Homeಕರ್ನಾಟಕಮಸ್ಕಿ ಉಪಚುನಾವಣೆ: ಸಿದ್ದರಾಮಯ್ಯ ಎಂಟ್ರಿ ಕೊಟ್ಟರೆ ಆಟದ ರಂಗೇ ಬದಲು?!

ಮಸ್ಕಿ ಉಪಚುನಾವಣೆ: ಸಿದ್ದರಾಮಯ್ಯ ಎಂಟ್ರಿ ಕೊಟ್ಟರೆ ಆಟದ ರಂಗೇ ಬದಲು?!

- Advertisement -
- Advertisement -

ಉಪ ಚುನಾವಣೆಗಳಲ್ಲಿ ಆಡಳಿರೂಢ ಪಕ್ಷ ಮೇಲುಗೈ ಸಾಧಿಸುವುದನ್ನು ನೋಡುತ್ತಲೇ ಬಂದಿದ್ದೇವೆ. ಆದರೆ ಈ ಸಲ ಆಡಳಿತ ಪಕ್ಷಕ್ಕೆ ಆಟ ಸುಲಭವಿಲ್ಲ! ಮಸ್ಕಿ ಭಾಗದಲ್ಲಿ ನೀರಾವರಿಗಾಗಿ 58 ಹಳ್ಳಿಗಳ ಜನರು ಹೋರಾಟ ಮಾಡುತ್ತಿರುವುದು ಸರ್ಕಾರಕ್ಕೆ ಬೆವರು ಇಳಿಸಿತೆ? 2018-19ರಲ್ಲಿ ಈಗಿನ ಬಿಜೆಪಿ ಕ್ಯಾಂಡೀಡೇಟ್ ಸಲ್ಲಿಸಿದ್ದ ಪ್ರಸ್ತಾಪ ಒಂದನ್ನು ಈ ಸರ್ಕಾರ ಜಾರಿ ಮಾಡಲು ಹೊರಟಿದೆ.

ಮಸ್ಕಿ ತಾಲೂಕಿನ 17 ಕೆರೆಗಳಿಗೆ ಕೃಷ್ಣಾ ನದಿ ನೀರನ್ನು ತಂದು ಹಾಕುವ ಈ ಅವೈಜ್ಞಾನಿಕ ಯೋಜನೆಗೆ ಸರ್ಕಾರ 487 ಕೋಟಿ ರೂ, ನಿಗದಿ ಮಾಡಿದೆ. ಈಗಾಗಲೇ ಆಡಳಿತಾತ್ಮಕ ಮಂಜೂರಿ ಪಡೆದು 87 ಕೋಟಿ ರೂ. ನಿಡುಗಡೆ ಆಗಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಆಟ ಶುರುವಾಗಿದೆ. ಆದರೆ ಇವರು ಗುರುತಿಸಿರುವ 17 ಕೆರೆಗಳು ಯಾವುವು ಅಂತಾ ನೋಡಲು ಹೊರಟರೆ, ಅಲ್ಲಿ ಬಹುತೇಕ ಕಡೆ ಕೆರೆಗಳೇ ಇಲ್ಲ! ಅವು ಹೂಳು ತುಂಬಿಕೊಂಡಿವೆ ಅಥವಾ ಒತ್ತುವರಿ ಆಗಿಬಿಟ್ಟಿವೆ! ಸರ್ಕಾರ ಗುರುತಿಸಿರುವ ಈ 17 ‘ಕೆರೆ’ ತುಂಬಿಸಿದರೂ ಅರ್ಧ ಟಿಎಂಸಿ ನೀರು ಕೂಡ ಸಂಗ್ರಹ ಆಗುವುದಿಲ್ಲ!

ಈ ಮೀಸಲು ಕೇತ್ರದಲ್ಲಿ ಮೇಲ್ಜಾತಿಯ ಲಿಂಗಾಯತರದ್ದೇ ಆಟ ನಡೆದಿದೆ. ಈಗ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಂಟ್ರೋಲ್ ಮಾಡುತ್ತಿರುವುದೂ ಇವರೇ. 17 ಕೆರೆ ತುಂಬಿಸುವ ಯೋಜನೆಯಲ್ಲಿ ಈ ವರ್ಗದ ಜನರೇ ಮಹಾನ್ ಫಲಾನುಭವಿಗಳು!

ಆಡಳಿತ ಪಕ್ಷ ಈ ಸೀಟು ಗೆಲ್ಲಲು ಹರಸಾಹಸ ಮಾಡುತ್ತಿದೆ. ಅದರ ಬಳಿ ರೊಕ್ಕ ಇದೆ, ಅಧಿಕಾರ ಶಕ್ತಿಯಿದೆ. ಆದರೆ, ಈ ಸಲದ ಆಟ ಸುಲಭ ಇಲ್ಲ. 56 ಹಳ್ಳಿಗಳ ಜನತೆ ಚುನಾವಣಾ ಫಲಿತಾಂಶವನ್ನೇ ಬದಲಿಸಬಲ್ಲರು. ಕಳೆದ ಸಲ ಪ್ರತಾಪಗೌಡರನ್ನು ಕಾಂಗ್ರೆಸ್‌ಗೆ ಕರೆ ತಂದ ಸಿದ್ದರಾಮಯ್ಯ ಇಲ್ಲಿ ಒಂದು ದಿನ ಅಬ್ಬರದ ಪ್ರಚಾರ ಮಾಡಿಬಿಟ್ಟರೆ ಆಟದ ರಂಗೇ ಬದಲಾಗಲಿದೆ ಎನ್ನುತ್ತಾರೆ ಇಲ್ಲಿನ ಕೆಲವು ಪ್ರಜ್ಞಾವಂತ ಮತದಾರರು.


ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...