆ.‌ ಊರೂರಲ್ಲೂ ಸ್ವಪ್ರೇರಣೆಯಿಂದ ನಮ್ಮ ಜನ ಫ್ಲೆಕ್ಸ್ ಗಳನ್ನು ಹಾಕಿ, ಮೆರವಣಿಗೆ ಮಾಡಿ, ಬಿಟ್ಟಿ ಪ್ರಚಾರ ನೀಡಿ ಝೀ ಟಿವಿ ಬೆಳೆಸಿದ್ದಾರೆ. ಅದನ್ನು ಝೀ ಟಿವಿಗೆ ಅರ್ಥ ಮಾಡಿಸೋಣ. ನಾದಬ್ರಹ್ಮನಿಲ್ಲದಝೀಗೆ ಹೇಳಿ ಧಿಕ್ಕಾರ” ಎಂದು ’ಮೊದಲು ಮಾನವನಾಗು’ ಎಂಬ ಫೇಸ್‌ಬುಕ್‌ ಅಕೌಂಟ್‌ನಿಂದ ಪೋಸ್ಟ್ ಮಾಡಲಾಗಿತ್ತು.

ಹಲವು ಮಂದಿ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ರಾಘವೇಂದ್ರ ಹುಣಸೂರು ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ “ಮಹಾಗುರುಗಳು ತಮ್ಮ ಆರೋಗ್ಯ ಮತ್ತು ವೈಯಕ್ತಿಕ ಕಾರಣಗಳಿಂದ ಒಂದು ವಾರ ಹೊರಗುಳಿಯಲು ನಿರ್ಧರಿಸಿದರು. ನಾವು ಅವರ ನಿರ್ಧಾರವನ್ನು ಗೌರವಿಸಿ, ವಿರಾಮ ತೆಗೆದುಕೊಳ್ಳಲು ಒಪ್ಪಿದ್ದೇವೆ. ಮುಂದಿನ ವಾರದಿಂದ ಎಂದಿನಂತೆ ಗುರುಗಳು ನಮ್ಮೊಂದಿಗಿರುತ್ತಾರೆ” ಎಂದು ಹೇಳಿಕೆ ನೀಡಿದ್ದರು.

ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಪರವಾಗಿ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ಶುಕ್ರವಾರ ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕಿನವರೆಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ (ಕರ್ನಾಟಕ) ಯು ಈ ಜಾಥಾವನ್ನು ಆಯೋಜಿಸಿತ್ತು. ಜಾಥಾದಲ್ಲಿ ಹಲವಾರು ಸಾಹಿತಿಗಳು, ಹೋರಾಟಗಾರರು, ದಲಿತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.


ಇದನ್ನೂ ಓದಿ: ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Naadabrahma Games Lekha never commit any mistake it is the Illusion of the Interpreters it is really very disastrous development. Let our Literate argue in this matter irrespective of caste and creed.

  2. The hashtag shows the low mentality of people. Are they don’t understand other side people can also start against taking Hamsalekha…? But they don’t hurt the interest of a channel or a musician. I think he learnt the lesson.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...