Homeಕರ್ನಾಟಕಮಸ್ಕಿ ಉಪಚುನಾವಣೆ: ಸಿದ್ದರಾಮಯ್ಯ ಎಂಟ್ರಿ ಕೊಟ್ಟರೆ ಆಟದ ರಂಗೇ ಬದಲು?!

ಮಸ್ಕಿ ಉಪಚುನಾವಣೆ: ಸಿದ್ದರಾಮಯ್ಯ ಎಂಟ್ರಿ ಕೊಟ್ಟರೆ ಆಟದ ರಂಗೇ ಬದಲು?!

- Advertisement -
- Advertisement -

ಉಪ ಚುನಾವಣೆಗಳಲ್ಲಿ ಆಡಳಿರೂಢ ಪಕ್ಷ ಮೇಲುಗೈ ಸಾಧಿಸುವುದನ್ನು ನೋಡುತ್ತಲೇ ಬಂದಿದ್ದೇವೆ. ಆದರೆ ಈ ಸಲ ಆಡಳಿತ ಪಕ್ಷಕ್ಕೆ ಆಟ ಸುಲಭವಿಲ್ಲ! ಮಸ್ಕಿ ಭಾಗದಲ್ಲಿ ನೀರಾವರಿಗಾಗಿ 58 ಹಳ್ಳಿಗಳ ಜನರು ಹೋರಾಟ ಮಾಡುತ್ತಿರುವುದು ಸರ್ಕಾರಕ್ಕೆ ಬೆವರು ಇಳಿಸಿತೆ? 2018-19ರಲ್ಲಿ ಈಗಿನ ಬಿಜೆಪಿ ಕ್ಯಾಂಡೀಡೇಟ್ ಸಲ್ಲಿಸಿದ್ದ ಪ್ರಸ್ತಾಪ ಒಂದನ್ನು ಈ ಸರ್ಕಾರ ಜಾರಿ ಮಾಡಲು ಹೊರಟಿದೆ.

ಮಸ್ಕಿ ತಾಲೂಕಿನ 17 ಕೆರೆಗಳಿಗೆ ಕೃಷ್ಣಾ ನದಿ ನೀರನ್ನು ತಂದು ಹಾಕುವ ಈ ಅವೈಜ್ಞಾನಿಕ ಯೋಜನೆಗೆ ಸರ್ಕಾರ 487 ಕೋಟಿ ರೂ, ನಿಗದಿ ಮಾಡಿದೆ. ಈಗಾಗಲೇ ಆಡಳಿತಾತ್ಮಕ ಮಂಜೂರಿ ಪಡೆದು 87 ಕೋಟಿ ರೂ. ನಿಡುಗಡೆ ಆಗಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಆಟ ಶುರುವಾಗಿದೆ. ಆದರೆ ಇವರು ಗುರುತಿಸಿರುವ 17 ಕೆರೆಗಳು ಯಾವುವು ಅಂತಾ ನೋಡಲು ಹೊರಟರೆ, ಅಲ್ಲಿ ಬಹುತೇಕ ಕಡೆ ಕೆರೆಗಳೇ ಇಲ್ಲ! ಅವು ಹೂಳು ತುಂಬಿಕೊಂಡಿವೆ ಅಥವಾ ಒತ್ತುವರಿ ಆಗಿಬಿಟ್ಟಿವೆ! ಸರ್ಕಾರ ಗುರುತಿಸಿರುವ ಈ 17 ‘ಕೆರೆ’ ತುಂಬಿಸಿದರೂ ಅರ್ಧ ಟಿಎಂಸಿ ನೀರು ಕೂಡ ಸಂಗ್ರಹ ಆಗುವುದಿಲ್ಲ!

ಈ ಮೀಸಲು ಕೇತ್ರದಲ್ಲಿ ಮೇಲ್ಜಾತಿಯ ಲಿಂಗಾಯತರದ್ದೇ ಆಟ ನಡೆದಿದೆ. ಈಗ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಂಟ್ರೋಲ್ ಮಾಡುತ್ತಿರುವುದೂ ಇವರೇ. 17 ಕೆರೆ ತುಂಬಿಸುವ ಯೋಜನೆಯಲ್ಲಿ ಈ ವರ್ಗದ ಜನರೇ ಮಹಾನ್ ಫಲಾನುಭವಿಗಳು!

ಆಡಳಿತ ಪಕ್ಷ ಈ ಸೀಟು ಗೆಲ್ಲಲು ಹರಸಾಹಸ ಮಾಡುತ್ತಿದೆ. ಅದರ ಬಳಿ ರೊಕ್ಕ ಇದೆ, ಅಧಿಕಾರ ಶಕ್ತಿಯಿದೆ. ಆದರೆ, ಈ ಸಲದ ಆಟ ಸುಲಭ ಇಲ್ಲ. 56 ಹಳ್ಳಿಗಳ ಜನತೆ ಚುನಾವಣಾ ಫಲಿತಾಂಶವನ್ನೇ ಬದಲಿಸಬಲ್ಲರು. ಕಳೆದ ಸಲ ಪ್ರತಾಪಗೌಡರನ್ನು ಕಾಂಗ್ರೆಸ್‌ಗೆ ಕರೆ ತಂದ ಸಿದ್ದರಾಮಯ್ಯ ಇಲ್ಲಿ ಒಂದು ದಿನ ಅಬ್ಬರದ ಪ್ರಚಾರ ಮಾಡಿಬಿಟ್ಟರೆ ಆಟದ ರಂಗೇ ಬದಲಾಗಲಿದೆ ಎನ್ನುತ್ತಾರೆ ಇಲ್ಲಿನ ಕೆಲವು ಪ್ರಜ್ಞಾವಂತ ಮತದಾರರು.


ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...